Homeಮುಖಪುಟಇಬ್ಬರು ಮುಸ್ಲಿಮರ ಹತ್ಯೆ ವಿವಾದ; ರಾಜಸ್ಥಾನ ಪೊಲೀಸರ ವಿರುದ್ಧ ಹರಿಯಾಣ ಪೊಲೀಸರಿಂದ ಪ್ರಕರಣ ದಾಖಲು

ಇಬ್ಬರು ಮುಸ್ಲಿಮರ ಹತ್ಯೆ ವಿವಾದ; ರಾಜಸ್ಥಾನ ಪೊಲೀಸರ ವಿರುದ್ಧ ಹರಿಯಾಣ ಪೊಲೀಸರಿಂದ ಪ್ರಕರಣ ದಾಖಲು

ರಾಜಸ್ಥಾನ- ಹರಿಯಾಣ ಗಡಿಯಲ್ಲಿ ಗೋರಕ್ಷಣೆಯ ಹೆಸರಲ್ಲಿ ಇಬ್ಬರು ಮುಸ್ಲಿಮರನ್ನು ಕೊಲ್ಲಲಾಗಿದೆ

- Advertisement -
- Advertisement -

ಬಜರಂಗದಳದ ಗೂಂಡಾಗಳು ಇಬ್ಬರು ಮುಸ್ಲಿಮರನ್ನು ಹರಿಯಾಣ- ರಾಜಸ್ಥಾನ ಗಡಿಯಲ್ಲಿ ಹತ್ಯೆ ಮಾಡಿದ್ದಾರೆಂಬ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ.

ರಾಜಸ್ಥಾನದ ಮುಸ್ಲಿಂ ವ್ಯಕ್ತಿಗಳನ್ನು ಹರಿಯಾಣಕ್ಕೆ ಎಳೆದೊಯ್ದು, ಕಾರಿನಲ್ಲಿ ಕೂಡಿಹಾಕಿ ಕೊಲೆ ಮಾಡಲಾಗಿದ್ದು, ಈಗ ಎರಡು ರಾಜ್ಯಗಳ ನಡುವೆ ತಿಕ್ಕಾಟ ಆರಂಭವಾಗಿದೆ.

ಹರಿಯಾಣ ಪೊಲೀಸರು ರಾಜಸ್ಥಾನ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 30 ರಿಂದ 40 ಅನಾಮಧೇಯ ಪೊಲೀಸರ ವಿರುದ್ಧ ಎಫ್‌ಐಆರ್‌ ಆಗಿದೆ.

ಗೋರಕ್ಷಕರು ಕೊಂದಿದ್ದಾರೆ ಎಂದು ಹೇಳಲಾದ ಇಬ್ಬರು ಮುಸ್ಲಿಮರ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿದ ಸಂದರ್ಭದಲ್ಲಿ ರಾಜಸ್ಥಾನ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಅದರ ಅನ್ವಯ ಪ್ರಕರಣ ದಾಖಲಿಸಲಾಗಿದೆ.

ದೂರು ನೀಡಿದ ಮಹಿಳೆಯ ಮಗನಾಗಿರುವ ಶ್ರೀಕಾಂತ್ ಪಂಡಿತ್, ಈ ಇಬ್ಬರು ಮುಸ್ಲಿಮರ (ನಾಸಿರ್‌ ಮತ್ತು ಜುನೈದ್‌) ಅಪಹರಣ ಮತ್ತು ಹತ್ಯೆಯಲ್ಲಿ ಆರೋಪಿಯಾಗಿದ್ದಾನೆ. ಬಜರಂಗದಳದ ಮುಖಂಡನಾದ ಮೋನು ಮಾನೇಸರ್ ನೇತೃತ್ವದ ಗೋಸಂರಕ್ಷಣಾ ಗುಂಪಿನ ಸದಸ್ಯನಾಗಿ ಶ್ರೀಕಾಂತ್ ಗುರುತಿಸಿಕೊಂಡಿದ್ದಾನೆ. ಬಂಧನದಿಂದ ತಪ್ಪಿಸಿಕೊಳ್ಳುತ್ತಿರುವ ಐವರು ಆರೋಪಿಗಳಲ್ಲಿ ಈತನೂ ಒಬ್ಬನಾಗಿದ್ದಾನೆ.

ಶ್ರೀಕಾಂತ್‌ನ ತಾಯಿ ದುಲಾರಿ ದೇವಿ ಅವರು ತಮ್ಮ ದೂರಿನಲ್ಲಿ, “ರಾಜಸ್ಥಾನ ಪೊಲೀಸರು ನನ್ನ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದರು. ನನ್ನ ಗರ್ಭಿಣಿ ಸೊಸೆಯ ಹೊಟ್ಟೆಗೆ ಒದ್ದು ಗರ್ಭಪಾತಕ್ಕೆ ಕಾರಣವಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 148 (ಗಲಭೆ, ಮಾರಣಾಂತಿಕ ಆಯುಧಗಳೊಂದಿಗೆ ಶಸ್ತ್ರಸಜ್ಜಿತ), 149 (ಕಾನೂನುಬಾಹಿರ ಸಭೆ), 354 (ಹೆಣ್ಣಿನ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಹಲ್ಲೆ), 452 (ಮನೆ-ಅತಿಕ್ರಮಣ) ಮತ್ತು 312 (ಗರ್ಭಪಾತಕ್ಕೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದೇವಿಯವರು ಮಾಡಿರುವ ಆರೋಪಗಳನ್ನು ರಾಜಸ್ಥಾನ ಪೊಲೀಸರು ನಿರಾಕರಿಸಿದ್ದಾರೆ. “ಮಗುವಿನ ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯನ್ನು ನಿರೀಕ್ಷಿಸಲಾಗುತ್ತಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

