Homeದಲಿತ್ ಫೈಲ್ಸ್ಜಾತಿ ತಾರತಮ್ಯ ನಿಷೇಧಿಸಿ ಅಮೆರಿಕದ ಸಿಯಾಟಲ್‌ ಸಿಟಿ ಕೌನ್ಸಿಲ್‌ನಿಂದ ಮಹತ್ವದ ಸುಗ್ರೀವಾಜ್ಞೆ

ಜಾತಿ ತಾರತಮ್ಯ ನಿಷೇಧಿಸಿ ಅಮೆರಿಕದ ಸಿಯಾಟಲ್‌ ಸಿಟಿ ಕೌನ್ಸಿಲ್‌ನಿಂದ ಮಹತ್ವದ ಸುಗ್ರೀವಾಜ್ಞೆ

- Advertisement -
- Advertisement -

ಉತ್ತರ ಅಮೆರಿಕಾದಲ್ಲಿನ ಭಾರತೀಯ ಮೂಲದ ಜನರನ್ನು ದೃಷ್ಟಿಯಲ್ಲಿಟ್ಟುಕೊಂಡು ಮಹತ್ವದ ನಿರ್ಧಾರವನ್ನು ಸಿಯಾಟಲ್ ಸಿಟಿ ಕೌನ್ಸಿಲ್ ಮಂಗಳವಾರ ಕೈಗೊಂಡಿದೆ. ನಗರದಲ್ಲಿ ಜಾತಿ ತಾರತಮ್ಯವನ್ನು ನಿಷೇಧಿಸುವ ಮಹತ್ವದ ಸುಗ್ರೀವಾಜ್ಞೆಯನ್ನು 6-1 ಮತಗಳಿಂದ ಮತ ಅಂತರದಲ್ಲಿ ಅಂಗೀಕರಿಸಲಾದೆ.

ನಗರಸಭೆ ಸದಸ್ಯರಾದ ಕ್ಷಮಾ ಸಾವಂತ್ ಅವರು ಜನವರಿ 24ರಂದು ಸುಗ್ರೀವಾಜ್ಞೆಯನ್ನು ಪ್ರಸ್ತಾಪಿಸಿದ್ದರು. ಸಿಟಿ ಕೌನ್ಸಿಲ್‌ನಲ್ಲಿ ಸುಗ್ರೀವಾಜ್ಞೆಯನ್ನು ಪರಿಚಯಿಸಿದಾಗಿನಿಂದಲೂ ಇದಕ್ಕೆ ಅಮೆರಿಕ ಮತ್ತು ಭಾರತದಲ್ಲಿ ಹೆಚ್ಚಿನ ಬೆಂಬಲ ಸಿಕ್ಕಿದೆ.

ಜನವರಿ 30ರಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಸುಗ್ರೀವಾಜ್ಞೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. “ಯಾವುದೇ ರೂಪದಲ್ಲಿ ಜಾತಿ ತಾರತಮ್ಯವನ್ನು ನಿರ್ಮೂಲನೆ ಮಾಡುವ ಪ್ರಗತಿಪರ ಹೆಜ್ಜೆ ಇದಾಗಿದೆ” ಎಂದು ಬಣ್ಣಿಸಿದ್ದರು.

ಉತ್ತರ ಅಮೆರಿಕದ ಪ್ರಭಾವಿ ಸೌತ್ ಏಷ್ಯನ್ ಬಾರ್ ಅಸೋಸಿಯೇಷನ್ (SABA) ಸಹ 17 ಫೆಬ್ರವರಿ 2023 ರಂದು ಸುಗ್ರೀವಾಜ್ಞೆಗೆ ಬೆಂಬಲವನ್ನು ಸೂಚಿಸಿತು.

