Homeಕರ್ನಾಟಕಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

- Advertisement -
- Advertisement -

ಫೆಬ್ರವರಿ 21ರಂದು #DadaSahebPhalkeAwards2023 ಎಂಬ ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದೆ. ವಿವೇಕ್ ಅಗ್ನಿಹೋತ್ರಿ ಅವರ ವಿವಾದಾತ್ಮಕ ಚಲನಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿದೆ ಎಂದು ಅನೇಕ ಮಾಧ್ಯಮಗಳು, ನ್ಯೂಸ್‌ ಏಜೆನ್ಸಿಗಳು ಸುದ್ದಿ ಮಾಡಿವೆ.

“ದಾದಾಸಾಹೇಬ್ ಪಾಲ್ಕೆ ಅವಾರ್ಡ್ಸ್ 2023” ಎಂಬ ಹ್ಯಾಷ್‌ಟ್ಯಾಗ್ ಮೂಲಕ ಕೆಲವೊಂದು ಗೊಂದಲವನ್ನು ಹರಿಬಿಡಲಾಗುತ್ತಿದೆ. ಸಿನಿಮಾ ಕ್ಷೇತ್ರದ ಜೀವನಮಾನ ಸಾಧನೆಗೆ ದೇಶದಲ್ಲಿ ಅತ್ಯುನ್ನತ ಪ್ರಶಸ್ತಿಯಾಗಿ ನೀಡಲಾಗುವ ‘ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ’ ಇದೆಂಬ ಭಾವನೆಯನ್ನು ಈ ಮೂಲಕ ತುಂಬಲಾಗುತ್ತಿದೆ.

‘ಕಾಂತಾರ’ದ ಸಿನಿಮಾದ ನಟ ರಿಷಬ್‌ ಶೆಟ್ಟಿ, ಮಲಯಾಳಂ ನಟ ದುಲ್ಕರ್‌ ಸಲ್ಮಾನ್‌ ಮೊದಲಾದವರಿಗೆ ವಿವಿಧ ವಿಭಾಗಗಳಲ್ಲಿ ‘ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿಗಳು’ ದೊರೆತಿವೆ ಎಂದು ಸುದ್ದಿಯಾಗುತ್ತಿವೆ.

ಸಿನಿಮಾ ಕ್ಷೇತ್ರದಲ್ಲಿ ನೀಡಲಾಗುವ ಅತ್ಯುನ್ನತ ಹಾಗೂ ಕೇಂದ್ರ ಸರ್ಕಾರವು ಕೊಡಮಾಡುವ ಪ್ರಶಸ್ತಿ ಇದಾಗಿದೆ ಎಂಬ ಭಾವನೆಯನ್ನು ಹ್ಯಾಷ್‌ಟ್ಯಾಗ್‌ಗಳು ಸೃಷ್ಟಿಸುತ್ತಿವೆ. ಆದರೆ ವಾಸ್ತವಗಳು ಬೇರೆ ಇವೆ.

ಫೆಬ್ರವರಿ 20 ರಂದು ಮುಂಬೈನಲ್ಲಿ ಸಮಾರಂಭ ನಡೆದಿದ್ದು, ಅಗ್ನಿಹೋತ್ರಿ ಅವರ ಚಲನಚಿತ್ರ ‘ಕಾಶ್ಮೀರ್‌ ಫೈಲ್ಸ್‌’ ಸೇರಿದಂತೆ  ಇತರ ಚಲನಚಿತ್ರಗಳು ‘ದಾದಾಸಾಹೇಬ್ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ’ ಗೆದ್ದಿವೆ.

‘ದಾದಾಸಾಹೇಬ್ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ವನ್ನು (ಡಿಪಿಐಎಫ್‌ಎಫ್‌) 2012 ರಲ್ಲಿ ಆರಂಭವಾಯಿತು. 2016ರಿಂದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ಡಿಫಿಐಎಫ್‌ಎಫ್‌ ವೆಬ್‌ಸೈಟ್ ಹೇಳುತ್ತದೆ.

“ದಾದಾಸಾಹೇಬ್ ಪಾಲ್ಕೆ ಎಂದು ಪ್ರೀತಿಯಿಂದ ಕರೆಯಲ್ಪಡುವ ದಿವಂಗತ ಧುಂಡಿರಾಜ್ ಗೋವಿಂದ್ ಪಾಲ್ಕೆ ಅವರ ಪರಂಪರೆಯನ್ನು ಮುಂದುವರಿಸಲು” ಈ ಪ್ರಶಸ್ತಿ ಸ್ಥಾಪಿಸಿರುವುದಾಗಿ ವೆಬ್‌ಸೈಟ್‌ ಹೇಳಿಕೊಂಡಿದೆ. “ಭಾರತದ ಏಕೈಕ ಸ್ವತಂತ್ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ” ಎಂದೂ ಡಿಪಿಐಎಫ್‌ಎಫ್‌ ಪ್ರಚಾರ ಮಾಡಿಕೊಂಡಿದೆ.

