Homeಮುಖಪುಟಸ್ನೂಪಿಂಗ್‌ ಕೇಸ್: ಡಿಸಿಎಂ ಸಿಸೋಡಿಯಾ ವಿಚಾರಣೆಗೆ ಗೃಹ ಸಚಿವಾಲಯ ಅನುಮತಿ

ಸ್ನೂಪಿಂಗ್‌ ಕೇಸ್: ಡಿಸಿಎಂ ಸಿಸೋಡಿಯಾ ವಿಚಾರಣೆಗೆ ಗೃಹ ಸಚಿವಾಲಯ ಅನುಮತಿ

- Advertisement -
- Advertisement -

ಗೃಹ ವ್ಯವಹಾರಗಳ ಸಚಿವಾಲಯವು ಫೀಡ್‌ಬ್ಯಾಕ್‌ ಯೂನಿಟ್ ಸ್ನೂಪಿಂಗ್ ಪ್ರಕರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಲು  ಅನುಮತಿ ನೀಡಿದೆ. ಮದ್ಯ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಸಿಬಿಐನ ವಿಚಾರಣೆಯಲ್ಲಿರುವುದರಿಂದ ಈ ಬೆಳವಣಿಗೆಯಾಗಿದೆ.

ಆಮ್ ಆದ್ಮಿ ಪಕ್ಷ 2015ರಲ್ಲಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜಕೀಯ ಗುಪ್ತಚರ ಸಂಗ್ರಹಣೆಗಾಗಿ ಫೀಡ್‌ಬ್ಯಾಕ್‌ ಯೂನಿಟ್‌ನ್ನು ರಚಿಸಿತು. ಈ ಸ್ನೂಪಿಂಗ್ ಯೂನಿಟ್‌ಗೆ ಮನೀಶ್ ಸಿಸೋಡಿಯಾ ಅವರು ಮುಖ್ಯಸ್ಥರಾಗಿದ್ದರು ಎಂದು ಸಿಬಿಐ ವರದಿ ಹೇಳಿದೆ ಎಂದು ಹೇಳುವ ಸಿಬಿಐ ವರದಿಯಲ್ಲಿ ಸಿಸೋಡಿಯಾ ವಿರುದ್ಧ ಸ್ನೂಪಿಂಗ್ ಆರೋಪಗಳನ್ನು ಮಾಡಲಾಗಿದೆ.

ಈ ಆರೋಪಗಳನ್ನು ಈ ಹಿಂದೆಯೇ ತಳ್ಳಿ ಹಾಕಿರುವ ಎಎಪಿ, ”ಇಲ್ಲಿಯವರೆಗೆ, ಸಿಬಿಐ, ಇಡಿ ಮತ್ತು ದೆಹಲಿ ಪೊಲೀಸರು ನಮ್ಮ ವಿರುದ್ಧ 163 ಪ್ರಕರಣಗಳನ್ನು ದಾಖಲಿಸಿದ್ದಾರೆ. ಆದರೆ, ಬಿಜೆಪಿಗೆ ಯಾವ ಪ್ರಕರಣವನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ. ಈ ಪ್ರಕರಣಗಳಲ್ಲಿ ಸುಮಾರು 134 ಪ್ರಕರಣಗಳನ್ನು ನ್ಯಾಯಾಲಯಗಳು ವಜಾಗೊಳಿಸಿದೆ ಮತ್ತು ಉಳಿದ ಪ್ರಕರಣಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರಕ್ಕೆ ಯಾವುದೇ ಸಾಕ್ಷ್ಯಾಧಾರ ಒದಗಿಸಲು ಸಾಧ್ಯವಾಗಿಲ್ಲ. ಈ ಪ್ರಕರಣಗಳು ರಾಜಕೀಯ ಪ್ರೇರಿತವಾಗಿವೆ ಎಂದು ಹೇಳುವ ಮೂಲಕ ಆರೋಪಗಳನ್ನು ದೆಹಲಿ ಸರಕಾರ ನಿರಾಕರಿಸಿತ್ತು.

