Homeಕರ್ನಾಟಕಪರೇಶ್‌ ಮೇಸ್ತಾ ಹೆಸರಲ್ಲಿ ಗಲಭೆ; 112 ಜನರ ಮೇಲಿದ್ದ ಪ್ರಕರಣ ವಾಪಸ್‌ ಪಡೆದ ಸರ್ಕಾರ

ಪರೇಶ್‌ ಮೇಸ್ತಾ ಹೆಸರಲ್ಲಿ ಗಲಭೆ; 112 ಜನರ ಮೇಲಿದ್ದ ಪ್ರಕರಣ ವಾಪಸ್‌ ಪಡೆದ ಸರ್ಕಾರ

- Advertisement -
- Advertisement -

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಪರೇಶ್ ಮೇಸ್ತಾ ಅವರ ಸಾವಿನ ಸಂದರ್ಭದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿ ದಾಖಲಾಗಿದ್ದ ಪ್ರಕರಣಗಳನ್ನು ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ. ಪ್ರಕರಣ ಘಟಿಸಿ ಆರು ವರ್ಷಗಳ ನಂತರ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ.

ಗಲಭೆಯಲ್ಲಿ 112 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯಲು ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕೋಮುಗಲಭೆಗೆ ಸಂಬಂಧಿಸಿದಂತೆ 112 ಮಂದಿ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಮೇಸ್ತಾ (19) ಎಂಬ ಯುವಕ ಶವವಾಗಿ ಪತ್ತೆಯಾಗಿದ್ದನು. ಡಿಸೆಂಬರ್ 8 ರಂದು ಹೊನ್ನಾವರದ ಶೆಟ್ಟಿಕೆರೆಯ ಕೆರೆಯಲ್ಲಿ ಅವರ ಮೃತದೇಹ ಕಂಡುಬಂದಿತ್ತು. ಇದಕ್ಕೆ ಕೋಮು ಬಣ್ಣ ಕಟ್ಟಿದ್ದರಿಂದ ರಾಜ್ಯದಲ್ಲಿ ಉದ್ವಿಗ್ನತೆ ಉಂಟಾಗಿತ್ತು.

ಇದೊಂದು ಕೊಲೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು, ಬಜರಂಗದಳ ಹಾಗೂ ಸ್ಥಳೀಯ ಶಾಸಕರು ಸೇರಿದಂತೆ ಬಲಪಂಥೀಯ ಸಂಘಟನೆಗಳು ಮೇಸ್ತಾ ಸಾವಿನ ವಿರುದ್ಧ ಪ್ರತಿಭಟನೆ ನಡೆಸಿದ್ದವು.

ಶಾಸಕ ಹಾಗೂ ಹಾಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಬಜರಂಗದಳ ಕಾರ್ಯಕರ್ತರು ಹಾಗೂ ಇತರರ ವಿರುದ್ಧವೂ ಪ್ರಕರಣ ದಾಖಲಾಗಿತ್ತು.

ಇದೀಗ, ಗಲಭೆಗೆ ಸಂಬಂಧಿಸಿದ ಎಲ್ಲಾ 112 ಜನರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಆದೇಶಿಸಿದೆ.

ಮೆಸ್ತಾ ಸಾವಿನ ಪ್ರಕರಣ

ಕಳೆದ ವರ್ಷ, ಕೇಂದ್ರೀಯ ತನಿಖಾ ದಳ (ಸಿಬಿಐ) ಮೆಸ್ತಾ ಪ್ರಕರಣದ ಕುರಿತು ‘ಬಿ’ ರಿಪೋರ್ಟ್ ಸಲ್ಲಿಸಿತು. ಮೇಸ್ತಾ ಸಾವು ಆಕಸ್ಮಿಕ ಎಂದು ಘೋಷಿಸಿದೆ.

ಮೆಸ್ತಾ ಅವರ ದೇಹದಲ್ಲಿ ಯಾವುದೇ ಬಾಹ್ಯ ಗಾಯಗಳು ಅಥವಾ ಹಲ್ಲೆಯ ಗುರುತುಗಳಿಲ್ಲ ಎಂದು ಸಿಬಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅವರನ್ನು ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂಬುದು ಸುಳ್ಳು ಎಂದಿತ್ತು ಸಿಬಿಐ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಮಾಲ್ ಆಜಾದ್, ಆಶಿಫ್ ರಫೀಕ್, ಫೈಝಲ್, ಸಲೀಂ ಮತ್ತು ಇಮ್ತಿಯಾಜ್ ಸೇರಿದಂತೆ ಐವರನ್ನು ಬಂಧಿಸಲಾಗಿತ್ತು.

