Homeದಲಿತ್ ಫೈಲ್ಸ್ಜಾತಿ ತಾರತಮ್ಯ ನಿಷೇಧಿಸಿ ಅಮೆರಿಕದ ಸಿಯಾಟಲ್‌ ಸಿಟಿ ಕೌನ್ಸಿಲ್‌ನಿಂದ ಮಹತ್ವದ ಸುಗ್ರೀವಾಜ್ಞೆ

ಜಾತಿ ತಾರತಮ್ಯ ನಿಷೇಧಿಸಿ ಅಮೆರಿಕದ ಸಿಯಾಟಲ್‌ ಸಿಟಿ ಕೌನ್ಸಿಲ್‌ನಿಂದ ಮಹತ್ವದ ಸುಗ್ರೀವಾಜ್ಞೆ

- Advertisement -
- Advertisement -

ಉತ್ತರ ಅಮೆರಿಕಾದಲ್ಲಿನ ಭಾರತೀಯ ಮೂಲದ ಜನರನ್ನು ದೃಷ್ಟಿಯಲ್ಲಿಟ್ಟುಕೊಂಡು ಮಹತ್ವದ ನಿರ್ಧಾರವನ್ನು ಸಿಯಾಟಲ್ ಸಿಟಿ ಕೌನ್ಸಿಲ್ ಮಂಗಳವಾರ ಕೈಗೊಂಡಿದೆ. ನಗರದಲ್ಲಿ ಜಾತಿ ತಾರತಮ್ಯವನ್ನು ನಿಷೇಧಿಸುವ ಮಹತ್ವದ ಸುಗ್ರೀವಾಜ್ಞೆಯನ್ನು 6-1 ಮತಗಳಿಂದ ಮತ ಅಂತರದಲ್ಲಿ ಅಂಗೀಕರಿಸಲಾದೆ.

ನಗರಸಭೆ ಸದಸ್ಯರಾದ ಕ್ಷಮಾ ಸಾವಂತ್ ಅವರು ಜನವರಿ 24ರಂದು ಸುಗ್ರೀವಾಜ್ಞೆಯನ್ನು ಪ್ರಸ್ತಾಪಿಸಿದ್ದರು. ಸಿಟಿ ಕೌನ್ಸಿಲ್‌ನಲ್ಲಿ ಸುಗ್ರೀವಾಜ್ಞೆಯನ್ನು ಪರಿಚಯಿಸಿದಾಗಿನಿಂದಲೂ ಇದಕ್ಕೆ ಅಮೆರಿಕ ಮತ್ತು ಭಾರತದಲ್ಲಿ ಹೆಚ್ಚಿನ ಬೆಂಬಲ ಸಿಕ್ಕಿದೆ.

ಜನವರಿ 30ರಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಸುಗ್ರೀವಾಜ್ಞೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. “ಯಾವುದೇ ರೂಪದಲ್ಲಿ ಜಾತಿ ತಾರತಮ್ಯವನ್ನು ನಿರ್ಮೂಲನೆ ಮಾಡುವ ಪ್ರಗತಿಪರ ಹೆಜ್ಜೆ ಇದಾಗಿದೆ” ಎಂದು ಬಣ್ಣಿಸಿದ್ದರು.

ಉತ್ತರ ಅಮೆರಿಕದ ಪ್ರಭಾವಿ ಸೌತ್ ಏಷ್ಯನ್ ಬಾರ್ ಅಸೋಸಿಯೇಷನ್ (SABA) ಸಹ 17 ಫೆಬ್ರವರಿ 2023 ರಂದು ಸುಗ್ರೀವಾಜ್ಞೆಗೆ ಬೆಂಬಲವನ್ನು ಸೂಚಿಸಿತು.

