Homeಕರ್ನಾಟಕಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

- Advertisement -
- Advertisement -

ಫೆಬ್ರವರಿ 21ರಂದು #DadaSahebPhalkeAwards2023 ಎಂಬ ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದೆ. ವಿವೇಕ್ ಅಗ್ನಿಹೋತ್ರಿ ಅವರ ವಿವಾದಾತ್ಮಕ ಚಲನಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿದೆ ಎಂದು ಅನೇಕ ಮಾಧ್ಯಮಗಳು, ನ್ಯೂಸ್‌ ಏಜೆನ್ಸಿಗಳು ಸುದ್ದಿ ಮಾಡಿವೆ.

“ದಾದಾಸಾಹೇಬ್ ಪಾಲ್ಕೆ ಅವಾರ್ಡ್ಸ್ 2023” ಎಂಬ ಹ್ಯಾಷ್‌ಟ್ಯಾಗ್ ಮೂಲಕ ಕೆಲವೊಂದು ಗೊಂದಲವನ್ನು ಹರಿಬಿಡಲಾಗುತ್ತಿದೆ. ಸಿನಿಮಾ ಕ್ಷೇತ್ರದ ಜೀವನಮಾನ ಸಾಧನೆಗೆ ದೇಶದಲ್ಲಿ ಅತ್ಯುನ್ನತ ಪ್ರಶಸ್ತಿಯಾಗಿ ನೀಡಲಾಗುವ ‘ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ’ ಇದೆಂಬ ಭಾವನೆಯನ್ನು ಈ ಮೂಲಕ ತುಂಬಲಾಗುತ್ತಿದೆ.

‘ಕಾಂತಾರ’ದ ಸಿನಿಮಾದ ನಟ ರಿಷಬ್‌ ಶೆಟ್ಟಿ, ಮಲಯಾಳಂ ನಟ ದುಲ್ಕರ್‌ ಸಲ್ಮಾನ್‌ ಮೊದಲಾದವರಿಗೆ ವಿವಿಧ ವಿಭಾಗಗಳಲ್ಲಿ ‘ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿಗಳು’ ದೊರೆತಿವೆ ಎಂದು ಸುದ್ದಿಯಾಗುತ್ತಿವೆ.

ಸಿನಿಮಾ ಕ್ಷೇತ್ರದಲ್ಲಿ ನೀಡಲಾಗುವ ಅತ್ಯುನ್ನತ ಹಾಗೂ ಕೇಂದ್ರ ಸರ್ಕಾರವು ಕೊಡಮಾಡುವ ಪ್ರಶಸ್ತಿ ಇದಾಗಿದೆ ಎಂಬ ಭಾವನೆಯನ್ನು ಹ್ಯಾಷ್‌ಟ್ಯಾಗ್‌ಗಳು ಸೃಷ್ಟಿಸುತ್ತಿವೆ. ಆದರೆ ವಾಸ್ತವಗಳು ಬೇರೆ ಇವೆ.

ಫೆಬ್ರವರಿ 20 ರಂದು ಮುಂಬೈನಲ್ಲಿ ಸಮಾರಂಭ ನಡೆದಿದ್ದು, ಅಗ್ನಿಹೋತ್ರಿ ಅವರ ಚಲನಚಿತ್ರ ‘ಕಾಶ್ಮೀರ್‌ ಫೈಲ್ಸ್‌’ ಸೇರಿದಂತೆ  ಇತರ ಚಲನಚಿತ್ರಗಳು ‘ದಾದಾಸಾಹೇಬ್ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ’ ಗೆದ್ದಿವೆ.

‘ದಾದಾಸಾಹೇಬ್ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ವನ್ನು (ಡಿಪಿಐಎಫ್‌ಎಫ್‌) 2012 ರಲ್ಲಿ ಆರಂಭವಾಯಿತು. 2016ರಿಂದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ಡಿಫಿಐಎಫ್‌ಎಫ್‌ ವೆಬ್‌ಸೈಟ್ ಹೇಳುತ್ತದೆ.

“ದಾದಾಸಾಹೇಬ್ ಪಾಲ್ಕೆ ಎಂದು ಪ್ರೀತಿಯಿಂದ ಕರೆಯಲ್ಪಡುವ ದಿವಂಗತ ಧುಂಡಿರಾಜ್ ಗೋವಿಂದ್ ಪಾಲ್ಕೆ ಅವರ ಪರಂಪರೆಯನ್ನು ಮುಂದುವರಿಸಲು” ಈ ಪ್ರಶಸ್ತಿ ಸ್ಥಾಪಿಸಿರುವುದಾಗಿ ವೆಬ್‌ಸೈಟ್‌ ಹೇಳಿಕೊಂಡಿದೆ. “ಭಾರತದ ಏಕೈಕ ಸ್ವತಂತ್ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ” ಎಂದೂ ಡಿಪಿಐಎಫ್‌ಎಫ್‌ ಪ್ರಚಾರ ಮಾಡಿಕೊಂಡಿದೆ.