“ರಾಜಸ್ಥಾನ ಪೊಲೀಸ್‌ ತಂಡದ ಸುಮಾರು 40 ಸಿಬ್ಬಂದಿ ನನ್ನ ಮನೆಗೆ ಬಲವಂತವಾಗಿ ಪ್ರವೇಶಿಸಿ, ನಮ್ಮನ್ನು ನಿಂದಿಸಿದ್ದಾರೆ. ನನ್ನ ಇತರ ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ಹೋಗಿದ್ದಾರೆ” ಎಂದು ಮಹಿಳೆ ಹೇಳಿಕೆ ನೀಡಿದ್ದಾರೆ.

ಕಳೆದ ವಾರ ಹರಿಯಾಣದಲ್ಲಿ ರಾಜಸ್ಥಾನದ ಇಬ್ಬರು ವ್ಯಕ್ತಿಗಳು ಎಸ್‌ಯುವಿಯೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಹರಿಯಾಣದ ನುಹ್‌ನಲ್ಲಿ ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರೆಂಬ ಶಂಕೆಯ ಮೇರೆಗೆ ಗೋರಕ್ಷಣೆಯ ಹೆಸರಿನ ಗೂಂಡಾಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ.

ಈ ಪ್ರಕರಣದಲ್ಲಿ ಬಜರಂಗದಳದ ಸದಸ್ಯ ಮೋನು ಮಾನೇಸರ್ ಸೇರಿದಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಭಿವಾನಿ ಜಿಲ್ಲೆಯಲ್ಲಿ ಇಬ್ಬರು ಮುಸ್ಲಿಮರ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಸಂಸ್ಥೆ ನಿರ್ಲಕ್ಷ್ಯ ತಾಳಿದೆ ಎಂಬ ಆರೋಪಗಳನ್ನು ಪರಿಶೀಲಿಸಲು ಹರಿಯಾಣ ಪೊಲೀಸರು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ.

ಇದನ್ನೂ ಓದಿರಿ: ಹರಿರ್ಯಾಣ- ರಾಜಸ್ಥಾನ ಗಡಿ: ಇಬ್ಬರು ಮುಸ್ಲಿಮರನ್ನು ಜೀವಂತವಾಗಿ ಸುಟ್ಟ ದುಷ್ಕರ್ಮಿಗಳು; ಸ್ಥಳೀಯರಲ್ಲಿ ಭೀತಿ

ನಾಸಿರ್ ಮತ್ತು ಜುನೈದ್ ಅವರನ್ನು ಅಪಹರಿಸಿದ ನಂತರ ಆರೋಪಿಗಳು ಪೊಲೀಸರನ್ನು ಭೇಟಿ ನೀಡಿದ್ದಾರೆ ಎಂಬ ಅಂಶವನ್ನು ಗಂಭೀರವಾಗಿ ರಾಜಸ್ಥಾನ ಪೊಲೀಸರು ಪರಿಗಣಿಸಿದ್ದಾರೆ. ‘ಅಪರಾಧ ತನಿಖಾ ಸಂಸ್ಥೆ ಪೊಲೀಸ್ ಠಾಣೆ’ಯ ಸಮೀಪವಿರುವ ಎಲ್ಲಾ ಸಂಸ್ಥೆಗಳ ಸಿಸಿಟಿವಿ ದೃಶ್ಯಗಳನ್ನು ರಾಜಸ್ಥಾನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆದರೆ, ಈ ಆರೋಪ ನಿರಾಧಾರ ಎಂದು ನುಹ್ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ತಿಳಿಸಿದ್ದಾರೆ. ಆರೋಪಗಳನ್ನು ಪರಿಶೀಲಿಸಲು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಉಷಾ ಕುಂದು ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

“ಅಪರಾಧ ತನಿಖಾ ಸಂಸ್ಥೆಯ ಪಾತ್ರದ ಕುರಿತು ರಾಜಸ್ಥಾನ ಪೊಲೀಸರ ವರದಿ ಏನು ತಿಳಿಸುತ್ತಿದೆ ಎಂದು ತಿಳಿಯಲು ನಾನು ಕಾಯುತ್ತಿದ್ದೇನೆ. ನಮ್ಮ ಪೊಲೀಸರು ಭಾಗಿಯಾಗಿರುವುದು ಕಂಡುಬಂದರೆ, ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...