Homeಕರ್ನಾಟಕಮಾಂಸಾಹಾರದ ಪರ ಸಿ.ಟಿ.ರವಿ ಬ್ಯಾಟಿಂಗ್; ಕಾಂಗ್ರೆಸ್‌, ಸಿದ್ದರಾಮಯ್ಯ ಪ್ರತಿಕ್ರಿಯೆ

ಮಾಂಸಾಹಾರದ ಪರ ಸಿ.ಟಿ.ರವಿ ಬ್ಯಾಟಿಂಗ್; ಕಾಂಗ್ರೆಸ್‌, ಸಿದ್ದರಾಮಯ್ಯ ಪ್ರತಿಕ್ರಿಯೆ

ಸಿ.ಟಿ.ರವಿಯವರು ಮಾಂಸ ತಿಂದು ದೇವಾಲಯಕ್ಕೆ ಭೇಟಿ ನೀಡಿದ್ದಾರೆಂಬುದು ಚರ್ಚೆಗೆ ಗ್ರಾಸವಾಗಿದೆ

- Advertisement -
- Advertisement -

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿಯವರು ಮಾಂಸ ತಿಂದು ದೇವಾಲಯಕ್ಕೆ ಭೇಟಿ ನೀಡಿದ್ದಾರೆಂಬುದು ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಸಿದ್ದರಾಮಯ್ಯನವರು ಮಾಂಸಾಹಾರ ತಿಂದು ದೇವಾಲಯ ಪ್ರವೇಶಿಸಿದರೆಂದು ಬಿಜೆಪಿ ಟೀಕಿಸಿತ್ತು. ಇದು ಮಹಾಪರಾಧವೆಂಬಂತೆ ಬಿಂಬಿಸುವ ಪ್ರಯತ್ನಗಳು ಮಾಧ್ಯಮಗಳಲ್ಲಿ ಆಗಿದ್ದವು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿ.ಟಿ.ರವಿಯವರು ಮಾಂಸಾಹಾರದ ಪರ ಬ್ಯಾಟಿಂಗ್ ಮಾಡಿದ್ದಾರೆ. “ನಾನು ತಿನ್ನೋ ಜಾತಿಯಲ್ಲಿ ಹುಟ್ಟಿದ್ದೀನಿ. ಸಂಕೋಚ ಏನ್ರೀ? ಹೊರಗಡೆ ಹೋಗಿ ಕೈಮುಗಿದು ಬಂದಿದ್ದೇನೆ. ತಪ್ಪೇನಿಲ್ಲ. ಇಷ್ಟು ಆದ ಮೇಲೂ ದಾಷ್ಟ್ಯವನ್ನು ತೋರಿಸಿಲ್ಲ. ನಾನ್‌ವೆಜ್ ದೇವರುಗಳು ಇದ್ದಾವೆ. ಅವರದ್ದು ದಾಷ್ಟ್ಯ, ನನ್ನದು ನಿವೇದನೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಫೆಬ್ರವರಿ 19ರಂದು ಭಾನುವಾರ ಉತ್ತರ ಕನ್ನಡ ಜಿಲ್ಲೆಗೆ ಸಿ.ಟಿ.ರವಿ ಆಗಮಿಸಿದ್ದರು. ಕಾರವಾರದ ಶಿವಾಜಿ ಜಯಂತಿಯಲ್ಲಿ ಭಾಗವಹಿಸಿ ಭಟ್ಕಳಕ್ಕೆ ಸಿ.ಟಿ.ರವಿ ಆಗಮಿಸಿದ್ದರು. ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ್ ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸವಿದಿದ್ದರು. ಬಾಡೂಟ ಸವಿದಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಹರಿದಾಡುತ್ತಿದೆ.

CT Ravi photo viral

ಬಾಡೂಟ ಸವಿದು ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಸಿ.ಟಿ.ರವಿ ಭೇಟಿ ನೀಡಿದ್ದರು. ಭಟ್ಕಳ ಶಾಸಕ ಸುನಿಲ್ ನಾಯ್ಕ್ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಸಿ.ಟಿ.ರವಿ ದೇವಸ್ಥಾನಕ್ಕೆ ತೆರಳಿದ್ದರು. ಇದು ಚರ್ಚೆಗೆ ಕಾರಣವಾಗಿದೆ.

‘ಕಾಂಗ್ರೆಸ್‌ನವರು ತಿಂದರೆ ಮಾಂಸ, ಬಿಜೆಪಿಯವರು ತಿಂದರೆ ಕ್ಯಾರೆಟ್ ಹಲ್ವಾನಾ?’