ಈ ಪ್ರಶಸ್ತಿಗಳನ್ನು ಉದ್ಯಮಿ ಅನಿಲ್ ಮಿಶ್ರಾ ಸ್ಥಾಪಿಸಿದ್ದಾರೆ ಎಂದು ವೆಬ್‌ಸೈಟ್ ಸ್ಪಷ್ಟಪಡಿಸಿದೆ. ಐಎಂಡಿಬಿ ಆನ್‌ಲೈನ್ ಫಿಲ್ಮ್ ಡೇಟಾಬೇಸ್‌ನಲ್ಲಿ ಮಿಶ್ರಾ ಅವರನ್ನು ‘ಸಿಬಿಎಫ್‌ಸಿಯ ಸಲಹಾ ಮಂಡಳಿಯ ಸದಸ್ಯ’ ಎಂದು ನಮೂದಿಸಲಾಗಿದೆ. ಆದರೆ ಸಿಬಿಎಫ್‌ಸಿ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಮಂಡಳಿಯ ಸದಸ್ಯರ ಪ್ರಸ್ತುತ ಪಟ್ಟಿಯಲ್ಲಿ ಮಿಶ್ರಾ ಅವರ ಹೆಸರಿಲ್ಲ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ತಮ್ಮ “ಹಿತೈಷಿಗಳು” ಎಂದು ಡಿಪಿಐಎಫ್‌ಎಫ್‌ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. 2023ರ ಪ್ರಶಸ್ತಿಗಳಿಗೆ ಸಂಬಂಧಿಸಿದಂತೆ ಅಮಿತ್ ಶಾ ಅವರು ಶುಭ ಹಾರೈಕೆ ಮಾಡಿರುವ ಪತ್ರವನ್ನೂ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲಾಗಿದೆ.

ದಾದಾಸಾಹೇಬ್ ಪಾಲ್ಕೆಯವರ ಮೊಮ್ಮಗ ಎಂದು ಗುರುತಿಸಲಾದ ಚಂದ್ರಶೇಖರ್ ಪುಸಲ್ಕರ್ ಅವರು ತೀರ್ಪುಗಾರರ ಅಧ್ಯಕ್ಷರಾಗಿದ್ದಾರೆ.

2022ರಲ್ಲಿ ಉದ್ಘಾಟನೆಗೊಂಡ ಪ್ರಧಾನಮಂತ್ರಿ ಸಂಗ್ರಹಾಲಯವು ಈ ಪ್ರಶಸ್ತಿಗಳನ್ನು ‘ಬೆಂಬಲಿಸುತ್ತದೆ’ ಎಂದೂ ಡಿಫಿಐಎಫ್‌ಎಫ್‌ ಪ್ರಚಾರ ಮಾಡಿಕೊಂಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಈ ಪ್ರಶಸ್ತಿಗೂ 1969ರಲ್ಲಿ ಸ್ಥಾಪಿಸಲಾದ ವಾರ್ಷಿಕ ‘ದಾದಾಸಾಹೇಬ್ ಪಾಲ್ಕೆ’ ಪ್ರಶಸ್ತಿಗೂ ಯಾವುದೇ ಸಂಬಂಧವಿಲ್ಲ. ಭಾರತೀಯ ಚಿತ್ರರಂಗಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ಒಬ್ಬರನ್ನು ಆಯ್ಕೆ ಮಾಡಿ ಪ್ರತಿವರ್ಷ ಪ್ರಖ್ಯಾತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯನ್ನು ಕೊಡಮಾಡಲಾಗುತ್ತಿದೆ. ಡಾ.ರಾಜ್‌ಕುಮಾರ್‌ (1995), ಆಶಾ ಪರೇಖ್ (2020), ರಜನಿಕಾಂತ್ (2019), ಗುಲ್ಜಾರ್ (2013), ಅಡೂರ್ ಗೋಪಾಲಕೃಷ್ಣನ್ (2004), ಸತ್ಯಜಿತ್ ರೇ (1984), ಪೃಥ್ವಿರಾಜ್ ಕಪೂರ್ (1971) ಮತ್ತು ದೇವಿಕಾ ರಾಣಿ (1969) ಮೊದಲಾದವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅಧಿಕೃತವಾಗಿ ‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ’ಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಚಲನಚಿತ್ರೋತ್ಸವಗಳ ನಿರ್ದೇಶನಾಲಯವು ನೀಡುತ್ತದೆ.

‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗಳು’ ಎಂಬ ಹೆಸರು ಉಂಟು ಮಾಡಿರುವ ಗೊಂದಲದ ಬಗ್ಗೆ ‘ಹಿಂದೂಸ್ಥಾನ್‌ ಟೈಮ್‌ 2018’ರಲ್ಲಿ ವರದಿ ಮಾಡಿತ್ತು. ಪಾಲ್ಕೆ ಅವರ ಹೆಸರಿನಲ್ಲಿ ಎರಡು ಸ್ವತಂತ್ರ ಪ್ರಶಸ್ತಿಗಳು ಹುಟ್ಟಿಕೊಂಡಿರುವುದನ್ನು ಉಲ್ಲೇಖಿಸಿತ್ತು. ‘ದಾದಾಸಾಹೇಬ್ ಪಾಲ್ಕೆ ಎಕ್ಸಲೆನ್ಸ್ ಅವಾರ್ಡ್ಸ್’ ಮತ್ತು ‘ದಾದಾಸಾಹೇಬ್ ಪಾಲ್ಕೆ ಫಿಲ್ಮ್ ಫೌಂಡೇಶನ್ ಅವಾರ್ಡ್ಸ್’ ಎಂಬ ಎರಡು ಸ್ವತಂತ್ರ ಪ್ರಶಸ್ತಿಗಳು ಉಂಟು ಮಾಡಿರುವ ಗೊಂದಲದ ಕುರಿತು ವರದಿ ಬೆಳಕು ಚೆಲ್ಲಿತ್ತು.

