Homeಮುಖಪುಟಗೋಮಾಂಸ ತಿನ್ನುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ

ಗೋಮಾಂಸ ತಿನ್ನುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಮೇಘಾಲಯ ಬಿಜೆಪಿ ರಾಜ್ಯಾಧ್ಯಕ್ಷ

- Advertisement -
- Advertisement -

ಮೇಘಾಲಯದಲ್ಲಿ ಬಿಜೆಪಿ ರಾಜ್ಯ ಮುಖ್ಯಸ್ಥ ಅರ್ನೆಸ್ಟ್ ಮಾವ್ರಿ ಅವರು ಗುರುವಾರ ಮತ್ತೊಮ್ಮೆ ಗೋಮಾಂಸ ತಿನ್ನುವ ಬಗ್ಗೆ ಮಾತನಾಡಿದ್ದಾರೆ. ”ರಾಜ್ಯದಲ್ಲಿ ಗೋಮಾಂಸ ತಿನ್ನಲು ಯಾವುದೇ ನಿರ್ಬಂಧಗಳಿಲ್ಲ ಮತ್ತು ನಾನು ಗೋಮಾಂಸ ತಿನ್ನುತ್ತೇನೆ” ಎಂದು ಪುನರುಚ್ಚರಿಸಿದ್ದಾರೆ. ಗೋಮಾಂಸ ತಿನ್ನುವುದನ್ನು ಇಲ್ಲಿಯ ಜನರ ಜೀವನಶೈಲಿಯಾಗಿದೆ ಅದನ್ನು “ಯಾರಿಂದಲೂ ತಡೆಯಲು ಸಾಧ್ಯವಿಲ್ಲ” ಎಂದು ಮಾವ್ರಿಯವರು ಹೇಳಿದ್ದಾರೆ.

ಈ ಹಿಂದೆಯೂ ಬಿಜೆಪಿ ರಾಜ್ಯ ಮುಖ್ಯಸ್ಥ ಅರ್ನೆಸ್ಟ್ ಮಾವ್ರಿ ಅವರು ಗೋಮಾಂಸ ತಿನ್ನುವುದರ ಬಗ್ಗೆ ಮಾತನಾಡಿದ್ದರು. ಇದೀಗ ಮತ್ತೆ ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಈ ಬಗ್ಗೆ ಮಾತನಾಡಿದ್ದು, ”ಬೇರೆ ರಾಜ್ಯಗಳು  ಗೋಮಾಂಸ ನಿಷೇಧ ಕಾಯ್ದೆಯನ್ನು ಅಂಗೀಕರಿಸಿದ ನಿರ್ಣಯದ ಬಗ್ಗೆ ನಾನು ಹೇಳಿಕೆ ನೀಡಲು ಸಾಧ್ಯವಿಲ್ಲ. ನಾವು ಮೇಘಾಲಯದಲ್ಲಿ ಇದ್ದೇವೆ, ಎಲ್ಲರೂ ಗೋಮಾಂಸ ತಿನ್ನುತ್ತಾರೆ ಮತ್ತು ಯಾವುದೇ ನಿರ್ಬಂಧವಿಲ್ಲ. ನಾನು ಕೂಡ ಗೋಮಾಂಸ ತಿನ್ನುತ್ತೇನೆ. ಮೇಘಾಲಯದಲ್ಲಿ ಯಾವುದೇ ನಿಷೇಧವಿಲ್ಲ. ಇದು ಜನರ ಜೀವನಶೈಲಿಯಾಗಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಭಾರತದಲ್ಲಿಯೂ ಅಂತಹ ನಿಯಮವಿಲ್ಲ. ಕೆಲವು ರಾಜ್ಯಗಳು ಕೆಲವು ಕಾಯಿದೆಗಳನ್ನು ಜಾರಿಗೆ ತಂದಿವೆ. ಮೇಘಾಲಯದಲ್ಲಿ ನಮ್ಮಲ್ಲಿ ಕಸಾಯಿಖಾನೆ ಇದೆ, ಅಲ್ಲಿ ಎಲ್ಲರೂ ಹಸು ಅಥವಾ ಹಂದಿಯನ್ನು ಮಾರುಕಟ್ಟೆಗೆ ತರುತ್ತಾರೆ” ಎಂದು ಮಾವ್ರಿ ಹೇಳಿದ್ದಾರೆ.

