Homeಮುಖಪುಟದೇಶದಲ್ಲಿ ಮೊದಲ ಬಾರಿಗೆ ಪ್ರಾದೇಶಿಕ ಭಾಷೆಯಲ್ಲಿ ತೀರ್ಪು ಪ್ರಕಟಿಸಿದ ಕೇರಳ ಹೈಕೋರ್ಟ್

ದೇಶದಲ್ಲಿ ಮೊದಲ ಬಾರಿಗೆ ಪ್ರಾದೇಶಿಕ ಭಾಷೆಯಲ್ಲಿ ತೀರ್ಪು ಪ್ರಕಟಿಸಿದ ಕೇರಳ ಹೈಕೋರ್ಟ್

- Advertisement -
- Advertisement -

ಕೇರಳ ಹೈಕೋರ್ಟ್, ತನ್ನ ಎರಡು ತೀರ್ಪಗಳನ್ನು ಮಲಯಾಳಂ ಭಾಷೆಗೆ ಅನುವಾದಿಸಿ ಪ್ರಕಟಿಸಲು ಪ್ರಾರಂಭಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ. ಚಾಲಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಎರಡು ತೀರ್ಪುಗಳು WA 1638/2022, ಮತ್ತು WA 926/2016, ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ಮಲಯಾಳಂ ಭಾಷೆಯಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ.

ಇದರಿಂದ ದೇಶದಲ್ಲಿ ಪ್ರಾದೇಶಿಕ ಭಾಷೆಯಲ್ಲಿ ತೀರ್ಪನ್ನು ಪ್ರಕಟಿಸಲು ಪ್ರಾರಂಭಿಸಿದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಕೇರಳ ಹೈಕೋರ್ಟ್ ಪಾತ್ರವಾಗಿದೆ.

ಜನವರಿ 2023ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು, ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ದೇಶದ ನಾಲ್ಕು ಭಾಷೆಗಳಾದ ಹಿಂದಿ, ಗುಜರಾತಿ, ಒಡಿಯಾ ಮತ್ತು ತಮಿಳು ಭಾಷೆಗೆ ಅನುವಾದಿಸಲಾಗುವುದು ಎಂದು ಹೇಳಿದ್ದರು. ಏಕೆಂದರೆ 99.9% ಭಾರತೀಯ ನಾಗರಿಕರಿಗೆ ಇಂಗ್ಲೀಷ್ ಭಾಷೆಯಲ್ಲಿನ ಕಾನೂನು ಪರಿಭಾಷೆಗಳನ್ನು ಗ್ರಹಿಸಲು ಕಷ್ಟವಾಗುತ್ತದೆ ಎಂದು ಹೇಳಿದ್ದರು.

ನಾಗರಿಕರು ಮಾತನಾಡುವ ಮತ್ತು ಗ್ರಹಿಸುವ ಭಾಷೆಯಲ್ಲಿ ತೀರ್ಪು ನೀಡದಿದ್ದರೆ ಪ್ರಕರಣದ ನ್ಯಾಯವನ್ನು ತಿಳಿದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ನಾವು ಉಚ್ಚ ನ್ಯಾಯಾಲಯಗಳಲ್ಲಿ ಅಥವಾ ಸುಪ್ರೀಂ ಕೋರ್ಟ್‌ನಲ್ಲಿನ ತೀರ್ಪುಗಳನ್ನು ನಾಲ್ಕು ಭಾಷೆಗಳಲ್ಲಿ ನೀಡುತ್ತೇವೆ ಎಂದು ಸಿಜೆಐ ಹೇಳಿದರು.

ಇದನ್ನೂ ಓದಿ: ವಿಶ್ವ ತಾಯ್ನುಡಿ ದಿನ: ಜಗತ್ತಿನ 40% ಜನ ತಾವು ಮಾತಾಡುವ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿಲ್ಲ!

ಈ ವರ್ಷ ಗಣರಾಜ್ಯೋತ್ಸವದಂದು 13 ಭಾರತೀಯ ಭಾಷೆಗಳಲ್ಲಿ ತನ್ನ 1,268 ತೀರ್ಪುಗಳನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿತ್ತು. ಅದರಲ್ಲಿ 1,091 ತೀರ್ಪುಗಳು ಹಿಂದಿಗೆ, 21 ಒಡಿಯಾಗೆ, 14 ಮರಾಠಿಗೆ, 4 ಅಸ್ಸಾಮಿಗೆ, 1 ಗಾರೊಗೆ, 17 ಕನ್ನಡಕ್ಕೆ, 1 ಖಾಸಿಗೆ, 29 ಮಲಯಾಳಂಗೆ, 28 ತೆಲುಗಿಗೆ, ಮೂರು ನೇಪಾಳಿಗೆ, 4 ಪಂಜಾಬಿಗೆ, 3 ಉರ್ದು ಭಾಷೆಗೆ ಮತ್ತು 52 ತಮಿಳಿಗೆ ಅನುವಾದಿಸಲಾಗಿದೆ.

ಈ ಪ್ರಸ್ತಾವನೆಯನ್ನು ಆರಂಭದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಡಿಸಿದ್ದರು. ತೀರ್ಪುಗಳ ಪ್ರಮಾಣೀಕೃತ ಅನುವಾದಿತ ಪ್ರತಿಗಳು ಸ್ಥಳೀಯ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಲಭ್ಯವಾಗುವಂತೆ ವ್ಯವಸ್ಥೆಯನ್ನು ವಿಕಸನಗೊಳಿಸಬಹುದು ಎಂದು ಅವರು ಹೇಳಿದ್ದರು.

