Homeಕರ್ನಾಟಕಎನ್‌ಪಿಎಸ್‌ ನೌಕರರ ಮೇಲೆ ಸರ್ಕಾರಿ ನೌಕರರ ಸಂಘದಿಂದ ಹಲ್ಲೆ; ಷಡಕ್ಷರಿ ಮೇಲೆ ಗಂಭೀರ ಆರೋಪ

ಎನ್‌ಪಿಎಸ್‌ ನೌಕರರ ಮೇಲೆ ಸರ್ಕಾರಿ ನೌಕರರ ಸಂಘದಿಂದ ಹಲ್ಲೆ; ಷಡಕ್ಷರಿ ಮೇಲೆ ಗಂಭೀರ ಆರೋಪ

ಎನ್‌ಪಿಎಸ್ ನೌಕರರನ್ನು ಮಾತುಕತೆಗೆ ಕರೆಸಿ, ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿದೆ.

- Advertisement -
- Advertisement -

ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಸಂಬಂಧ ಹಾಗೂ ವೇತನ ಪರಿಷ್ಕರಣೆ ವಿಚಾರವಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಕರೆದಿದ್ದ ತುರ್ತು ಸಭೆಯಲ್ಲಿ ಯಾವುದೇ ಚರ್ಚೆಗಳನ್ನು ನಡೆಸದೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿದ ಎನ್‌ಪಿಎಸ್‌ ನೌಕರರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿದೆ.

ಸಿ.ಎಸ್.ಷಡಕ್ಷರಿಯವರು ಕೈಗೊಂಡ ಏಕಪಕ್ಷೀಯ ನಿರ್ಣಯವನ್ನು ವಿರೋಧಿಸಿದ ‘ಎನ್.ಪಿ.ಎಸ್. (ನೂತನ ಪಿಂಚಣಿ ಯೋಜನೆ) ನೌಕರರ ಸಂಘ’ದ ಸದಸ್ಯರ ಮೇಲೆ ಸರ್ಕಾರಿ ನೌಕರರ ಸಂಘದ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಎನ್‌ಪಿಎಸ್ ಟಿ-ಶರ್ಟ್ ಧರಿಸಿದ್ದವರನ್ನು ಗುರಿಯಾಗಿಸಿಕೊಂಡು ಹೊಡೆಯಲಾಗಿದೆ, ಮಹಿಳಾ ನೌಕರರನ್ನೂ ನಿಂದಿಸಲಾಗಿದೆ ಎಂಬ ಗುರುತರ ಆರೋಪ ಕೇಳಿಬಂದಿದೆ.

ಎನ್.ಪಿ.ಎಸ್. ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ್ ಹಾಗೂ ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡರ ನೇತೃತ್ವದಲ್ಲಿ ನೌಕರರ ಸಂಘದ ದ್ವಾರದಲ್ಲಿ ಎನ್.ಪಿ.ಎಸ್. ನೌಕರರು ಕೆಲಕಾಲ ಪ್ರತಿಭಟನೆಯನ್ನೂ ನಡೆಸಿದ್ದಾರೆ.

ಇದೇ ವೇಳೆ ನಿಂಗೇಗೌಡ, ಶಾಂತರಾಮ್ ಅವರು ಷಡಕ್ಷರಿ ಮತ್ತು ಅವರ ತಂಡದಿಂದಾದ ದೌರ್ಜನ್ಯವನ್ನು ಖಂಡಿಸಿದ್ದಾರೆ. ಪೊಲೀಸರು ಮಧ್ಯೆ ಪ್ರವೇಶಿಸಿ ಮನವೊಲಿಸಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿರುವ ಘಟನೆಯೂ ನಡೆದಿದೆ.

ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರಾದ ಶಾಂತರಾಮ್‌ ಅವರು ‘ನಾನುಗೌರಿ.ಕಾಂ’ ಜೊತೆಯಲ್ಲಿ ಮಾತನಾಡಿ ಘಟನೆಯ ವಿವರ ನೀಡಿದರು.

“ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಕ್ಷರಿಯವರು ಮಾರ್ಚ್ 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿದ್ದರು. ಅದಾದ ನಂತರ ಎನ್‌ಪಿಎಸ್ ಹೋರಾಟವನ್ನು ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಿದ್ದರು. 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನೂ ನೀಡಿದ್ದರು. ಆನಂತರ ಕೇಂದ್ರ ಮಾದರಿ ಕಾಣೆಯಾಗಿ ರಾಜ್ಯ ಮಾದರಿಯಾಯಿತು. ಯೂಟರ್ನ್ ತೆಗೆದುಕೊಂಡರು. ನವೆಂಬರ್‌ನಲ್ಲಿ ಹೇಗೋ ವೇತನ ಆಯೋಗ ರಚನೆಯಾಯಿತು. ಏಳನೇ ವೇತನ ಆಯೋಗವನ್ನು ಈ ಬಜೆಟ್‌ನಲ್ಲಿಯೇ ಜಾರಿ ಮಾಡುವುದಾಗಿ ಭರವಸೆಯನ್ನು ಷಡಕ್ಷರಿ ನೀಡಿದ್ದರು. ಒಂದು ರೂಪಾಯಿಯನ್ನೂ ಸರ್ಕಾರ ಈ ಬಜೆಟ್‌ನಲ್ಲಿ ಮೀಸಲಿಟ್ಟಿಲ್ಲ. ವೇತನ ಆಯೋಗ ಆದಮೇಲೆ ಬಜೆಟ್‌ನಲ್ಲಿ ಹಣ ಎತ್ತಿಡಬೇಕಿತ್ತಲ್ಲವೇ? ಅದಾಗಲಿಲ್ಲ. ಕೊಟ್ಟ ಮಾತಿಗೆ ತಪ್ಪಿದ್ದರಿಂದ ಅದನ್ನು ಮುಚ್ಚಿಕೊಳ್ಳುವುದಕ್ಕಾಗಿ, ಹೋರಾಟಕ್ಕೆ ಕರೆ ನೀಡುವುದಾಗಿ ನಮ್ಮೆನ್ನೆಲ್ಲ ಷಡಕ್ಷರಿಯವರು ಇಂದು ಸಭೆಗೆ ಕರೆದಿದ್ದರು. ಈ ವೇಳೆ ಹಲ್ಲೆ ನಡೆಸಲಾಗಿದೆ” ಎಂದು ಶಾಂತರಾಮ್ ತಿಳಿಸಿದರು.