ಈ ಕುರಿತು ಕಾಂಗ್ರೆಸ್‌ ಟ್ವೀಟ್ ಮಾಡಿದ್ದು, “ಕಾಂಗ್ರೆಸ್‌ನವರು ತಿಂದರೆ ಮಾಂಸ, ಬಿಜೆಪಿಗರು ತಿಂದರೆ ಮಾಂಸವೂ ಕ್ಯಾರೆಟ್ ಹಲ್ವಾದಂತಾಗುತ್ತದೆಯೇ? ಮಾಂಸದೂಟ ಸೇವಿಸಿ ಹನುಮನ ದೇವಸ್ಥಾನಕ್ಕೆ ಹೋಗಿದ್ದ ಸಿ.ಟಿ.ರವಿಯವರು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಬಾಯಿ ಬಡಿದುಕೊಳ್ಳುತ್ತಿಲ್ಲವೇಕೆ? ಈಗ ದೇವಾಲಯ ಮೈಲಿಗೆಯಾಗಿಲ್ಲವೇ? ಗೋಮೂತ್ರ ಎರಚುವುದಿಲ್ಲವೇ?” ಎಂದು ಕೇಳಿದೆ.

ಇದನ್ನೂ ಓದಿರಿ: ‘ಆಹಾರ ನಮ್ಮ ಹಕ್ಕು, ಬಾಡು ತಿನ್ನಲಿ ಮಠದ ಬೆಕ್ಕು’: ಪ್ರತಿಭಟನಾಕಾರರ ಆಕ್ರೋಶ

“ದ್ವೇಷ ಕಾರುವುದನ್ನೇ ಧರ್ಮ ಎಂದುಕೊಂಡಿರುವ ಬಾಯಿಹರುಕ ಸಿ.ಟಿ.ರವಿಯವರು, ದೇವಸ್ಥಾನಕ್ಕೆ ಹೋಗುವ ಮುನ್ನ ತಿಂದ ಮಾಂಸದ ಮೆನು ಏನು ಬಿಜೆಪಿ ಕರ್ನಾಟಕ? ಫಿಶ್ ಫ್ರೈ? ಚಿಕನ್ ಕಬಾಬ್? ಲೆಗ್ ಪೀಸ್? ಮಟನ್ ಕುರ್ಮಾ? ಚಿಕನ್ ಟಿಕ್ಕಾ? ನಾಟಿಕೋಳಿ ಸಾಂಬಾರ್? ಫೋರ್ಕ್ ಫ್ರೈ? ಬೀಫ್ ಬಿರಿಯಾನಿ? ಸಿಟಿ ರವಿ ತಟ್ಟೆಯನ್ನು ಬಿಜೆಪಿಗರು ಇಣುಕಿ ನೋಡಿಲ್ಲವೇ?” ಎಂದು ಸರಣಿ ಪ್ರಶ್ನೆಗಳನ್ನು ಎಸೆದಿದೆ.

ಇದು ವಿವಾದವೇ ಅಲ್ಲ: ಸಿದ್ದರಾಮಯ್ಯ

ಈ ವಿಚಾರವಾಗಿ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, “ದೇವಸ್ಥಾನಕ್ಕೆ ಹೋಗೋದು, ಹೋಗದೇ ಇರುವುದು, ಮಾಂಸ ತಿನ್ನೊದು ತಿನ್ನದೇ ಇರುವದು ವಿವಾದವೇ ಅಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಜನರ ಸಮಸ್ಯೆಗಳು, ನಾಡಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು. ನಾನು ಈಗಾಗಲೇ ಬಿಜೆಪಿಗರಿಗೆ ನಾವು ಚರ್ಚೆ ಮಾಡಲು ತಯಾರಿದ್ದೇವೆ. ನೀವು ತಯಾರಿದ್ದೀರಾ ಎಂದು ಕೇಳಿದ್ದೇನೆ” ಎಂದಿದ್ದಾರೆ.

“ಈ ನಾಡಿನ ರೈತರಿಗೆ, ಬಡವರಿಗೆ ಏನು ಮಾಡಿದ್ದಾರೆ ಅಂತ ಬಿಜೆಪಿಯವರು ಹೇಳಬೇಕು. ಜನರ ಸಮಸ್ಯೆಗಳನ್ನು ಬಗೆ ಹರಿಸುವದನ್ನು ಬಿಟ್ಟು, ನಾಮ(ತಿಲಕ) ಹಾಕಿಕೊಳ್ಳುವದು, ದೇವಸ್ಥಾನಕ್ಕೆ ಹೋಗುವದು, ಟಿಪ್ಪು ಸುಲ್ತಾನ್, ಗಾಂಧಿ, ಗೋಡೆ, ಸಾವರ್ಕಕರ್‌ ಬಗ್ಗೆ ಮಾತನಾಡುವದು- ಇವೆಲ್ಲ ರಿಲೆವೆಂಟ್ ವಿಷಯಗಳಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...