“ಇದು ಸಹಜವಾಗಿ, ದೂರಗಾಮಿ ಪರಿಣಾಮಗಳನ್ನು ಹೊಂದಿದೆ. ಎಲ್ಲಾ ಕಂಪನಿಗಳು, ಸರ್ಕಾರಿ ಕಚೇರಿಗಳು ತಮ್ಮ ನೀತಿಗಳಲ್ಲಿ ಜಾತಿಯ ಪ್ರಾತಿನಿಧ್ಯವನ್ನು ಹೊಂದಿರಬೇಕು, ಜಾತಿ ಸಂವೇದನೆಗೆ ತರಬೇತಿ ನಡೆಸಬೇಕು ಮತ್ತು ಯಾವುದೇ ಜಾತಿ ತಾರತಮ್ಯ ಪ್ರಕರಣಗಳ ಬಗ್ಗೆ ನಿಗಾ ವಹಿಸಬೇಕು” ಎಂದು ಜಾತಿ ತುಳಿತಕ್ಕೊಳಗಾದ ಸಮುದಾಯಗಳನ್ನು ಪ್ರತಿನಿಧಿಸುವ ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ (ಎಐಸಿ) ಸದಸ್ಯ ಅನಿಲ್ ವಾಗ್ಡೆ (ಅಮೆರಿಕ) ತಿಳಿಸಿರುವುದಾಗಿ ‘ಸೌಂತ್‌ ಫಸ್ಟ್‌’ ಜಾಲತಾಣ ವರದಿ ಮಾಡಿದೆ.

ಸಿಯಾಟಲ್ ಇಂಡಿಯನ್-ಅಮೆರಿಕನ್ಸ್ (CSAI), ಸಮಾನತೆ ಲ್ಯಾಬ್ಸ್, ಟೆಕ್ಸಾಸ್‌ನ ಅಂಬೇಡ್ಕರ್ ಬೌದ್ಧರ ಸಂಘ, ಬೋಸ್ಟನ್ ಸ್ಟಡಿ ಗ್ರೂಪ್, ಅಂಬೇಡ್ಕರ್ ಕಿಂಗ್ಸ್ ಸ್ಟಡಿ ಸರ್ಕಲ್ ಮತ್ತು ಅಂಬೇಡ್ಕರ್ ಅಸೋಸಿಯೇಷನ್ ಆಫ್ ನಾರ್ತ್ ಅಮೇರಿಕಾ (AANA) ಜೊತೆಯಲ್ಲಿ ಎಐಸಿ ತಂಡವು ನಿರಂತರವಾಗಿ ಕೆಲಸ ಮಾಡಿದೆ. ಅದರ ಫಲವಾಗಿ ಸುಗ್ರಿವಾಜ್ಞೆ ಜಾರಿ ಸಾಧ್ಯವಾಗಿದೆ.

“ಈಗ ಕಾನೂನಿನ ಬಗ್ಗೆ ಅಜ್ಞಾನ ಹೊಂದಿರಬಾರದು. ಯಾವುದೇ ಕಂಪನಿಯು ಜಾತಿ ವಿಚಾರ ಕಾನೂನಿನ ವ್ಯಾಪ್ತಿಗೆ ಒಳಪಟ್ಟಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ನೇಮಕಾತಿಯಲ್ಲಿ ಮತ್ತು ಕೆಲಸದ ಸ್ಥಳಗಳಲ್ಲಿ ಜಾತಿ ತಾರತಮ್ಯ ನಡೆಯುವುದಿಲ್ಲ ಎಂಬುದನ್ನು ಕಂಪನಿಗಳು ಖಚಿತಪಡಿಸಬೇಕು” ಎಂದಿದ್ದಾರೆ.

“ಪ್ರಬುದ್ಧ ಮೇಲ್ಜಾತಿಯ ಜನರೂ ಸೇರಿದಂತೆ ಸಿಖ್, ಮುಸ್ಲಿಂ, ಬೌದ್ಧರು ಮತ್ತು ಹಿಂದೂಗಳು ಈ ಸುಗ್ರೀವಾಜ್ಞೆಯನ್ನು ಬೆಂಬಲಿಸಿದ್ದಾರೆ” ಎಂದು ವಾಗ್ಡೆ ತಿಳಿಸಿದ್ದಾರೆ.

ಅಮೆರಿಕದಲ್ಲಿ ಜಾತಿ ತಾರತಮ್ಯ

ಅಮೆರಿಕದಂತಹ ದೇಶದಲ್ಲಿ ಭಾರತೀಯ ಮೂಲದ ದಲಿತರು, ಅಲ್ಲಿನ ಮೇಲ್ಜಾತಿಗಳಿಂದ ತಾರತಮ್ಯಗಳನ್ನು ಎದುರಿಸುತ್ತಿರುವ ಕುರಿತು ಹಲವಾರು ಪ್ರಕರಣಗಳು ವರದಿಯಾಗಿವೆ.

“ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ” ಎಂದು ಹೇಳಿಕೊಂಡ ಉದ್ಯೋಗಿಗಳ ಒತ್ತಡಕ್ಕೆ ಮಣಿದ ಗೂಗಲ್ ಸಂಸ್ಥೆಯು, ಅಮೆರಿಕ ಮೂಲದ ದಲಿತ ಹೋರಾಟಗಾರ್ತಿ ತೇನ್ಮೋಳಿ ಸೌಂದರರಾಜನ್ ಅವರ ಭಾಷಣವನ್ನು ರದ್ದು ಮಾಡಿದ್ದ ಘಟನೆ ಕಳೆದ ವರ್ಷ ನಡೆದಿತ್ತು.

ಈಕ್ವಾಲಿಟಿ ಲ್ಯಾಬ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿರುವ ತೇನ್ಮೋಳಿ ಅವರು ’ಹಿಂದೂ ಫೋಬಿಕ್’ ಮತ್ತು ’ಹಿಂದೂ ವಿರೋಧಿ’ ಆಗಿದ್ದಾರೆ ಎಂದಿದ್ದ ಗೂಗಲ್‌ನ ಕೆಲವು ಉದ್ಯೋಗಿಗಳು, ಕಂಪನಿಗೆ ಸಾಮೂಹಿಕ ಇಮೇಲ್‌ಗಳನ್ನು ಕಳುಹಿಸಿರುವ ವಿಷಯವನ್ನು ’ವಾಷಿಂಗ್ಟನ್ ಪೋಸ್ಟ್’ ಬಹಿರಂಗಪಡಿಸಿತ್ತು.

ಹಿಂದುತ್ವ ಪರ ಗುಂಪುಗಳ ಅಪಪ್ರಚಾರದಿಂದಾಗಿ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ ಎಂಬುದೂ ಬೆಳಕಿಗೆ ಬಂದಿತ್ತು. ಗೂಗಲ್‌ನ ಹಿರಿಯ ಮ್ಯಾನೇಜರ್ ತನುಜಾ ಗುಪ್ತಾ ಅವರು ತೇನ್ಮೋಳಿ ಅವರನ್ನು ಭಾಷಣಕ್ಕೆ ಆಹ್ವಾನಿಸಿದ್ದೇ ಅಪರಾಧವಾಗಿಬಿಟ್ಟಿತ್ತು!

ತೇನ್ಮೋಳಿ ಅವರ ಭಾಷಣವನ್ನು ವಿರೋಧಿಸಿರುವ ಗೂಗಲ್ ಉದ್ಯೋಗಿಗಳು, “ಜಾತಿ ಸಮಾನತೆಯ ಚರ್ಚೆಯಿಂದ ನಮ್ಮ ಜೀವಕ್ಕೆ ಅಪಾಯವಿದೆ” ಎಂದುಬಿಟ್ಟದ್ದರು. 8,000 ಜನರಿರುವ ದಕ್ಷಿಣ ಏಷ್ಯಾದ ಉದ್ಯೋಗಿಗಳ ಗುಂಪಿಗೆ ಮೇಲ್ ಹೋಯಿತು ಎಂದು ಹೇಳಿತ್ತು ವಾಷಿಂಗ್‌ಟನ್ ಪೋಸ್ಟ್ ವರದಿ.

ಫೇಸ್‌ಬುಕ್ ಸಂಸ್ಥೆಯ ಸಾಫ್ಟ್‌ವೇರ್ ಇಂಜಿನಿಯರ್ ಆಗಿ, ಸುಮಾರು 450,000 ಡಾಲರ್ ಪ್ಯಾಕೇಜ್‌ನೊಂದಿಗೆ ಸಿದ್ಧಾಂತ್ ಎಂಬ ದಲಿತ ಯುವಕ ಕೆಲಸಕ್ಕೆ ಸೇರುತ್ತಾರೆ. ಅಮೆರಿಕಕ್ಕೆ ತೆರಳಿದ ಅವರಿಗೆ
ಕಹಿ ಅನುಭವವಾಗುತ್ತದೆ. ದಲಿತರು ತಮ್ಮ ಹಿನ್ನೆಲೆಯನ್ನು ವ್ಯಕ್ತಪಡಿಸಲು ಹಿಂಜರೆಯುತ್ತಾರೆ. “ಗುರುತನ್ನು ಹೇಳಿಕೊಳ್ಳುವುದು ಅಪಾಯಕಾರಿ. ಹೆಸರುಗಳನ್ನು ಬದಲಿಸಿಕೊಂಡು ಬದುಕಬೇಕಾಗುತ್ತದೆ” ಎಂಬುದು ಸಿದ್ಧಾಂತ್ ಅನುಭವ.

