Homeಮುಖಪುಟಹಾರೋಹಳ್ಳಿ: ಒಂದೇ ವೇದಿಕೆಯಲ್ಲಿ ಅಶ್ವಥ್ ನಾರಾಯಣ್, ಅನಿತಾ ಕುಮಾರಸ್ವಾಮಿ ಜಟಾಪಟಿ

ಹಾರೋಹಳ್ಳಿ: ಒಂದೇ ವೇದಿಕೆಯಲ್ಲಿ ಅಶ್ವಥ್ ನಾರಾಯಣ್, ಅನಿತಾ ಕುಮಾರಸ್ವಾಮಿ ಜಟಾಪಟಿ

- Advertisement -
- Advertisement -

ರಾಮನಗರ ಜಿಲ್ಲೆಯ ಹಾರೋಹಳ್ಳಿ‌ ನೂತನ ತಾಲೂಕು ಉದ್ಘಾಟನೆ ಸಮಾರಂಭದ ವೇದಿಕೆಯಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತು ಸಚಿವ ಅಶ್ವಥ್ ನಾರಾಯಣ್ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದ ಘಟನೆ ಜರುಗಿದೆ. ಅಲ್ಲದೆ ಹಾರೋಹಳ್ಳಿ ಅಭಿವೃದ್ದಿಗೆ ಎಷ್ಟು ಹಣ ನೀಡಿದ್ದೀರಿ ದಾಖಲೆ ತೋರಿಸಿ ಎಂಬ ಕಾರ್ಯಕರ್ತರ ಪ್ರಶ್ನೆಗೆ ಸಚಿವರು ಉತ್ತರಿಸದೇ ಹೊರನಡೆದ ಪ್ರಸಂಗ ನಡೆದಿದೆ.

“ಬಿಜೆಪಿ ಸರ್ಕಾರವು ರಾಮನಗರ ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಶ್ರಮಿಸಿರುವುದರಿಂದ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕೇವಲ ತಾಲೂಕು ರಚನೆಗೆ ತಾತ್ವಿಕ ಅನುಮೋದನೆ ಸಿಕಿತ್ತು. ಆದರೆ ಇದಕ್ಕೆ ಅಂತಿಮ ಅನುಮೊದನೆ ಹೊರಡಿಸಿದ್ದು ಬಿಜೆಪಿ ನೇತೃತ್ವದ ಸರ್ಕಾರ. ರಾಮನಗರ ಜಿಲ್ಲೆಗೆ ಸಂಬಂಧಿಸಿದ ಹಲವು ಹುದ್ದೆಗಳ ನೇಮಕಾತಿ ಕೂಡ ನಮ್ಮ ಸರ್ಕಾರದ ಅವಧಿಯಲ್ಲಿ ‌ಮಾಡಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿವಿ ಹಾಗೂ ಮೆಡಿಕಲ್ ಕಾಲೇಜು ಕಾಮಗಾರಿಗಳನ್ನು ಕೂಡ ಶೀಘ್ರವೇ ಆರಂಭಿಸಿ, ಮುಖ್ಯಮಂತ್ರಿಗಳ ಮೂಲಕ ಶಂಕುಸ್ಥಾಪನೆ ಮಾಡಲಾಗುತ್ತದೆ” ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅನಿತಾ ಕುಮಾರಸ್ವಾಮಿಯವರು “ಹಾರೋಹಳ್ಳಿಯ ತಾಲೂಕು ರಚನೆಗೆ ಶ್ರಮಿಸಿದ್ದು ನಾನು. ಕುಮಾರಸ್ವಾಮಿ ಈ ಭಾಗದ ಶಾಸಕರಾದ ಮೇಲೆ ಈ ಕ್ಷೇತ್ರವು ಅಭಿವೃದ್ಧಿ ಆಗಿರುವುದನ್ನು ಎಲ್ಲರೂ ನೋಡಿದ್ದಾರೆ. ರಾಮನಗರಕ್ಕೆ 450 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಕೊಟ್ಟಿರುವುದಾಗಿ ಉಸ್ತುವಾರಿ ಸಚಿವರು ಹೇಳುತ್ತಾರೆ. ಆದರೆ, ಇದು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಆಗಿತ್ತು. ನೀರಿನ ಯೋಜನೆ ಬರುವಂತೆ ಮಾಡಿದ್ದೆ ಕುಮಾರಸ್ವಾಮಿ. ನನಗೆ ಸಚಿವರಂತೆ ಸುಳ್ಳು ಹೇಳಲು ಬರುವುದಿಲ್ಲ” ಎಂದು ಹಲವು ದಾಖಲೆಗಳನ್ನು ಪ್ರದರ್ಶಿಸಿದ್ದಾರೆ.