ಪರೇಶ್ ಮೇಸ್ತಾ ಅವರ ತಂದೆ ಕಮಲಾಕರ್ ಮೇಸ್ತಾ, ಬಲಪಂಥೀಯ ಸಂಘಟನೆಗಳಾದ ಶ್ರೀರಾಮ ಸೇನೆ, ಹಿಂದೂ ಜನಜಾಗೃತಿ ಸಮಿತಿಯು ಸಿಬಿಐ ವರದಿಯನ್ನು ಒಪ್ಪಿಕೊಂಡಿಲ್ಲ. ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಗಿದೆ.

ಮೇಸ್ತಾ ಸಾವು ರಾಜಕೀಯಕ್ಕೆ ಬಳಕೆ

2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಎಂಟರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಮೇಸ್ತಾ ಶವವಾಗಿ ಪತ್ತೆಯಾಗಿದ್ದ. ಯುವಕನನ್ನು ಮುಸ್ಲಿಮರು ಹತ್ಯೆ ಮಾಡಿದ್ದಾರೆಂದು ಸಂಘಪರಿವಾರ ಹಾಗೂ ಬಿಜೆಪಿ ಆರೋಪಿಸಿತ್ತು. ಮೃತ ಮೇಸ್ತಾನನ್ನು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಲಾಯಿತು. ಆಗಿನ ಆಡಳಿತರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹರಿಹಾಯ್ದಿತ್ತು.

ಪರೇಶ್ ಮೆಸ್ತಾ ಸಾವು ಮುಂದಿಟ್ಟು ಬಿಜೆಪಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಂಡಿತ್ತು. ಆಗಿನ ಗೃಹ ಮಂತ್ರಿ ರಾಮಲಿಂಗ ರೆಡ್ಡಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ವಿಸ್ತೃತ ವಿಚಾರಣೆಗೆ ಕೇಳಿತ್ತು. ಅದಾಗಿಯೂ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತರ ಕನ್ನಡ, ಉಡುಪಿ, ದಕ, ಶಿವಮೊಗ್ಗ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಬಿರುಸಿನ ಪ್ರಚಾರ ನಡೆಸಿತ್ತು.

 ಇದನ್ನೂ ಓದಿರಿ: FLASHBACK| ಪರೇಶ್ ಮೇಸ್ತಾ ಸಾವಾದಾಗ ಬಿಜೆಪಿ ನಾಯಕರು ವರ್ತಿಸಿದ್ದು‌ ಹೀಗೆ…

ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಶೋಭಾ ಕರಂದ್ಲಾಜೆ ತರಹೇವಾರಿ ಹೇಳಿಕೆಗಳನ್ನು ನೀಡಿದ್ದರು. “ಈಶ್ವರಪ್ಪನವರ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಜಿಹಾದಿಗಳ ಪರವಾಗಿ ಸರ್ಕಾರ ಹಾಗೂ ಪೊಲೀಸರೇ ನಿಂತು ಹಿಂದೂಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂಬುದನ್ನು ರಾಜ್ಯಪಾಲರಿಗೆ ನೀಡಿದ್ದೇವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ನಡೆಯುತ್ತಿರುವ ಘಟನೆಗಳಿಗೆ ರಾಜ್ಯ ಸರ್ಕಾರವೇ ಪ್ರಮುಖವಾದ ಕಾರಣ. ಪ್ರಕರಣವನ್ನು ಮುಚ್ಚಿಹಾಕುವ ಗುಮಾನಿ ಆ ಭಾಗದ ಜನರಿಗೆ ಬರುತ್ತಿದೆ” ಎಂದು ಖಾಸಗಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದರು.

ಇಡೀ ದೇಶದ ಶೋಷಿತ ಹಾಗೂ ಅಲಕ್ಷಿತ ಸಮುದಾಯಗಳನ್ನು ರಕ್ಷಿಸುತ್ತಿರುವ ಸಂವಿಧಾನವನ್ನೇ ಬದಲಿಸುವುದಾಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಸಂಸದ ಅನಂತಕುಮಾರ್‌ ಹೆಗಡೆ, “ಮೇಸ್ತಾನ ಪ್ರತಿ ಹನಿ ರಕ್ತಕ್ಕೂ ನ್ಯಾಯ ದೊರಕಿಸದೆ ಬಿಡುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...