Homeಮುಖಪುಟಮಹಿಳೆಯರ ಕನಿಷ್ಠ ವಿವಾಹ ವಯಸ್ಸು ಹೆಚ್ಚಿಸಲು ಕೋರಿದ್ದ ಅರ್ಜಿ ವಜಾ; ಬಿಜೆಪಿ ನಾಯಕನಿಗೆ ಸುಪ್ರೀಂ ಛೀಮಾರಿ

ಮಹಿಳೆಯರ ಕನಿಷ್ಠ ವಿವಾಹ ವಯಸ್ಸು ಹೆಚ್ಚಿಸಲು ಕೋರಿದ್ದ ಅರ್ಜಿ ವಜಾ; ಬಿಜೆಪಿ ನಾಯಕನಿಗೆ ಸುಪ್ರೀಂ ಛೀಮಾರಿ

- Advertisement -
- Advertisement -

ಮಹಿಳೆಯರ ಕನಿಷ್ಠ ವಿವಾಹ ವಯಸ್ಸನ್ನು ಪುರುಷರಿಗೆ ಸಮಾನವಾಗಿ 18 ವರ್ಷದಿಂದ 21 ವರ್ಷಕ್ಕೆ ಹೆಚ್ಚಿಸುವಂತೆ ಕೋರಿ ಭಾರತೀಯ ಜನತಾ ಪಕ್ಷದ ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಅರ್ಜಿದಾರ-ವಕೀಲ ಅಶ್ವಿನಿ ಉಪಾಧ್ಯಾಯ ಅವರನ್ನು ಉದ್ದೇಶಿಸಿ ಮಾತನಾಡಿದ್ದು, ”ನಾವು ಸಂವಿಧಾನದ ವಿಶೇಷ ಪಾಲಕರು ಎಂದು ಗ್ರಹಿಸಬಾರದು. ಸಂಸತ್ತು ಕೂಡ ಸಂವಿಧಾನದ ಪಾಲಕ. ಏಕರೂಪದ ಮದುವೆ ವಯಸ್ಸನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ನಿಗದಿ ಮಾಡಬಹುದು. ಹಾಗೆ ಮಾಡುವ ಅಧಿಕಾರ ಸಂಸತ್ತಿಗೆ ಇರುತ್ತದೆ. ಸಂಸತ್ತು ಮಾತ್ರ ತಿದ್ದುಪಡಿ ಮತ್ತು ಶಾಸನವನ್ನು ಮಾಡಬಹುದಾದ ಕೆಲವು ವಿಷಯಗಳಿವೆ… ನಾವು ಇಲ್ಲಿ ಆ ಬಗ್ಗೆ ಕಾನೂನನ್ನು ಜಾರಿಗೊಳಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ವಿಶೇಷ ವಿವಾಹ ಕಾಯಿದೆ ಮತ್ತು ಬಾಲ್ಯವಿವಾಹ ನಿಷೇಧ ಕಾಯಿದೆಯಲ್ಲಿ ಕನಿಷ್ಠ ವಿವಾಹದ ವಯಸ್ಸು 18 ವರ್ಷಗಳು, ಆದರೆ ಷರಿಯಾ ಕಾನೂನು ಪ್ರೌಢಾವಸ್ಥೆಯ ವಯಸ್ಸನ್ನು ಮದುವೆಯ ವಯಸ್ಸಾಗಿ ಅನುಮತಿಸಿದ್ದಾರೆ. ಆದ್ದರಿಂದ ಮದುವೆಯ ಏಕರೂಪದ ವಯಸ್ಸು ಇರಬೇಕು” ಎಂದು ಉಪಾಧ್ಯಾಯ ಅವರು ಸೂಚಿಸಿದರು.

ಇದನ್ನೂ ಓದಿ: ಗೋಧ್ರಾ ರೈಲು ದಹಿಸಿದ ಅಪರಾಧಿಗಳ ಬಿಡುಗಡೆ ಅಸಾಧ್ಯ; ಸುಪ್ರೀಂನಲ್ಲಿ ಗುಜರಾತ್ ಸರ್ಕಾರ ಹೇಳಿಕೆ

”ಅರ್ಜಿದಾರರು ವಿವಾಹದ ಕನಿಷ್ಠ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಿಸಲು ಶಾಸಕಾಂಗ ತಿದ್ದುಪಡಿಯನ್ನು ಬಯಸುತ್ತಾರೆ… ಆದರೆ, ಸಂವಿಧಾನದ ಪರಿಚ್ಛೇದ 32 (ರಿಟ್ ಅಧಿಕಾರ ವ್ಯಾಪ್ತಿ) ಅನ್ನು ಚಲಾಯಿಸುವ ಮೂಲಕ ನ್ಯಾಯಾಲಯವು, ಶಾಸನ ಮಾಡಲು ಸಂಸತ್ತಿಗೆ ಆದೇಶವನ್ನು ನೀಡುವಂತಿಲ್ಲ ಎಂಬುದು ನ್ಯಾಯಸಮ್ಮತ ಕಾನೂನು” ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.

“ನೀವು ಹೆಣ್ಣಿನ ಮದುವೆಯ ವಯಸ್ಸು 18 ವರ್ಷ ಎನ್ನುವುದನ್ನು ತಗೆದು ಹಾಕಿ, ಆಗ ಸ್ವಯಂಚಾಲಿತವಾಗಿ 21 ವರ್ಷವಾಗುತ್ತದೆ” ಎಂದು ಉಪಾಧ್ಯಾಯ ಹೇಳಿದರು.

ಅದಕ್ಕೆ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು, ”ಆರ್ಟಿಕಲ್ 32ನ್ನು ಅಪಹಾಸ್ಯ ಮಾಡಬೇಡಿ” ಎಂದು ಅವರಿಗೆ ಹೇಳಿದರು.

ಇದರಿಂದ ಅಸಮಾಧಾನಗೊಂಡ ಉಪಾಧ್ಯಾಯ ಅವರು, ಈ ಪ್ರಕರಣವನ್ನು ದೆಹಲಿ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸಿದೆ ಮತ್ತು ಈಗ ಅದನ್ನು ನೀವು ವಜಾಗೊಳಿಸುತ್ತಿದ್ದೀರಿ ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು, ”ಸಂವಿಧಾನದ ಅಡಿಯಲ್ಲಿ ನಮ್ಮ ಕರ್ತವ್ಯವನ್ನು ಮಾಡಲು ನಾವು ಇಲ್ಲಿದ್ದೇವೆ. ನಾವು ನಿಮ್ಮನ್ನು ಮೆಚ್ಚಿಸಲು ಬಂದಿಲ್ಲ ಅಥವಾ ಯಾವುದೇ ರಾಜಕೀಯ ಪಕ್ಷವನ್ನು ಮೆಚ್ಚಿಸಲು ನಾವು ಇಲ್ಲಿ ಬಂದಿಲ್ಲ ದಯವಿಟ್ಟು ಅದನ್ನು ಅರ್ಥಮಾಡಿಕೊಳ್ಳಿ. ಆದ್ದರಿಂದ ನೀವು ನಮ್ಮ ಬಗ್ಗೆ ಏನು ಭಾವಿಸುತ್ತೀರಿ ಎಂಬುದರ ಕುರಿತು ಇಲ್ಲಿ ಹೇಳಬೇಡಿ. ಇದು ರಾಜಕೀಯ ವೇದಿಕೆಯಲ್ಲ” ಎಂದು ಬಿಜೆಪಿ ನಾಯಕನ ವಿರುದ್ಧ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...