Homeಮುಖಪುಟಫರ್ಜಿ: ರಾಜ್ ಮತ್ತು ಡಿಕೆ ಜೋಡಿಯ ಮತ್ತೊಂದು ಥ್ರಿಲ್ಲರ್ ವೆಬ್ ಸಿರೀಸ್

ಫರ್ಜಿ: ರಾಜ್ ಮತ್ತು ಡಿಕೆ ಜೋಡಿಯ ಮತ್ತೊಂದು ಥ್ರಿಲ್ಲರ್ ವೆಬ್ ಸಿರೀಸ್

- Advertisement -
- Advertisement -

ನಾವು ಪ್ರಪಂಚದ ಅತಿ ಪ್ರಾಮಾಣಿಕ ವ್ಯಕ್ತಿಯ ಫೋಟೊನಾ ಅತ್ಯಂತ ಭ್ರಷ್ಟ ವಸ್ತುವಿನ ಮೇಲೆ ಹಾಕಿದ್ದೀವಿ. ದುಡ್ಡನ್ನು ಉಳಿಸಿ ಯಾರಾದ್ರೂ ಶ್ರೀಮಂತರಾಗಿದ್ದಾರ? ಮರ್ಯಾದೆ ಅನ್ನುವುದು ಮಿಡಲ್ ಕ್ಲಾಸ್ ಜನರ ಕೈಗೆಟುಕದ ವಸ್ತು. ಅವರು ಇಡೀ ಜೀವನ ಸಾಲದಲ್ಲಿಯೇ ಮುಳುಗಿ ಸಾಲದಲ್ಲಿಯೇ ಸತ್ತು ಹೋಗುತ್ತದೆ. ಎಜುಕೇಶನ್ ಲೋನ್, ಕೆಲಸ ಸಿಕ್ಕರೆ ಬೈಕ್ ಲೋನ್, ಪ್ರಮೋಷನ್ ಸಿಕ್ಕರೆ ಕಾರ್ ಲೋನ್, ಮದುವೆ ಆದರೆ ಅದಕ್ಕೂ ಲೋನ್, ಆನಂತರ ಮಕ್ಕಳ ಎಜುಕೇಶನ್ ಲೋನ್, ಹೋಮ್ ಲೋನ್ ಹೀಗೆ… ಮದುವೆ ಮುರಿದು ಹೋದ್ರು ಲೋನ್ ಮಾತ್ರ ಮುಂದುವರೆಯುತ್ತಿರುತ್ತದೆ… ಒಟ್ನಲ್ಲಿ ನಾವು ಮಿಡಲ್ ಕ್ಲಾಸ್ ಅಲ್ಲ, ಬದಲಿಗೆ ಮಿಡಲ್ ಫಿಂಗರ್ ಕ್ಲಾಸ್…

ಹೀಗೆ ಬಹುತೇಕ ಜನರಿಗೆ ಅಪೀಲ್ ಆಗುವ ಡೈಲಾಗ್‌ಗಳ ಮೂಲಕ ಗಮನ ಸೆಳೆದ ವೆಬ್ ಸೀರಿಸ್ ಫರ್ಜಿ. ಫ್ಯಾಮಿಲಿ ಮ್ಯಾನ್ ಖ್ಯಾತಿಯ ರಾಜ್ ಮತ್ತು ಡಿಕೆ ಜೋಡಿಯ ಮತ್ತೊಂದು ಥ್ರಿಲ್ಲರ್ ವೆಬ್ ಸಿರೀಸ್ ಇದಾಗಿದ್ದು, ಈ ಮೂಲಕ ವಿಜಯ್ ಸೇತುಪತಿ ಮತ್ತು ಶಾಹಿದ್ ಕಪೂರ್ ಭರ್ಜರಿಯಾಗಿ ಓಟಿಟಿ ಪ್ರವೇಶಿಸಿದ್ದಾರೆ. Raj & DK ಜೋಡಿ ಫ್ಯಾಮಿಲಿ ಮ್ಯಾನ್-1 ರಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ತಡೆಯುವ ಕಥಹಂದರ ಹೊಂದಿತ್ತು. ಫ್ಯಾಮಿಲಿ ಮ್ಯಾನ್ -2ರಲ್ಲಿ ಎಲ್‌ಟಿಟಿಇ ಸಂಘಟನೆಯ ಕುರಿತು ಚಿತ್ರಿಸಲಾಗಿತ್ತು. ಈಗ ಫರ್ಜಿಯಲ್ಲಿ ಖೋಟಾ ನೋಟುಗಳ ಕರಾಳ ಲೋಕ ತೆರೆದಿಡಲು ರಾಜ್ ಮತ್ತು ಡಿಕೆ ಜೋಡಿ ಯತ್ನಿಸಿದೆ.

