Homeಮುಖಪುಟಹಾರೋಹಳ್ಳಿ: ಒಂದೇ ವೇದಿಕೆಯಲ್ಲಿ ಅಶ್ವಥ್ ನಾರಾಯಣ್, ಅನಿತಾ ಕುಮಾರಸ್ವಾಮಿ ಜಟಾಪಟಿ

ಹಾರೋಹಳ್ಳಿ: ಒಂದೇ ವೇದಿಕೆಯಲ್ಲಿ ಅಶ್ವಥ್ ನಾರಾಯಣ್, ಅನಿತಾ ಕುಮಾರಸ್ವಾಮಿ ಜಟಾಪಟಿ

- Advertisement -
- Advertisement -

ರಾಮನಗರ ಜಿಲ್ಲೆಯ ಹಾರೋಹಳ್ಳಿ‌ ನೂತನ ತಾಲೂಕು ಉದ್ಘಾಟನೆ ಸಮಾರಂಭದ ವೇದಿಕೆಯಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತು ಸಚಿವ ಅಶ್ವಥ್ ನಾರಾಯಣ್ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದ ಘಟನೆ ಜರುಗಿದೆ. ಅಲ್ಲದೆ ಹಾರೋಹಳ್ಳಿ ಅಭಿವೃದ್ದಿಗೆ ಎಷ್ಟು ಹಣ ನೀಡಿದ್ದೀರಿ ದಾಖಲೆ ತೋರಿಸಿ ಎಂಬ ಕಾರ್ಯಕರ್ತರ ಪ್ರಶ್ನೆಗೆ ಸಚಿವರು ಉತ್ತರಿಸದೇ ಹೊರನಡೆದ ಪ್ರಸಂಗ ನಡೆದಿದೆ.

“ಬಿಜೆಪಿ ಸರ್ಕಾರವು ರಾಮನಗರ ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಶ್ರಮಿಸಿರುವುದರಿಂದ ಹಲವು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕೇವಲ ತಾಲೂಕು ರಚನೆಗೆ ತಾತ್ವಿಕ ಅನುಮೋದನೆ ಸಿಕಿತ್ತು. ಆದರೆ ಇದಕ್ಕೆ ಅಂತಿಮ ಅನುಮೊದನೆ ಹೊರಡಿಸಿದ್ದು ಬಿಜೆಪಿ ನೇತೃತ್ವದ ಸರ್ಕಾರ. ರಾಮನಗರ ಜಿಲ್ಲೆಗೆ ಸಂಬಂಧಿಸಿದ ಹಲವು ಹುದ್ದೆಗಳ ನೇಮಕಾತಿ ಕೂಡ ನಮ್ಮ ಸರ್ಕಾರದ ಅವಧಿಯಲ್ಲಿ ‌ಮಾಡಲಾಗಿದೆ. ರಾಜೀವ್ ಗಾಂಧಿ ಆರೋಗ್ಯ ವಿವಿ ಹಾಗೂ ಮೆಡಿಕಲ್ ಕಾಲೇಜು ಕಾಮಗಾರಿಗಳನ್ನು ಕೂಡ ಶೀಘ್ರವೇ ಆರಂಭಿಸಿ, ಮುಖ್ಯಮಂತ್ರಿಗಳ ಮೂಲಕ ಶಂಕುಸ್ಥಾಪನೆ ಮಾಡಲಾಗುತ್ತದೆ” ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅನಿತಾ ಕುಮಾರಸ್ವಾಮಿಯವರು “ಹಾರೋಹಳ್ಳಿಯ ತಾಲೂಕು ರಚನೆಗೆ ಶ್ರಮಿಸಿದ್ದು ನಾನು. ಕುಮಾರಸ್ವಾಮಿ ಈ ಭಾಗದ ಶಾಸಕರಾದ ಮೇಲೆ ಈ ಕ್ಷೇತ್ರವು ಅಭಿವೃದ್ಧಿ ಆಗಿರುವುದನ್ನು ಎಲ್ಲರೂ ನೋಡಿದ್ದಾರೆ. ರಾಮನಗರಕ್ಕೆ 450 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ಕೊಟ್ಟಿರುವುದಾಗಿ ಉಸ್ತುವಾರಿ ಸಚಿವರು ಹೇಳುತ್ತಾರೆ. ಆದರೆ, ಇದು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಆಗಿತ್ತು. ನೀರಿನ ಯೋಜನೆ ಬರುವಂತೆ ಮಾಡಿದ್ದೆ ಕುಮಾರಸ್ವಾಮಿ. ನನಗೆ ಸಚಿವರಂತೆ ಸುಳ್ಳು ಹೇಳಲು ಬರುವುದಿಲ್ಲ” ಎಂದು ಹಲವು ದಾಖಲೆಗಳನ್ನು ಪ್ರದರ್ಶಿಸಿದ್ದಾರೆ.