“ಈ ಕಾರ್ಯಕ್ರಮಕ್ಕೆ ನನ್ನನ್ನು ಕಾಟಾಚಾರಕ್ಕೆ ಕರೆದು ನಾನು ಬರುವ ಮೊದಲೇ ಟೇಪ್ ಕತ್ತರಿಸಿ ಎಲ್ಲಾ ಮುಗಿದುಹೋಗಿದೆ. ಇದು ನನಗೆ ಮುಂಚೆನೇ ಗೊತ್ತಿತ್ತು. ಆದರೂ ನಮ್ಮ ಜನತೆಗಾಗಿ ನಾನು ಬಂದಿದ್ದೇನೆ. ಈ ತಾಲೂಕು ಆಗಬೇಕಾದರೆ ನನ್ನ ಶ್ರಮಿ ಇದೆ. ಕುಮಾರಸ್ವಾಮಿಯವರ ಕಾಲದಲ್ಲಿ ಅಧಿಸೂಚನೆಯಾಗಿದೆ. ಆನಂತರ ನಾನು ಫಾಲೋ ಅಪ್ ಮಾಡಿ ಸದನದಲ್ಲಿ ಅಶೋಕ್‌ರವರಿಗೆ ಪ್ರಶ್ನೆ ಕೇಳಿದ್ದೆ. ಆನಂತರ ಕಂದಾಯ ಇಲಾಖೆ, ಎಷ್ಟು ಹುದ್ದೆ ಬೇಕು ಎಂದು ಜಿಲ್ಲಾಧಿಕಾರಿಗಳಿಂದ ಪತ್ರ ಸೇರಿ ಎಲ್ಲಾ ಫಾಲೋಅಪ್ ಮಾಡಿದ್ದೇನೆ. ಆ ದಾಖಲೆಗಳನ್ನು ತಂದಿದ್ದೇನೆ ನೋಡಿ” ಎಂದಿದ್ದಾರೆ.

ಇನ್ನು ಸಚಿವ ಅಶ್ವಥನಾರಾಯಣರವರು ಮಾತನಾಡುತ್ತಿದ್ದಾಗ ಮಧ್ಯ ಪ್ರವೇಶಿಸಿದ ದಲಿತ ಸಂಘಟನೆಯ ಕಾರ್ಯಕರ್ತರೊಬ್ಬರು, ಹಾರೋಹಳ್ಳಿ ತಾಲ್ಲೂಕಿಗೆ ಎಷ್ಟು ಅನುದಾನ ಮೀಸಲಿಟ್ಟಿದ್ದೀರಿ ಎಂದು ಪ್ರಶ್ನಿಸಿದರು. ಮತ್ತೊಬ್ಬರು ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರು ಒಳಮೀಸಲಾತಿ ಹೋರಾಟಕ್ಕೆ ಸಿಎಂ ಅನ್ನು ಕರೆದುಕೊಂಡು ಹೋಗಿ ಸಮಸ್ಯೆ ಆಲಿಸಿ ಎಂದು ಸಲಹೆ ನೀಡಿದರು. ಆದರೆ ಸಚಿವರು ಯಾವುದಕ್ಕೂ ಉತ್ತರಿಸಿದೆ ಸಭೆಯಿಂದ ಹೊರನಡೆದರು.

ಇದನ್ನೂ ಓದಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸಮೀಕ್ಷೆ: ಎಚ್.ಡಿ ಕುಮಾರಸ್ವಾಮಿ V/S ಸಿ.ಪಿ ಯೋಗಿಶ್ವರ್ ನಡುವೆ ಗೆಲುವು ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...