Homeಕರ್ನಾಟಕಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

- Advertisement -
- Advertisement -

ಫೆಬ್ರವರಿ 21ರಂದು #DadaSahebPhalkeAwards2023 ಎಂಬ ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದೆ. ವಿವೇಕ್ ಅಗ್ನಿಹೋತ್ರಿ ಅವರ ವಿವಾದಾತ್ಮಕ ಚಲನಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿದೆ ಎಂದು ಅನೇಕ ಮಾಧ್ಯಮಗಳು, ನ್ಯೂಸ್‌ ಏಜೆನ್ಸಿಗಳು ಸುದ್ದಿ ಮಾಡಿವೆ.

“ದಾದಾಸಾಹೇಬ್ ಪಾಲ್ಕೆ ಅವಾರ್ಡ್ಸ್ 2023” ಎಂಬ ಹ್ಯಾಷ್‌ಟ್ಯಾಗ್ ಮೂಲಕ ಕೆಲವೊಂದು ಗೊಂದಲವನ್ನು ಹರಿಬಿಡಲಾಗುತ್ತಿದೆ. ಸಿನಿಮಾ ಕ್ಷೇತ್ರದ ಜೀವನಮಾನ ಸಾಧನೆಗೆ ದೇಶದಲ್ಲಿ ಅತ್ಯುನ್ನತ ಪ್ರಶಸ್ತಿಯಾಗಿ ನೀಡಲಾಗುವ ‘ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ’ ಇದೆಂಬ ಭಾವನೆಯನ್ನು ಈ ಮೂಲಕ ತುಂಬಲಾಗುತ್ತಿದೆ.

‘ಕಾಂತಾರ’ದ ಸಿನಿಮಾದ ನಟ ರಿಷಬ್‌ ಶೆಟ್ಟಿ, ಮಲಯಾಳಂ ನಟ ದುಲ್ಕರ್‌ ಸಲ್ಮಾನ್‌ ಮೊದಲಾದವರಿಗೆ ವಿವಿಧ ವಿಭಾಗಗಳಲ್ಲಿ ‘ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿಗಳು’ ದೊರೆತಿವೆ ಎಂದು ಸುದ್ದಿಯಾಗುತ್ತಿವೆ.

ಸಿನಿಮಾ ಕ್ಷೇತ್ರದಲ್ಲಿ ನೀಡಲಾಗುವ ಅತ್ಯುನ್ನತ ಹಾಗೂ ಕೇಂದ್ರ ಸರ್ಕಾರವು ಕೊಡಮಾಡುವ ಪ್ರಶಸ್ತಿ ಇದಾಗಿದೆ ಎಂಬ ಭಾವನೆಯನ್ನು ಹ್ಯಾಷ್‌ಟ್ಯಾಗ್‌ಗಳು ಸೃಷ್ಟಿಸುತ್ತಿವೆ. ಆದರೆ ವಾಸ್ತವಗಳು ಬೇರೆ ಇವೆ.

ಫೆಬ್ರವರಿ 20 ರಂದು ಮುಂಬೈನಲ್ಲಿ ಸಮಾರಂಭ ನಡೆದಿದ್ದು, ಅಗ್ನಿಹೋತ್ರಿ ಅವರ ಚಲನಚಿತ್ರ ‘ಕಾಶ್ಮೀರ್‌ ಫೈಲ್ಸ್‌’ ಸೇರಿದಂತೆ  ಇತರ ಚಲನಚಿತ್ರಗಳು ‘ದಾದಾಸಾಹೇಬ್ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ’ ಗೆದ್ದಿವೆ.

‘ದಾದಾಸಾಹೇಬ್ ಪಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ವನ್ನು (ಡಿಪಿಐಎಫ್‌ಎಫ್‌) 2012 ರಲ್ಲಿ ಆರಂಭವಾಯಿತು. 2016ರಿಂದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ಡಿಫಿಐಎಫ್‌ಎಫ್‌ ವೆಬ್‌ಸೈಟ್ ಹೇಳುತ್ತದೆ.

