Homeಮುಖಪುಟಮೇಘಾಲಯ ಚುನಾವಣೆ: ತುರಾ ಸ್ಟೇಡಿಯಂನಲ್ಲಿ ಮೋದಿ ಪ್ರಚಾರಕ್ಕೆ ಅನುಮತಿ ನಿರಾಕರಣೆ

ಮೇಘಾಲಯ ಚುನಾವಣೆ: ತುರಾ ಸ್ಟೇಡಿಯಂನಲ್ಲಿ ಮೋದಿ ಪ್ರಚಾರಕ್ಕೆ ಅನುಮತಿ ನಿರಾಕರಣೆ

- Advertisement -
- Advertisement -

ಇದೇ ಫೆಬ್ರವರಿ 27ರಂದು ನಡೆಯಲಿರುವ ಮೇಘಾಲಯ ಚುನಾವಣಾ ಪ್ರಚಾರಕ್ಕೆ ಹೆಲಿಕ್ಯಾಪ್ಟರ್‌ನಲ್ಲಿ ತೆರಳಲು ಸಿದ್ದರಾಗಿದ್ದ ಪ್ರಧಾನಿ ಮೋದಿಯವರ ತುರಾ ಸ್ಟೇಡಿಯಂನ ಕಾರ್ಯಕ್ರಮಕ್ಕೆ ಅಲ್ಲಿನ ಸರ್ಕಾರ ಅನುಮತಿ ನಿರಾಕರಿಸಿದೆ.

ಮೇಘಾಲಯದ ದಕ್ಷಿಣ ತುರಾ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ಪ್ರತಿನಿಧಿಸುವ ಕ್ಷೇತ್ರವಾಗಿದೆ. ಆ ಕ್ಷೇತ್ರಕ್ಕೆ ಬಿಜೆಪಿಯು ತನ್ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಉಗ್ರಗಾಮಿ ನಾಯಕ ಬರ್ನಾರ್ಡ್ ಎನ್ ಮರಕ್ ಅವರನ್ನು ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಕಳೆದ ತಿಂಗಳು ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು ಆಡಳಿತಾರೂಢ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್‌ನಿಂದ ಬೇರ್ಪಟ್ಟು ರಾಜ್ಯ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ತೆಗೆದುಕೊಂಡ ಈ ತೀರ್ಮಾನಕ್ಕೆ ಬಿಜೆಪಿ ಕಿಡಿಕಾರಿದೆ.

2018 ರಿಂದ ಎನ್‌ಪಿಪಿ ನೇತೃತ್ವದ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್ (ಎಂಡಿಎ) ಸರ್ಕಾರದಲ್ಲಿ ಬಿಜೆಪಿ ಸಹ ಕೈಜೋಡಿಸಿತ್ತು. ಆದರೆ ಸದ್ಯ ಎರಡು ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದವು. ಅಂದಿನಿಂದ, ಎನ್‌ಪಿಪಿ ಮತ್ತು ಬಿಜೆಪಿ ನಡುವೆ ತಿಕ್ಕಾಟ ಆರಂಭವಾಗಿದೆ.

127 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ ಫುಟ್ಭಾಲ್ ಮತ್ತು ಒಳಾಂಗಣ ಕ್ರೀಡಾಂಗಣಕ್ಕೆ ಮಾಜಿ ಮುಖ್ಯಮಂತ್ರಿ ಪಿ ಎ ಸಂಗ್ಮಾ ಹೆಸರಿಡಲಾಗಿದೆ. ಅಂತರಾಷ್ಟ್ರೀಯ ಸೌಲಭ್ಯ ಹೊಂದಿರುವ ದೇಶದ ದೊಡ್ಡ ಫುಟ್ಬಾಲ್ ಕ್ರೀಡಾಂಗಣವನ್ನು 2022ರ ಡಿಸೆಂಬರ್‌ನಲ್ಲಿ ಉದ್ಘಾಟಿಸಲಾಗಿದ್ದು, ಒಳಾಂಗಣ ಕ್ರೀಡಾಂಗಣದ ಕೆಲಸ ನಡೆಯುತ್ತಿದೆ ಎನ್ನಲಾಗಿದೆ.

“ಈ ಕ್ರೀಡಾಂಗಣದ ನಿರ್ಮಾಣಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಣ ನೀಡಿದೆ. ದೇಶದ ಪ್ರಧಾನಿಗೆ ಅನುಮತಿ ನಿರಾಕರಿಸುವುದು ದೊಡ್ಡ ಅವಮಾನ” ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ ಸಿಎಂ ಕಾನ್ರಾಡ್ ಸಂಗ್ಮಾರವರು ಇದರಲ್ಲಿ ತಮ್ಮ ಪಕ್ಷದ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಚುನಾವಣಾ ರ್ಯಾಲಿಗಳಿಗೆ ಅನುಮತಿ ನೀಡುವುದು ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತಗಳು. ಅದರಲ್ಲಿ ನಮ್ಮ ಹಸ್ತಕ್ಷೇಪವಿರುವುದಿಲ್ಲ. ನಮ್ಮ ಬಹಳಷ್ಟು ರ್ಯಾಲಿಗಳಿಗೆ ಅನುಮತಿ ಕೊಟ್ಟಿಲ್ಲ. ಹಾಗಾಗಿ ಬಿಜೆಪಿ ನಮ್ಮ ವಿರುದ್ಧ ಟೀಕೆ ಮಾಡುವುದನ್ನು ನಿಲ್ಲಿಸಬೇಕು” ಎಂದಿದ್ದಾರೆ.

