Homeಮುಖಪುಟಗೋಧ್ರಾ ರೈಲು ದಹಿಸಿದ ಅಪರಾಧಿಗಳ ಬಿಡುಗಡೆ ಅಸಾಧ್ಯ; ಸುಪ್ರೀಂನಲ್ಲಿ ಗುಜರಾತ್ ಸರ್ಕಾರ ಹೇಳಿಕೆ

ಗೋಧ್ರಾ ರೈಲು ದಹಿಸಿದ ಅಪರಾಧಿಗಳ ಬಿಡುಗಡೆ ಅಸಾಧ್ಯ; ಸುಪ್ರೀಂನಲ್ಲಿ ಗುಜರಾತ್ ಸರ್ಕಾರ ಹೇಳಿಕೆ

- Advertisement -
- Advertisement -

2002ರ ಗೋಧ್ರಾ ರೈಲು ದಹನ ಪ್ರಕರಣದ ಅಪರಾಧಿಗಳನ್ನು ಸರ್ಕಾರದ ಸನ್ನಡತೆ ನೀತಿಯಡಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಗುಜರಾತ್‌ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

‘ಭಯೋತ್ಪಾದಕ ಮತ್ತು ವಿಚ್ಛಿದ್ರಕಾರಕ ಚಟುವಟಿಕೆಗಳ (ತಡೆ) ಕಾಯ್ದೆ’ಯ ಅಡಿಯಲ್ಲಿ ಈ ಅಪರಾಧಿಗಳ ವಿರುದ್ಧ ಕ್ರಮಗಳನ್ನು ಜರುಗಿಸಲಾಗಿದ್ದು, ಸರ್ಕಾರದ ನೀತಿಯ ಅಡಿಯಲ್ಲಿ ಅವಧಿಪೂರ್ವವೇ ಬಿಡುಗಡೆ ಮಾಡಲಾಗದು ಎಂದು ಕೋರ್ಟ್‌ನಲ್ಲಿ ವಾದಿಸಿದೆ.

ಫೆಬ್ರವರಿ 27, 2002ರಂದು, ಗೋಧ್ರಾ ನಿಲ್ದಾಣದಲ್ಲಿ ಸಾಬರಮತಿ ಎಕ್ಸ್‌ಪ್ರೆಸ್‌ನ ಕೋಚ್ S6ಗೆ ಬೆಂಕಿ ಹಚ್ಚಲಾಗಿತ್ತು. ಇದರಿಂದಾಗಿ 59 ಜನರು ಸಾವನ್ನಪ್ಪಿದರು. ಅಯೋಧ್ಯೆಯಿಂದ ಹಿಂತಿರುಗುತ್ತಿದ್ದ ಕರಸೇವಕರು ಈ ಕೋಚ್‌ನಲ್ಲಿದ್ದರು.

11 ಅಪರಾಧಿಗಳಿಗೆ ಟ್ರಯಲ್ ಕೋರ್ಟ್ ನೀಡಿದ್ದ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ 2017ರಲ್ಲಿ ಗುಜರಾತ್ ಹೈಕೋರ್ಟ್ ಬದಲಾಯಿಸಿತು. ಇತರ 20 ಜನಕ್ಕೂ ನೀಡಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಎತ್ತಿ ಹಿಡಿದಿತ್ತು.

ರೈಲು ಸುಟ್ಟ ಬಳಿಕ ಗುಜರಾತ್ ಹೊತ್ತಿ ಉರಿಯಿತು. ಗುಜರಾತ್‌ನಲ್ಲಿ ವ್ಯಾಪಕವಾದ ಕೋಮು ಗಲಭೆಗಳು ನಡೆದವು. ಇದರ ಪರಿಣಾಮವಾಗಿ 1,044 ಜನರು ಸಾವನ್ನಪ್ಪಿದರು ಎಂದು ಅಧಿಕೃತ ಅಂಕಿ ಅಂಶಗಳು ತಿಳಿಸಿವೆ.

ಕೆಲವು ತಿಂಗಳ ಹಿಂದೆ ವಿಚಿದ್ರಕಾರಿ ನಿಲುವನ್ನು ತೆಗೆದುಕೊಂಡಿದ್ದ ಗುಜರಾತ್‌ ಸರ್ಕಾರ, ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳನ್ನು ತುರ್ತಾಗಿ ಬಿಡುಗಡೆ ಮಾಡಲು ಅನುಮೋದನೆ ನೀಡಿತ್ತು. ಅತ್ಯಾಚಾರಿಗಳ ಬಿಡುಗಡೆಗೆ ಕಳೆದ ಆಗಸ್ಟ್ 15ರಂದು ಕ್ರಮ ಜರುಗಿಸಲಾಗಿತ್ತು.

