Homeಮುಖಪುಟಅಧಿವೇಶನಕ್ಕೆ ಅಡ್ಡಿ: ಕಾಂಗ್ರೆಸ್, ಆಪ್ ಸಂಸದರ ವಿರುದ್ಧ ತನಿಖೆಗೆ ಜಗದೀಪ್ ಧಂಖರ್ ಮನವಿ

ಅಧಿವೇಶನಕ್ಕೆ ಅಡ್ಡಿ: ಕಾಂಗ್ರೆಸ್, ಆಪ್ ಸಂಸದರ ವಿರುದ್ಧ ತನಿಖೆಗೆ ಜಗದೀಪ್ ಧಂಖರ್ ಮನವಿ

- Advertisement -
- Advertisement -

ಬಜೆಟ್ ಅಧಿವೇಶನದ ಸಮಯದಲ್ಲಿ ಸಂಸದರ ನಡವಳಿಕೆಯಿಂದ ಅಸ್ತವ್ಯಸ್ತತೆ ಉಂಟಾಗಿದ್ದು, ಅದು ಸವಲತ್ತುಗಳ ಉಲ್ಲಂಘನೆಯಾಗಿದೆ ಎಂದು ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧಂಖರ್ ಅವರು ಹೇಳಿದ್ದಾರೆ. ಈ ವಿಚಾರವಾಗಿ 12 ಪ್ರತಿಪಕ್ಷಗಳ ಸಂಸದರ ಹೆಸರನ್ನು ಉಲ್ಲೇಖಿಸಿ ಅವರ ಮೇಲೆ ತನಿಖೆ ನಡೆಸಲು ವಿಶೇಷಾಧಿಕಾರಗಳ ಸಮಿತಿಗೆ ಅವರು ತಿಳಿಸಿದ್ದಾರೆ.

ಸಂಸದರು ಪದೇ ಪದೇ ಸದನದ ಬಾವಿಗೆ ನುಗ್ಗಿ, ಘೋಷಣೆ ಕೂಗಿ ಕಲಾಪಕ್ಕೆ ಅಡ್ಡಿಪಡಿಸುವ ಮೂಲಕ ರಾಜ್ಯಸಭೆಯ ನಿಯಮಗಳು ಮತ್ತು ಶಿಷ್ಟಾಚಾರಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಫೆಬ್ರವರಿ 18 ರಂದು ಹೊರಡಿಸಲಾದ ರಾಜ್ಯಸಭೆಯ ಬುಲೆಟಿನ್ ಪ್ರಕಾರ, 12 ಸಂಸದರಲ್ಲಿ ಒಂಬತ್ತು ಕಾಂಗ್ರೆಸ್ ಮತ್ತು ಮೂವರು ಆಮ್ ಆದ್ಮಿ ಪಕ್ಷದವರಾಗಿದ್ದಾರೆ. ಶಕ್ತಿಸಿನ್ಹ್ ಗೋಹಿಲ್, ನರನ್‌ಭಾಯ್ ಜೆ ರಥ್ವಾ, ಸೈಯದ್ ನಾಸಿರ್ ಹುಸೇನ್, ಕುಮಾರ್ ಕೇತ್ಕರ್, ಇಮ್ರಾನ್ ಪ್ರತಾಪ್‌ಗರ್ಹಿ, ಎಲ್ ಹನುಮಂತಯ್ಯ, ಫುಲೋ ದೇವಿ ನೇತಮ್, ಜೆಬಿ ಮಾಥರ್ ಹಿಶಾಮ್ ಮತ್ತು ರಂಜೀತ್ ರಂಜನ್ ಅವರನ್ನು ಧನ್‌ಖರ್ ಹೆಸರಿಸಿದ ಕಾಂಗ್ರೆಸ್ ನಾಯಕರು. ಇನ್ನು ಆಮ್ ಆದ್ಮಿ ಪಕ್ಷದಿಂದ ಸಂಜಯ್ ಸಿಂಗ್, ಸುಶೀಲ್ ಕುಮಾರ್ ಗುಪ್ತಾ ಮತ್ತು ಸಂದೀಪ್ ಕುಮಾರ್ ಪಾಠಕ್ ಹೆಸರು ಹೇಳಲಾಗಿದೆ.

ಅದಾನಿ ಗ್ರೂಪ್‌ನ ಹಗರಣದ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಬಜೆಟ್ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಿದವು. ಇದು ಪುನರಾವರ್ತಿತ ಮುಂದೂಡಿಕೆ ಮತ್ತು ಗದ್ದಲಕ್ಕೆ ಸಾಕ್ಷಿಯಾಯಿತು. ಈಗ ಮಾರ್ಚ್ 13ರಂದು ಸಂಸತ್ತು ಮತ್ತೆ ಸೇರಲಿದೆ.

ಇದನ್ನೂ ಓದಿ: ಹಿಂಡೆನ್‌ಬರ್ಗ್ ವರದಿ ಎಫೆಕ್ಟ್: $48 ಶತಕೋಟಿಗೆ ಕುಸಿದ ಅದಾನಿ ಆಸ್ತಿ

ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆಗಳು ಅದಾನಿ ಸಂಸ್ಥೆಯ ಜೊತೆಯಲ್ಲಿ ಹೂಡಿಕೆ ಮಾಡಿರುವುದರಿಂದ ಸಾಮಾನ್ಯ ನಾಗರಿಕರ ಹಣ ಕಳೆದುಹೋಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಕುರಿತು ಸಂಪೂರ್ಣ ತನಿಖೆಯಾಗಬೇಕೆಂದು ವಿರೋಧ ಪಕ್ಷಗಳ ಒಕ್ಕೂಟವು ಅಧಿವೇಶನದ ಸಮಯದಲ್ಲಿ ಒತ್ತಾಯಿಸಿದ್ದವು.

ದಶಕಗಳ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಲೆಕ್ಕಪತ್ರ ವಂಚನೆಯಲ್ಲಿ ಅದಾನಿ ಗ್ರೂಪ್ ತೊಡಗಿದೆ ಎಂದು ಅಮೆರಿಕ ಮೂಲದ ಕಂಪನಿ ಹಿಂಡೆನ್‌ಬರ್ಗ್ ರಿಸರ್ಚ್‌ ಆರೋಪ ಮಾಡಿದೆ. ಈ ಕುರಿತು ಜಂಟಿ ಸಂಸದೀಯ ಸಮಿತಿ ಅಥವಾ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯಿಂದ ತನಿಖೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿ ಸದನದಲ್ಲಿ ಪ್ರತಿಭಟನೆ ನಡೆಸಿದ್ದವು. ಇದರಿಂದ ಸದನವನ್ನು ಪದೇ ಪದೇ ಮುಂದೂಡುತ್ತ ಹೋಗಿದ್ದರಿಂದ ಸರಿಯಾದ ರೀತಿಯಲ್ಲಿ ಸದನ ನಡೆಸಲು ಸಾಧ್ಯವಾಗಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....