Homeದಲಿತ್ ಫೈಲ್ಸ್ಜಾತಿ ತಾರತಮ್ಯ ನಿಷೇಧಿಸಿ ಅಮೆರಿಕದ ಸಿಯಾಟಲ್‌ ಸಿಟಿ ಕೌನ್ಸಿಲ್‌ನಿಂದ ಮಹತ್ವದ ಸುಗ್ರೀವಾಜ್ಞೆ

ಜಾತಿ ತಾರತಮ್ಯ ನಿಷೇಧಿಸಿ ಅಮೆರಿಕದ ಸಿಯಾಟಲ್‌ ಸಿಟಿ ಕೌನ್ಸಿಲ್‌ನಿಂದ ಮಹತ್ವದ ಸುಗ್ರೀವಾಜ್ಞೆ

- Advertisement -
- Advertisement -

ಉತ್ತರ ಅಮೆರಿಕಾದಲ್ಲಿನ ಭಾರತೀಯ ಮೂಲದ ಜನರನ್ನು ದೃಷ್ಟಿಯಲ್ಲಿಟ್ಟುಕೊಂಡು ಮಹತ್ವದ ನಿರ್ಧಾರವನ್ನು ಸಿಯಾಟಲ್ ಸಿಟಿ ಕೌನ್ಸಿಲ್ ಮಂಗಳವಾರ ಕೈಗೊಂಡಿದೆ. ನಗರದಲ್ಲಿ ಜಾತಿ ತಾರತಮ್ಯವನ್ನು ನಿಷೇಧಿಸುವ ಮಹತ್ವದ ಸುಗ್ರೀವಾಜ್ಞೆಯನ್ನು 6-1 ಮತಗಳಿಂದ ಮತ ಅಂತರದಲ್ಲಿ ಅಂಗೀಕರಿಸಲಾದೆ.

ನಗರಸಭೆ ಸದಸ್ಯರಾದ ಕ್ಷಮಾ ಸಾವಂತ್ ಅವರು ಜನವರಿ 24ರಂದು ಸುಗ್ರೀವಾಜ್ಞೆಯನ್ನು ಪ್ರಸ್ತಾಪಿಸಿದ್ದರು. ಸಿಟಿ ಕೌನ್ಸಿಲ್‌ನಲ್ಲಿ ಸುಗ್ರೀವಾಜ್ಞೆಯನ್ನು ಪರಿಚಯಿಸಿದಾಗಿನಿಂದಲೂ ಇದಕ್ಕೆ ಅಮೆರಿಕ ಮತ್ತು ಭಾರತದಲ್ಲಿ ಹೆಚ್ಚಿನ ಬೆಂಬಲ ಸಿಕ್ಕಿದೆ.

ಜನವರಿ 30ರಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಸುಗ್ರೀವಾಜ್ಞೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. “ಯಾವುದೇ ರೂಪದಲ್ಲಿ ಜಾತಿ ತಾರತಮ್ಯವನ್ನು ನಿರ್ಮೂಲನೆ ಮಾಡುವ ಪ್ರಗತಿಪರ ಹೆಜ್ಜೆ ಇದಾಗಿದೆ” ಎಂದು ಬಣ್ಣಿಸಿದ್ದರು.

ಉತ್ತರ ಅಮೆರಿಕದ ಪ್ರಭಾವಿ ಸೌತ್ ಏಷ್ಯನ್ ಬಾರ್ ಅಸೋಸಿಯೇಷನ್ (SABA) ಸಹ 17 ಫೆಬ್ರವರಿ 2023 ರಂದು ಸುಗ್ರೀವಾಜ್ಞೆಗೆ ಬೆಂಬಲವನ್ನು ಸೂಚಿಸಿತು.