“ದಾದಾಸಾಹೇಬ್ ಪಾಲ್ಕೆ ಎಂದು ಪ್ರೀತಿಯಿಂದ ಕರೆಯಲ್ಪಡುವ ದಿವಂಗತ ಧುಂಡಿರಾಜ್ ಗೋವಿಂದ್ ಪಾಲ್ಕೆ ಅವರ ಪರಂಪರೆಯನ್ನು ಮುಂದುವರಿಸಲು” ಈ ಪ್ರಶಸ್ತಿ ಸ್ಥಾಪಿಸಿರುವುದಾಗಿ ವೆಬ್‌ಸೈಟ್‌ ಹೇಳಿಕೊಂಡಿದೆ. “ಭಾರತದ ಏಕೈಕ ಸ್ವತಂತ್ರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ” ಎಂದೂ ಡಿಪಿಐಎಫ್‌ಎಫ್‌ ಪ್ರಚಾರ ಮಾಡಿಕೊಂಡಿದೆ.

ಈ ಪ್ರಶಸ್ತಿಗಳನ್ನು ಉದ್ಯಮಿ ಅನಿಲ್ ಮಿಶ್ರಾ ಸ್ಥಾಪಿಸಿದ್ದಾರೆ ಎಂದು ವೆಬ್‌ಸೈಟ್ ಸ್ಪಷ್ಟಪಡಿಸಿದೆ. ಐಎಂಡಿಬಿ ಆನ್‌ಲೈನ್ ಫಿಲ್ಮ್ ಡೇಟಾಬೇಸ್‌ನಲ್ಲಿ ಮಿಶ್ರಾ ಅವರನ್ನು ‘ಸಿಬಿಎಫ್‌ಸಿಯ ಸಲಹಾ ಮಂಡಳಿಯ ಸದಸ್ಯ’ ಎಂದು ನಮೂದಿಸಲಾಗಿದೆ. ಆದರೆ ಸಿಬಿಎಫ್‌ಸಿ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಮಂಡಳಿಯ ಸದಸ್ಯರ ಪ್ರಸ್ತುತ ಪಟ್ಟಿಯಲ್ಲಿ ಮಿಶ್ರಾ ಅವರ ಹೆಸರಿಲ್ಲ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ತಮ್ಮ “ಹಿತೈಷಿಗಳು” ಎಂದು ಡಿಪಿಐಎಫ್‌ಎಫ್‌ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. 2023ರ ಪ್ರಶಸ್ತಿಗಳಿಗೆ ಸಂಬಂಧಿಸಿದಂತೆ ಅಮಿತ್ ಶಾ ಅವರು ಶುಭ ಹಾರೈಕೆ ಮಾಡಿರುವ ಪತ್ರವನ್ನೂ ವೆಬ್‌ಸೈಟ್‌ನಲ್ಲಿ ಪ್ರದರ್ಶಿಸಲಾಗಿದೆ.

ದಾದಾಸಾಹೇಬ್ ಪಾಲ್ಕೆಯವರ ಮೊಮ್ಮಗ ಎಂದು ಗುರುತಿಸಲಾದ ಚಂದ್ರಶೇಖರ್ ಪುಸಲ್ಕರ್ ಅವರು ತೀರ್ಪುಗಾರರ ಅಧ್ಯಕ್ಷರಾಗಿದ್ದಾರೆ.