ಪ್ರಸ್ತುತ ಸಂದರ್ಭದಲ್ಲಿ ಅಗ್ನಿಹೋತ್ರಿಯಂಥವರು ಮಾಡುತ್ತಿರುವ ಟ್ವಿಟ್‌ಗಳು ಈ ಗೊಂದಲವನ್ನೇ ಮುಂದುವರಿಸಿವೆ.

ಪ್ರಶಸ್ತಿಯ ಕುರಿತು ಟ್ವೀಟ್ ಮಾಡಿರುವ ಅಗ್ನಿಹೋತ್ರಿ, “ಘೋಷಣೆ: #TheKashmirFiles #DadaSahebPhalkeAwards2023ರಲ್ಲಿ ‘ಅತ್ಯುತ್ತಮ ಚಲನಚಿತ್ರ’ ಪ್ರಶಸ್ತಿಯನ್ನು ಗೆದ್ದಿದೆ. ಈ ಪ್ರಶಸ್ತಿಯನ್ನು ಭಯೋತ್ಪಾದನೆಯಿಂದ ತೊಂದರೆಗೊಳಗಾದ ಸಂತ್ರಸ್ತರಿಗೆ, ಆಶೀರ್ವದಿಸಿದ ಭಾರತದ ಎಲ್ಲಾ ಜನರಿಗೆ ಸಮರ್ಪಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ವಾರ್ಷಿಕವಾಗಿ ಕೊಡುವ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯೆಂದೇ ಜನಸಾಮಾನ್ಯರು ಭಾವಿಸಿಬಿಡುವಂತೆ ವಿವೇಕ್ ಅಗ್ನಿಹೋತ್ರಿಯವರು ಟ್ವೀಟ್ ಮಾಡಿದ್ದಾರೆ. ವಾರ್ಷಿಕ ಪ್ರಶಸ್ತಿಗೂ ಈಗ ಅಗ್ನಿಹೋತ್ರಿ ಪಡೆದಿರುವ ಪ್ರಶಸ್ತಿಗೂ ಯಾವುದೇ ಸಂಬಂಧವಿಲ್ಲ. ಅದನ್ನು ಮನವರಿಕೆ ಮಾಡಿಕೊಡುವ ಪ್ರಯತ್ನವನ್ನೂ ಅಗ್ನಿಹೋತ್ರಿ ತಮ್ಮ ಟ್ವೀಟ್‌ನಲ್ಲಿ ಮಾಡಿಲ್ಲ.

ವಿಚಿತ್ರವೆಂದರೆ ಕೆಲವು ಸುದ್ದಿ ವಾಹಿನಿಗಳು ಕೂಡ ಅಗ್ನಿಹೋತ್ರಿಯವರು ಹಾಕಿರುವ ಹ್ಯಾಶ್‌ಟ್ಯಾಗ್ ಬಳಸಿವೆ. ಈ ಪ್ರಶಸ್ತಿಯ ಇತಿಹಾಸದ ಕುರಿತು ತಮ್ಮ ಟ್ವೀಟ್‌ಗಳಲ್ಲಿ ಏನನ್ನೂ ಉಲ್ಲೇಖಿಸಿಲ್ಲ. ಕೆಲವು ವರದಿಗಳು ಪ್ರಶಸ್ತಿಗಳ ಪೂರ್ಣ ಹೆಸರನ್ನು ಉಲ್ಲೇಖಿಸಿವೆ, ಅನೇಕ ಸುದ್ದಿ ಸಂಸ್ಥೆಗಳು ಕೇವಲ ‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗಳು’ ಎಂಬ ಶೀರ್ಷಿಕೆಗಳೊಂದಿಗೆ ಸುದ್ದಿ ಮಾಡಿವೆ. ಗೂಗಲ್‌ನಲ್ಲೂ ಈ ಪ್ರಶಸ್ತಿಗಳ ಕುರಿತು ಹುಡುಕಾಟ ಜೋರಾಗಿದೆ. ವಾರ್ಷಿಕವಾಗಿ ಸರ್ಕಾರ ಕೊಡಮಾಡುವ ಪ್ರಶಸ್ತಿ ಇದಲ್ಲ ಎಂದು ಎಂದು ಸ್ಪಷ್ಟಪಡಿಸದಿರುವ ಸುದ್ದಿ ಸಂಸ್ಥೆಗಳಲ್ಲಿ ಎಎನ್‌ಐ ಕೂಡ ಸೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...