ಈ ಪ್ರಶಸ್ತಿಗಳನ್ನು ಉದ್ಯಮಿ ಅನಿಲ್ ಮಿಶ್ರಾ ಸ್ಥಾಪಿಸಿದ್ದಾರೆ ಎಂದು ವೆಬ್‌ಸೈಟ್ ಸ್ಪಷ್ಟಪಡಿಸಿದೆ. ಐಎಂಡಿಬಿ ಆನ್‌ಲೈನ್ ಫಿಲ್ಮ್ ಡೇಟಾಬೇಸ್‌ನಲ್ಲಿ ಮಿಶ್ರಾ ಅವರನ್ನು ‘ಸಿಬಿಎಫ್‌ಸಿಯ ಸಲಹಾ ಮಂಡಳಿಯ ಸದಸ್ಯ’ ಎಂದು ನಮೂದಿಸಲಾಗಿದೆ. ಆದರೆ ಸಿಬಿಎಫ್‌ಸಿ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಮಂಡಳಿಯ ಸದಸ್ಯರ ಪ್ರಸ್ತುತ ಪಟ್ಟಿಯಲ್ಲಿ ಮಿಶ್ರಾ ಅವರ ಹೆಸರಿಲ್ಲ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ತಮ್ಮ “ಹಿತೈಷಿಗಳು” ಎಂದು ಡಿಪಿಐಎಫ್‌ಎಫ್‌ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. 2023ರ ಪ್ರಶಸ್ತಿಗಳಿಗೆ ಸಂಬಂಧಿಸಿದಂತೆ ಅಮಿತ್ ಶಾ ಅವರು ಶುಭ ಹಾರೈಕೆ ಮಾಡಿರುವ ಪತ್ರವನ್ನೂ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲಾಗಿದೆ.

ದಾದಾಸಾಹೇಬ್ ಪಾಲ್ಕೆಯವರ ಮೊಮ್ಮಗ ಎಂದು ಗುರುತಿಸಲಾದ ಚಂದ್ರಶೇಖರ್ ಪುಸಲ್ಕರ್ ಅವರು ತೀರ್ಪುಗಾರರ ಅಧ್ಯಕ್ಷರಾಗಿದ್ದಾರೆ.

2022ರಲ್ಲಿ ಉದ್ಘಾಟನೆಗೊಂಡ ಪ್ರಧಾನಮಂತ್ರಿ ಸಂಗ್ರಹಾಲಯವು ಈ ಪ್ರಶಸ್ತಿಗಳನ್ನು ‘ಬೆಂಬಲಿಸುತ್ತದೆ’ ಎಂದೂ ಡಿಫಿಐಎಫ್‌ಎಫ್‌ ಪ್ರಚಾರ ಮಾಡಿಕೊಂಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಈ ಪ್ರಶಸ್ತಿಗೂ 1969ರಲ್ಲಿ ಸ್ಥಾಪಿಸಲಾದ ವಾರ್ಷಿಕ ‘ದಾದಾಸಾಹೇಬ್ ಪಾಲ್ಕೆ’ ಪ್ರಶಸ್ತಿಗೂ ಯಾವುದೇ ಸಂಬಂಧವಿಲ್ಲ. ಭಾರತೀಯ ಚಿತ್ರರಂಗಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ಒಬ್ಬರನ್ನು ಆಯ್ಕೆ ಮಾಡಿ ಪ್ರತಿವರ್ಷ ಪ್ರಖ್ಯಾತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯನ್ನು ಕೊಡಮಾಡಲಾಗುತ್ತಿದೆ. ಡಾ.ರಾಜ್‌ಕುಮಾರ್‌ (1995), ಆಶಾ ಪರೇಖ್ (2020), ರಜನಿಕಾಂತ್ (2019), ಗುಲ್ಜಾರ್ (2013), ಅಡೂರ್ ಗೋಪಾಲಕೃಷ್ಣನ್ (2004), ಸತ್ಯಜಿತ್ ರೇ (1984), ಪೃಥ್ವಿರಾಜ್ ಕಪೂರ್ (1971) ಮತ್ತು ದೇವಿಕಾ ರಾಣಿ (1969) ಮೊದಲಾದವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅಧಿಕೃತವಾಗಿ ‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ’ಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಚಲನಚಿತ್ರೋತ್ಸವಗಳ ನಿರ್ದೇಶನಾಲಯವು ನೀಡುತ್ತದೆ.

‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗಳು’ ಎಂಬ ಹೆಸರು ಉಂಟು ಮಾಡಿರುವ ಗೊಂದಲದ ಬಗ್ಗೆ ‘ಹಿಂದೂಸ್ಥಾನ್‌ ಟೈಮ್‌ 2018’ರಲ್ಲಿ ವರದಿ ಮಾಡಿತ್ತು. ಪಾಲ್ಕೆ ಅವರ ಹೆಸರಿನಲ್ಲಿ ಎರಡು ಸ್ವತಂತ್ರ ಪ್ರಶಸ್ತಿಗಳು ಹುಟ್ಟಿಕೊಂಡಿರುವುದನ್ನು ಉಲ್ಲೇಖಿಸಿತ್ತು. ‘ದಾದಾಸಾಹೇಬ್ ಪಾಲ್ಕೆ ಎಕ್ಸಲೆನ್ಸ್ ಅವಾರ್ಡ್ಸ್’ ಮತ್ತು ‘ದಾದಾಸಾಹೇಬ್ ಪಾಲ್ಕೆ ಫಿಲ್ಮ್ ಫೌಂಡೇಶನ್ ಅವಾರ್ಡ್ಸ್’ ಎಂಬ ಎರಡು ಸ್ವತಂತ್ರ ಪ್ರಶಸ್ತಿಗಳು ಉಂಟು ಮಾಡಿರುವ ಗೊಂದಲದ ಕುರಿತು ವರದಿ ಬೆಳಕು ಚೆಲ್ಲಿತ್ತು.

