Homeಮುಖಪುಟಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಛತ್ತೀಸ್‌ಗಢದಲ್ಲಿ ಇಡಿ ದಾಳಿ; ಕೈ ನಾಯಕರಿಂದ ಟೀಕೆ

ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಛತ್ತೀಸ್‌ಗಢದಲ್ಲಿ ಇಡಿ ದಾಳಿ; ಕೈ ನಾಯಕರಿಂದ ಟೀಕೆ

- Advertisement -
- Advertisement -

ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಸೋಮವಾರ (ಫೆ.20)ದಂದು ಛತ್ತೀಸ್‌ಗಢದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದೆ. ಈ ದಾಳಿಗಳ ಕುರಿತು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಡಿ ದಾಳಿ ಕುರಿತು ಟ್ವೀಟ್ ಮಾಡಿರುವ ಖರ್ಗೆ, ”ಕಳೆದ 9 ವ‍ರ್ಷಗಳಲ್ಲಿ 95 ಪ್ರತಿಶತದಷ್ಟು ದಾಳಿಗಳು ವಿರೋಧ ಪಕ್ಷದ ನಾಯಕರ ಮೇಲೆಯೇ ನಡೆದಿವೆ ಅದರಲ್ಲೂ ವಿಶೇಷವಾಗಿ ನಮ್ಮ ಪಕ್ಷದ ನಾಯಕರ ಮೇಲೆಯೇ ನಡೆದಿವೆ. ಇದು ಬಿಜೆಪಿಯ ಹೇಡಿತನವನ್ನು ತೋರಿಸುತ್ತದೆ ಆದರೆ ಕಾಂಗ್ರೆಸ್ ಈ ಕುತಂತ್ರಗಳಿಗೆ ಮಣಿಯುವುದಿಲ್ಲ” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.

”ಈ ಹೇಡಿತನದ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ. ”ಭಾರತ್ ಜೋಡೋ ಯಾತ್ರೆ”ಯ ಅಗಾಧ ಯಶಸ್ಸಿನಿಂದಾಗಿ ಬಿಜೆಪಿಯ ಅಶಾಂತಿ ಎದ್ದು ಕಾಣುತ್ತಿದೆ. ಮೋದಿಜಿಯವರಲ್ಲಿ ಸ್ವಲ್ಪವಾದರೂ ಪ್ರಾಮಾಣಿಕತೆಯಿದ್ದರೆ, ನಿಮ್ಮ ಆತ್ಮೀಯ ಗೆಳೆಯನ ಮೆಗಾ ಹಗರಣಗಳ ಮೇಲೆ ದಾಳಿ ಮಾಡಿ, ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಈ ಪ್ರಯತ್ನವನ್ನು ನಾವು ದೃಢವಾಗಿ ಎದುರಿಸುತ್ತೇವೆ” ಎಂದು ಖರ್ಗೆ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿದ ಗೆಹ್ಲೋಟ್, ”ಇದು ದುರದೃಷ್ಟಕರ ಸಂಗತಿಯಾಗಿದೆ, ಯಾವುದೇ ರಾಜ್ಯದಲ್ಲಿ ಚುನಾವಣೆಗಳು ಬಂದಾಗಲೂ ಇಡಿ ಮತ್ತು ಸಿಬಿಐ ದಾಳಿಗಳು ನಡೆಯುತ್ತಿವೆ. 2014 ರಿಂದ ನಿರಂತರವಾಗಿ ಇಡಿ, ಐಟಿ ಮತ್ತು ಸಿಬಿಐ ದುರ್ಬಳಕೆಯಾಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಯಾವುದೇ ರಾಜ್ಯದಲ್ಲಿ ಚುನಾವಣೆ ನಡೆದಾಗಲೂ ಇಡಿ ಮತ್ತು ಸಿಬಿಐ ದಾಳಿಗಳು ನಡೆಯುತ್ತವೆ. ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಇಂತಹ ಕ್ರಮ ಖಂಡನೀಯ” ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: ಇಡಿ ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ ವ್ಯಂಗ್ಯ

”ಇಡಿ ದಾಳಿಯಿಂದ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಇದು ಬಿಜೆಪಿಯ ನಾಟಕವಲ್ಲದೆ ಬೇರೇನೂ ಅಲ್ಲ ಎಂದು ದೇಶದ ಜನರು ಅರ್ಥಮಾಡಿಕೊಳ್ಳುತ್ತಿದ್ದಾರೆ” ಎಂದು ಗೆಹ್ಲೋಟ್ ಹೇಳಿದರು.

