Homeಮುಖಪುಟದೇಶದಲ್ಲಿ ಮೊದಲ ಬಾರಿಗೆ ಪ್ರಾದೇಶಿಕ ಭಾಷೆಯಲ್ಲಿ ತೀರ್ಪು ಪ್ರಕಟಿಸಿದ ಕೇರಳ ಹೈಕೋರ್ಟ್

ದೇಶದಲ್ಲಿ ಮೊದಲ ಬಾರಿಗೆ ಪ್ರಾದೇಶಿಕ ಭಾಷೆಯಲ್ಲಿ ತೀರ್ಪು ಪ್ರಕಟಿಸಿದ ಕೇರಳ ಹೈಕೋರ್ಟ್

- Advertisement -
- Advertisement -

ಕೇರಳ ಹೈಕೋರ್ಟ್, ತನ್ನ ಎರಡು ತೀರ್ಪಗಳನ್ನು ಮಲಯಾಳಂ ಭಾಷೆಗೆ ಅನುವಾದಿಸಿ ಪ್ರಕಟಿಸಲು ಪ್ರಾರಂಭಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್. ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ. ಚಾಲಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಎರಡು ತೀರ್ಪುಗಳು WA 1638/2022, ಮತ್ತು WA 926/2016, ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ಮಲಯಾಳಂ ಭಾಷೆಯಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ.

ಇದರಿಂದ ದೇಶದಲ್ಲಿ ಪ್ರಾದೇಶಿಕ ಭಾಷೆಯಲ್ಲಿ ತೀರ್ಪನ್ನು ಪ್ರಕಟಿಸಲು ಪ್ರಾರಂಭಿಸಿದ ಮೊದಲ ಹೈಕೋರ್ಟ್ ಎಂಬ ಹೆಗ್ಗಳಿಕೆಗೆ ಕೇರಳ ಹೈಕೋರ್ಟ್ ಪಾತ್ರವಾಗಿದೆ.

ಜನವರಿ 2023ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು, ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ದೇಶದ ನಾಲ್ಕು ಭಾಷೆಗಳಾದ ಹಿಂದಿ, ಗುಜರಾತಿ, ಒಡಿಯಾ ಮತ್ತು ತಮಿಳು ಭಾಷೆಗೆ ಅನುವಾದಿಸಲಾಗುವುದು ಎಂದು ಹೇಳಿದ್ದರು. ಏಕೆಂದರೆ 99.9% ಭಾರತೀಯ ನಾಗರಿಕರಿಗೆ ಇಂಗ್ಲೀಷ್ ಭಾಷೆಯಲ್ಲಿನ ಕಾನೂನು ಪರಿಭಾಷೆಗಳನ್ನು ಗ್ರಹಿಸಲು ಕಷ್ಟವಾಗುತ್ತದೆ ಎಂದು ಹೇಳಿದ್ದರು.

ನಾಗರಿಕರು ಮಾತನಾಡುವ ಮತ್ತು ಗ್ರಹಿಸುವ ಭಾಷೆಯಲ್ಲಿ ತೀರ್ಪು ನೀಡದಿದ್ದರೆ ಪ್ರಕರಣದ ನ್ಯಾಯವನ್ನು ತಿಳಿದುಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ನಾವು ಉಚ್ಚ ನ್ಯಾಯಾಲಯಗಳಲ್ಲಿ ಅಥವಾ ಸುಪ್ರೀಂ ಕೋರ್ಟ್‌ನಲ್ಲಿನ ತೀರ್ಪುಗಳನ್ನು ನಾಲ್ಕು ಭಾಷೆಗಳಲ್ಲಿ ನೀಡುತ್ತೇವೆ ಎಂದು ಸಿಜೆಐ ಹೇಳಿದರು.

ಇದನ್ನೂ ಓದಿ: ವಿಶ್ವ ತಾಯ್ನುಡಿ ದಿನ: ಜಗತ್ತಿನ 40% ಜನ ತಾವು ಮಾತಾಡುವ ಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿಲ್ಲ!

ಈ ವರ್ಷ ಗಣರಾಜ್ಯೋತ್ಸವದಂದು 13 ಭಾರತೀಯ ಭಾಷೆಗಳಲ್ಲಿ ತನ್ನ 1,268 ತೀರ್ಪುಗಳನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಪ್ರಸ್ತಾಪಿಸಿತ್ತು. ಅದರಲ್ಲಿ 1,091 ತೀರ್ಪುಗಳು ಹಿಂದಿಗೆ, 21 ಒಡಿಯಾಗೆ, 14 ಮರಾಠಿಗೆ, 4 ಅಸ್ಸಾಮಿಗೆ, 1 ಗಾರೊಗೆ, 17 ಕನ್ನಡಕ್ಕೆ, 1 ಖಾಸಿಗೆ, 29 ಮಲಯಾಳಂಗೆ, 28 ತೆಲುಗಿಗೆ, ಮೂರು ನೇಪಾಳಿಗೆ, 4 ಪಂಜಾಬಿಗೆ, 3 ಉರ್ದು ಭಾಷೆಗೆ ಮತ್ತು 52 ತಮಿಳಿಗೆ ಅನುವಾದಿಸಲಾಗಿದೆ.

ಈ ಪ್ರಸ್ತಾವನೆಯನ್ನು ಆರಂಭದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಡಿಸಿದ್ದರು. ತೀರ್ಪುಗಳ ಪ್ರಮಾಣೀಕೃತ ಅನುವಾದಿತ ಪ್ರತಿಗಳು ಸ್ಥಳೀಯ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಲಭ್ಯವಾಗುವಂತೆ ವ್ಯವಸ್ಥೆಯನ್ನು ವಿಕಸನಗೊಳಿಸಬಹುದು ಎಂದು ಅವರು ಹೇಳಿದ್ದರು.