ಇದನ್ನೂ ಓದಿ: ನಾನು ಗೋಮಾಂಸ ತಿನ್ನುತ್ತೇನೆ, ಆದರೂ ಬಿಜೆಪಿಯಲ್ಲಿದ್ದೇನೆ: ಮೇಘಾಲಯ ಬಿಜೆಪಿ ಅಧ್ಯಕ್ಷ

ಈ ಬಾರಿ ಮೇಘಾಲಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಹೇಳಿದ ಮಾವ್ರಿ, ಕೇಸರಿ ಪಕ್ಷ ಕ್ರಿಶ್ಚಿಯನ್ ವಿರೋಧಿ ಎಂಬ ಆರೋಪವನ್ನು ತಳ್ಳಿಹಾಕಿದರು. ರಾಜಕೀಯ ಪ್ರಚಾರಕ್ಕಾಗಿ ಇಂತಹ ಆರೋಪಗಳನ್ನೆಲ್ಲಾ ಮಾಡುತ್ತಾರೆ ಎಂದರು.

ದೇಶದಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಎನ್‌ಡಿಎ ಸರ್ಕಾರ ಇದ್ದು, ಯಾವುದೇ ಚರ್ಚ್‌ಗಳ ಮೇಲೆ ದಾಳಿಗಳಾಗಿಲ್ಲ ಎಂದು ಅವರು ಪ್ರತಿಪಾದಿಸಿದರು. ಗೋವಾ, ನಾಗಾಲ್ಯಾಂಡ್‌ನಂತಹ ರಾಜ್ಯಗಳು ನಿಮಗೆ ಸಾಕ್ಷಿಯಾಗಿವೆ, ಅಲ್ಲಿ ಬಿಜೆಪಿ ಕ್ರಿಶ್ಚಿಯನ್‌ರ ವಿರೋಧಿಯಾಗಿಲ್ಲ ಎಂದು ಅವರು ಹೇಳಿದರು. ”ನಾನು ಸಹ ಕ್ರಿಶ್ಚಿಯನ್  ಆದರೆ, ಬಿಜೆಪಿ ನಾಯಕರು ಯಾರೂ ನನಗೆ ಎಂದಿಗೂ ಚರ್ಚ್‌ಗೆ ಹೋಗಬೇಡಿ ಎಂದು ಹೇಳುವುದಿಲ್ಲ..” ಎಂದರು.

”2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕೇವಲ ಎರಡು ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಮೇಘಾಲಯದ ಜನರು ಬದಲಾವಣೆ ಬಯಸಿದ್ದಾರೆ. ನಮ್ಮ ಸಮೀಕ್ಷೆಯ ಪ್ರಕಾರ, ನಾವು ಸ್ಪಷ್ಟಬಹುಮತದೊಂದಿಗೆ ಸರ್ಕಾರವನ್ನು ರಚಿಸುತ್ತೇವೆ ಎಂದು ಅವರು ಹೇಳಿದರು.

ಮೇಘಾಲಯ ವಿಧಾನಸಭಾ ಚುನಾವಣೆ ಸೋಮವಾರ ನಡೆಯಲಿದೆ. ಬಿಜೆಪಿ ನಾಯಕರು ಚುನಾವಣಾ ಪ್ರಣಾಳಿಕೆಗಳಲ್ಲಿ, ಪ್ರಚಾರದ ಸಂದರ್ಭದಲ್ಲಿ ಗೋಹತ್ಯೆ ನಿಷೇಧ ಮಾಡುವುದಾಗಿ ಹೇಳುತ್ತಿರುತ್ತಾರೆ. ಬಿಜೆಪಿ ಕಾರ್ಯಕರ್ತರಂತೂ ಗೋಹತ್ಯೆ ಮಹಾಪಾಪ ಎಂದು ದೇಶಾದ್ಯಂತ ಗೋಮಾಂಸ ನಿಷೇಧಕ್ಕಾಗಿ ಪ್ರಚಾರ ಮಾಡುತ್ತಾರೆ. ಆದರೆ, ಕೆಲವು ಬಿಜೆಪಿ ನಾಯಕರು ತಮ್ಮ ಅನುಕೂಲಕ್ಕೆ ತಕ್ಕಂತೆ ತಾವು ಗೋಮಾಂಸ ತಿನ್ನುವ ಸತ್ಯವನ್ನು ಆಗಾಗ ಹೊರಹಾಕುತ್ತಿರುತ್ತಾರೆ. ಮೇಘಾಲಯದ ಬಿಜೆಪಿ ಅಧ್ಯಕ್ಷ ಅರ್ನೆಸ್ಟ್ ಮಾವ್ರಿ ಅವರು ಇದೀಗ ಚುನಾವಣಾ ಸಂದರ್ಭದಲ್ಲಿ ಗೋಮಾಂಸ ತಿನ್ನುವ ಬಗ್ಗೆ ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...