Homeಕರ್ನಾಟಕಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಸಿದ್ದಾರ್ಥ್ ನಿಗೂಢ ನಾಪತ್ತೆ: ವಾಸ್ತವದಲ್ಲಿ ನಡೆದಿದ್ದೇನು?

- Advertisement -
- Advertisement -

ಈಗಾಗಲೇ ನಿಮಗೆ ಗೊತ್ತಿರುವಂತೆ ಎಸ್.ಎಂ ಕೃಷ್ಣರ ಅಳಿಯ, ಕಾಫಿ ಡೇ ಮಾಲೀಕ ಮತ್ತು ಈ ದೇಶದ ದೊಡ್ಡ ಶ್ರೀಮಂತರಲ್ಲಿ ಒಬ್ಬರಾದ ವಿ.ಜಿ ಸಿದ್ಧಾರ್ಥ ಅವರು ನಾಪತ್ತೆ ಪ್ರಕರಣ ಸಾಕಷ್ಟು ಸುದ್ದಿಯಾಗಿದೆ. ಚಿಕ್ಕಮಗಳೂರಿನ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದ ಸಿದ್ಧಾರ್ಥ್ ನಂತರದಲ್ಲಿ ಎಸ್.ಎಂ ಕೃಷ್ಣರ ಅಳಿಯನಾಗಿದ್ದು, ಕಾಫಿ ಡೇ ಬ್ರಾಂಡ್ ನ ಎಬಿಸಿ ಕಂಪನಿಯನ್ನು ಶುರು ಮಾಡಿದ್ದು, ಮತ್ತು ಈಗ ಕಾಫಿಯಿಂದ ಆಚೆಗೆ ತನ್ನ ಸಾಮ್ರಾಜ್ಯವನ್ನು ಹಲವು ರೀತಿಯಲ್ಲಿ ವಿಸ್ತರಿಸಿಕೊಂಡಿದ್ದು, ದಕ್ಷಿಣ ಅಮೇರಿಕಾದ ಕಾಡುಗಳ ಒಡೆಯನಾಗಿದ್ದು ಇವೆಲ್ಲವುಗಳು ಕೂಡ ದೊಡ್ಡ ಇತಿಹಾಸ.

ಇಂತಹ ಸಿದ್ಧಾರ್ಥ್ ಯಾವಾಗಲೂ ತೆರೆಮರೆಯಲ್ಲಿಯೇ ಇರುತ್ತಿದ್ದು ಹಲವಾರು ರಾಜಕಾರಣಿಗಳೊಂದಿಗೆ ಸಖ್ಯವೂ ಇದ್ದಿತು. ಸಿದ್ಧಾರ್ಥ್ ರವರ ಉದ್ದಿಮಿಗಳ ಕಾರಣಕ್ಕಾಗಿಯೇ ಎಸ್.ಎಂ ಕೃಷ್ಣರವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡರು ಎಂಬ ಗುಲ್ಲು ಸಹ ಎದ್ದಿತ್ತು. ಆ ಸಿದ್ಧಾರ್ಥ್ ರವರು ನಿನ್ನೆ ಸಂಜೆಯಿಂದ ಮಂಗಳೂರಿನಲ್ಲಿ ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಮೂಲಗಳು ಇನ್ನಿತರರನ್ನು ಸಂಪರ್ಕಿಸಿದಾಗ ಗೊತ್ತಾದುದ್ದು ಹಲವಾರು ಸಂದೇಹಗಳನ್ನು ಹುಟ್ಟಿಸುತ್ತಿದೆ.