2022ರಲ್ಲಿ ಉದ್ಘಾಟನೆಗೊಂಡ ಪ್ರಧಾನಮಂತ್ರಿ ಸಂಗ್ರಹಾಲಯವು ಈ ಪ್ರಶಸ್ತಿಗಳನ್ನು ‘ಬೆಂಬಲಿಸುತ್ತದೆ’ ಎಂದೂ ಡಿಫಿಐಎಫ್‌ಎಫ್‌ ಪ್ರಚಾರ ಮಾಡಿಕೊಂಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಈ ಪ್ರಶಸ್ತಿಗೂ 1969ರಲ್ಲಿ ಸ್ಥಾಪಿಸಲಾದ ವಾರ್ಷಿಕ ‘ದಾದಾಸಾಹೇಬ್ ಪಾಲ್ಕೆ’ ಪ್ರಶಸ್ತಿಗೂ ಯಾವುದೇ ಸಂಬಂಧವಿಲ್ಲ. ಭಾರತೀಯ ಚಿತ್ರರಂಗಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ಒಬ್ಬರನ್ನು ಆಯ್ಕೆ ಮಾಡಿ ಪ್ರತಿವರ್ಷ ಪ್ರಖ್ಯಾತ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯನ್ನು ಕೊಡಮಾಡಲಾಗುತ್ತಿದೆ. ಡಾ.ರಾಜ್‌ಕುಮಾರ್‌ (1995), ಆಶಾ ಪರೇಖ್ (2020), ರಜನಿಕಾಂತ್ (2019), ಗುಲ್ಜಾರ್ (2013), ಅಡೂರ್ ಗೋಪಾಲಕೃಷ್ಣನ್ (2004), ಸತ್ಯಜಿತ್ ರೇ (1984), ಪೃಥ್ವಿರಾಜ್ ಕಪೂರ್ (1971) ಮತ್ತು ದೇವಿಕಾ ರಾಣಿ (1969) ಮೊದಲಾದವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಅಧಿಕೃತವಾಗಿ ‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ’ಯನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಚಲನಚಿತ್ರೋತ್ಸವಗಳ ನಿರ್ದೇಶನಾಲಯವು ನೀಡುತ್ತದೆ.

‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗಳು’ ಎಂಬ ಹೆಸರು ಉಂಟು ಮಾಡಿರುವ ಗೊಂದಲದ ಬಗ್ಗೆ ‘ಹಿಂದೂಸ್ಥಾನ್‌ ಟೈಮ್‌ 2018’ರಲ್ಲಿ ವರದಿ ಮಾಡಿತ್ತು. ಪಾಲ್ಕೆ ಅವರ ಹೆಸರಿನಲ್ಲಿ ಎರಡು ಸ್ವತಂತ್ರ ಪ್ರಶಸ್ತಿಗಳು ಹುಟ್ಟಿಕೊಂಡಿರುವುದನ್ನು ಉಲ್ಲೇಖಿಸಿತ್ತು. ‘ದಾದಾಸಾಹೇಬ್ ಪಾಲ್ಕೆ ಎಕ್ಸಲೆನ್ಸ್ ಅವಾರ್ಡ್ಸ್’ ಮತ್ತು ‘ದಾದಾಸಾಹೇಬ್ ಪಾಲ್ಕೆ ಫಿಲ್ಮ್ ಫೌಂಡೇಶನ್ ಅವಾರ್ಡ್ಸ್’ ಎಂಬ ಎರಡು ಸ್ವತಂತ್ರ ಪ್ರಶಸ್ತಿಗಳು ಉಂಟು ಮಾಡಿರುವ ಗೊಂದಲದ ಕುರಿತು ವರದಿ ಬೆಳಕು ಚೆಲ್ಲಿತ್ತು.

ಪ್ರಸ್ತುತ ಸಂದರ್ಭದಲ್ಲಿ ಅಗ್ನಿಹೋತ್ರಿಯಂಥವರು ಮಾಡುತ್ತಿರುವ ಟ್ವಿಟ್‌ಗಳು ಈ ಗೊಂದಲವನ್ನೇ ಮುಂದುವರಿಸಿವೆ.

