Homeಕರ್ನಾಟಕಕಾರ್ಯಕ್ರಮಕ್ಕೆ ತಡವಾಗಿ ಬಂದ ಸಿಎಂ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್

ಕಾರ್ಯಕ್ರಮಕ್ಕೆ ತಡವಾಗಿ ಬಂದ ಸಿಎಂ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್

- Advertisement -
- Advertisement -

ಮಂಗಳವಾರ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆಯಲ್ಲಿ (ಕೆಎಸ್‌ಎಲ್‌ಟಿಎ) ನಡೆದ ಸಮಾರಂಭದಲ್ಲಿ ಟೆನಿಸ್ ದಿಗ್ಗಜ ಬೋನ್ ಬೋರ್ಗ್ ಅವರು ಸನ್ಮಾನ ಸ್ವೀಕರಿಸಲು ನಿರಾಕರಿಸಿದ್ದಾರೆ. ಏಕೆಂದರೆ ಈ ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದೂವರೆ ಗಂಟೆ ತಡವಾಗಿ ಬಂದಿದ್ದರು. ಹಾಗಾಗಿ ಸಮಯಕ್ಕೆ ಹೆಚ್ಚು ಮಹತ್ವ ಕೊಡುವ ಬೋರ್ಗ್ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದರು.

ಹನ್ನೊಂದು ಗ್ರಾನ್‌ ಸ್ಲಾಮ್ ಪ್ರಶಸ್ತಿಗಳ ವಿಜೇತ, ಸ್ವೀಡನ್ ದೇಶದ ಬೋರ್ಗ್ ಅವರ ಪುತ್ರ ಲಿಯೊ ಬೋರ್ಗ್, ಕೆಎಸ್‌ಎಲ್‌ಟಿಎ ಕೋರ್ಟ್‌ನಲ್ಲಿ ನಡೆಯುತ್ತಿರುವ ಬೆಂಗಳೂರು ಓಪನ್ ಟೆನಿಸ್ ಟೂರ್ನಿಯಲ್ಲಿ ಭಾಗವಹಿಸಿದ್ದಾರೆ. ಮಗನ ಆಟ ನೋಡಲು ಬೋರ್ಗ್ ಬೆಂಗಳೂರಿಗೆ ಬಂದಿದ್ದಾರೆ.

ಮಂಗಳವಾರ ಬೆಂಗಳೂರಿನ ಕೆಎಸ್‌ಎಲ್‌ಟಿಎ ಕೋರ್ಟ್‌ನಲ್ಲಿ ಭಾರತದ ಮಾಜಿ ಆಟಗಾರ ವಿಜಯ್ ಅಮೃತ್‌ರಾಜಿ ಮತ್ತು ಬೋರ್ಗ್ ಅವರನ್ನು ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬೆಳಿಗ್ಗೆ 9.30ಕ್ಕೆ ಏರ್ಪಡಿಸಲಾಗಿತ್ತು. ಮುಖ್ಯಮಂತ್ರಿ ಬರುವುದು ತಡವಾದದ್ದಕ್ಕೆ ಸಮಾರಂಭವನ್ನು 10.15ಕ್ಕೆ ಮುಂದೂಡಲಾಯಿತು. ಆದರೆ ಸಿಎಂ ಬೊಮ್ಮಾಯಿ ಅವರು 11 ಗಂಟೆಯಾದರೂ ಬರಲಿಲ್ಲ ಎನ್ನುವ ಕಾರಣಕ್ಕೆ ಕಾರ್ಯಕ್ರಮವೂ ಆರಂಭವಾಗಲಿಲ್ಲ.

ಇದನ್ನೂ ಓದಿ:ಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

ಇತ್ತ ಬೋರ್ಗ್ ಅವರ ಪುತ್ರ ಲಿಯೊ ಅವರ ಪಂದ್ಯ ಬೆಳಿಗ್ಗೆ 11ಕ್ಕೆ ನಿಗದಿಯಾಗಿತ್ತು. ಮಗನ ಆಟ ನೋಡಲು ಬೋರ್ಗ್ ಅವರು ಗ್ಯಾಲರಿಯಲ್ಲಿ ಕುಳಿತುಕೊಂಡರು. ಪಂದ್ಯ ಶುರುವಾಗಿ ಕೆಲಹೊತ್ತಿನ ಬಳಿಕ ಬೊಮ್ಮಾಯಿ ಅವರು ಬಂದರು. ಮುಖ್ಯಮಂತ್ರಿ ಬಂದ ವಿಷಯವನ್ನು ಬೋರ್ಗ್ ಅವರ ಗಮನಕ್ಕೆ ತರಲಾಯಿತು ಆದರೆ ಬೋರ್ಗ್ ಅವರು ಪಂದ್ಯ ಮುಗಿದ ಬಳಿಕವಷ್ಟೇ ಬರುವುದಾಗಿ ಹೇಳಿದರು. ಇದರಿಂದ ಆಯೋಜಕರು ಸಮಾರಂಭವನ್ನು ರದ್ದುಗೊಳಿಸಿದರು.

‘ಬೇರೆ ಕಾರ್ಯಕ್ರಮಗಳು ಇದ್ದ ಕಾರಣ ಮುಖ್ಯಮಂತ್ರಿ ತಡವಾಗಿ ಬಂದರು’ ಎಂದು ಕಾರ್ಯಕ್ರಮದ ಸಂಘಟನಾ ಸಮಿತಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

”ಮಗನ ಪಂದ್ಯದ ವೀಕ್ಷಣೆಯನ್ನು ಅರ್ಧದಲ್ಲೇ ಬಿಟ್ಟು ಬರಲು ಬೋರ್ಗ್  ಒಪ್ಪಲಿಲ್ಲ ಎನ್ನುವುದನ್ನು ಮುಖ್ಯಮಂತ್ರಿಗೆ ತಿಳಿಸಿದೆವು. ಪರಿಸ್ಥಿತಿಯನ್ನು ಕ್ರೀಡಾ ಮನೋಭಾವದಿಂದಲೇ ಸ್ವೀಕರಿಸಿದ ಬೊಮ್ಮಾಯಿ ಅವರು ಕೆಲಹೊತ್ತು ಗ್ಯಾಲರಿಯಲ್ಲಿ ಕುಳಿತು ಪಂದ್ಯ ವೀಕ್ಷಿಸಿ ಅಲ್ಲಿಂದ ತೆರಳಿದರು” ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಮಯಕ್ಕೆ ಬದ್ಧರಾಗಿರುವುದು ಕಷ್ಟ ಆದರೆ ಬೋರ್ಗ್ ಯಾವುದಕ್ಕೂ ಕಾಯುವವರಲ್ಲ, ಅವರು ಈ ಹಿಂದಿನಿಂದಲೂ ಇದನ್ನು ರೂಢಿಸಿಕೊಂಡು ಬಂದಿದ್ದಾರೆ. ಬೋರ್ಗ್ ನಲವತ್ತು ವರ್ಷಗಳ ಹಿಂದಿನಿಂದಲೂ ಸಮಯಕ್ಕೆ ಬೆಲೆ ಕೊಡುವುದನ್ನು ಪಾಲಿಸಿಕೊಂಡುಬಂದಿದ್ದು, ಇದೀಗ ಈ ಸಮಾರಂಭದಲ್ಲಿ ಮತ್ತೆ ಅದು ಕಂಡುಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...