Homeಮುಖಪುಟಹಾರೋಹಳ್ಳಿ: ಒಂದೇ ವೇದಿಕೆಯಲ್ಲಿ ಅಶ್ವಥ್ ನಾರಾಯಣ್, ಅನಿತಾ ಕುಮಾರಸ್ವಾಮಿ ಜಟಾಪಟಿ

ಹಾರೋಹಳ್ಳಿ: ಒಂದೇ ವೇದಿಕೆಯಲ್ಲಿ ಅಶ್ವಥ್ ನಾರಾಯಣ್, ಅನಿತಾ ಕುಮಾರಸ್ವಾಮಿ ಜಟಾಪಟಿ

- Advertisement -
- Advertisement -

ರಾಮನಗರ ಜಿಲ್ಲೆಯ ಹಾರೋಹಳ್ಳಿ‌ ನೂತನ ತಾಲೂಕು ಉದ್ಘಾಟನೆ ಸಮಾರಂಭದ ವೇದಿಕೆಯಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತು ಸಚಿವ ಅಶ್ವಥ್ ನಾರಾಯಣ್ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದ ಘಟನೆ ಜರುಗಿದೆ. ಅಲ್ಲದೆ ಹಾರೋಹಳ್ಳಿ ಅಭಿವೃದ್ದಿಗೆ ಎಷ್ಟು ಹಣ ನೀಡಿದ್ದೀರಿ ದಾಖಲೆ ತೋರಿಸಿ ಎಂಬ ಕಾರ್ಯಕರ್ತರ ಪ್ರಶ್ನೆಗೆ ಸಚಿವರು ಉತ್ತರಿಸದೇ ಹೊರನಡೆದ ಪ್ರಸಂಗ ನಡೆದಿದೆ.

“ಬಿಜೆಪಿ ಸರ್ಕಾರವು ರಾಮನಗರ ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಶ್ರಮಿಸಿರುವುದರಿಂದ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕೇವಲ ತಾಲೂಕು ರಚನೆಗೆ ತಾತ್ವಿಕ ಅನುಮೋದನೆ ಸಿಕಿತ್ತು. ಆದರೆ ಇದಕ್ಕೆ ಅಂತಿಮ ಅನುಮೊದನೆ ಹೊರಡಿಸಿದ್ದು ಬಿಜೆಪಿ ನೇತೃತ್ವದ ಸರ್ಕಾರ. ರಾಮನಗರ ಜಿಲ್ಲೆಗೆ ಸಂಬಂಧಿಸಿದ ಹಲವು ಹುದ್ದೆಗಳ ನೇಮಕಾತಿ ಕೂಡ ನಮ್ಮ ಸರ್ಕಾರದ ಅವಧಿಯಲ್ಲಿ ‌ಮಾಡಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿವಿ ಹಾಗೂ ಮೆಡಿಕಲ್ ಕಾಲೇಜು ಕಾಮಗಾರಿಗಳನ್ನು ಕೂಡ ಶೀಘ್ರವೇ ಆರಂಭಿಸಿ, ಮುಖ್ಯಮಂತ್ರಿಗಳ ಮೂಲಕ ಶಂಕುಸ್ಥಾಪನೆ ಮಾಡಲಾಗುತ್ತದೆ” ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅನಿತಾ ಕುಮಾರಸ್ವಾಮಿಯವರು “ಹಾರೋಹಳ್ಳಿಯ ತಾಲೂಕು ರಚನೆಗೆ ಶ್ರಮಿಸಿದ್ದು ನಾನು. ಕುಮಾರಸ್ವಾಮಿ ಈ ಭಾಗದ ಶಾಸಕರಾದ ಮೇಲೆ ಈ ಕ್ಷೇತ್ರವು ಅಭಿವೃದ್ಧಿ ಆಗಿರುವುದನ್ನು ಎಲ್ಲರೂ ನೋಡಿದ್ದಾರೆ. ರಾಮನಗರಕ್ಕೆ 450 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಕೊಟ್ಟಿರುವುದಾಗಿ ಉಸ್ತುವಾರಿ ಸಚಿವರು ಹೇಳುತ್ತಾರೆ. ಆದರೆ, ಇದು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಆಗಿತ್ತು. ನೀರಿನ ಯೋಜನೆ ಬರುವಂತೆ ಮಾಡಿದ್ದೆ ಕುಮಾರಸ್ವಾಮಿ. ನನಗೆ ಸಚಿವರಂತೆ ಸುಳ್ಳು ಹೇಳಲು ಬರುವುದಿಲ್ಲ” ಎಂದು ಹಲವು ದಾಖಲೆಗಳನ್ನು ಪ್ರದರ್ಶಿಸಿದ್ದಾರೆ.