ಪ್ರಶಸ್ತಿಯ ಕುರಿತು ಟ್ವೀಟ್ ಮಾಡಿರುವ ಅಗ್ನಿಹೋತ್ರಿ, “ಘೋಷಣೆ: #TheKashmirFiles #DadaSahebPhalkeAwards2023ರಲ್ಲಿ ‘ಅತ್ಯುತ್ತಮ ಚಲನಚಿತ್ರ’ ಪ್ರಶಸ್ತಿಯನ್ನು ಗೆದ್ದಿದೆ. ಈ ಪ್ರಶಸ್ತಿಯನ್ನು ಭಯೋತ್ಪಾದನೆಯಿಂದ ತೊಂದರೆಗೊಳಗಾದ ಸಂತ್ರಸ್ತರಿಗೆ, ಆಶೀರ್ವದಿಸಿದ ಭಾರತದ ಎಲ್ಲಾ ಜನರಿಗೆ ಸಮರ್ಪಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ವಾರ್ಷಿಕವಾಗಿ ಕೊಡುವ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿಯೆಂದೇ ಜನಸಾಮಾನ್ಯರು ಭಾವಿಸಿಬಿಡುವಂತೆ ವಿವೇಕ್ ಅಗ್ನಿಹೋತ್ರಿಯವರು ಟ್ವೀಟ್ ಮಾಡಿದ್ದಾರೆ. ವಾರ್ಷಿಕ ಪ್ರಶಸ್ತಿಗೂ ಈಗ ಅಗ್ನಿಹೋತ್ರಿ ಪಡೆದಿರುವ ಪ್ರಶಸ್ತಿಗೂ ಯಾವುದೇ ಸಂಬಂಧವಿಲ್ಲ. ಅದನ್ನು ಮನವರಿಕೆ ಮಾಡಿಕೊಡುವ ಪ್ರಯತ್ನವನ್ನೂ ಅಗ್ನಿಹೋತ್ರಿ ತಮ್ಮ ಟ್ವೀಟ್‌ನಲ್ಲಿ ಮಾಡಿಲ್ಲ.

ವಿಚಿತ್ರವೆಂದರೆ ಕೆಲವು ಸುದ್ದಿ ವಾಹಿನಿಗಳು ಕೂಡ ಅಗ್ನಿಹೋತ್ರಿಯವರು ಹಾಕಿರುವ ಹ್ಯಾಶ್‌ಟ್ಯಾಗ್ ಬಳಸಿವೆ. ಈ ಪ್ರಶಸ್ತಿಯ ಇತಿಹಾಸದ ಕುರಿತು ತಮ್ಮ ಟ್ವೀಟ್‌ಗಳಲ್ಲಿ ಏನನ್ನೂ ಉಲ್ಲೇಖಿಸಿಲ್ಲ. ಕೆಲವು ವರದಿಗಳು ಪ್ರಶಸ್ತಿಗಳ ಪೂರ್ಣ ಹೆಸರನ್ನು ಉಲ್ಲೇಖಿಸಿವೆ, ಅನೇಕ ಸುದ್ದಿ ಸಂಸ್ಥೆಗಳು ಕೇವಲ ‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗಳು’ ಎಂಬ ಶೀರ್ಷಿಕೆಗಳೊಂದಿಗೆ ಸುದ್ದಿ ಮಾಡಿವೆ. ಗೂಗಲ್‌ನಲ್ಲೂ ಈ ಪ್ರಶಸ್ತಿಗಳ ಕುರಿತು ಹುಡುಕಾಟ ಜೋರಾಗಿದೆ. ವಾರ್ಷಿಕವಾಗಿ ಸರ್ಕಾರ ಕೊಡಮಾಡುವ ಪ್ರಶಸ್ತಿ ಇದಲ್ಲ ಎಂದು ಎಂದು ಸ್ಪಷ್ಟಪಡಿಸದಿರುವ ಸುದ್ದಿ ಸಂಸ್ಥೆಗಳಲ್ಲಿ ಎಎನ್‌ಐ ಕೂಡ ಸೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...