ಇದನ್ನೂ ಓದಿ: ‘ಮತ್ತೆ ದಾಳಿ ನಡೆಸಿದ ಸಿಬಿಐ’: ದೆಹಲಿ ಡಿಸಿಎಂ ಸಿಸೋಡಿಯಾ ಆರೋಪ

ಸಿಸೋಡಿಯಾ ವಿರುದ್ಧ ಕಾನೂನು ಕ್ರಮಕ್ಕೆ ಸಿಬಿಐ ಕೋರಿಕೆಯನ್ನು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅನುಮೋದಿಸಿ, ಆ ಮನವಿಯನ್ನು ಗೃಹ ಸಚಿವಾಲಯಕ್ಕೆ ರವಾನಿಸಿದರು. ಸೆಪ್ಟೆಂಬರ್ 29, 2015ರ ಕ್ಯಾಬಿನೆಟ್ ನಿರ್ಣಯದ ಮೂಲಕ ಫೀಡ್‌ಬ್ಯಾಕ್‌ ಯೂನಿಟ್ ರಚಿಸಲಾಗಿದೆ. ಸಿಸೋಡಿಯಾ ನೇತೃತ್ವದ ಈ ಘಟಕವು ಯಾವುದೇ ಶಾಸಕಾಂಗ ಅಥವಾ ನ್ಯಾಯಾಂಗ ಕಾನೂನುಬದ್ಧತೆಯನ್ನು ಹೊಂದಿಲ್ಲ ಆದರೆ ರಾಜಕಾರಣಿಗಳ ಮೇಲೆ ಕಣ್ಣಿಡುತ್ತಿದ್ದು, ಗೂಢಚಾರಿಕೆ ಮಾಡುತ್ತಿದೆ ಎಂದು ಸಿಬಿಐ ತನ್ನ ವರದಿಯಲ್ಲಿ ಹೇಳಿದೆ.

ದೆಹಲಿ ಸರ್ಕಾರದ ವಿಜಿಲೆನ್ಸ್ ವಿಭಾಗದ ಮುಖ್ಯಸ್ಥರಾಗಿರುವ ಸಿಸೋಡಿಯಾ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ಅನುಮತಿ ಕೋರಿತ್ತು, ಅದರ ಅಡಿಯಲ್ಲಿ 2015 ರಲ್ಲಿ ಘಟಕವನ್ನು ‘ಹೆಚ್ಚುವರಿ ಸಾಂವಿಧಾನಿಕ-ಹೆಚ್ಚುವರಿ ನ್ಯಾಯಾಂಗ ಗುಪ್ತಚರ ಸಂಸ್ಥೆ’ ಎಂದು ರಹಸ್ಯವಾಗಿ ರಚಿಸಲಾಗಿದೆ ಎಂದು ಸಿಬಿಐ ಆರೋಪಿಸಿತ್ತು. ಇದೀಗ ಗೃಹ ವ್ಯವಹಾರಗಳ ಸಚಿವಾಲಯವು ಸಿಸೋಡಿಯಾ ಅವರನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿ ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಸಿಸೋಡಿಯಾ ಅವರು, ”ನಿಮ್ಮ ಪ್ರತಿಸ್ಪರ್ಧಿಗಳ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವುದು, ಪ್ರಕರಣಗಳನ್ನು ದಾಖಲಿಸುವುದು ದುರ್ಬಲ ಮತ್ತು ಹೇಡಿತನದ ಸಂಕೇತವಾಗಿದೆ. ಆಮ್ ಆದ್ಮಿ ಪಕ್ಷ ಬೆಳೆದಂತೆ ನಮ್ಮ ವಿರುದ್ಧ ಇನ್ನೂ ಹಲವು ಪ್ರಕರಣಗಳು ದಾಖಲಾಗುತ್ತವೆ” ಎಂದಿದ್ದಾರೆ.

ಏನಿದು ಫೀಡ್‌ಬ್ಯಾಕ್‌ ಯೂನಿಟ್ ಸ್ನೂಪಿಂಗ್ ಪ್ರಕರಣ?

ಆಮ್ ಆದ್ಮಿ ಪಕ್ಷ 2015ರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ದೆಹಲಿಯಲ್ಲಿ ಸರ್ಕಾರ ರಚಿಸಿತು. ಕೆಲದಿನಗಳ ನಂತರದಲ್ಲಿ ಎಎಪಿ ಸರ್ಕಾರವು ವಿವಿಧ “ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು, ಸಂಸ್ಥೆಗಳು ಮತ್ತು ಘಟಕಗಳ” ಕಾರ್ಯನಿರ್ವಹಣೆಯ ಕುರಿತು “ಸಂಬಂಧಿತ ಮತ್ತು ಕ್ರಿಯಾಶೀಲ ಪ್ರತಿಕ್ರಿಯೆ” ಸಂಗ್ರಹಿಸಲು ಮತ್ತು ಅವುಗಳ ಮೇಲೆ ಕಣ್ಗಾವಲಿಡಲು “ಫೀಡ್‌ಬ್ಯಾಕ್‌ ಯೂನಿಟ್“ನ್ನು ರಚಿಸಿತು. ಅದು ಮುಂದೆ ರಾಜಕಾರಣಿಗಳನ್ನು “ಟ್ರ್ಯಾಪ್” ಮಾಡಲು ಬಳಕೆಯಾಗಿದೆ ಎಂದು ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...