Homeಕರ್ನಾಟಕಕಾರ್ಯಕ್ರಮಕ್ಕೆ ತಡವಾಗಿ ಬಂದ ಸಿಎಂ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್

ಕಾರ್ಯಕ್ರಮಕ್ಕೆ ತಡವಾಗಿ ಬಂದ ಸಿಎಂ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್

- Advertisement -
- Advertisement -

ಮಂಗಳವಾರ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆಯಲ್ಲಿ (ಕೆಎಸ್‌ಎಲ್‌ಟಿಎ) ನಡೆದ ಸಮಾರಂಭದಲ್ಲಿ ಟೆನಿಸ್ ದಿಗ್ಗಜ ಬೋನ್ ಬೋರ್ಗ್ ಅವರು ಸನ್ಮಾನ ಸ್ವೀಕರಿಸಲು ನಿರಾಕರಿಸಿದ್ದಾರೆ. ಏಕೆಂದರೆ ಈ ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದೂವರೆ ಗಂಟೆ ತಡವಾಗಿ ಬಂದಿದ್ದರು. ಹಾಗಾಗಿ ಸಮಯಕ್ಕೆ ಹೆಚ್ಚು ಮಹತ್ವ ಕೊಡುವ ಬೋರ್ಗ್ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದರು.

ಹನ್ನೊಂದು ಗ್ರಾನ್‌ ಸ್ಲಾಮ್ ಪ್ರಶಸ್ತಿಗಳ ವಿಜೇತ, ಸ್ವೀಡನ್ ದೇಶದ ಬೋರ್ಗ್ ಅವರ ಪುತ್ರ ಲಿಯೊ ಬೋರ್ಗ್, ಕೆಎಸ್‌ಎಲ್‌ಟಿಎ ಕೋರ್ಟ್‌ನಲ್ಲಿ ನಡೆಯುತ್ತಿರುವ ಬೆಂಗಳೂರು ಓಪನ್ ಟೆನಿಸ್ ಟೂರ್ನಿಯಲ್ಲಿ ಭಾಗವಹಿಸಿದ್ದಾರೆ. ಮಗನ ಆಟ ನೋಡಲು ಬೋರ್ಗ್ ಬೆಂಗಳೂರಿಗೆ ಬಂದಿದ್ದಾರೆ.

ಮಂಗಳವಾರ ಬೆಂಗಳೂರಿನ ಕೆಎಸ್‌ಎಲ್‌ಟಿಎ ಕೋರ್ಟ್‌ನಲ್ಲಿ ಭಾರತದ ಮಾಜಿ ಆಟಗಾರ ವಿಜಯ್ ಅಮೃತ್‌ರಾಜಿ ಮತ್ತು ಬೋರ್ಗ್ ಅವರನ್ನು ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಬೆಳಿಗ್ಗೆ 9.30ಕ್ಕೆ ಏರ್ಪಡಿಸಲಾಗಿತ್ತು. ಮುಖ್ಯಮಂತ್ರಿ ಬರುವುದು ತಡವಾದದ್ದಕ್ಕೆ ಸಮಾರಂಭವನ್ನು 10.15ಕ್ಕೆ ಮುಂದೂಡಲಾಯಿತು. ಆದರೆ ಸಿಎಂ ಬೊಮ್ಮಾಯಿ ಅವರು 11 ಗಂಟೆಯಾದರೂ ಬರಲಿಲ್ಲ ಎನ್ನುವ ಕಾರಣಕ್ಕೆ ಕಾರ್ಯಕ್ರಮವೂ ಆರಂಭವಾಗಲಿಲ್ಲ.

