Homeಮುಖಪುಟಅಧಿವೇಶನಕ್ಕೆ ಅಡ್ಡಿ: ಕಾಂಗ್ರೆಸ್, ಆಪ್ ಸಂಸದರ ವಿರುದ್ಧ ತನಿಖೆಗೆ ಜಗದೀಪ್ ಧಂಖರ್ ಮನವಿ

ಅಧಿವೇಶನಕ್ಕೆ ಅಡ್ಡಿ: ಕಾಂಗ್ರೆಸ್, ಆಪ್ ಸಂಸದರ ವಿರುದ್ಧ ತನಿಖೆಗೆ ಜಗದೀಪ್ ಧಂಖರ್ ಮನವಿ

- Advertisement -
- Advertisement -

ಬಜೆಟ್ ಅಧಿವೇಶನದ ಸಮಯದಲ್ಲಿ ಸಂಸದರ ನಡವಳಿಕೆಯಿಂದ ಅಸ್ತವ್ಯಸ್ತತೆ ಉಂಟಾಗಿದ್ದು, ಅದು ಸವಲತ್ತುಗಳ ಉಲ್ಲಂಘನೆಯಾಗಿದೆ ಎಂದು ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧಂಖರ್ ಅವರು ಹೇಳಿದ್ದಾರೆ. ಈ ವಿಚಾರವಾಗಿ 12 ಪ್ರತಿಪಕ್ಷಗಳ ಸಂಸದರ ಹೆಸರನ್ನು ಉಲ್ಲೇಖಿಸಿ ಅವರ ಮೇಲೆ ತನಿಖೆ ನಡೆಸಲು ವಿಶೇಷಾಧಿಕಾರಗಳ ಸಮಿತಿಗೆ ಅವರು ತಿಳಿಸಿದ್ದಾರೆ.

ಸಂಸದರು ಪದೇ ಪದೇ ಸದನದ ಬಾವಿಗೆ ನುಗ್ಗಿ, ಘೋಷಣೆ ಕೂಗಿ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ರಾಜ್ಯಸಭೆಯ ನಿಯಮಗಳು ಮತ್ತು ಶಿಷ್ಟಾಚಾರಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಫೆಬ್ರವರಿ 18 ರಂದು ಹೊರಡಿಸಲಾದ ರಾಜ್ಯಸಭೆಯ ಬುಲೆಟಿನ್ ಪ್ರಕಾರ, 12 ಸಂಸದರಲ್ಲಿ ಒಂಬತ್ತು ಕಾಂಗ್ರೆಸ್ ಮತ್ತು ಮೂವರು ಆಮ್ ಆದ್ಮಿ ಪಕ್ಷದವರಾಗಿದ್ದಾರೆ. ಶಕ್ತಿಸಿನ್ಹ್ ಗೋಹಿಲ್, ನರನ್‌ಭಾಯ್ ಜೆ ರಥ್ವಾ, ಸೈಯದ್ ನಾಸಿರ್ ಹುಸೇನ್, ಕುಮಾರ್ ಕೇತ್ಕರ್, ಇಮ್ರಾನ್ ಪ್ರತಾಪ್‌ಗರ್ಹಿ, ಎಲ್ ಹನುಮಂತಯ್ಯ, ಫುಲೋ ದೇವಿ ನೇತಮ್, ಜೆಬಿ ಮಾಥರ್ ಹಿಶಾಮ್ ಮತ್ತು ರಂಜೀತ್ ರಂಜನ್ ಅವರನ್ನು ಧನ್‌ಖರ್ ಹೆಸರಿಸಿದ ಕಾಂಗ್ರೆಸ್ ನಾಯಕರು. ಇನ್ನು ಆಮ್ ಆದ್ಮಿ ಪಕ್ಷದಿಂದ ಸಂಜಯ್ ಸಿಂಗ್, ಸುಶೀಲ್ ಕುಮಾರ್ ಗುಪ್ತಾ ಮತ್ತು ಸಂದೀಪ್ ಕುಮಾರ್ ಪಾಠಕ್ ಹೆಸರು ಹೇಳಲಾಗಿದೆ.

ಅದಾನಿ ಗ್ರೂಪ್‌ನ ಹಗರಣದ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಬಜೆಟ್ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಿದವು. ಇದು ಪುನರಾವರ್ತಿತ ಮುಂದೂಡಿಕೆ ಮತ್ತು ಗದ್ದಲಕ್ಕೆ ಸಾಕ್ಷಿಯಾಯಿತು. ಈಗ ಮಾರ್ಚ್ 13ರಂದು ಸಂಸತ್ತು ಮತ್ತೆ ಸೇರಲಿದೆ.

ಇದನ್ನೂ ಓದಿ: ಹಿಂಡೆನ್‌ಬರ್ಗ್ ವರದಿ ಎಫೆಕ್ಟ್: $48 ಶತಕೋಟಿಗೆ ಕುಸಿದ ಅದಾನಿ ಆಸ್ತಿ

ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆಗಳು ಅದಾನಿ ಸಂಸ್ಥೆಯ ಜೊತೆಯಲ್ಲಿ ಹೂಡಿಕೆ ಮಾಡಿರುವುದರಿಂದ ಸಾಮಾನ್ಯ ನಾಗರಿಕರ ಹಣ ಕಳೆದುಹೋಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಕುರಿತು ಸಂಪೂರ್ಣ ತನಿಖೆಯಾಗಬೇಕೆಂದು ವಿರೋಧ ಪಕ್ಷಗಳ ಒಕ್ಕೂಟವು ಅಧಿವೇಶನದ ಸಮಯದಲ್ಲಿ ಒತ್ತಾಯಿಸಿದ್ದವು.

ದಶಕಗಳ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಲೆಕ್ಕಪತ್ರ ವಂಚನೆಯಲ್ಲಿ ಅದಾನಿ ಗ್ರೂಪ್ ತೊಡಗಿದೆ ಎಂದು ಅಮೆರಿಕ ಮೂಲದ ಕಂಪನಿ ಹಿಂಡೆನ್‌ಬರ್ಗ್ ರಿಸರ್ಚ್‌ ಆರೋಪ ಮಾಡಿದೆ. ಈ ಕುರಿತು ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯಿಂದ ತನಿಖೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿ ಸದನದಲ್ಲಿ ಪ್ರತಿಭಟನೆ ನಡೆಸಿದ್ದವು. ಇದರಿಂದ ಸದನವನ್ನು ಪದೇ ಪದೇ ಮುಂದೂಡುತ್ತ ಹೋಗಿದ್ದರಿಂದ ಸರಿಯಾದ ರೀತಿಯಲ್ಲಿ ಸದನ ನಡೆಸಲು ಸಾಧ್ಯವಾಗಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...