Homeಮುಖಪುಟಉಕ್ರೇನ್‌ಗೆ ಪರಮಾಣು ಬೆದರಿಕೆಯೊಡ್ಡಿದ ರಷ್ಯಾ; ಶಾಂತಿ ಮಾತುಕತೆ ನಡೆಸಲು ಉಭಯ ರಾಷ್ಟ್ರಗಳಿಗೆ ಚೀನಾ ಕರೆ

ಉಕ್ರೇನ್‌ಗೆ ಪರಮಾಣು ಬೆದರಿಕೆಯೊಡ್ಡಿದ ರಷ್ಯಾ; ಶಾಂತಿ ಮಾತುಕತೆ ನಡೆಸಲು ಉಭಯ ರಾಷ್ಟ್ರಗಳಿಗೆ ಚೀನಾ ಕರೆ

- Advertisement -
- Advertisement -

ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧದಲ್ಲಿ ಪರಮಾಣು ಅಸ್ತ್ರಗಳನ್ನು ಬಳಸುವ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಆದಷ್ಟು ಬೇಗ ಶಾಂತಿ ಮಾತುಕತೆ ನಡೆಸಲು ಉಭಯ ರಾಷ್ಟ್ರಗಳಿಗೆ ಚೀನಾ ಶುಕ್ರವಾರ ಕರೆ ನೀಡಿದೆ.

ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣ ಮಾಡಿ ಇಂದಿಗೆ (ಫೆ.24) ಒಂದು ವರ್ಷ ಕಳೆಯುತ್ತಿದೆ. ಈ ಸಂದರ್ಭದಲ್ಲಿ ಬಿಕ್ಕಟ್ಟಿನ ”ರಾಜಕೀಯ ಇತ್ಯರ್ಥ”ದ ಕುರಿತು ರಷ್ಯಾ 12 ಅಂಶಗಳನ್ನು ಬಿಡುಗಡೆಗೊಳಿಸಿದೆ.

”ರಷ್ಯಾ ಮತ್ತು ಉಕ್ರೇನ್ ನಡುವೆ ಸಾಧ್ಯವಾದಷ್ಟು ಬೇಗ ನೇರ ಸಂವಾದವನ್ನು ಪುನರಾರಂಭಿಸಲು ಎಲ್ಲ ಪಕ್ಷಗಳು ಬೆಂಬಲಿಸಬೇಕು” ಎಂದು ಚೀನಾ ವಿದೇಶಾಂಗ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾದ ಪತ್ರಿಕೆ ಹೇಳಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು, ಉಕ್ರೇನ್‌ ಮೇಲೆ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ ಚೀನಾ, ಪರಮಾಣು ಶಸ್ತ್ರಾಸ್ತ್ರಗಳ ಬಳಕೆಗೆ ಮಾತ್ರವಲ್ಲ, ಅವುಗಳನ್ನು ಬಳಕೆ ಮಾಡುತ್ತೇವೆ ಎಂದು ಬೆದರಿಕೆ ಹಾಕುವ ಕ್ರಮಕ್ಕೂ ವಿರೋಧ ವ್ಯಕ್ತಪಡಿಸಿದೆ.

”ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಬಾರದು ಮತ್ತು ಪರಮಾಣು ಯುದ್ಧಗಳನ್ನು ಮಾಡಬಾರದು. ಪರಮಾಣು ಶಸ್ತ್ರಾಸ್ತ್ರಗಳ ಬೆದರಿಕೆ ಅಥವಾ ಬಳಕೆಯನ್ನು ವಿರೋಧಿಸಬೇಕು” ಎಂದು ಚೀನಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ದೆಹಲಿ: ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ ಬಹಿಷ್ಕರಿಸುವ ಪಟ್ಟಿಗೆ ಉಕ್ರೇನ್ ಸೇರ್ಪಡೆ

”ಎರಡು ದೇಶಗಳು ಹೀಗೆ ಯುದ್ಧದ ಸಂದರ್ಭದಲ್ಲಿ ಪರಮಾಣು ಬಳಸುವ ಮೂಲಕ ಅಂತರರಾಷ್ಟ್ರೀಯ ಮಾನವೀಯ ಕಾನೂನನ್ನು ಉಲ್ಲಂಘಿಸಿದಂತಾಗುತ್ತದೆ. ಹಾಗಾಗಿ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಾಗರಿಕರು ಅಥವಾ ನಾಗರಿಕ ಸೌಲಭ್ಯಗಳ ಮೇಲೆ ದಾಳಿ ಮಾಡುವುದನ್ನು ತಪ್ಪಿಸಬೇಕು” ಎಂದು ಚೀನಾ ಹೇಳಿದೆ.

