Homeಮುಖಪುಟಬಿಜೆಪಿ ಶಾಸಕರ ಕಮಿಷನ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯ್ತಿ ಸದಸ್ಯರ ರಾಜೀನಾಮೆ: ಕಾಂಗ್ರೆಸ್ ಆರೋಪ

ಬಿಜೆಪಿ ಶಾಸಕರ ಕಮಿಷನ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಪಂಚಾಯ್ತಿ ಸದಸ್ಯರ ರಾಜೀನಾಮೆ: ಕಾಂಗ್ರೆಸ್ ಆರೋಪ

- Advertisement -
- Advertisement -

ಬಿಜೆಪಿ ಶಾಸಕರ ಕಮಿಷನ್ ಕಿರುಕುಳಕ್ಕೆ ಬೇಸತ್ತು ಬೆಳಗಾವಿ ಜಿಲ್ಲೆಯ ಗ್ರಾಮ ಪಂಚಾಯ್ತಿ ಸದಸ್ಯರು ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಬಿಜೆಪಿ ಶಾಸಕ ಡಿ.ಎಂ ಐಹೊಳೆ ಅವರು ಪ್ರತಿನಿಧಿಸುವ ರಾಯಭಾಗ ವಿಧಾನಸಭಾ ಕ್ಷೇತ್ರದಲ್ಲಿ ಕಮಿಷನ್ ಕಿರುಕುಳ ಮಿತಿ ಮೀರಿದೆ. ಹಾಗಾಗಿ ಮೇಖಳಿ ಗ್ರಾಮ ಪಂಚಾಯ್ತಿ ಸದಸ್ಯೆ ಸುಧಾ ಸಿದ್ದಪ್ಪ ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಚುನಾವಣೆಗೆ ಬಂಡವಾಳ ಕ್ರೋಡೀಕರಣಕ್ಕಾಗಿ 40% ಕಮಿಷನ್ ದಂಧೆಯನ್ನು ಗ್ರಾ. ಪಂಗೂ ತಲುಪಿಸಿದ ಕೀರ್ತಿ ಬಸವರಾಜ ಬೊಮ್ಮಾಯಿವರಿಗೆ ಸಲ್ಲುತ್ತದೆ ಎಂದು ವ್ಯಂಗ್ಯವಾಡಿದೆ.

‘ಗ್ರಾಮದ ಅಭಿವೃದ್ಧಿ ಕಾಮಗಾರಿಯ ಅನುಮೋದನೆಗಾಗಿ ಪಂಚಾಯಿತಿ ಅಧಿಕಾರಿಗಳು ಪ್ರತಿ ಸದಸ್ಯರಿಗೆ ಕಮಿಷನ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ’ ಎಂದು ಆರೋಪಿಸಿ, ಸದಸ್ಯೆ ಸುಧಾ ಸಿದ್ದಪ್ಪ ರಾಜಂಗಳೆ ಸದಸ್ಯತ್ವಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆ ಪತ್ರವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಾವು ಆರಿಸಿಬಂದು ಎರಡೂವರೆ ವರ್ಷ ಆಗಿದೆ. ಮಂದಿಯ ಕೆಲಸ ಮಾಡಿಸಲು ಆಗುತ್ತಿಲ್ಲ. ಪ್ರತಿ ಕೆಲಸಕ್ಕೂ ಲಂಚ ಕೇಳುತ್ತಾರೆ. ಹಾಗಾಗಿ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಸುಧಾ ಸಿದ್ದಪ್ಪ ರಾಜಂಗಳೆ ತಿಳಿಸಿದ್ದಾರೆ.

‘14 ಮತ್ತು 15ನೇ ಹಣಕಾಸು ಯೋಜನೆ, ಉದ್ಯೋಗ ಖಾತ್ರಿ ಯೋಜನೆ ಅನುದಾನ ಸೇರಿದಂತೆ ವಿವಿಧ ಯೋಜನೆಗಳಿಗೆ ಅನುಮೋದನೆ ನೀಡಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ದಳವಾಯಿ ಶೇ 30ರಷ್ಟು ಕಮೀಷನ್ ಕೊಡಬೇಕೆಂದು ಹೇಳುತ್ತಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.

‘ಕಾಮಗಾರಿ ನಂತರ ಬಿಲ್ ಪಡೆಯಲು ಪಿಡಿಒ ಶೇ 10, ಎಂಜಿನಿಯರಿಂಗ್‌ ಶೇ 10, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೇರಿ ಶೇ 10 ಅಂತಾ ಒಟ್ಟು ಶೇ 30ರಷ್ಟು ಕಮಿಷನ್ ಬೇಡಿಕೆ ಇಟ್ಟಿದ್ದಾರೆ’ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ದೂರಿದ್ದಾರೆ.

ಇನ್ನು 10 ಸದಸ್ಯರು ರಾಜೀನಾಮೆ ನೀಡುತ್ತೇವೆ

‘ಕಮಿಷನ್ ಕೇಳುತ್ತಿರುವ ಅಭಿವೃದ್ಧಿ ಅಧಿಕಾರಿಯನ್ನು ವಜಾಗೊಳಿಸದಿದ್ದರೆ ಇನ್ನೂ 10 ಸದಸ್ಯರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ’ ಎಂದು ಮತ್ತೊಬ್ಬ ಗ್ರಾ.ಪಂ ಸದಸ್ಯ ಸುನೀಲ ಖಿಚಡೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಗ್ರಾಮ ಪಂಚಾಯ್ತಿ ಸದಸ್ಯರಾಗಲು ಬಹಳಷ್ಟು ಜನರ ಕಷ್ಟಪಡುತ್ತಿರುವಾಗ ಇಲ್ಲಿ ಕಮಿಷನ್ ಕಿರುಕುಳಕ್ಕೆ ಬೇಸೆತ್ತು ಗ್ರಾಮ ಪಂಚಾಯ್ತಿ ಸದಸ್ಯರೇ ರಾಜೀನಾಮೆ ನೀಡುತ್ತಿರುವುದು ಆಶ್ಚರ್ಯಕರವಾಗಿದೆ.

ಈ ಹಿಂದೆ ಗುತ್ತಿಗೆದಾರರು ಬಿಜೆಪಿ ಸರ್ಕಾರದ ಮಂತ್ರಿಗಳು, ಶಾಸಕರು 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು. ಆದರೆ ಪ್ರಧಾನಿಗಳು ಈ ಬಗ್ಗೆ ಗಮನ ನೀಡಲಿಲ್ಲ. ಆನಂತರ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಮಾಜಿ ಸಚಿವ ಈಶ್ವರಪ್ಪನವರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆನಂತರ ಪಿಎಸ್‌ಐ ಹಗರಣ ಹೊರಬಂದಿತ್ತು. ಈಗ ಗ್ರಾಮ ಪಂಚಾಯ್ತಿ ಸದಸ್ಯರು ಸಹ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಇನ್ನೆನೂ ಚುನಾವಣೆ ಎದುರಾಗಲಿದ್ದು ಇವೆಲ್ಲವೂ ಚುನಾವಣೆಯಲ್ಲಿ ಪ್ರಭಾವ ಬೀರುವ ವಿಷಯಗಳಾಗಿವೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಶ್ರೀನಿವಾಸಪುರ: ರಮೇಶ್ ಕುಮಾರ್‌ರವರಿಗೆ ಒಲಿಯುವುದೇ ಹ್ಯಾಟ್ರಿಕ್ ಗೆಲುವು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...