Homeಕರ್ನಾಟಕಪರೇಶ್‌ ಮೇಸ್ತಾ ಹೆಸರಲ್ಲಿ ಗಲಭೆ; 112 ಜನರ ಮೇಲಿದ್ದ ಪ್ರಕರಣ ವಾಪಸ್‌ ಪಡೆದ ಸರ್ಕಾರ

ಪರೇಶ್‌ ಮೇಸ್ತಾ ಹೆಸರಲ್ಲಿ ಗಲಭೆ; 112 ಜನರ ಮೇಲಿದ್ದ ಪ್ರಕರಣ ವಾಪಸ್‌ ಪಡೆದ ಸರ್ಕಾರ

- Advertisement -
- Advertisement -

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಪರೇಶ್ ಮೇಸ್ತಾ ಅವರ ಸಾವಿನ ಸಂದರ್ಭದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿ ದಾಖಲಾಗಿದ್ದ ಪ್ರಕರಣಗಳನ್ನು ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ. ಪ್ರಕರಣ ಘಟಿಸಿ ಆರು ವರ್ಷಗಳ ನಂತರ ಸರ್ಕಾರ ಈ ತೀರ್ಮಾನಕ್ಕೆ ಬಂದಿದೆ.

ಗಲಭೆಯಲ್ಲಿ 112 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆಯಲು ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕೋಮುಗಲಭೆಗೆ ಸಂಬಂಧಿಸಿದಂತೆ 112 ಮಂದಿ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

2017ರಲ್ಲಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಮೇಸ್ತಾ (19) ಎಂಬ ಯುವಕ ಶವವಾಗಿ ಪತ್ತೆಯಾಗಿದ್ದನು. ಡಿಸೆಂಬರ್ 8 ರಂದು ಹೊನ್ನಾವರದ ಶೆಟ್ಟಿಕೆರೆಯ ಕೆರೆಯಲ್ಲಿ ಅವರ ಮೃತದೇಹ ಕಂಡುಬಂದಿತ್ತು. ಇದಕ್ಕೆ ಕೋಮು ಬಣ್ಣ ಕಟ್ಟಿದ್ದರಿಂದ ರಾಜ್ಯದಲ್ಲಿ ಉದ್ವಿಗ್ನತೆ ಉಂಟಾಗಿತ್ತು.

ಇದೊಂದು ಕೊಲೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು, ಬಜರಂಗದಳ ಹಾಗೂ ಸ್ಥಳೀಯ ಶಾಸಕರು ಸೇರಿದಂತೆ ಬಲಪಂಥೀಯ ಸಂಘಟನೆಗಳು ಮೇಸ್ತಾ ಸಾವಿನ ವಿರುದ್ಧ ಪ್ರತಿಭಟನೆ ನಡೆಸಿದ್ದವು.

ಶಾಸಕ ಹಾಗೂ ಹಾಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಬಜರಂಗದಳ ಕಾರ್ಯಕರ್ತರು ಹಾಗೂ ಇತರರ ವಿರುದ್ಧವೂ ಪ್ರಕರಣ ದಾಖಲಾಗಿತ್ತು.

ಇದೀಗ, ಗಲಭೆಗೆ ಸಂಬಂಧಿಸಿದ ಎಲ್ಲಾ 112 ಜನರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಆದೇಶಿಸಿದೆ.

ಮೆಸ್ತಾ ಸಾವಿನ ಪ್ರಕರಣ

ಕಳೆದ ವರ್ಷ, ಕೇಂದ್ರೀಯ ತನಿಖಾ ದಳ (ಸಿಬಿಐ) ಮೆಸ್ತಾ ಪ್ರಕರಣದ ಕುರಿತು ‘ಬಿ’ ರಿಪೋರ್ಟ್ ಸಲ್ಲಿಸಿತು. ಮೇಸ್ತಾ ಸಾವು ಆಕಸ್ಮಿಕ ಎಂದು ಘೋಷಿಸಿದೆ.

ಮೆಸ್ತಾ ಅವರ ದೇಹದಲ್ಲಿ ಯಾವುದೇ ಬಾಹ್ಯ ಗಾಯಗಳು ಅಥವಾ ಹಲ್ಲೆಯ ಗುರುತುಗಳಿಲ್ಲ ಎಂದು ಸಿಬಿಐ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅವರನ್ನು ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂಬುದು ಸುಳ್ಳು ಎಂದಿತ್ತು ಸಿಬಿಐ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಮಾಲ್ ಆಜಾದ್, ಆಶಿಫ್ ರಫೀಕ್, ಫೈಝಲ್, ಸಲೀಂ ಮತ್ತು ಇಮ್ತಿಯಾಜ್ ಸೇರಿದಂತೆ ಐವರನ್ನು ಬಂಧಿಸಲಾಗಿತ್ತು.