ಮಿತ್ರ ರಾಷ್ಟ್ರ ರಷ್ಯಾದೊಂದಿಗೆ ನಿಕಟ ಸಂಬಂಧವನ್ನು ಉಳಿಸಿಕೊಂಡು ಈ ಯುದ್ಧದಲ್ಲಿ ತಟಸ್ಥವಾಗಿ ತನ್ನ ಸ್ಥಾನವನ್ನು ಪಡೆದುಕೊಳ್ಳಲು ಚೀನಾ ಪ್ರಯತ್ನಿಸಿದೆ.

ಬುಧವಾರ ಚೀನಾದ ಉನ್ನತ ರಾಜತಾಂತ್ರಿಕ ವಾಂಗ್ ಯಿ ಅವರು, ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಮತ್ತು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾದರು.

ಈ ಬಗ್ಗೆ ಗುರುವಾರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಮಾತನಾಡಿದ್ದು, ”ಚೀನಾ ದೇಶ ಇದೀಗ ಉಕ್ರೇನ್ ಬಗ್ಗೆ ಮಾತನಾಡಲು ಪ್ರಾರಂಭಿಸಿದ್ದು ಮತ್ತು ಕೆಲವು ಒಳ್ಳೆಯ ಸಂದೇಶಗಳನ್ನು ಕಳುಹಿಸಿದ್ದು ಒಳ್ಳೆಯದು ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದರು.

”ನಾವು ಚೀನಾದೊಂದಿಗೆ ಸಭೆ ನಡೆಸಲು ಬಯಸುತ್ತೇವೆ. ಅವರು ನೀಡುವ ಅಂತಿಮ ತೀರ್ಮಾನಗಳನ್ನು ನೋಡಿದ ನಂತರ ನಾವು ನಮ್ಮ ತೀರ್ಮಾನಗಳನ್ನು ತಿಳಿಸುತ್ತೇವೆ” ಎಂದು ಝೆಲೆನ್ಸ್ಕಿ ಹೇಳಿದರು.

ರಷ್ಯಾ ಉಕ್ರೇನ್‌ ಮೇಲೆ ದಾಳಿ ಮಾಡಲು ಶುರುಮಾಡಿದಾಗಿನಿಂದ ಚೀನಾ ಪುಟಿನ್‌ಗೆ ರಾಜತಾಂತ್ರಿಕ ಮತ್ತು ಆರ್ಥಿಕ ಬೆಂಬಲವನ್ನು ನೀಡಿತ್ತು ಆದರೆ ಬಹಿರಂಗವಾಗಿ ಮಿಲಿಟರಿ ಸಹಾಯ ಅಥವಾ ಮಾರಕ ಶಸ್ತ್ರಾಸ್ತ್ರಗಳ ಪೂರೈಕೆ ವಿಚಾರದಿಂದ ದೂರವಿತ್ತು.

ಚೀನಾದ ರಾಜ್ಯ-ನಿಯಂತ್ರಿತ ಸಂಸ್ಥೆಗಳು, ಮಾರಕವಲ್ಲದ ಡ್ರೋನ್‌ಗಳು ಮತ್ತು ಇತರ ಉಪಕರಣಗಳನ್ನು ರಷ್ಯಾ ಮತ್ತು ಉಕ್ರೇನ್‌ಗೆ ಮಾರಾಟ ಮಾಡಿದೆ, ಆದರೆ ಮಾನವರಹಿತ ವೈಮಾನಿಕ ವಾಹನಗಳಂತಹ ಹೆಚ್ಚು-ಅಗತ್ಯವಿರುವ ಸರಬರಾಜುಗಳಿಗಾಗಿ ರಷ್ಯಾ ಇರಾನ್‌ನತ್ತ ಮುಖ ಮಾಡಿತು.

ಉತ್ತರ ಕೊರಿಯಾ, ರಾಕೆಟ್‌ಗಳು ಮತ್ತು ಫಿರಂಗಿ ಶೆಲ್‌ಗಳನ್ನು ಸಹ ಒದಗಿಸಿದೆ ಎಂದು ಅಮೆರಿಕ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...