ಬಿಜೆಪಿ ಇದನ್ನು ದೊಡ್ಡ ಇಶ್ಯೂ ಮಾಡುತ್ತಿದ್ದಾರೆ. ನಾವು ಮೊದಲೇ ಹೇಳಿದಂತೆ ಸ್ಟೇಡಿಯಂ ಎರಡು ಭಾಗಗಳಾಗಿದ್ದು, ಒಂದು ಫುಟ್ಬಾಲ್ ಸ್ಟೇಡಿಯಂ ಮತ್ತೊಂದು ಒಳಾಂಗಣ ಕ್ರೀಡಾಂಗಣ ಮತ್ತು ಈಜುಕೊಳವಿದೆ. ಅದಿನ್ನೂ ಪೂರ್ಣಗೊಂಡಿಲ್ಲ. ಪ್ರಧಾನಿ ರ್ಯಾಲಿಗೆ ಹೆಚ್ಚು ಜನ ಸೇರಿದರೆ ಕ್ರೀಡಾಂಗಣ ಅಂದ ಮತ್ತು ನೈಸರ್ಗಿಕ ಹುಲ್ಲು ಹಾಳಾಗಬಹುದು. ಅಲ್ಲದೆ ಅಲ್ಲಿ ಪಾರ್ಕಿಂಗ್ ವ್ಯವಸ್ಥೆ ಸಹ ಇಲ್ಲ. ಈ ಎಲ್ಲಾ ಕಾರಣಗಳಿಂದ ಚುನಾವಣಾ ಆಯೋಗ ಅನುಮತಿ ನಿರಾಕರಿಸಿರಬಹುದು ಎಂದಿದ್ದಾರೆ.

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಮೇಘಾಲಯದಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯುತ್ತಿದೆ. ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಮೇಘಾಲಯದಲ್ಲಿ ಯಾವುದೇ ಮೈತ್ರಿಕೂಟಗಳ ಬದಲು ಎಲ್ಲಾ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಲು ಮುಂದಾಗಿವೆ. ಅಸ್ಸಾಂನೊಂದಿಗೆ ಮೇಘಾಲಯ ಗಡಿ ಸಮಸ್ಯೆ ಎದುರಿಸುತ್ತಿದೆ. ಜೊತೆಗೆ ಅಭಿವೃದ್ದಿಯಲ್ಲಿಯೂ ಹಿಂದೆ ಉಳಿದಿದೆ. ಇವುಗಳು ಈ ಭಾರಿಯ ಚುನಾವಣಾ ವಿಷಯಗಳಾಗಿವೆ.

ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು 58 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು ಮುಕುಲ್ ಸಂಗ್ಮಾ ನೇತೃತ್ವದಲ್ಲಿ 55 ಸ್ಥಾನಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ. ಕಾಂಗ್ರೆಸ್ ಎಲ್ಲಾ 60 ಸ್ಥಾನಗಳಲ್ಲಿ ಕಣಕ್ಕಿಳಿಯುತ್ತಿದೆ. ಬಿಜೆಪಿ ಸಹ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದಂತೆ ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 34, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7, ಹಿಲ್‌ಸ್ಟೇಲ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7 ಮತ್ತು ವಾಯ್ಸ್ ಆಫ್ ಪೀಪಲ್ ಪಾರ್ಟಿ 14 ಕಡೆಗಳಲ್ಲಿ ಸ್ಪರ್ಧಿಸುತ್ತಿದೆ.

2018ರ ಬಲಾಬಲ

ಕಾಂಗ್ರೆಸ್ – 21, ಎನ್‌ಪಿಪಿ 19, ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 06, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 04 ಮತ್ತು ಬಿಜೆಪಿ 02 ಕಡೆಗಳಲ್ಲಿ ಜಯ ಗಳಿಸಿತ್ತು.

ಮೇಘಾಲಯ, ತ್ರಿಪುರ ಮತ್ತು ನಾಗಾಲ್ಯಾಂಡ್ ರಾಜ್ಯಗಳ ಚುನಾವಣಾ ಫಲಿತಾಂಶ ಮಾರ್ಚ್ 02 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಛತ್ತೀಸ್‌ಗಢದಲ್ಲಿ ಇಡಿ ದಾಳಿ; ಕೈ ನಾಯಕರಿಂದ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...