Homeಮುಖಪುಟಮಹಿಳೆಯರ ಕನಿಷ್ಠ ವಿವಾಹ ವಯಸ್ಸು ಹೆಚ್ಚಿಸಲು ಕೋರಿದ್ದ ಅರ್ಜಿ ವಜಾ; ಬಿಜೆಪಿ ನಾಯಕನಿಗೆ ಸುಪ್ರೀಂ ಛೀಮಾರಿ

ಮಹಿಳೆಯರ ಕನಿಷ್ಠ ವಿವಾಹ ವಯಸ್ಸು ಹೆಚ್ಚಿಸಲು ಕೋರಿದ್ದ ಅರ್ಜಿ ವಜಾ; ಬಿಜೆಪಿ ನಾಯಕನಿಗೆ ಸುಪ್ರೀಂ ಛೀಮಾರಿ

- Advertisement -
- Advertisement -

ಮಹಿಳೆಯರ ಕನಿಷ್ಠ ವಿವಾಹ ವಯಸ್ಸನ್ನು ಪುರುಷರಿಗೆ ಸಮಾನವಾಗಿ 18 ವರ್ಷದಿಂದ 21 ವರ್ಷಕ್ಕೆ ಹೆಚ್ಚಿಸುವಂತೆ ಕೋರಿ ಭಾರತೀಯ ಜನತಾ ಪಕ್ಷದ ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಅರ್ಜಿದಾರ-ವಕೀಲ ಅಶ್ವಿನಿ ಉಪಾಧ್ಯಾಯ ಅವರನ್ನು ಉದ್ದೇಶಿಸಿ ಮಾತನಾಡಿದ್ದು, ”ನಾವು ಸಂವಿಧಾನದ ವಿಶೇಷ ಪಾಲಕರು ಎಂದು ಗ್ರಹಿಸಬಾರದು. ಸಂಸತ್ತು ಕೂಡ ಸಂವಿಧಾನದ ಪಾಲಕ. ಏಕರೂಪದ ಮದುವೆ ವಯಸ್ಸನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ನಿಗದಿ ಮಾಡಬಹುದು. ಹಾಗೆ ಮಾಡುವ ಅಧಿಕಾರ ಸಂಸತ್ತಿಗೆ ಇರುತ್ತದೆ. ಸಂಸತ್ತು ಮಾತ್ರ ತಿದ್ದುಪಡಿ ಮತ್ತು ಶಾಸನವನ್ನು ಮಾಡಬಹುದಾದ ಕೆಲವು ವಿಷಯಗಳಿವೆ… ನಾವು ಇಲ್ಲಿ ಆ ಬಗ್ಗೆ ಕಾನೂನನ್ನು ಜಾರಿಗೊಳಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ವಿಶೇಷ ವಿವಾಹ ಕಾಯಿದೆ ಮತ್ತು ಬಾಲ್ಯವಿವಾಹ ನಿಷೇಧ ಕಾಯಿದೆಯಲ್ಲಿ ಕನಿಷ್ಠ ವಿವಾಹದ ವಯಸ್ಸು 18 ವರ್ಷಗಳು, ಆದರೆ ಷರಿಯಾ ಕಾನೂನು ಪ್ರೌಢಾವಸ್ಥೆಯ ವಯಸ್ಸನ್ನು ಮದುವೆಯ ವಯಸ್ಸಾಗಿ ಅನುಮತಿಸಿದ್ದಾರೆ. ಆದ್ದರಿಂದ ಮದುವೆಯ ಏಕರೂಪದ ವಯಸ್ಸು ಇರಬೇಕು” ಎಂದು ಉಪಾಧ್ಯಾಯ ಅವರು ಸೂಚಿಸಿದರು.

ಇದನ್ನೂ ಓದಿ: ಗೋಧ್ರಾ ರೈಲು ದಹಿಸಿದ ಅಪರಾಧಿಗಳ ಬಿಡುಗಡೆ ಅಸಾಧ್ಯ; ಸುಪ್ರೀಂನಲ್ಲಿ ಗುಜರಾತ್ ಸರ್ಕಾರ ಹೇಳಿಕೆ

”ಅರ್ಜಿದಾರರು ವಿವಾಹದ ಕನಿಷ್ಠ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಿಸಲು ಶಾಸಕಾಂಗ ತಿದ್ದುಪಡಿಯನ್ನು ಬಯಸುತ್ತಾರೆ… ಆದರೆ, ಸಂವಿಧಾನದ ಪರಿಚ್ಛೇದ 32 (ರಿಟ್ ಅಧಿಕಾರ ವ್ಯಾಪ್ತಿ) ಅನ್ನು ಚಲಾಯಿಸುವ ಮೂಲಕ ನ್ಯಾಯಾಲಯವು, ಶಾಸನ ಮಾಡಲು ಸಂಸತ್ತಿಗೆ ಆದೇಶವನ್ನು ನೀಡುವಂತಿಲ್ಲ ಎಂಬುದು ನ್ಯಾಯಸಮ್ಮತ ಕಾನೂನು” ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.

“ನೀವು ಹೆಣ್ಣಿನ ಮದುವೆಯ ವಯಸ್ಸು 18 ವರ್ಷ ಎನ್ನುವುದನ್ನು ತಗೆದು ಹಾಕಿ, ಆಗ ಸ್ವಯಂಚಾಲಿತವಾಗಿ 21 ವರ್ಷವಾಗುತ್ತದೆ” ಎಂದು ಉಪಾಧ್ಯಾಯ ಹೇಳಿದರು.

ಅದಕ್ಕೆ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು, ”ಆರ್ಟಿಕಲ್ 32ನ್ನು ಅಪಹಾಸ್ಯ ಮಾಡಬೇಡಿ” ಎಂದು ಅವರಿಗೆ ಹೇಳಿದರು.

ಇದರಿಂದ ಅಸಮಾಧಾನಗೊಂಡ ಉಪಾಧ್ಯಾಯ ಅವರು, ಈ ಪ್ರಕರಣವನ್ನು ದೆಹಲಿ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಿದೆ ಮತ್ತು ಈಗ ಅದನ್ನು ನೀವು ವಜಾಗೊಳಿಸುತ್ತಿದ್ದೀರಿ ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು, ”ಸಂವಿಧಾನದ ಅಡಿಯಲ್ಲಿ ನಮ್ಮ ಕರ್ತವ್ಯವನ್ನು ಮಾಡಲು ನಾವು ಇಲ್ಲಿದ್ದೇವೆ. ನಾವು ನಿಮ್ಮನ್ನು ಮೆಚ್ಚಿಸಲು ಬಂದಿಲ್ಲ ಅಥವಾ ಯಾವುದೇ ರಾಜಕೀಯ ಪಕ್ಷವನ್ನು ಮೆಚ್ಚಿಸಲು ನಾವು ಇಲ್ಲಿ ಬಂದಿಲ್ಲ ದಯವಿಟ್ಟು ಅದನ್ನು ಅರ್ಥಮಾಡಿಕೊಳ್ಳಿ. ಆದ್ದರಿಂದ ನೀವು ನಮ್ಮ ಬಗ್ಗೆ ಏನು ಭಾವಿಸುತ್ತೀರಿ ಎಂಬುದರ ಕುರಿತು ಇಲ್ಲಿ ಹೇಳಬೇಡಿ. ಇದು ರಾಜಕೀಯ ವೇದಿಕೆಯಲ್ಲ” ಎಂದು ಬಿಜೆಪಿ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....