ಪ್ರಸ್ತುತ ಸಂದರ್ಭದಲ್ಲಿ ಅಗ್ನಿಹೋತ್ರಿಯಂಥವರು ಮಾಡುತ್ತಿರುವ ಟ್ವಿಟ್‌ಗಳು ಈ ಗೊಂದಲವನ್ನೇ ಮುಂದುವರಿಸಿವೆ.

ಪ್ರಶಸ್ತಿಯ ಕುರಿತು ಟ್ವೀಟ್ ಮಾಡಿರುವ ಅಗ್ನಿಹೋತ್ರಿ, “ಘೋಷಣೆ: #TheKashmirFiles #DadaSahebPhalkeAwards2023ರಲ್ಲಿ ‘ಅತ್ಯುತ್ತಮ ಚಲನಚಿತ್ರ’ ಪ್ರಶಸ್ತಿಯನ್ನು ಗೆದ್ದಿದೆ. ಈ ಪ್ರಶಸ್ತಿಯನ್ನು ಭಯೋತ್ಪಾದನೆಯಿಂದ ತೊಂದರೆಗೊಳಗಾದ ಸಂತ್ರಸ್ತರಿಗೆ, ಆಶೀರ್ವದಿಸಿದ ಭಾರತದ ಎಲ್ಲಾ ಜನರಿಗೆ ಸಮರ್ಪಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ವಾರ್ಷಿಕವಾಗಿ ಕೊಡುವ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯೆಂದೇ ಜನಸಾಮಾನ್ಯರು ಭಾವಿಸಿಬಿಡುವಂತೆ ವಿವೇಕ್ ಅಗ್ನಿಹೋತ್ರಿಯವರು ಟ್ವೀಟ್ ಮಾಡಿದ್ದಾರೆ. ವಾರ್ಷಿಕ ಪ್ರಶಸ್ತಿಗೂ ಈಗ ಅಗ್ನಿಹೋತ್ರಿ ಪಡೆದಿರುವ ಪ್ರಶಸ್ತಿಗೂ ಯಾವುದೇ ಸಂಬಂಧವಿಲ್ಲ. ಅದನ್ನು ಮನವರಿಕೆ ಮಾಡಿಕೊಡುವ ಪ್ರಯತ್ನವನ್ನೂ ಅಗ್ನಿಹೋತ್ರಿ ತಮ್ಮ ಟ್ವೀಟ್‌ನಲ್ಲಿ ಮಾಡಿಲ್ಲ.

ವಿಚಿತ್ರವೆಂದರೆ ಕೆಲವು ಸುದ್ದಿ ವಾಹಿನಿಗಳು ಕೂಡ ಅಗ್ನಿಹೋತ್ರಿಯವರು ಹಾಕಿರುವ ಹ್ಯಾಶ್‌ಟ್ಯಾಗ್ ಬಳಸಿವೆ. ಈ ಪ್ರಶಸ್ತಿಯ ಇತಿಹಾಸದ ಕುರಿತು ತಮ್ಮ ಟ್ವೀಟ್‌ಗಳಲ್ಲಿ ಏನನ್ನೂ ಉಲ್ಲೇಖಿಸಿಲ್ಲ. ಕೆಲವು ವರದಿಗಳು ಪ್ರಶಸ್ತಿಗಳ ಪೂರ್ಣ ಹೆಸರನ್ನು ಉಲ್ಲೇಖಿಸಿವೆ, ಅನೇಕ ಸುದ್ದಿ ಸಂಸ್ಥೆಗಳು ಕೇವಲ ‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗಳು’ ಎಂಬ ಶೀರ್ಷಿಕೆಗಳೊಂದಿಗೆ ಸುದ್ದಿ ಮಾಡಿವೆ. ಗೂಗಲ್‌ನಲ್ಲೂ ಈ ಪ್ರಶಸ್ತಿಗಳ ಕುರಿತು ಹುಡುಕಾಟ ಜೋರಾಗಿದೆ. ವಾರ್ಷಿಕವಾಗಿ ಸರ್ಕಾರ ಕೊಡಮಾಡುವ ಪ್ರಶಸ್ತಿ ಇದಲ್ಲ ಎಂದು ಎಂದು ಸ್ಪಷ್ಟಪಡಿಸದಿರುವ ಸುದ್ದಿ ಸಂಸ್ಥೆಗಳಲ್ಲಿ ಎಎನ್‌ಐ ಕೂಡ ಸೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...