ಅತ್ಯುತ್ತಮ ಚಿತ್ರ ಕಲಾವಿದ್ ಸನ್ನಿ (ಶಾಹಿದ್ ಕಪೂರ್) ಅವರ ಸ್ನೇಹಿತ ಕಂ ಸಹೋದರ ಫಿರೋಜ್ (ಭುವನ್ ಅರೋರಾ) ಜೊತೆ ಸೇರಿ ತನ್ನ ತಾತ ಮಾಧವ್‌ (ಅಮೋಲ್ ಪಾಲೇಕರ್) ರವರ ‘ಕ್ರಾಂತಿ ಪತ್ರಿಕೆ’ ಮತ್ತು ಪ್ರಿಂಟಿಂಗ್ ಪ್ರೆಸ್ ಅನ್ನು ಉಳಿಸಿಕೊಳ್ಳಲು ದಾರಿ ಕಾಣದಿದ್ದಾಗ ತನ್ನ ಪ್ರತಿಭೆ ಬಳಸಿ ಖೋಟಾ ನೋಟು ಮುದ್ರಿಸಲು ಮುಂದಾಗುತ್ತಾನೆ. ಮೊದಲು ಪ್ರೆಸ್ ಉಳಿಸಲು ಸಾಲ ತೀರಿಸುವುದಕ್ಕಾಗಿ, ಆನಂತರ ಮನೆ – ಕಾರು ಕೊಳ್ಳುವುದಕ್ಕಾಗಿ, ಆನಂತರ ಇದೇ ಕೊನೆ ಸಲ ಎಂದುಕೊಂಡು, ಆಮೇಲೆ ಸಂದರ್ಭದ ಒತ್ತಡಗಳಿಗೆ ಒಳಗಾಗಿ ಸನ್ನಿ ಮತ್ತು ಆತನ ಸ್ನೇಹಿತ ಅಂತಾರಾಷ್ಟ್ರೀಯ ಖೋಟಾ ನೋಟು ಜಾಲದ ಭಾಗವಾಗುವುದು, ಈ ಜಾಲ ಬೇಧಿಸಲು ಮೈಖಲ್ (ವಿಜಯ್ ಸೇತುಪತಿ) ಮತ್ತು ಅವರ ಸಹೋದ್ಯೋಗಿ ಮೇಘಾ (ರಾಶಿ ಖನ್ನಾ) ಮುಂದಾಗುವುದು ಇಡೀ 8 ಎಪಿಸೋಡ್‌ಗಳ ವೆಬ್‌ ಸಿರೀಸ್‌ನ ಎಳೆ. ಆದರೆ ಮನುಷ್ಯ ಕೇವಲ ಆಹಾರ-ಮೈಥುನಗಳಿಗಷ್ಟೇ ಬದುಕುವುದಿಲ್ಲವಲ್ಲ. ಹಾಗಾಗಿ ಪ್ರತಿಯೊಂದು ಪಾತ್ರಗಳಿಗೂ ಅವರದೇ ಆದ ಪ್ಯಾಷನ್‌ಗಳಿವೆ. ಮೈಖಲ್‌ಗೆ ಖೋಟಾ ನೋಟಿನ ಕಿಂಗ್ ಪಿನ್ ಮನ್ಸೂರ್ ದಲಾಲ್‌ (ಕೆ.ಕೆ ಮೆನನ್) ಮೇಲಿನ ವಯಕ್ತಿಕ ಹಗೆತನ, ಮೇಘಾಳಿಗೆ ತಾನೊಬ್ಬ ಪ್ರೊಫೆಷನಲ್ ಕೆಲಸಗಾರ್ತಿ ಎನ್ನಿಸಿಕೊಳ್ಳುವ ಹಂಬಲ, ಮಾಧವ್‌ಗೆ ಜನರನ್ನು ಕ್ರಾಂತಿಗೆ ಕರೆತರುವ ಹುಚ್ಚು. ಒಂದು ಕಡೆ ತಾತನ ಆಸೆ ಮತ್ತು ತಮ್ಮ ಜೀವನದ ಮಹತ್ವಾಕಾಂಕ್ಷೆ ಸನ್ನಿ, ಫಿರೋಜ್‌ರವರದು. ಎಲ್ಲರ ಪಾತ್ರ ಪೋಷಣೆಯಲ್ಲಿ Raj & DK ಜೋಡಿ ಎಚ್ಚರಿಕೆ ವಹಿಸಿದೆ. ಹಾಗಾಗಿಯೇ ಸಿರೀಸ್ ಎಲ್ಲಾ ಎಪಿಸೋಡ್‌ಗಳನ್ನು ನೋಡಿಸಿಕೊಳ್ಳುತ್ತದೆ.