“ಇದು ಸಹಜವಾಗಿ, ದೂರಗಾಮಿ ಪರಿಣಾಮಗಳನ್ನು ಹೊಂದಿದೆ. ಎಲ್ಲಾ ಕಂಪನಿಗಳು, ಸರ್ಕಾರಿ ಕಚೇರಿಗಳು ತಮ್ಮ ನೀತಿಗಳಲ್ಲಿ ಜಾತಿಯ ಪ್ರಾತಿನಿಧ್ಯವನ್ನು ಹೊಂದಿರಬೇಕು, ಜಾತಿ ಸಂವೇದನೆಗೆ ತರಬೇತಿ ನಡೆಸಬೇಕು ಮತ್ತು ಯಾವುದೇ ಜಾತಿ ತಾರತಮ್ಯ ಪ್ರಕರಣಗಳ ಬಗ್ಗೆ ನಿಗಾ ವಹಿಸಬೇಕು” ಎಂದು ಜಾತಿ ತುಳಿತಕ್ಕೊಳಗಾದ ಸಮುದಾಯಗಳನ್ನು ಪ್ರತಿನಿಧಿಸುವ ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ (ಎಐಸಿ) ಸದಸ್ಯ ಅನಿಲ್ ವಾಗ್ಡೆ (ಅಮೆರಿಕ) ತಿಳಿಸಿರುವುದಾಗಿ ‘ಸೌಂತ್‌ ಫಸ್ಟ್‌’ ಜಾಲತಾಣ ವರದಿ ಮಾಡಿದೆ.

ಸಿಯಾಟಲ್ ಇಂಡಿಯನ್-ಅಮೆರಿಕನ್ಸ್ (CSAI), ಸಮಾನತೆ ಲ್ಯಾಬ್ಸ್, ಟೆಕ್ಸಾಸ್‌ನ ಅಂಬೇಡ್ಕರ್ ಬೌದ್ಧರ ಸಂಘ, ಬೋಸ್ಟನ್ ಸ್ಟಡಿ ಗ್ರೂಪ್, ಅಂಬೇಡ್ಕರ್ ಕಿಂಗ್ಸ್ ಸ್ಟಡಿ ಸರ್ಕಲ್ ಮತ್ತು ಅಂಬೇಡ್ಕರ್ ಅಸೋಸಿಯೇಷನ್ ಆಫ್ ನಾರ್ತ್ ಅಮೇರಿಕಾ (AANA) ಜೊತೆಯಲ್ಲಿ ಎಐಸಿ ತಂಡವು ನಿರಂತರವಾಗಿ ಕೆಲಸ ಮಾಡಿದೆ. ಅದರ ಫಲವಾಗಿ ಸುಗ್ರಿವಾಜ್ಞೆ ಜಾರಿ ಸಾಧ್ಯವಾಗಿದೆ.

“ಈಗ ಕಾನೂನಿನ ಬಗ್ಗೆ ಅಜ್ಞಾನ ಹೊಂದಿರಬಾರದು. ಯಾವುದೇ ಕಂಪನಿಯು ಜಾತಿ ವಿಚಾರ ಕಾನೂನಿನ ವ್ಯಾಪ್ತಿಗೆ ಒಳಪಟ್ಟಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ನೇಮಕಾತಿಯಲ್ಲಿ ಮತ್ತು ಕೆಲಸದ ಸ್ಥಳಗಳಲ್ಲಿ ಜಾತಿ ತಾರತಮ್ಯ ನಡೆಯುವುದಿಲ್ಲ ಎಂಬುದನ್ನು ಕಂಪನಿಗಳು ಖಚಿತಪಡಿಸಬೇಕು” ಎಂದಿದ್ದಾರೆ.

“ಪ್ರಬುದ್ಧ ಮೇಲ್ಜಾತಿಯ ಜನರೂ ಸೇರಿದಂತೆ ಸಿಖ್, ಮುಸ್ಲಿಂ, ಬೌದ್ಧರು ಮತ್ತು ಹಿಂದೂಗಳು ಈ ಸುಗ್ರೀವಾಜ್ಞೆಯನ್ನು ಬೆಂಬಲಿಸಿದ್ದಾರೆ” ಎಂದು ವಾಗ್ಡೆ ತಿಳಿಸಿದ್ದಾರೆ.

ಅಮೆರಿಕದಲ್ಲಿ ಜಾತಿ ತಾರತಮ್ಯ

ಅಮೆರಿಕದಂತಹ ದೇಶದಲ್ಲಿ ಭಾರತೀಯ ಮೂಲದ ದಲಿತರು, ಅಲ್ಲಿನ ಮೇಲ್ಜಾತಿಗಳಿಂದ ತಾರತಮ್ಯಗಳನ್ನು ಎದುರಿಸುತ್ತಿರುವ ಕುರಿತು ಹಲವಾರು ಪ್ರಕರಣಗಳು ವರದಿಯಾಗಿವೆ.

“ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ” ಎಂದು ಹೇಳಿಕೊಂಡ ಉದ್ಯೋಗಿಗಳ ಒತ್ತಡಕ್ಕೆ ಮಣಿದ ಗೂಗಲ್ ಸಂಸ್ಥೆಯು, ಅಮೆರಿಕ ಮೂಲದ ದಲಿತ ಹೋರಾಟಗಾರ್ತಿ ತೇನ್ಮೋಳಿ ಸೌಂದರರಾಜನ್ ಅವರ ಭಾಷಣವನ್ನು ರದ್ದು ಮಾಡಿದ್ದ ಘಟನೆ ಕಳೆದ ವರ್ಷ ನಡೆದಿತ್ತು.

ಈಕ್ವಾಲಿಟಿ ಲ್ಯಾಬ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿರುವ ತೇನ್ಮೋಳಿ ಅವರು ’ಹಿಂದೂ ಫೋಬಿಕ್’ ಮತ್ತು ’ಹಿಂದೂ ವಿರೋಧಿ’ ಆಗಿದ್ದಾರೆ ಎಂದಿದ್ದ ಗೂಗಲ್‌ನ ಕೆಲವು ಉದ್ಯೋಗಿಗಳು, ಕಂಪನಿಗೆ ಸಾಮೂಹಿಕ ಇಮೇಲ್‌ಗಳನ್ನು ಕಳುಹಿಸಿರುವ ವಿಷಯವನ್ನು ’ವಾಷಿಂಗ್ಟನ್ ಪೋಸ್ಟ್’ ಬಹಿರಂಗಪಡಿಸಿತ್ತು.

ಹಿಂದುತ್ವ ಪರ ಗುಂಪುಗಳ ಅಪಪ್ರಚಾರದಿಂದಾಗಿ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂಬುದೂ ಬೆಳಕಿಗೆ ಬಂದಿತ್ತು. ಗೂಗಲ್‌ನ ಹಿರಿಯ ಮ್ಯಾನೇಜರ್ ತನುಜಾ ಗುಪ್ತಾ ಅವರು ತೇನ್ಮೋಳಿ ಅವರನ್ನು ಭಾಷಣಕ್ಕೆ ಆಹ್ವಾನಿಸಿದ್ದೇ ಅಪರಾಧವಾಗಿಬಿಟ್ಟಿತ್ತು!

ತೇನ್ಮೋಳಿ ಅವರ ಭಾಷಣವನ್ನು ವಿರೋಧಿಸಿರುವ ಗೂಗಲ್ ಉದ್ಯೋಗಿಗಳು, “ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ” ಎಂದುಬಿಟ್ಟದ್ದರು. 8,000 ಜನರಿರುವ ದಕ್ಷಿಣ ಏಷ್ಯಾದ ಉದ್ಯೋಗಿಗಳ ಗುಂಪಿಗೆ ಮೇಲ್ ಹೋಯಿತು ಎಂದು ಹೇಳಿತ್ತು ವಾಷಿಂಗ್‌ಟನ್ ಪೋಸ್ಟ್ ವರದಿ.

ಫೇಸ್‌ಬುಕ್ ಸಂಸ್ಥೆಯ ಸಾಫ್ಟ್‌ವೇರ್ ಇಂಜಿನಿಯರ್ ಆಗಿ, ಸುಮಾರು 450,000 ಡಾಲರ್ ಪ್ಯಾಕೇಜ್‌ನೊಂದಿಗೆ ಸಿದ್ಧಾಂತ್ ಎಂಬ ದಲಿತ ಯುವಕ ಕೆಲಸಕ್ಕೆ ಸೇರುತ್ತಾರೆ. ಅಮೆರಿಕಕ್ಕೆ ತೆರಳಿದ ಅವರಿಗೆ
ಕಹಿ ಅನುಭವವಾಗುತ್ತದೆ. ದಲಿತರು ತಮ್ಮ ಹಿನ್ನೆಲೆಯನ್ನು ವ್ಯಕ್ತಪಡಿಸಲು ಹಿಂಜರೆಯುತ್ತಾರೆ. “ಗುರುತನ್ನು ಹೇಳಿಕೊಳ್ಳುವುದು ಅಪಾಯಕಾರಿ. ಹೆಸರುಗಳನ್ನು ಬದಲಿಸಿಕೊಂಡು ಬದುಕಬೇಕಾಗುತ್ತದೆ” ಎಂಬುದು ಸಿದ್ಧಾಂತ್ ಅನುಭವ.