ಪರೇಶ್ ಮೇಸ್ತಾ ಅವರ ತಂದೆ ಕಮಲಾಕರ್ ಮೇಸ್ತಾ, ಬಲಪಂಥೀಯ ಸಂಘಟನೆಗಳಾದ ಶ್ರೀರಾಮ ಸೇನೆ, ಹಿಂದೂ ಜನಜಾಗೃತಿ ಸಮಿತಿಯು ಸಿಬಿಐ ವರದಿಯನ್ನು ಒಪ್ಪಿಕೊಂಡಿಲ್ಲ. ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಗಿದೆ.

ಮೇಸ್ತಾ ಸಾವು ರಾಜಕೀಯಕ್ಕೆ ಬಳಕೆ

2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಎಂಟರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಮೇಸ್ತಾ ಶವವಾಗಿ ಪತ್ತೆಯಾಗಿದ್ದ. ಯುವಕನನ್ನು ಮುಸ್ಲಿಮರು ಹತ್ಯೆ ಮಾಡಿದ್ದಾರೆಂದು ಸಂಘಪರಿವಾರ ಹಾಗೂ ಬಿಜೆಪಿ ಆರೋಪಿಸಿತ್ತು. ಮೃತ ಮೇಸ್ತಾನನ್ನು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಲಾಯಿತು. ಆಗಿನ ಆಡಳಿತರೂಢ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹರಿಹಾಯ್ದಿತ್ತು.

ಪರೇಶ್ ಮೆಸ್ತಾ ಸಾವು ಮುಂದಿಟ್ಟು ಬಿಜೆಪಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಂಡಿತ್ತು. ಆಗಿನ ಗೃಹ ಮಂತ್ರಿ ರಾಮಲಿಂಗ ರೆಡ್ಡಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ವಿಸ್ತೃತ ವಿಚಾರಣೆಗೆ ಕೇಳಿತ್ತು. ಅದಾಗಿಯೂ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತರ ಕನ್ನಡ, ಉಡುಪಿ, ದಕ, ಶಿವಮೊಗ್ಗ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಬಿರುಸಿನ ಪ್ರಚಾರ ನಡೆಸಿತ್ತು.

 ಇದನ್ನೂ ಓದಿರಿ: FLASHBACK| ಪರೇಶ್ ಮೇಸ್ತಾ ಸಾವಾದಾಗ ಬಿಜೆಪಿ ನಾಯಕರು ವರ್ತಿಸಿದ್ದು‌ ಹೀಗೆ…

ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಶೋಭಾ ಕರಂದ್ಲಾಜೆ ತರಹೇವಾರಿ ಹೇಳಿಕೆಗಳನ್ನು ನೀಡಿದ್ದರು. “ಈಶ್ವರಪ್ಪನವರ ನೇತೃತ್ವದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಜಿಹಾದಿಗಳ ಪರವಾಗಿ ಸರ್ಕಾರ ಹಾಗೂ ಪೊಲೀಸರೇ ನಿಂತು ಹಿಂದೂಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂಬುದನ್ನು ರಾಜ್ಯಪಾಲರಿಗೆ ನೀಡಿದ್ದೇವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ನಡೆಯುತ್ತಿರುವ ಘಟನೆಗಳಿಗೆ ರಾಜ್ಯ ಸರ್ಕಾರವೇ ಪ್ರಮುಖವಾದ ಕಾರಣ. ಪ್ರಕರಣವನ್ನು ಮುಚ್ಚಿಹಾಕುವ ಗುಮಾನಿ ಆ ಭಾಗದ ಜನರಿಗೆ ಬರುತ್ತಿದೆ” ಎಂದು ಖಾಸಗಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದರು.

ಇಡೀ ದೇಶದ ಶೋಷಿತ ಹಾಗೂ ಅಲಕ್ಷಿತ ಸಮುದಾಯಗಳನ್ನು ರಕ್ಷಿಸುತ್ತಿರುವ ಸಂವಿಧಾನವನ್ನೇ ಬದಲಿಸುವುದಾಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಸಂಸದ ಅನಂತಕುಮಾರ್‌ ಹೆಗಡೆ, “ಮೇಸ್ತಾನ ಪ್ರತಿ ಹನಿ ರಕ್ತಕ್ಕೂ ನ್ಯಾಯ ದೊರಕಿಸದೆ ಬಿಡುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...