ನಮ್ಮ ಪ್ರಧಾನಿಯವರು 2016ರಲ್ಲಿ ಖೋಟಾ ನೋಟುಗಳ ಜಾಲವನ್ನು ಮುರಿಯುತ್ತೇನೆಂದು ಮತ್ತು ಭಯೋತ್ಪಾದನೆಯನ್ನು ಮಟ್ಟ ಹಾಕುತ್ತೇನೆಂದು 500 ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ರಾತ್ರೋರಾತ್ರಿ ಅಮಾನ್ಯೀಕರಣ ಮಾಡಿದರು. ಆದರೆ ಖೋಟಾ ನೋಟುಗಳು ನಿಂತಿವೆಯೇ? ಭಯೋತ್ಪಾದನೆ ಕಡಿಮೆಯಾಗಿದೆಯೇ ಎಂಬ ಪ್ರಶ್ನೆ ಈ ಸೀರಿಸ್ ನೋಡುವವರಿಗೆ ಎದುರಾಗುತ್ತದೆ. ಖೋಟಾ ನೋಟುಗಳ ಅಪಾಯದ ಬಗ್ಗೆ ಜನಪ್ರತಿನಿಧಿಗಳ ನಿರ್ಲಕ್ಷ್ಯ, ಒಂದು ವೇಳೆ ಖೋಟಾ ನೋಟು ವಹಿವಾಟು ನಡೆಸುವ ದೊಡ್ಡ ದಂಧೆಕೋರರು ಸಿಕ್ಕಿಬಿದ್ದರೆ ಆ ಕ್ರೆಡಿಟ್ ಅನ್ನು ತಮ್ಮ ಚುನಾವಣಾ ಲಾಭಗಳಿಗೆ ಬಳಸಿಕೊಳ್ಳುವ ಹಪಾಹಪಿಯಲ್ಲಿ ಈ ಚಿತ್ರದಲ್ಲಿ ಮೂಡಿಬಂದಿದೆ.

ಚಿತ್ರದಲ್ಲಿ ಗುಜರಾತಿನ ಶಾಸಕ ಖೋಟಾ ನೋಟಿನ ದಂಧೆ ನಡೆಸುವುದು, ಬೇರೆ ದೇಶಗಳಿಂದ ಅಲ್ಲಿನ ಬಂದರುಗಳಿಗೆ ಖೋಟಾ ನೋಟುಗಳು ಬರುವುದು, ವಿರೋಧ ಪಕ್ಷದವರ ಮೇಲೆ ಸಿಬಿಐ ದಾಳಿ ನಡೆಸುವುದು ಮುಂತಾದ ಅಂಶಗಳನ್ನು ‘ಪ್ರಜ್ಞಾಪೂರ್ವಕವಾಗಿ’ ತಂದಿದ್ದಾರೆ ಅನ್ನಿಸುತ್ತದೆ.

ಕೊನೆ ಬಾಲ್‌ನಲ್ಲಿ 6 ರನ್ ಬೇಕಿದ್ದಾಗ ಆ ಶಾಟ್‌ನಲ್ಲಿ ಸರಿ, ತಪ್ಪು ಅಂತ ಇರೋಲ್ಲ, ಬರೀ ಬಾರಿಸಬೇಕು ಅಷ್ಟೇ.. ಒಂದು ಸಿಕ್ಸ್ ಹೋಗುತ್ತೆ ಇಲ್ಲ ಸೋಲ್ತಿವಿ ಅಷ್ಟೆ ಎನ್ನುತ್ತಾ ಎಂಥದ್ದೆ ಕೆಲಸಗಳಿಗೂ ಕೈ ಹಾಕಲು ಸಿದ್ದರಿರುವ ಸನ್ನಿ ಮತ್ತು ಫಿರೋಜ್‌ ತಮಗರಿವಿರದಂತೆಯೇ ಅಂತಾರಾಷ್ಟ್ರೀಯ ಖೋಟಾ ನೋಟಿನ ಮಾಫಿಯಾದ ಭಾಗವಾಗುತ್ತಾರೆ. ಮನ್ಸೂರ್ ದಲಾಲ್ ಮತ್ತು ಅವರು ಸೇರಿ ಭಾರತಕ್ಕೆ ಸಾವಿರಾರು ಕೋಟಿ ರೂ. ಖೋಟಾ ತರುವ ಪ್ರಯತ್ನ ಮಾಡುತ್ತಾರೆ. ಈ ಯತ್ನದಲ್ಲಿ ಅವರು ಯಶಸ್ವಿಯಾಗುತ್ತಾರೆಯೇ ಅಥವಾ ಅವರನ್ನು ಹೀರೋ ಮೈಖಲ್ ಹಿಡಿದು ಎಡೆಮುರಿ ಕಟ್ಟುತ್ತಾರೆಯೇ ಎಂಬುದನ್ನು ನೀವು ಈ ವೆಬ್ ಸೀರಿಸ್ ನೋಡಿಯೇ ಅರ್ಥಮಾಡಕೊಳ್ಳಬೇಕು.