ಇದನ್ನೂ ಓದಿರಿ: ತೇನ್ಮೋಳಿ ಬಾಷಣ ರದ್ದುಪಡಿಸಿದ ಗೂಗಲ್; ’ಸಾಫ್ಟ್’ ಜಾತಿವಾದಕ್ಕೆ ಮದ್ದೇನು?

ಸಿಸ್ಕೋ ಸಂಸ್ಥೆಯ ಪ್ರಕರಣ ಹೊರಬಂದ ಬಳಿಕ ಅನೇಕ ದಲಿತ ಟೆಕ್ಕಿಗಳು ಹೊರಬಂದು ತಮ್ಮ ಅನುಭವಗಳನ್ನು ಹೇಳಿಕೊಂಡಿದ್ದಾರೆ. ಈಕ್ವಾಲಿಟಿ ಲ್ಯಾಬ್ಸ್ ಸಂಸ್ಥೆಯು (ದಕ್ಷಿಣ ಏಷ್ಯಾದ ನಾಗರಿಕ ಹಕ್ಕುಗಳ ಗುಂಪು) ಗೂಗಲ್, ನೆಟ್‌ಫ್ಲಿಕ್ಸ್, ಅಮೆಜಾನ್, ಫೇಸ್‌ಬುಕ್ ಮೊದಲಾದ ಸಂಸ್ಥೆಗಳ ನೌಕರರು ತಮ್ಮ ಸಹೋದ್ಯೋಗಿಗಳ ವಿರುದ್ಧ ಮಾಡಿದ 250ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಿದೆ ಎಂದು wired.com ವರದಿ ಮಾಡಿದೆ.

“ಹೊರಗಿನವರಿಗೆ ಜಾತಿಯ ಕುಂದುಕೊರತೆಗಳನ್ನು ಗುರುತಿಸುವುದು ಕಷ್ಟ. ಜಾತಿಯು ಅದೃಶ್ಯವಾದದ್ದು ಎಂಬುದೇ ಅತ್ಯಂತ ಅಪಾಯಕಾರಿ ಸಂಗತಿ” ಎಂದು ’ಕಮಿಂಗ್ ಔಟ್ ಆಸ್ ದಲಿತ್’ ಎಂಬ ಆತ್ಮಚರಿತ್ರೆ ಬರೆದ ಲೇಖಕಿ ಯಾಶಿಕಾ ದತ್ ಹೇಳುತ್ತಾರೆ.

“ಜಾತಿ ಅಗೋಚರವಾದದ್ದು, ನಮ್ಮ ಸುತ್ತಲೂ ಅನೇಕ ಸಂಕೇತಗಳು, ರಹಸ್ಯ ಭಾಷೆಗಳು ಅಸ್ತಿತ್ವದಲ್ಲಿವೆ. ವ್ಯಕ್ತಿಯ ಸರ್ ನೇಮ್, ಗ್ರಾಮದ ಬಗ್ಗೆ ಗಮನ ಹರಿಸುವುದೆಲ್ಲ ಜಾತಿಯನ್ನು ಹುಡುಕುವುದಕ್ಕಾಗಿಯಷ್ಟೇ. ಭುಜದ ಮೇಲೆ ತಟ್ಟುವುದು ಸ್ನೇಹಪೂರ್ವಕ ಶುಭಾಶಯವಾಗಿರಬಹುದು ಅಥವಾ ಬ್ರಾಹ್ಮಣರು ಧರಿಸುವ ಜನಿವಾರದ ಅನ್ವೇಷಣೆಯೂ ಆಗಿರಬಹುದು” ಎನ್ನುತ್ತದೆ wired.com ವರದಿ.

ಈ ನಿಟ್ಟಿನಲ್ಲಿ ಸಿಯಾಟಲ್ ಸಿಟಿ ಕೌನ್ಸಿಲ್ ಜಾರಿಗೊಳಿಸಿರುವ ಸುಗ್ರೀವಾಜ್ಞೆ ಮಹತ್ವದ್ದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...