ಮೂಲಗಳ ಪ್ರಕಾರ ಮಂಗಳೂರಿನ ಜಪ್ಪಿನಮೊಗರು ಬಳಿ ಇರುವ ನೇತ್ರಾವತಿ ಸೇತುವೆಯ ಬಳಿ ಸಿದ್ಧಾರ್ಥ್ ತನ್ನ ಡ್ರೈವರ್ ಗೆ ಕಾರು ನಿಲ್ಲಿಸಲು  ಹೇಳಿ ಅಲ್ಲಿ ಸೇತುವೆಯ ಬಳಿ ಹತ್ತುವುದು ಇಳಿಯುವುದು ಮಾಡುತ್ತಿದ್ದರು. ಮಾಧ್ಯಮಗಳಲ್ಲಿ ಬಂದಿರುವುದಕ್ಕೆ ವ್ಯತಿರಿಕ್ತವಾಗಿ ಅವರು ಕಣ್ಮರೆಯಾದ ಸಂದರ್ಭದಲ್ಲಿಯೂ ಸಹ ಕಾರು ಡ್ರೈವರ್ ಅವರನ್ನು ನೋಡುತ್ತಲೇ ಇದ್ದರು. ಆಗ ನೋಡನೋಡುತ್ತಿದ್ದಂತೆಯೇ ಸೇತುವೆಯ ಬಳಿ ಸಿದ್ಧಾರ್ಥ್ ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿದ್ದಾರೆ. ಈ ಕಾರಣದಿಂದಾಗ ಅವರು ನೇತ್ರಾವತಿ ನದಿಗೆ ಬಿದ್ದಿರಬಹುದಾಗಿದ್ದು ಇದು ಆತ್ಮಹತ್ಯೆಯೇ, ಅಥವಾ ಆಕಸ್ಮಿಕವೇ? ಏನು ಎಂಬುದು ಖಚಿತವಾಗಿಲ್ಲ. ಆದರೆ ಬೆಂಗಳೂರಿನಿಂದ ಕಾರಿನಲ್ಲಿ (ಕೆಎ-03, ಎನ್.ಸಿ 2592) ಅಲ್ಲಿಗೆ ಪ್ರಯಾಣ ಮಾಡಿರುವುದು, ಅಲ್ಲಿ ನೇತ್ರಾವತಿ ಬಳಿ ಕಾರು ನಿಲ್ಲಿಸುವಂತೆ ಹೇಳಿದ್ದು, ಮತ್ತು ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿರುವುದು ಇವೆಲ್ಲವೂ ಇದು ಬಹುತೇಕ ಆತ್ಮಹತ್ಯೆಯೇ ಆಗಿರುವ ಸಾಧ್ಯತೆಯಿದೆ ಎಂಬ ಅನುಮಾನಗಳೀಗೆ ದಾರಿ ಮಾಡಿಕೊಟ್ಟಿದೆ.

ತನ್ನ ಉದ್ದಿಮೆಯಲ್ಲಿ ಬಂದ ನೂರಾರು ಸವಾಲುಗಳನ್ನು ಎದುರಿಸಿ ಬೃಹತ್ ಆಗಿ ಬೆಳೆದ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಯಲ್ಲಿದ್ದಾರೆ ಎನ್ನುವುದಕ್ಕೆ ಹೆಚ್ಚು ತರ್ಕ ಕಾಣುತ್ತಿಲ್ಲ. ಆದರೆ ಯಾವುದೇ ವ್ಯಕ್ತಿಯ ವ್ಯಕ್ತಿಗತ ತುಮುಲಗಳು, ಇಂತಹ ಉದ್ದಿಮೆಗಳಲ್ಲಿ ಬರಬಹುದಾದ ನೂರೆಂಟು ಸಮಸ್ಯೆಗಳು ಇವೆಲ್ಲವೂ ಕೂಡ ಇದರ ಕುರಿತು ಅನುಮಾನಗಳು ಬರುವುದು ಸಹಜ. ಇದರಾಚೆಗೆ ಅಪಹರಣ ಆಗಿರುವ ಕುರಿತ ಶಂಕೆಯನ್ನು ಹರಿಯಬಿಟ್ಟಿವೆ. ಆದರೆ ಸದ್ಯದಲ್ಲಿ ಹೇಳಬಹುದಾದುಷ್ಟು ಇಷ್ಟೇ. ನೇತ್ರಾವತಿ ಸೇತುವೆಯ ಮೇಲೆ ಇದ್ದಕ್ಕಿದ್ದ ಹಾಗೆ ಸಿದ್ಧಾರ್ಥ್ ನಾಪತ್ತೆ ಆಗಿರುವ ಕುರಿತು ಹೆಚ್ಚಿನ ತನಿಖೆಯ ಅಗತ್ಯವಿದೆ. ಬಹುಶಃ ಇಂದು ಅಥವಾ ನಾಳೆಯೊಳಗೆ ಸುಳಿವು ಸಿಗಬಹುದು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...