“ಬಂಡಾಯ ಮತ್ತು ಕ್ರಾಂತಿ ಪದಗಳ ನಡುವಿನ ವ್ಯತ್ಯಾಸ ಏನು ಗೊತ್ತಾ? ಸೋತವರನ್ನು ಬಂಡಾಯಗಾರರು ಅಂತ ಕರೆಯುತ್ತಾರೆ. ಗೆದ್ದವರನ್ನು ಕ್ರಾಂತಿಕಾರಿ ಅನ್ನುತ್ತಾರೆ. ಆದರೆ ಯಾವಾಗಲೂ ಗೆದ್ದವರಷ್ಟೆ ಇತಿಹಾಸ ಬರೆಯುತ್ತಾರೆ. ಹಾಗಾಗಿ ನಾವು ಒಳಗಿನ ಕ್ರಾಂತಿನ ಶಾಶ್ವತವಾಗಿ ಜೀವಂತವಾಗಿ ಉಳಿಸಿಕೊಳ್ಳಬೇಕು” ಎಂಬ ಡೈಲಾಗ್ ಮಾಧವ್ ಹೇಳುತ್ತಿದ್ದರೆ, “ಪ್ರತಿಯೊಬ್ಬರಲ್ಲಿಯೂ ದುಷ್ಟತನವಿರುತ್ತದೆ, ಅದು ಹೊರಬರಲು ಸಮಯ ಕಾಯುತ್ತಿರುತ್ತದೆ” ಎನ್ನುವ ಮೂಲಕ ಸನ್ನಿ ತನ್ನ ಕೆಲಸಗಳಿಗೆ ಸಮರ್ಥನೆ ಕೊಟ್ಟುಕೊಳ್ಳುವಂತಹ ಡೈಲಾಗ್‌ಗಳು ಮನಸ್ಸಿನಲ್ಲಿ ಉಳಿಯುತ್ತವೆ.

ಮೈಖಲ್ ಹೆಂಡತಿ ಮತ್ತು ಕುಟುಂಬಕ್ಕೆ ಸಮಯ ನೀಡದೇ ಬೇಜವಾಬ್ದಾರಿಯಿಂದ ವರ್ತಿಸುವುದು, ಅದಕ್ಕೆ ಕೆಲಸದ ಒತ್ತಡ ಮತ್ತು ದೇಶಭಕ್ತಿಯ ನೆಪ ಹೇಳುವುದು, ಸದಾ ಏನನ್ನಾದರೂ ಕುಡಿದಿರು ಎಂಬ ಬೋದಿಲೇರ್‌ರವರ ಆಶಯವನ್ನು ಅವರು ಈ ಚಿತ್ರದಲ್ಲಿ ಈಡೇರಿಸುತ್ತಾರೆ. ಒಟ್ಟಾರೆಯಾಗಿ Raj & DK ಜೋಡಿ ಒಮ್ಮೆ ನೋಡಬಹುದಾದ ವೆಬ್ ಸೀರಿಸ್ ಮೂಲಕ ಮತ್ತೆ ಓಟಿಟಿಗೆ ಎಂಟ್ರಿ ಕೊಟ್ಟಿದ್ದಾರೆ. ಎರಡನೇ ಸೀಸನ್‌ಗಾಗಿ ಕಾಯುವಂತೆ ಮಾಡಿದ್ದಾರೆ. ಈ ವೆಬ್ ಸೀರಿಸ್ ಅಮೆಜಾನ್ ಪ್ರೈಮ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹಿಂದಿಯಲ್ಲಿ ತೆರೆಕಂಡಿರುವ ಈ ಸೀರೀಸ್‌ ಕನ್ನಡಕ್ಕೂ ಡಬ್‌ ಆಗಿದೆ.

ಇದನ್ನೂ ಓದಿ: ‘ವಾತಿ’ ವಿಮರ್ಶೆ| ಖಾಸಗಿ ಶಿಕ್ಷಣ ಮಾಫಿಯಾ ಸುತ್ತ ಕಮರ್ಷಿಯಲ್‌ ಕತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...