ಮಾರ್ಚ್ 3, 2002 ರಂದು ಗುಜರಾತ್‌ನಲ್ಲಿ ನಡೆದ ಕೋಮು ಗಲಭೆಯ ಸಂದರ್ಭದಲ್ಲಿ ಅಹಮದಾಬಾದ್ ಬಳಿಯ ಹಳ್ಳಿಯೊಂದರಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಲ್ಲಿ 11 ಜನರಿಗೆ ಶಿಕ್ಷೆಯಾಗಿತ್ತು.

ಆ ಸಮಯದಲ್ಲಿ ಬಿಲ್ಕಿಸ್‌ 19 ವರ್ಷದ ವಯಸ್ಸಿನ ಗರ್ಭಿಣಿಯಾಗಿದ್ದರು. ಬಿಲ್ಕಿಸ್ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಹದಿನಾಲ್ಕು ಜನರನ್ನು ಹಿಂಸಾಚಾರದಲ್ಲಿ ಕೊಲ್ಲಲಾಯಿತು. ಬಿಲ್ಕಿಸ್ ಅವರ ತಲೆಯನ್ನು ನೆಲಕ್ಕೆ ಹೊಡೆಸಿ ಹಿಂಸೆ ನೀಡಲಾಗಿತ್ತು.

ಗೋದ್ರಾ ರೈಲು ದುರಂತಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಾದಿಸಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, “ಗುಜರಾತ್ ಹೈಕೋರ್ಟ್ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿದೆ. ಆದರೆ ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಸರ್ಕಾರ ಒತ್ತಾಯಿಸುತ್ತದೆ” ಎಂದಿದ್ದಾರೆ.

ಇದನ್ನೂ ಓದಿರಿ: ಒಂದು ಹಿಂದೂ ಹುಡುಗಿ ಹೋದರೆ ಹತ್ತು ಮುಸ್ಲಿಂ ಹುಡುಗಿಯರನ್ನು ಹಾರಿಸಿಕೊಂಡು ಹೋಗಿ: ಮುತಾಲಿಕ್ ವಿವಾದಾತ್ಮಕ ಹೇಳಿಕೆ

“ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 59 ಜನರನ್ನು ಜೀವಂತವಾಗಿ ಸುಟ್ಟುಹಾಕಲಾಗಿದೆ. ಇದು ಅಪರೂಪದ ಪ್ರಕರಣಗಳಲ್ಲಿ ಅಪರೂಪವಾಗಿದೆ” ಎಂದು ಮೆಹ್ತಾ ಹೇಳಿದ್ದಾರೆ.

ಅಪರಾಧಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಕೆಟಿಎಸ್ ತುಳಸಿ, “ಅವರಲ್ಲಿ ಒಬ್ಬರು ತನಗೆ ಗುಜರಾತಿ ಭಾಷೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಆತ ತಾನು ಓದಿಲ್ಲದೆ ಇರುವ ಹೇಳಿಕೆಗೆ ಹೆಬ್ಬೆರಳಿನ ಗುರುತನ್ನು ನೀಡಿದ್ದಾನೆ. ಜಾಮೀನು ಅರ್ಜಿಗಳನ್ನು ಪರಿಗಣಿಸಲು ಎಲ್ಲಾ ಸಂಬಂಧಿತ ವಿವರಗಳೊಂದಿಗೆ ಸಂಕಲಿಸಿದ ಚಾರ್ಟ್ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ” ಎಂದು ಮಾಹಿತಿ ನೀಡಿದ್ದಾರೆ.

ಹಲವು ಅಪರಾಧಿಗಳ ಜಾಮೀನು ಅರ್ಜಿಯನ್ನು ಮೂರು ವಾರಗಳ ನಂತರ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ. ಅಪರಾಧಿಗಳಿಗೆ ನೀಡಲಾದ ನಿಜವಾದ ಶಿಕ್ಷೆಗಳು ಮತ್ತು ಇದುವರೆಗೆ ಜೈಲಿನಲ್ಲಿ ಕಳೆದ ಅವಧಿಯಂತಹ ವಿವರಗಳನ್ನು ನೀಡುವ ಕ್ರೋಢೀಕೃತ ಚಾರ್ಟ್ ಅನ್ನು ಸಲ್ಲಿಸುವಂತೆ ಎರಡೂ ಕಡೆಯವರಿಗೂ ಕೋರ್ಟ್ ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...