“ಜನರಿಗೆ ನ್ಯಾಯವನ್ನು ನೀಡುವುದು ಮಾತ್ರವಲ್ಲ, ಆ ವ್ಯಾಜ್ಯದ ನ್ಯಾಯ ಅವರಿಗೆ ತಿಳಿದಿರುವ ಭಾಷೆಯಲ್ಲಿ ಅರ್ಥಮಾಡಿಕೊಳ್ಳುವುದು ಸಹ ಮುಖ್ಯವಾಗಿದೆ. ಹೈಕೋರ್ಟ್‌ಗಳು ಇಂಗ್ಲಿಷ್‌ನಲ್ಲಿ ತೀರ್ಪು ನೀಡುತ್ತವೆ, ಆದರೆ ನಮ್ಮದು ವೈವಿಧ್ಯಮಯ ಭಾಷೆಗಳ ದೇಶ. ದಾವೆದಾರನು ಇಂಗ್ಲಿಷ್‌ನಲ್ಲಿ ಮಾತನಾಡದೇ ಇರಬಹುದು ಮತ್ತು ತೀರ್ಪಿನ ಸೂಕ್ಷ್ಮ ಅಂಶಗಳು ಅವನಿಗೆ  ಅಥವಾ ಅವಳಿಗೆ ಅರ್ಥವಾಗದೇ ಹೋಗಬಹುದು. ಹೀಗಾಗಿ ಮೊಕದ್ದಮೆ ಹೂಡಿದವರು ತೀರ್ಪನ್ನು ಅರ್ಥ ಮಾಡಿಕೊಳ್ಳಲು ವಕೀಲರು ಅಥವಾ ಇನ್ನೊಬ್ಬ ವ್ಯಕ್ತಿಯ ಮೇಲೆ ಅವಲಂಬಿತರಾಗಿರುತ್ತಾರೆ. ಇದು ಸಮಯ ಮತ್ತು ವೆಚ್ಚವನ್ನು ಹೆಚ್ಚಿಸುತ್ತದೆ. ಹಾಗಾಗಿ ತೀರ್ಪು ಪ್ರಕಟವಾದ 24 ಅಥವಾ 36 ಗಂಟೆಯೊಳಗೆ ತೀರ್ಪುಗಳ ಅನುವಾದಿತ ಪ್ರತಿಗಳು ಲಭ್ಯವಾಗಬೇಕು” ಎಂದು ರಾಮನಾಥ್ ಕೋವಿಂದ್ ಒತ್ತಿ ಹೇಳದ್ದರು.

2019 ರಲ್ಲಿ ಅಂದಿನ ಸಿಜೆಐ ರಂಜನ್ ಗೊಗೊಯ್ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್ ಈ ಪ್ರಸ್ತಾಪವನ್ನು ಪರಿಗಣಿಸಿತ್ತು ಮತ್ತು ತೀರ್ಪುಗಳನ್ನು ಆರು ದೇಶೀಯ ಭಾಷೆಗಳಾದ ಅಸ್ಸಾಮಿ, ಹಿಂದಿ, ಕನ್ನಡ, ಮರಾಠಿ, ಒಡಿಯಾ ಮತ್ತು ತೆಲುಗು ಭಾಷೆಗಳಿಗೆ ಭಾಷಾಂತರಿಸಲು ನಿರ್ಧರಿಸಿತ್ತು.

ಜುಲೈ 2019ರ ಹೊತ್ತಿಗೆ, ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಸುಪ್ರೀಂ ಕೋರ್ಟ್ ಪೋರ್ಟಲ್‌ನಲ್ಲಿ ‘ವರ್ನಾಕ್ಯುಲರ್ ಜಡ್ಜ್‌ಮೆಂಟ್ಸ್’ ಶೀರ್ಷಿಕೆಯಡಿ ಪ್ರಾದೇಶಿಕ ಭಾಷೆಗಳಲ್ಲಿ ಅಪ್‌ಲೋಡ್ ಮಾಡಲು ಪ್ರಾರಂಭಿಸಿತು.  ಒಂದು ನಿರ್ದಿಷ್ಟ ರಾಜ್ಯದಿಂದ ಹುಟ್ಟಿಕೊಂಡ ಪ್ರಕರಣದ ತೀರ್ಪುಗಳನ್ನು ಆ ರಾಜ್ಯದ ಭಾಷೆಗೆ ಅನುವಾದಿಸಲಾಗಿದೆ ಮತ್ತು ಆರು ಸ್ಥಳೀಯ ಭಾಷೆಗಳಲ್ಲಿ ಅನುವಾದಿಸಿದ ತೀರ್ಪುಗಳು ಲಭ್ಯವಾಗುವಂತೆ ಮಾಡಲಾಗಿದೆ. 2020ರ ಹೊತ್ತಿಗೆ, ಮಲಯಾಳಂ, ತಮಿಳು ಮತ್ತು ಹಿಂದಿ ಸೇರಿದಂತೆ ಇನ್ನೂ ಭಾಷೆಗಳಲ್ಲಿ ತೀರ್ಪುಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಕಾಂತಾರ, ಕಾಶ್ಮೀರ್‌ ಫೈಲ್ಸ್‌ಗೆ ಸಿಕ್ಕ ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿ ನಿಜವಾದದ್ದಲ್ಲ; ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...