Homeಮುಖಪುಟಪ್ರಧಾನಿ ವಿರುದ್ಧ ಟೀಕೆ: ಮಧ್ಯಂತರ ಜಾಮೀನಿನ ಮೇಲೆ ಪವನ್ ಖೇರಾ ಬಿಡುಗಡೆಗೆ ಸುಪ್ರೀಂ ಆದೇಶ

ಪ್ರಧಾನಿ ವಿರುದ್ಧ ಟೀಕೆ: ಮಧ್ಯಂತರ ಜಾಮೀನಿನ ಮೇಲೆ ಪವನ್ ಖೇರಾ ಬಿಡುಗಡೆಗೆ ಸುಪ್ರೀಂ ಆದೇಶ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರನ್ನು ಅಸ್ಸಾಂ ಪೊಲೀಸರು ಗುರುವಾರ (ಫೆ.23) ಬಂಧಿಸಿದ್ದಾರೆ. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್ ಮಟ್ಟಿಲೇರಿತ್ತು. ಇದೀಗ ಸುಪ್ರೀಂ ಕೋರ್ಟ್, ಖೇರಾ ಅವರಿಗೆ ಫೆಬ್ರವರಿ 28ರವರೆಗೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಆದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು, ಖೇರಾ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ ನಂತರ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಈ ಆದೇಶವು ಮಂಗಳವಾರದವರೆಗೆ (ಫೆಬ್ರವರಿ 28) ಕಾರ್ಯನಿರ್ವಹಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಎಂಆರ್ ಶಾ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ಪೀಠ ಹೇಳಿದೆ.

ಪ್ರಧಾನಿ ವಿರುದ್ಧದ ಹೇಳಿಕೆಗಳಿಗಾಗಿ ಖೇರಾ ಅವರ ವಿರುದ್ಧ ಅಸ್ಸಾಂ, ಲಕ್ನೋ ಮತ್ತು ವಾರಣಾಸಿಯಲ್ಲಿ ಅನೇಕ ಎಫ್‌ಐಆರ್‌ಗಳನ್ನು ಸಲ್ಲಿಸಲಾಗಿದೆ ಆ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಅಸ್ಸಾಂ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಖೇರಾ ಪರ ವಾದ ಮಂಡಿಸಿದ ಹಿರಿಯ ವಕೀಲ ಎಎಂ ಸಿಂಘ್ವಿ ಅವರು, ಕಾಂಗ್ರೆಸ್ ನಾಯಕ ಖೇರಾ ಅವರು ಪ್ರಧಾನಿಯ ಮೇಲಿನ ಹೇಳಿಕೆಗೆ ಅದೇ ದಿನ ಕ್ಷಮೆಯಾಚಿಸಿದ್ದಾರೆ ಮತ್ತು ಈ ಎಫ್‌ಐಆರ್‌ಗಳಲ್ಲಿ ಅವರ ವಿರುದ್ಧ ಆರೋಪ ಮಾಡಿರುವ ಅಪರಾಧಗಳಿಗೆ ಬಂಧನ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಅಸ್ಸಾಂ ಪೊಲೀಸರಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ವಕ್ತಾರ ಪವನ್ ಖೇರಾ ಬಂಧನ

ಖೇರಾ ಅವರು ಬಳಸಿದ ಪದಗಳ ಆಯ್ಕೆ ಮತ್ತು ಅವರ ವಿರುದ್ಧ ದಾಖಲಾದ ಪ್ರಕರಣಕ್ಕೂ ಹೊಂದಿಕೆಯಾಗುವುದಿಲ್ಲ. “ಇದು ವಾಕ್ ಸ್ವಾತಂತ್ರ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ” ಎಂದು ಸಿಂಘ್ವಿ ಹೇಳಿದರು.

ಅಸ್ಸಾಂ ಪೊಲೀಸರ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರು, ಆಪಾದಿತ ಹೇಳಿಕೆಗಳ ಆಡಿಯೋ-ವಿಡಿಯೋ ಕ್ಲಿಪ್‌ಅನ್ನು ನ್ಯಾಯಾಲಯದಲ್ಲಿ ಪ್ಲೇ ಮಾಡಿದರು ಮತ್ತು ಖೇರಾ ಅವರು ದೇಶದ ಪ್ರಜಾಸತ್ತಾತ್ಮಕವಾಗಿ ಚುನಾಯಿತರಾದ ಪ್ರಧಾನಿಯ ವಿರುದ್ಧ ಇಂತಹ ”ಅವಹೇಳನಕಾರಿ ಪದಗಳನ್ನು” ಬಳಸುವಂತಿಲ್ಲ ಎಂದು ಹೇಳಿದರು.

ಖೇರಾ ಅವರನ್ನು ಬಂಧಿಸಲಾಗಿದೆ, ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಭಾಟಿ ನ್ಯಾಯಾಲಯಕ್ಕೆ ತಿಳಿಸಿದರು.

ತುರ್ತು ಪಟ್ಟಿಗಾಗಿ ಸಿಂಘ್ವಿ ಪ್ರಸ್ತಾಪಿಸಿದ ಒಂದು ಗಂಟೆಯೊಳಗೆ ಸುಪ್ರೀಂ ಕೋರ್ಟ್ ಈ ವಿಷಯವನ್ನು ಮಧ್ಯಾಹ್ನ 3 ಗಂಟೆಗೆ ಕೈಗೆತ್ತಿಕೊಂಡಿತು.

ಫೆಬ್ರವರಿ 17 ರಂದು ಮುಂಬೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಷಿಸಿ ಮಾತನಾಡಿದ ಅವರು, ಫೆಬ್ರವರಿ 17ರಂದು ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಖೇರಾ ಅವರು, ಪ್ರಧಾನಿಯನ್ನು ನರೇಂದ್ರ ದಾಮೋದರದಾಸ್ ಮೋದಿ ಬದಲಿಗೆ “ನರೇಂದ್ರ ಗೌತಮ್‌ದಾಸ್ ಮೋದಿ” ಎಂದು ಉಲ್ಲೇಖಿಸಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಖೇರಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು. ಅಸ್ಸಾಂ ಪೊಲೀಸರ ಕೋರಿಕೆಯ ಮೇರೆಗೆ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಖೇರಾ ಜೊತೆಗಿದ್ದ ಕಾಂಗ್ರೆಸ್ ಮುಖಂಡರು ಡಾಂಬರ್ ಮೇಲೆ ಕುಳಿತು ಪ್ರತಿಭಟಿಸಿದರು ಮತ್ತು ಬಂಧನ ವಾರಂಟ್ ಇಲ್ಲದೆ ಅವರನ್ನು ಕರೆದೊಯ್ಯುವ ಪ್ರಯತ್ನಗಳನ್ನು ವಿರೋಧಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...