ಇದನ್ನೂ ಓದಿ:ಬೊಮ್ಮಾಯಿ ಘೋಷಿಸಿದ 775 ಕೋಟಿ ರೂ ಅನುದಾನ: ಫ್ರೀಡಂ ಪಾರ್ಕ್‌ನಲ್ಲಿ ನಿಲ್ಲದ ಹೋರಾಟ

ಇತ್ತ ಬೋರ್ಗ್ ಅವರ ಪುತ್ರ ಲಿಯೊ ಅವರ ಪಂದ್ಯ ಬೆಳಿಗ್ಗೆ 11ಕ್ಕೆ ನಿಗದಿಯಾಗಿತ್ತು. ಮಗನ ಆಟ ನೋಡಲು ಬೋರ್ಗ್ ಅವರು ಗ್ಯಾಲರಿಯಲ್ಲಿ ಕುಳಿತುಕೊಂಡರು. ಪಂದ್ಯ ಶುರುವಾಗಿ ಕೆಲಹೊತ್ತಿನ ಬಳಿಕ ಬೊಮ್ಮಾಯಿ ಅವರು ಬಂದರು. ಮುಖ್ಯಮಂತ್ರಿ ಬಂದ ವಿಷಯವನ್ನು ಬೋರ್ಗ್ ಅವರ ಗಮನಕ್ಕೆ ತರಲಾಯಿತು ಆದರೆ ಬೋರ್ಗ್ ಅವರು ಪಂದ್ಯ ಮುಗಿದ ಬಳಿಕವಷ್ಟೇ ಬರುವುದಾಗಿ ಹೇಳಿದರು. ಇದರಿಂದ ಆಯೋಜಕರು ಸಮಾರಂಭವನ್ನು ರದ್ದುಗೊಳಿಸಿದರು.

‘ಬೇರೆ ಕಾರ್ಯಕ್ರಮಗಳು ಇದ್ದ ಕಾರಣ ಮುಖ್ಯಮಂತ್ರಿ ತಡವಾಗಿ ಬಂದರು’ ಎಂದು ಕಾರ್ಯಕ್ರಮದ ಸಂಘಟನಾ ಸಮಿತಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

”ಮಗನ ಪಂದ್ಯದ ವೀಕ್ಷಣೆಯನ್ನು ಅರ್ಧದಲ್ಲೇ ಬಿಟ್ಟು ಬರಲು ಬೋರ್ಗ್  ಒಪ್ಪಲಿಲ್ಲ ಎನ್ನುವುದನ್ನು ಮುಖ್ಯಮಂತ್ರಿಗೆ ತಿಳಿಸಿದೆವು. ಪರಿಸ್ಥಿತಿಯನ್ನು ಕ್ರೀಡಾ ಮನೋಭಾವದಿಂದಲೇ ಸ್ವೀಕರಿಸಿದ ಬೊಮ್ಮಾಯಿ ಅವರು ಕೆಲಹೊತ್ತು ಗ್ಯಾಲರಿಯಲ್ಲಿ ಕುಳಿತು ಪಂದ್ಯ ವೀಕ್ಷಿಸಿ ಅಲ್ಲಿಂದ ತೆರಳಿದರು” ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಮಯಕ್ಕೆ ಬದ್ಧರಾಗಿರುವುದು ಕಷ್ಟ ಆದರೆ ಬೋರ್ಗ್ ಯಾವುದಕ್ಕೂ ಕಾಯುವವರಲ್ಲ, ಅವರು ಈ ಹಿಂದಿನಿಂದಲೂ ಇದನ್ನು ರೂಢಿಸಿಕೊಂಡು ಬಂದಿದ್ದಾರೆ. ಬೋರ್ಗ್ ನಲವತ್ತು ವರ್ಷಗಳ ಹಿಂದಿನಿಂದಲೂ ಸಮಯಕ್ಕೆ ಬೆಲೆ ಕೊಡುವುದನ್ನು ಪಾಲಿಸಿಕೊಂಡುಬಂದಿದ್ದು, ಇದೀಗ ಈ ಸಮಾರಂಭದಲ್ಲಿ ಮತ್ತೆ ಅದು ಕಂಡುಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...