“ಇದು ಸಹಜವಾಗಿ, ದೂರಗಾಮಿ ಪರಿಣಾಮಗಳನ್ನು ಹೊಂದಿದೆ. ಎಲ್ಲಾ ಕಂಪನಿಗಳು, ಸರ್ಕಾರಿ ಕಚೇರಿಗಳು ತಮ್ಮ ನೀತಿಗಳಲ್ಲಿ ಜಾತಿಯ ಪ್ರಾತಿನಿಧ್ಯವನ್ನು ಹೊಂದಿರಬೇಕು, ಜಾತಿ ಸಂವೇದನೆಗೆ ತರಬೇತಿ ನಡೆಸಬೇಕು ಮತ್ತು ಯಾವುದೇ ಜಾತಿ ತಾರತಮ್ಯ ಪ್ರಕರಣಗಳ ಬಗ್ಗೆ ನಿಗಾ ವಹಿಸಬೇಕು” ಎಂದು ಜಾತಿ ತುಳಿತಕ್ಕೊಳಗಾದ ಸಮುದಾಯಗಳನ್ನು ಪ್ರತಿನಿಧಿಸುವ ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ (ಎಐಸಿ) ಸದಸ್ಯ ಅನಿಲ್ ವಾಗ್ಡೆ (ಅಮೆರಿಕ) ತಿಳಿಸಿರುವುದಾಗಿ ‘ಸೌಂತ್‌ ಫಸ್ಟ್‌’ ಜಾಲತಾಣ ವರದಿ ಮಾಡಿದೆ.

ಸಿಯಾಟಲ್ ಇಂಡಿಯನ್-ಅಮೆರಿಕನ್ಸ್ (CSAI), ಸಮಾನತೆ ಲ್ಯಾಬ್ಸ್, ಟೆಕ್ಸಾಸ್‌ನ ಅಂಬೇಡ್ಕರ್ ಬೌದ್ಧರ ಸಂಘ, ಬೋಸ್ಟನ್ ಸ್ಟಡಿ ಗ್ರೂಪ್, ಅಂಬೇಡ್ಕರ್ ಕಿಂಗ್ಸ್ ಸ್ಟಡಿ ಸರ್ಕಲ್ ಮತ್ತು ಅಂಬೇಡ್ಕರ್ ಅಸೋಸಿಯೇಷನ್ ಆಫ್ ನಾರ್ತ್ ಅಮೇರಿಕಾ (AANA) ಜೊತೆಯಲ್ಲಿ ಎಐಸಿ ತಂಡವು ನಿರಂತರವಾಗಿ ಕೆಲಸ ಮಾಡಿದೆ. ಅದರ ಫಲವಾಗಿ ಸುಗ್ರಿವಾಜ್ಞೆ ಜಾರಿ ಸಾಧ್ಯವಾಗಿದೆ.

“ಈಗ ಕಾನೂನಿನ ಬಗ್ಗೆ ಅಜ್ಞಾನ ಹೊಂದಿರಬಾರದು. ಯಾವುದೇ ಕಂಪನಿಯು ಜಾತಿ ವಿಚಾರ ಕಾನೂನಿನ ವ್ಯಾಪ್ತಿಗೆ ಒಳಪಟ್ಟಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ನೇಮಕಾತಿಯಲ್ಲಿ ಮತ್ತು ಕೆಲಸದ ಸ್ಥಳಗಳಲ್ಲಿ ಜಾತಿ ತಾರತಮ್ಯ ನಡೆಯುವುದಿಲ್ಲ ಎಂಬುದನ್ನು ಕಂಪನಿಗಳು ಖಚಿತಪಡಿಸಬೇಕು” ಎಂದಿದ್ದಾರೆ.

“ಪ್ರಬುದ್ಧ ಮೇಲ್ಜಾತಿಯ ಜನರೂ ಸೇರಿದಂತೆ ಸಿಖ್, ಮುಸ್ಲಿಂ, ಬೌದ್ಧರು ಮತ್ತು ಹಿಂದೂಗಳು ಈ ಸುಗ್ರೀವಾಜ್ಞೆಯನ್ನು ಬೆಂಬಲಿಸಿದ್ದಾರೆ” ಎಂದು ವಾಗ್ಡೆ ತಿಳಿಸಿದ್ದಾರೆ.

ಅಮೆರಿಕದಲ್ಲಿ ಜಾತಿ ತಾರತಮ್ಯ

ಅಮೆರಿಕದಂತಹ ದೇಶದಲ್ಲಿ ಭಾರತೀಯ ಮೂಲದ ದಲಿತರು, ಅಲ್ಲಿನ ಮೇಲ್ಜಾತಿಗಳಿಂದ ತಾರತಮ್ಯಗಳನ್ನು ಎದುರಿಸುತ್ತಿರುವ ಕುರಿತು ಹಲವಾರು ಪ್ರಕರಣಗಳು ವರದಿಯಾಗಿವೆ.

“ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ” ಎಂದು ಹೇಳಿಕೊಂಡ ಉದ್ಯೋಗಿಗಳ ಒತ್ತಡಕ್ಕೆ ಮಣಿದ ಗೂಗಲ್ ಸಂಸ್ಥೆಯು, ಅಮೆರಿಕ ಮೂಲದ ದಲಿತ ಹೋರಾಟಗಾರ್ತಿ ತೇನ್ಮೋಳಿ ಸೌಂದರರಾಜನ್ ಅವರ ಭಾಷಣವನ್ನು ರದ್ದು ಮಾಡಿದ್ದ ಘಟನೆ ಕಳೆದ ವರ್ಷ ನಡೆದಿತ್ತು.

ಈಕ್ವಾಲಿಟಿ ಲ್ಯಾಬ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿರುವ ತೇನ್ಮೋಳಿ ಅವರು ’ಹಿಂದೂ ಫೋಬಿಕ್’ ಮತ್ತು ’ಹಿಂದೂ ವಿರೋಧಿ’ ಆಗಿದ್ದಾರೆ ಎಂದಿದ್ದ ಗೂಗಲ್‌ನ ಕೆಲವು ಉದ್ಯೋಗಿಗಳು, ಕಂಪನಿಗೆ ಸಾಮೂಹಿಕ ಇಮೇಲ್‌ಗಳನ್ನು ಕಳುಹಿಸಿರುವ ವಿಷಯವನ್ನು ’ವಾಷಿಂಗ್ಟನ್ ಪೋಸ್ಟ್’ ಬಹಿರಂಗಪಡಿಸಿತ್ತು.

ಹಿಂದುತ್ವ ಪರ ಗುಂಪುಗಳ ಅಪಪ್ರಚಾರದಿಂದಾಗಿ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂಬುದೂ ಬೆಳಕಿಗೆ ಬಂದಿತ್ತು. ಗೂಗಲ್‌ನ ಹಿರಿಯ ಮ್ಯಾನೇಜರ್ ತನುಜಾ ಗುಪ್ತಾ ಅವರು ತೇನ್ಮೋಳಿ ಅವರನ್ನು ಭಾಷಣಕ್ಕೆ ಆಹ್ವಾನಿಸಿದ್ದೇ ಅಪರಾಧವಾಗಿಬಿಟ್ಟಿತ್ತು!

ತೇನ್ಮೋಳಿ ಅವರ ಭಾಷಣವನ್ನು ವಿರೋಧಿಸಿರುವ ಗೂಗಲ್ ಉದ್ಯೋಗಿಗಳು, “ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ” ಎಂದುಬಿಟ್ಟದ್ದರು. 8,000 ಜನರಿರುವ ದಕ್ಷಿಣ ಏಷ್ಯಾದ ಉದ್ಯೋಗಿಗಳ ಗುಂಪಿಗೆ ಮೇಲ್ ಹೋಯಿತು ಎಂದು ಹೇಳಿತ್ತು ವಾಷಿಂಗ್‌ಟನ್ ಪೋಸ್ಟ್ ವರದಿ.

ಫೇಸ್‌ಬುಕ್ ಸಂಸ್ಥೆಯ ಸಾಫ್ಟ್‌ವೇರ್ ಇಂಜಿನಿಯರ್ ಆಗಿ, ಸುಮಾರು 450,000 ಡಾಲರ್ ಪ್ಯಾಕೇಜ್‌ನೊಂದಿಗೆ ಸಿದ್ಧಾಂತ್ ಎಂಬ ದಲಿತ ಯುವಕ ಕೆಲಸಕ್ಕೆ ಸೇರುತ್ತಾರೆ. ಅಮೆರಿಕಕ್ಕೆ ತೆರಳಿದ ಅವರಿಗೆ
ಕಹಿ ಅನುಭವವಾಗುತ್ತದೆ. ದಲಿತರು ತಮ್ಮ ಹಿನ್ನೆಲೆಯನ್ನು ವ್ಯಕ್ತಪಡಿಸಲು ಹಿಂಜರೆಯುತ್ತಾರೆ. “ಗುರುತನ್ನು ಹೇಳಿಕೊಳ್ಳುವುದು ಅಪಾಯಕಾರಿ. ಹೆಸರುಗಳನ್ನು ಬದಲಿಸಿಕೊಂಡು ಬದುಕಬೇಕಾಗುತ್ತದೆ” ಎಂಬುದು ಸಿದ್ಧಾಂತ್ ಅನುಭವ.

