Homeಮುಖಪುಟಕೋವಿಡ್‌ನಿಂದ ಪಾರಾಗಲು 3 ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿದ್ದ ಮಹಿಳೆ!

ಕೋವಿಡ್‌ನಿಂದ ಪಾರಾಗಲು 3 ವರ್ಷಗಳ ಕಾಲ ಮಗನೊಂದಿಗೆ ಗೃಹಬಂಧನದಲ್ಲಿದ್ದ ಮಹಿಳೆ!

- Advertisement -
- Advertisement -

ಮಹಿಳೆಯೊಬ್ಬಳು ಕೋವಿಡ್-19 ಸೋಂಕಿಗೆ ಒಳಗಾಗುವ ತೀವ್ರ ಭಯದಿಂದ ಮೂರು ವ‍ರ್ಷಗಳ ಕಾಲ ತನ್ನನ್ನು ಮತ್ತು ತನ್ನ ಅಪ್ರಾಪ್ತ ಮಗನನ್ನು ಮನೆಯೊಳಗೆ ಬೀಗ ಹಾಕಿಕೊಂಡು ಗೃಹಬಂಧನದಲ್ಲಿದ್ದರು. ಅವರನ್ನು ಈಗ ರಕ್ಷಣೆ ಮಾಡಲಾಗಿದ್ದು, ಈ ಘಟನೆ ಗುರುಗ್ರಾಮ್‌ನ ಚಕ್ಕರ್‌ಪುರದಲ್ಲಿ ನಡೆದಿದೆ. ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್ ಆಗಿರುವ ಈ ಮಹಿಳೆಯ ಪತಿ ಸುಜನ್ ಮಾಝಿ ಅವರು, ಚಕ್ಕರ್‌ಪುರ ಪೊಲೀಸರನ್ನು ಸಂಪರ್ಕಿಸಿದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಸುಜನ್ ಮಾಝಿ ಅವರ ಕೋರಿಕೆಯ ಮೇರೆಗೆ, ಪೊಲೀಸರು, ಆರೋಗ್ಯ ಅಧಿಕಾರಿಗಳು ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸದಸ್ಯರ ತಂಡ ಮಂಗಳವಾರ ನಿವಾಸಕ್ಕೆ ತಲುಪಿ, ಮುಖ್ಯ ಬಾಗಿಲು ಮುರಿದು ಮುನ್ಮುನ್ ಮಾಝಿ ಮತ್ತು ಆಕೆಯ 10 ವರ್ಷದ ಮಗನನ್ನು ರಕ್ಷಿಸಿದ್ದಾರೆ. ಇನ್ನು ಮನೆಯೊಳಗಿನ ಕಸದ ರಾಶಿಯೇ ತುಂಬಿದೆ. ಬಟ್ಟೆ, ಕೂದಲು, ಕಸ, ಮಣ್ಣು ಮತ್ತು ದಿನಸಿಗಳು ಸುತ್ತಲೂ ಹರಡಿಕೊಂಡಿವೆ.

qbfanc1

ಮುನ್ಮುನ್ ಮಾಝಿ ಅವರು, ಮನೆಯಲ್ಲಿಯೇ ಮಗುವಿನ ಮತ್ತು ಅವಳ ಕೂದಲನ್ನು ಕತ್ತರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಇದೇ ವೇಳೆ ಮನೆಯಲ್ಲಿ ಗ್ಯಾಸ್ ಸ್ಟೌ ಬದಲು ಇಂಡಕ್ಷನ್ ಮೂಲಕ ಅಡುಗೆ ಮಾಡಲಾಗಿತ್ತು. ಮೂರು ವರ್ಷಗಳಿಂದ ಮನೆಯಲ್ಲಿದ್ದ ಕಸವನ್ನು ಕೂಡ ಹೊರಗೆ ಹಾಕಿರಲಿಲ್ಲ, ಈ ವೇಳೆ ಮನೆಗೆ ಯಾರೂ ಭೇಟಿ ನೀಡಿರಲಿಲ್ಲ. ಮಗು ಮನೆಯ ಗೋಡೆಗಳ ಮೇಲೆ ಪೇಂಟಿಂಗ್ ಮಾಡುತ್ತಿತ್ತು ಮತ್ತು ಪೆನ್ಸಿಲ್‌ನಿಂದ ಮಾತ್ರ ಅಧ್ಯಯನ ಮಾಡುತ್ತಿತ್ತು. ಆಘಾತಕಾರಿ ಸಂಗತಿಯೆಂದರೆ, ಮಹಿಳೆಯ ಮಗ ಕಳೆದ ಮೂರು ವರ್ಷಗಳಿಂದ ಸೂರ್ಯನನ್ನೇ ನೋಡಿರಲಿಲ್ಲ.