“ಎನ್‌ಪಿಎಸ್ ನೌಕರರ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದೆವು. ಸರ್ಕಾರಿ ನೌಕರರ ಸಂಘವು ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆ ಕೊಡಬೇಕು. ಆದೇಶ ಆಗುವವರೆಗೂ ಹೋರಾಟವನ್ನು ವಾಪಸ್‌ ತೆಗೆದುಕೊಳ್ಳಬಾರದು ಎಂದು ಬೇಡಿಕೆಯನ್ನು ನಾವು ಇಟ್ಟೆವು. ಆದರೆ ಅವರು ಹಾರಿಕೆಯ ಉತ್ತರ ಕೊಟ್ಟರು. ಚರ್ಚೆ ಮಾಡಲು ಅವಕಾಶ ನೀಡದೆ ತಮ್ಮ ಬೆಂಬಲಿಗರಿಂದ ತಳ್ಳಾಡಿಸಿ, ಹಲ್ಲೆ ಮಾಡಿಸಿ ಹೊರಗೆ ದೂಡಿದರು” ಎಂದು ಬೇಸರ ವ್ಯಕ್ತಪಡಿಸಿದರು.

“ಸರ್ಕಾರಿ ನೌಕರರ ಸಂಘದ ಮುಂದಿನ ನಡೆಯೇನು ಎಂಬುದನ್ನು ಗಮನಿಸಿ ಎನ್‌ಪಿಎಸ್ ನೌಕರರ ಸಂಘ ನಿರ್ಧಾರ ಕೈಗೊಳ್ಳಲಿದೆ. ಈ ಕುರಿತು ಸಭೆ ನಡೆಸಲಾಗುವುದು. ಅಧ್ಯಕ್ಷರ ಮುಂದೆಯೇ ಗೂಂಡಾಗಳು ಹಲ್ಲೆ ನಡೆಸುತ್ತಿರುವಾಗಲೂ ಅವರು ಮಧ್ಯ ಪ್ರವೇಶಿಸಲಿಲ್ಲ. ಎಲ್ಲರಿಗೂ ಮಾತನಾಡಲು ಅವಕಾಶ ಕೊಡಿಸುತ್ತೇನೆ ಎಂಬ ಮಾತನ್ನೂ ಹೇಳದೆ ಹೊರಗೆ ದಬ್ಬಲಾಯಿತು” ಎಂದು ವಿಷಾದಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿರುವ ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ ಅವರು, “ಷಡಕ್ಷರಿಯವರು ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ನಾವು ಈಗಾಗಲೇ ಈ ನಿರ್ಣಯಗಳನ್ನು ಮಂಡಿಸಿದ್ದೇವೆ. ಎಲ್ಲರಿಗೂ ಒಪ್ಪಿಗೆಯೇ ಎಂದು ಕೇಳಿದರು. ಚರ್ಚೆ ಮಾಡಲು ಅವಕಾಶ ನೀಡಿ ಎಂದು ಒತ್ತಾಯಿಸಿದೆವು. ನೀವು ಕೊಟ್ಟ ಭರವಸೆ ಈಡೇರಿಲ್ಲ ಎಂದೆವು. ಆದೇಶ ಆಗುವವರೆಗೂ ಈ ಹೋರಾಟ ಮುಂದುವರಿಯುತ್ತದೆ ಎಂದು ನಾವು ಹೇಳಲು ಪ್ರಯತ್ನಪಟ್ಟೆವು. ಎಲ್ಲ ಎನ್‌ಪಿಎಸ್‌ ನೌಕರರ ಮೇಲೆ ಹಲ್ಲೆ ನಡೆಯಿತು. ಇದೊಂದು ಪೂರ್ವ ನಿಯೋಜಿತ ಕೃತ್ಯ. ಇದನ್ನು ಸಮಸ್ತ ಸರ್ಕಾರಿ ನೌಕರರು ಖಂಡಿಸುತ್ತೇವೆ. ಎನ್‌ಪಿಎಸ್‌ ನೌಕರರ ಹೋರಾಟದ ವಿರುದ್ಧ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರೂಪಿಸಿರುವ ಸಂಚಿದು. ಇದಕ್ಕೆ ನಾವು ಧಿಕ್ಕಾರ ಕೂಗುತ್ತೇವೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...