ಇದನ್ನೂ ಓದಿರಿ: ತೇನ್ಮೋಳಿ ಬಾಷಣ ರದ್ದುಪಡಿಸಿದ ಗೂಗಲ್; ’ಸಾಫ್ಟ್’ ಜಾತಿವಾದಕ್ಕೆ ಮದ್ದೇನು?

ಸಿಸ್ಕೋ ಸಂಸ್ಥೆಯ ಪ್ರಕರಣ ಹೊರಬಂದ ಬಳಿಕ ಅನೇಕ ದಲಿತ ಟೆಕ್ಕಿಗಳು ಹೊರಬಂದು ತಮ್ಮ ಅನುಭವಗಳನ್ನು ಹೇಳಿಕೊಂಡಿದ್ದಾರೆ. ಈಕ್ವಾಲಿಟಿ ಲ್ಯಾಬ್ಸ್ ಸಂಸ್ಥೆಯು (ದಕ್ಷಿಣ ಏಷ್ಯಾದ ನಾಗರಿಕ ಹಕ್ಕುಗಳ ಗುಂಪು) ಗೂಗಲ್, ನೆಟ್‌ಫ್ಲಿಕ್ಸ್, ಅಮೆಜಾನ್, ಫೇಸ್‌ಬುಕ್ ಮೊದಲಾದ ಸಂಸ್ಥೆಗಳ ನೌಕರರು ತಮ್ಮ ಸಹೋದ್ಯೋಗಿಗಳ ವಿರುದ್ಧ ಮಾಡಿದ 250ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಿದೆ ಎಂದು wired.com ವರದಿ ಮಾಡಿದೆ.

“ಹೊರಗಿನವರಿಗೆ ಜಾತಿಯ ಕುಂದುಕೊರತೆಗಳನ್ನು ಗುರುತಿಸುವುದು ಕಷ್ಟ. ಜಾತಿಯು ಅದೃಶ್ಯವಾದದ್ದು ಎಂಬುದೇ ಅತ್ಯಂತ ಅಪಾಯಕಾರಿ ಸಂಗತಿ” ಎಂದು ’ಕಮಿಂಗ್ ಔಟ್ ಆಸ್ ದಲಿತ್’ ಎಂಬ ಆತ್ಮಚರಿತ್ರೆ ಬರೆದ ಲೇಖಕಿ ಯಾಶಿಕಾ ದತ್ ಹೇಳುತ್ತಾರೆ.

“ಜಾತಿ ಅಗೋಚರವಾದದ್ದು, ನಮ್ಮ ಸುತ್ತಲೂ ಅನೇಕ ಸಂಕೇತಗಳು, ರಹಸ್ಯ ಭಾಷೆಗಳು ಅಸ್ತಿತ್ವದಲ್ಲಿವೆ. ವ್ಯಕ್ತಿಯ ಸರ್ ನೇಮ್, ಗ್ರಾಮದ ಬಗ್ಗೆ ಗಮನ ಹರಿಸುವುದೆಲ್ಲ ಜಾತಿಯನ್ನು ಹುಡುಕುವುದಕ್ಕಾಗಿಯಷ್ಟೇ. ಭುಜದ ಮೇಲೆ ತಟ್ಟುವುದು ಸ್ನೇಹಪೂರ್ವಕ ಶುಭಾಶಯವಾಗಿರಬಹುದು ಅಥವಾ ಬ್ರಾಹ್ಮಣರು ಧರಿಸುವ ಜನಿವಾರದ ಅನ್ವೇಷಣೆಯೂ ಆಗಿರಬಹುದು” ಎನ್ನುತ್ತದೆ wired.com ವರದಿ.

ಈ ನಿಟ್ಟಿನಲ್ಲಿ ಸಿಯಾಟಲ್ ಸಿಟಿ ಕೌನ್ಸಿಲ್ ಜಾರಿಗೊಳಿಸಿರುವ ಸುಗ್ರೀವಾಜ್ಞೆ ಮಹತ್ವದ್ದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...