“ಈ ಕಾರ್ಯಕ್ರಮಕ್ಕೆ ನನ್ನನ್ನು ಕಾಟಾಚಾರಕ್ಕೆ ಕರೆದು ನಾನು ಬರುವ ಮೊದಲೇ ಟೇಪ್ ಕತ್ತರಿಸಿ ಎಲ್ಲಾ ಮುಗಿದುಹೋಗಿದೆ. ಇದು ನನಗೆ ಮುಂಚೆನೇ ಗೊತ್ತಿತ್ತು. ಆದರೂ ನಮ್ಮ ಜನತೆಗಾಗಿ ನಾನು ಬಂದಿದ್ದೇನೆ. ಈ ತಾಲೂಕು ಆಗಬೇಕಾದರೆ ನನ್ನ ಶ್ರಮಿ ಇದೆ. ಕುಮಾರಸ್ವಾಮಿಯವರ ಕಾಲದಲ್ಲಿ ಅಧಿಸೂಚನೆಯಾಗಿದೆ. ಆನಂತರ ನಾನು ಫಾಲೋ ಅಪ್ ಮಾಡಿ ಸದನದಲ್ಲಿ ಅಶೋಕ್‌ರವರಿಗೆ ಪ್ರಶ್ನೆ ಕೇಳಿದ್ದೆ. ಆನಂತರ ಕಂದಾಯ ಇಲಾಖೆ, ಎಷ್ಟು ಹುದ್ದೆ ಬೇಕು ಎಂದು ಜಿಲ್ಲಾಧಿಕಾರಿಗಳಿಂದ ಪತ್ರ ಸೇರಿ ಎಲ್ಲಾ ಫಾಲೋಅಪ್ ಮಾಡಿದ್ದೇನೆ. ಆ ದಾಖಲೆಗಳನ್ನು ತಂದಿದ್ದೇನೆ ನೋಡಿ” ಎಂದಿದ್ದಾರೆ.

ಇನ್ನು ಸಚಿವ ಅಶ್ವಥನಾರಾಯಣರವರು ಮಾತನಾಡುತ್ತಿದ್ದಾಗ ಮಧ್ಯ ಪ್ರವೇಶಿಸಿದ ದಲಿತ ಸಂಘಟನೆಯ ಕಾರ್ಯಕರ್ತರೊಬ್ಬರು, ಹಾರೋಹಳ್ಳಿ ತಾಲ್ಲೂಕಿಗೆ ಎಷ್ಟು ಅನುದಾನ ಮೀಸಲಿಟ್ಟಿದ್ದೀರಿ ಎಂದು ಪ್ರಶ್ನಿಸಿದರು. ಮತ್ತೊಬ್ಬರು ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರು ಒಳಮೀಸಲಾತಿ ಹೋರಾಟಕ್ಕೆ ಸಿಎಂ ಅನ್ನು ಕರೆದುಕೊಂಡು ಹೋಗಿ ಸಮಸ್ಯೆ ಆಲಿಸಿ ಎಂದು ಸಲಹೆ ನೀಡಿದರು. ಆದರೆ ಸಚಿವರು ಯಾವುದಕ್ಕೂ ಉತ್ತರಿಸಿದೆ ಸಭೆಯಿಂದ ಹೊರನಡೆದರು.

ಇದನ್ನೂ ಓದಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಸಮೀಕ್ಷೆ: ಎಚ್.ಡಿ ಕುಮಾರಸ್ವಾಮಿ V/S ಸಿ.ಪಿ ಯೋಗಿಶ್ವರ್ ನಡುವೆ ಗೆಲುವು ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...