“ಜನರಿಗೆ ನ್ಯಾಯವನ್ನು ನೀಡುವುದು ಮಾತ್ರವಲ್ಲ, ಆ ವ್ಯಾಜ್ಯದ ನ್ಯಾಯ ಅವರಿಗೆ ತಿಳಿದಿರುವ ಭಾಷೆಯಲ್ಲಿ ಅರ್ಥಮಾಡಿಕೊಳ್ಳುವುದು ಸಹ ಮುಖ್ಯವಾಗಿದೆ. ಹೈಕೋರ್ಟ್‌ಗಳು ಇಂಗ್ಲಿಷ್‌ನಲ್ಲಿ ತೀರ್ಪು ನೀಡುತ್ತವೆ, ಆದರೆ ನಮ್ಮದು ವೈವಿಧ್ಯಮಯ ಭಾಷೆಗಳ ದೇಶ. ದಾವೆದಾರನು ಇಂಗ್ಲಿಷ್‌ನಲ್ಲಿ ಮಾತನಾಡದೇ ಇರಬಹುದು ಮತ್ತು ತೀರ್ಪಿನ ಸೂಕ್ಷ್ಮ ಅಂಶಗಳು ಅವನಿಗೆ  ಅಥವಾ ಅವಳಿಗೆ ಅರ್ಥವಾಗದೇ ಹೋಗಬಹುದು. ಹೀಗಾಗಿ ಮೊಕದ್ದಮೆ ಹೂಡಿದವರು ತೀರ್ಪನ್ನು ಅರ್ಥ ಮಾಡಿಕೊಳ್ಳಲು ವಕೀಲರು ಅಥವಾ ಇನ್ನೊಬ್ಬ ವ್ಯಕ್ತಿಯ ಮೇಲೆ ಅವಲಂಬಿತರಾಗಿರುತ್ತಾರೆ. ಇದು ಸಮಯ ಮತ್ತು ವೆಚ್ಚವನ್ನು ಹೆಚ್ಚಿಸುತ್ತದೆ. ಹಾಗಾಗಿ ತೀರ್ಪು ಪ್ರಕಟವಾದ 24 ಅಥವಾ 36 ಗಂಟೆಯೊಳಗೆ ತೀರ್ಪುಗಳ ಅನುವಾದಿತ ಪ್ರತಿಗಳು ಲಭ್ಯವಾಗಬೇಕು” ಎಂದು ರಾಮನಾಥ್ ಕೋವಿಂದ್ ಒತ್ತಿ ಹೇಳದ್ದರು.

2019 ರಲ್ಲಿ ಅಂದಿನ ಸಿಜೆಐ ರಂಜನ್ ಗೊಗೊಯ್ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ಈ ಪ್ರಸ್ತಾಪವನ್ನು ಪರಿಗಣಿಸಿತ್ತು ಮತ್ತು ತೀರ್ಪುಗಳನ್ನು ಆರು ದೇಶೀಯ ಭಾಷೆಗಳಾದ ಅಸ್ಸಾಮಿ, ಹಿಂದಿ, ಕನ್ನಡ, ಮರಾಠಿ, ಒಡಿಯಾ ಮತ್ತು ತೆಲುಗು ಭಾಷೆಗಳಿಗೆ ಭಾಷಾಂತರಿಸಲು ನಿರ್ಧರಿಸಿತ್ತು.

ಜುಲೈ 2019ರ ಹೊತ್ತಿಗೆ, ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಸುಪ್ರೀಂ ಕೋರ್ಟ್ ಪೋರ್ಟಲ್‌ನಲ್ಲಿ ‘ವರ್ನಾಕ್ಯುಲರ್ ಜಡ್ಜ್‌ಮೆಂಟ್ಸ್’ ಶೀರ್ಷಿಕೆಯಡಿ ಪ್ರಾದೇಶಿಕ ಭಾಷೆಗಳಲ್ಲಿ ಅಪ್‌ಲೋಡ್ ಮಾಡಲು ಪ್ರಾರಂಭಿಸಿತು.  ಒಂದು ನಿರ್ದಿಷ್ಟ ರಾಜ್ಯದಿಂದ ಹುಟ್ಟಿಕೊಂಡ ಪ್ರಕರಣದ ತೀರ್ಪುಗಳನ್ನು ಆ ರಾಜ್ಯದ ಭಾಷೆಗೆ ಅನುವಾದಿಸಲಾಗಿದೆ ಮತ್ತು ಆರು ಸ್ಥಳೀಯ ಭಾಷೆಗಳಲ್ಲಿ ಅನುವಾದಿಸಿದ ತೀರ್ಪುಗಳು ಲಭ್ಯವಾಗುವಂತೆ ಮಾಡಲಾಗಿದೆ. 2020ರ ಹೊತ್ತಿಗೆ, ಮಲಯಾಳಂ, ತಮಿಳು ಮತ್ತು ಹಿಂದಿ ಸೇರಿದಂತೆ ಇನ್ನೂ ಭಾಷೆಗಳಲ್ಲಿ ತೀರ್ಪುಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...