ಇದನ್ನೂ ಓದಿರಿ: ತೇನ್ಮೋಳಿ ಬಾಷಣ ರದ್ದುಪಡಿಸಿದ ಗೂಗಲ್; ’ಸಾಫ್ಟ್’ ಜಾತಿವಾದಕ್ಕೆ ಮದ್ದೇನು?

ಸಿಸ್ಕೋ ಸಂಸ್ಥೆಯ ಪ್ರಕರಣ ಹೊರಬಂದ ಬಳಿಕ ಅನೇಕ ದಲಿತ ಟೆಕ್ಕಿಗಳು ಹೊರಬಂದು ತಮ್ಮ ಅನುಭವಗಳನ್ನು ಹೇಳಿಕೊಂಡಿದ್ದಾರೆ. ಈಕ್ವಾಲಿಟಿ ಲ್ಯಾಬ್ಸ್ ಸಂಸ್ಥೆಯು (ದಕ್ಷಿಣ ಏಷ್ಯಾದ ನಾಗರಿಕ ಹಕ್ಕುಗಳ ಗುಂಪು) ಗೂಗಲ್, ನೆಟ್‌ಫ್ಲಿಕ್ಸ್, ಅಮೆಜಾನ್, ಫೇಸ್‌ಬುಕ್ ಮೊದಲಾದ ಸಂಸ್ಥೆಗಳ ನೌಕರರು ತಮ್ಮ ಸಹೋದ್ಯೋಗಿಗಳ ವಿರುದ್ಧ ಮಾಡಿದ 250ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಿದೆ ಎಂದು wired.com ವರದಿ ಮಾಡಿದೆ.

“ಹೊರಗಿನವರಿಗೆ ಜಾತಿಯ ಕುಂದುಕೊರತೆಗಳನ್ನು ಗುರುತಿಸುವುದು ಕಷ್ಟ. ಜಾತಿಯು ಅದೃಶ್ಯವಾದದ್ದು ಎಂಬುದೇ ಅತ್ಯಂತ ಅಪಾಯಕಾರಿ ಸಂಗತಿ” ಎಂದು ’ಕಮಿಂಗ್ ಔಟ್ ಆಸ್ ದಲಿತ್’ ಎಂಬ ಆತ್ಮಚರಿತ್ರೆ ಬರೆದ ಲೇಖಕಿ ಯಾಶಿಕಾ ದತ್ ಹೇಳುತ್ತಾರೆ.

“ಜಾತಿ ಅಗೋಚರವಾದದ್ದು, ನಮ್ಮ ಸುತ್ತಲೂ ಅನೇಕ ಸಂಕೇತಗಳು, ರಹಸ್ಯ ಭಾಷೆಗಳು ಅಸ್ತಿತ್ವದಲ್ಲಿವೆ. ವ್ಯಕ್ತಿಯ ಸರ್ ನೇಮ್, ಗ್ರಾಮದ ಬಗ್ಗೆ ಗಮನ ಹರಿಸುವುದೆಲ್ಲ ಜಾತಿಯನ್ನು ಹುಡುಕುವುದಕ್ಕಾಗಿಯಷ್ಟೇ. ಭುಜದ ಮೇಲೆ ತಟ್ಟುವುದು ಸ್ನೇಹಪೂರ್ವಕ ಶುಭಾಶಯವಾಗಿರಬಹುದು ಅಥವಾ ಬ್ರಾಹ್ಮಣರು ಧರಿಸುವ ಜನಿವಾರದ ಅನ್ವೇಷಣೆಯೂ ಆಗಿರಬಹುದು” ಎನ್ನುತ್ತದೆ wired.com ವರದಿ.

ಈ ನಿಟ್ಟಿನಲ್ಲಿ ಸಿಯಾಟಲ್ ಸಿಟಿ ಕೌನ್ಸಿಲ್ ಜಾರಿಗೊಳಿಸಿರುವ ಸುಗ್ರೀವಾಜ್ಞೆ ಮಹತ್ವದ್ದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...