“ಈ ಕಾರ್ಯಕ್ರಮಕ್ಕೆ ನನ್ನನ್ನು ಕಾಟಾಚಾರಕ್ಕೆ ಕರೆದು ನಾನು ಬರುವ ಮೊದಲೇ ಟೇಪ್ ಕತ್ತರಿಸಿ ಎಲ್ಲಾ ಮುಗಿದುಹೋಗಿದೆ. ಇದು ನನಗೆ ಮುಂಚೆನೇ ಗೊತ್ತಿತ್ತು. ಆದರೂ ನಮ್ಮ ಜನತೆಗಾಗಿ ನಾನು ಬಂದಿದ್ದೇನೆ. ಈ ತಾಲೂಕು ಆಗಬೇಕಾದರೆ ನನ್ನ ಶ್ರಮಿ ಇದೆ. ಕುಮಾರಸ್ವಾಮಿಯವರ ಕಾಲದಲ್ಲಿ ಅಧಿಸೂಚನೆಯಾಗಿದೆ. ಆನಂತರ ನಾನು ಫಾಲೋ ಅಪ್ ಮಾಡಿ ಸದನದಲ್ಲಿ ಅಶೋಕ್‌ರವರಿಗೆ ಪ್ರಶ್ನೆ ಕೇಳಿದ್ದೆ. ಆನಂತರ ಕಂದಾಯ ಇಲಾಖೆ, ಎಷ್ಟು ಹುದ್ದೆ ಬೇಕು ಎಂದು ಜಿಲ್ಲಾಧಿಕಾರಿಗಳಿಂದ ಪತ್ರ ಸೇರಿ ಎಲ್ಲಾ ಫಾಲೋಅಪ್ ಮಾಡಿದ್ದೇನೆ. ಆ ದಾಖಲೆಗಳನ್ನು ತಂದಿದ್ದೇನೆ ನೋಡಿ” ಎಂದಿದ್ದಾರೆ.

ಇನ್ನು ಸಚಿವ ಅಶ್ವಥನಾರಾಯಣರವರು ಮಾತನಾಡುತ್ತಿದ್ದಾಗ ಮಧ್ಯ ಪ್ರವೇಶಿಸಿದ ದಲಿತ ಸಂಘಟನೆಯ ಕಾರ್ಯಕರ್ತರೊಬ್ಬರು, ಹಾರೋಹಳ್ಳಿ ತಾಲ್ಲೂಕಿಗೆ ಎಷ್ಟು ಅನುದಾನ ಮೀಸಲಿಟ್ಟಿದ್ದೀರಿ ಎಂದು ಪ್ರಶ್ನಿಸಿದರು. ಮತ್ತೊಬ್ಬರು ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರು ಒಳಮೀಸಲಾತಿ ಹೋರಾಟಕ್ಕೆ ಸಿಎಂ ಅನ್ನು ಕರೆದುಕೊಂಡು ಹೋಗಿ ಸಮಸ್ಯೆ ಆಲಿಸಿ ಎಂದು ಸಲಹೆ ನೀಡಿದರು. ಆದರೆ ಸಚಿವರು ಯಾವುದಕ್ಕೂ ಉತ್ತರಿಸಿದೆ ಸಭೆಯಿಂದ ಹೊರನಡೆದರು.

ಇದನ್ನೂ ಓದಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸಮೀಕ್ಷೆ: ಎಚ್.ಡಿ ಕುಮಾರಸ್ವಾಮಿ V/S ಸಿ.ಪಿ ಯೋಗಿಶ್ವರ್ ನಡುವೆ ಗೆಲುವು ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...