”ಈ ರೀತಿ ದಾಳಿ ನಡೆಸುವುದರಿಂದ ಕಾಂಗ್ರೆಸ್ ಹೆದರುತ್ತದೆ ಎಂದು ಅವರು ಭಾವಿಸುತ್ತಾರೆ? ಕಾಂಗ್ರೆಸ್ ಪಕ್ಷವು ಬ್ರಿಟಿಷರ ವಿರುದ್ಧ ಹೋರಾಡಿದ ಪಕ್ಷ ಮತ್ತು ನಮ್ಮ ಅನೇಕ ನಾಯಕರು ದೇಶದ ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿ ಜೈಲಿಗೆ ಹೋಗಿದ್ದಾರೆ. ಇದೀಗ ಬಿಜೆಪಿಯವರು ನಮ್ಮ ಮೇಲಿನ ದ್ವೇ‍ಷದಿಂದ ಇಂತಹ ದಾಳಿಗಳನ್ನು ನಡೆಸುತ್ತಿದ್ದಾರೆ, ನಾವು ಈಗಲೂ ಇದರ ವಿರುದ್ಧ ಹೋರಾಡುತ್ತೇವೆ” ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಇಡಿ ದಾಳಿ ಬಗ್ಗೆ ಮಾತನಾಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಬಿಜೆಪಿಯು ‘ಫೇರ್ ಅಂಡ್ ಲವ್ಲಿ’ ಯೋಜನೆಯನ್ನು ನಡೆಸುತ್ತಿದೆ. ಏಕೆಂದರೆ, ಹಿಮಂತ ಬಿಸ್ವ ಶರ್ಮಾ ಅಥವಾ ಸುವೇಂದು ಅಧಿಕಾರಿ ಅಥವಾ ಇತರರು ಬಿಜೆಪಿ ಸೇರಿದರು. ಈಗ ಇದ್ದಕ್ಕಿದ್ದಂತೆ ಅವರೆಲ್ಲಾ ಪ್ರಾಮಾಣಿಕರಾಗಿದ್ದಾರೆ ಮತ್ತು ಅವರ ವಿರುದ್ಧ ಯಾವುದೇ ತನಿಖೆಯೂ ನಡೆಯುವುದಿಲ್ಲ, ಯಾವ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ. ಪ್ರಧಾನಿ ಮೋದಿ ಅವರು ಅಗತ್ಯವಿರುವ ಕಡೆಯಲ್ಲಿ ದಾಳಿಗಳನ್ನು ನಡೆಸಲು ಬಿಡುವುದಿಲ್ಲ. ಈ ಹಿಂದೆ ಯಾರ ವಿರುದ್ಧ ಇಡಿ ದಾಳಿ ನಡೆಸಿತ್ತೋ, ಅವರು ಈಗ ಬಿಜೆಪಿ ಸೇರಿದ ನಂತರ ನಿರಪರಾಧಿಗಳಾಗಿದ್ದಾರೆ” ಎಂದು ಜೈರಾಮ್ ರಮೇಶ್ ಆರೋಪಿಸಿದರು.

”ರಾಜ್ಯಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷರು ಬಿಜೆಪಿಯನ್ನು ತೊಳೆಯುವ ಯಂತ್ರ” ಎಂದು ಖರ್ಗೆಯವರನ್ನು ಜೈರಾಮ್ ರಮೇಶ್ ಹೊಗಳಿದ್ದಾರೆ.

ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮೂರು ದಿನಗಳ ಮುಂಚಿತವಾಗಿ, ಕಲ್ಲಿದ್ದಲು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಮುಂಜಾನೆ ಶೋಧ ನಡೆಸಿತು. ವಿವಿಧ ಕಾಂಗ್ರೆಸ್ ಮುಖಂಡರ ಮನೆ ಮತ್ತು ಕಚೇರಿಗಳಲ್ಲಿ ಇಡಿ ಅಧಿಕಾರಿಗಳು ಶೋಧಕಾರ್ಯ ನಡೆಸಿದರು.

ಛತ್ತೀಸ್‌ಗಢದ ಕಾಂಗ್ರೆಸ್ ಖಜಾಂಚಿ ರಾಮಗೋಪಾಲ್ ಅಗರ್ವಾಲ್ ಅವರ ಮನೆಯಲ್ಲಿ ಶೋಧ ನಡೆಸಲಾಗಿದೆ. ಭಿಲಾಯಿ ಶಾಸಕ ದೇವೇಂದ್ರ ಯಾದವ್, ಗಿರೀಶ್ ದೇವಾಂಗನ್, ಆರ್ ಪಿ ಸಿಂಗ್, ವಿನೋದ್ ತಿವಾರಿ, ಸನ್ನಿ ಅಗರ್ವಾಲ್ ಮೇಲೆಯೂ ಇಡಿ ದಾಳಿ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಸೂರ್ಯಕಾಂತ್ ತಿವಾರಿಯಿಂದ ರಾಮ್‌ಗೋಪಾಲ್ ಅಗರ್ವಾಲ್ 52 ಕೋಟಿ ರೂಪಾಯಿಗಳನ್ನು ಪಡೆದಿದ್ದಾರೆ ಎನ್ನುವ ಬಗ್ಗೆ ಜಾರಿ ನಿರ್ದೇಶನಾಲಯದ ಬಳಿ ಬಲವಾದ ಸಾಕ್ಷ್ಯವನ್ನು ಇವೆ ಎಂದು ಹೇಳಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...