ಇದನ್ನೂ ಓದಿ: ಕೋವಿಡ್ ಸಂಬಂಧಿತ ನಿರ್ಬಂಧ ಹೇರುವ ಯೋಜನೆ ಇಲ್ಲ: ಕೇಂದ್ರ ಸರ್ಕಾರ

ಇಷ್ಟು ದಿನಗಳ ಕಾಲ ತಾಯಿ ಮಗ ಮನೆಯೊಳಗೆ ಬೀಗ ಹಾಕಿಕೊಂಡು ವಾಸಿಸುತ್ತಿರುವ ಬಗ್ಗೆ ಅಕ್ಕಪಕ್ಕದವರಿಗೆ ಸುಳಿವು ಸಿಕ್ಕಿರಲಿಲ್ಲ.

ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ”ಕೋವಿಡ್ -19 ಕಾರಣದಿಂದಾಗಿ ಮಹಿಳೆ ಭಯಭೀತರಾಗಿದ್ದರು ಮತ್ತು ಮನೆಯಿಂದ ಹೊರಗೆ ಕಾಲಿಟ್ಟರೆ ಮಗ ಸಾಯುತ್ತಾನೆಂದು ನಂಬಿದ್ದರು” ಎಂದು ಅವರು ತಿಳಿಸಿದ್ದಾರೆ.

2020ರಲ್ಲಿ ಮೊದಲ ಲಾಕ್‌ಡೌನ್ ನಿರ್ಬಂಧಗಳನ್ನು ತೆಗೆದುಹಾಕಿದ ನಂತರ ಕಚೇರಿಗಾಗಿ ಮಹಿಳೆಯ ಪತಿ ಮನೆಯಿಂದ ಹೊರಬಂದಿದ್ದರು. ಹಾಗಾಗಿ ಆ ಮಹಿಳೆ ತನ್ನ ಪತಿಯನ್ನು ಸಹ ಮನೆಯೊಳಗೆ ಬಿಟ್ಟುಕೊಳ್ಳದೇ ತನ್ನ ಮಗನೊಂದಿಗಿನ ಮೂರು ವರ್ಷಗಳ ಬಂಧನದಲ್ಲಿದ್ದರು.

ಮುನ್ಮುನ್ ಮಾಝಿ ಅವರು, ವೀಡಿಯೊ ಕರೆಗಳ ಮೂಲಕ ತಮ್ಮ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದರು. ಅದು ಬಿಟ್ಟರೆ ಮನೆಯವರೊಂದಿಗಾಗಲಿ ಹೊರ ಜಗತ್ತಿನ ಯಾರೊಂದಿಗೂ ಆಕೆ ಸಂಪರ್ಕದಲ್ಲಿರಲಿಲ್ಲ. ಇನ್ನು, ಮನೆಯ ಮಾಸಿಕ ಬಾಡಿಗೆ ಕಟ್ಟುವುದು, ವಿದ್ಯುತ್ ಬಿಲ್ ಕಟ್ಟುವುದು, ಮಗನ ಶಾಲಾ ಶುಲ್ಕ ಕಟ್ಟುವುದು, ದಿನಸಿ ಸಾಮಾನು, ತರಕಾರಿ ಕೊಂಡುಕೊಳ್ಳುವುದು, ಪಡಿತರ ಚೀಲಗಳನ್ನು ಮುಖ್ಯ ಬಾಗಿಲಿನ ಹೊರಗೆ ಇಡುತ್ತಿದ್ದರು.

ಇದೀಗ ಆ ತಾಯಿ ಮಗನ ರಕ್ಷಣೆ ಮಾಡಲಾಗಿದ್ದು, ಇಬ್ಬರನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...