Homeಮುಖಪುಟಉಕ್ರೇನ್‌ಗೆ ಪರಮಾಣು ಬೆದರಿಕೆಯೊಡ್ಡಿದ ರಷ್ಯಾ; ಶಾಂತಿ ಮಾತುಕತೆ ನಡೆಸಲು ಉಭಯ ರಾಷ್ಟ್ರಗಳಿಗೆ ಚೀನಾ ಕರೆ

ಉಕ್ರೇನ್‌ಗೆ ಪರಮಾಣು ಬೆದರಿಕೆಯೊಡ್ಡಿದ ರಷ್ಯಾ; ಶಾಂತಿ ಮಾತುಕತೆ ನಡೆಸಲು ಉಭಯ ರಾಷ್ಟ್ರಗಳಿಗೆ ಚೀನಾ ಕರೆ

- Advertisement -
- Advertisement -

ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧದಲ್ಲಿ ಪರಮಾಣು ಅಸ್ತ್ರಗಳನ್ನು ಬಳಸುವ ಮಾತುಗಳು ಕೇಳಿಬಂದ ಹಿನ್ನೆಲೆಯಲ್ಲಿ ಆದಷ್ಟು ಬೇಗ ಶಾಂತಿ ಮಾತುಕತೆ ನಡೆಸಲು ಉಭಯ ರಾಷ್ಟ್ರಗಳಿಗೆ ಚೀನಾ ಶುಕ್ರವಾರ ಕರೆ ನೀಡಿದೆ.

ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣ ಮಾಡಿ ಇಂದಿಗೆ (ಫೆ.24) ಒಂದು ವರ್ಷ ಕಳೆಯುತ್ತಿದೆ. ಈ ಸಂದರ್ಭದಲ್ಲಿ ಬಿಕ್ಕಟ್ಟಿನ ”ರಾಜಕೀಯ ಇತ್ಯರ್ಥ”ದ ಕುರಿತು ರಷ್ಯಾ 12 ಅಂಶಗಳನ್ನು ಬಿಡುಗಡೆಗೊಳಿಸಿದೆ.

”ರಷ್ಯಾ ಮತ್ತು ಉಕ್ರೇನ್ ನಡುವೆ ಸಾಧ್ಯವಾದಷ್ಟು ಬೇಗ ನೇರ ಸಂವಾದವನ್ನು ಪುನರಾರಂಭಿಸಲು ಎಲ್ಲ ಪಕ್ಷಗಳು ಬೆಂಬಲಿಸಬೇಕು” ಎಂದು ಚೀನಾ ವಿದೇಶಾಂಗ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾದ ಪತ್ರಿಕೆ ಹೇಳಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು, ಉಕ್ರೇನ್‌ ಮೇಲೆ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸುವುದಾಗಿ ಬೆದರಿಕೆ ಹಾಕಿದ್ದಾರೆ. ಆದರೆ ಚೀನಾ, ಪರಮಾಣು ಶಸ್ತ್ರಾಸ್ತ್ರಗಳ ಬಳಕೆಗೆ ಮಾತ್ರವಲ್ಲ, ಅವುಗಳನ್ನು ಬಳಕೆ ಮಾಡುತ್ತೇವೆ ಎಂದು ಬೆದರಿಕೆ ಹಾಕುವ ಕ್ರಮಕ್ಕೂ ವಿರೋಧ ವ್ಯಕ್ತಪಡಿಸಿದೆ.

”ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಬಾರದು ಮತ್ತು ಪರಮಾಣು ಯುದ್ಧಗಳನ್ನು ಮಾಡಬಾರದು. ಪರಮಾಣು ಶಸ್ತ್ರಾಸ್ತ್ರಗಳ ಬೆದರಿಕೆ ಅಥವಾ ಬಳಕೆಯನ್ನು ವಿರೋಧಿಸಬೇಕು” ಎಂದು ಚೀನಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ದೆಹಲಿ: ಮಹಿಳಾ ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್‌ ಬಹಿಷ್ಕರಿಸುವ ಪಟ್ಟಿಗೆ ಉಕ್ರೇನ್ ಸೇರ್ಪಡೆ

”ಎರಡು ದೇಶಗಳು ಹೀಗೆ ಯುದ್ಧದ ಸಂದರ್ಭದಲ್ಲಿ ಪರಮಾಣು ಬಳಸುವ ಮೂಲಕ ಅಂತರರಾಷ್ಟ್ರೀಯ ಮಾನವೀಯ ಕಾನೂನನ್ನು ಉಲ್ಲಂಘಿಸಿದಂತಾಗುತ್ತದೆ. ಹಾಗಾಗಿ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನಾಗರಿಕರು ಅಥವಾ ನಾಗರಿಕ ಸೌಲಭ್ಯಗಳ ಮೇಲೆ ದಾಳಿ ಮಾಡುವುದನ್ನು ತಪ್ಪಿಸಬೇಕು” ಎಂದು ಚೀನಾ ಹೇಳಿದೆ.

ಮಿತ್ರ ರಾಷ್ಟ್ರ ರಷ್ಯಾದೊಂದಿಗೆ ನಿಕಟ ಸಂಬಂಧವನ್ನು ಉಳಿಸಿಕೊಂಡು ಈ ಯುದ್ಧದಲ್ಲಿ ತಟಸ್ಥವಾಗಿ ತನ್ನ ಸ್ಥಾನವನ್ನು ಪಡೆದುಕೊಳ್ಳಲು ಚೀನಾ ಪ್ರಯತ್ನಿಸಿದೆ.

ಬುಧವಾರ ಚೀನಾದ ಉನ್ನತ ರಾಜತಾಂತ್ರಿಕ ವಾಂಗ್ ಯಿ ಅವರು, ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಮತ್ತು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಮಾಸ್ಕೋದಲ್ಲಿ ಭೇಟಿಯಾದರು.

ಈ ಬಗ್ಗೆ ಗುರುವಾರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಮಾತನಾಡಿದ್ದು, ”ಚೀನಾ ದೇಶ ಇದೀಗ ಉಕ್ರೇನ್ ಬಗ್ಗೆ ಮಾತನಾಡಲು ಪ್ರಾರಂಭಿಸಿದ್ದು ಮತ್ತು ಕೆಲವು ಒಳ್ಳೆಯ ಸಂದೇಶಗಳನ್ನು ಕಳುಹಿಸಿದ್ದು ಒಳ್ಳೆಯದು ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದರು.

”ನಾವು ಚೀನಾದೊಂದಿಗೆ ಸಭೆ ನಡೆಸಲು ಬಯಸುತ್ತೇವೆ. ಅವರು ನೀಡುವ ಅಂತಿಮ ತೀರ್ಮಾನಗಳನ್ನು ನೋಡಿದ ನಂತರ ನಾವು ನಮ್ಮ ತೀರ್ಮಾನಗಳನ್ನು ತಿಳಿಸುತ್ತೇವೆ” ಎಂದು ಝೆಲೆನ್ಸ್ಕಿ ಹೇಳಿದರು.

ರಷ್ಯಾ ಉಕ್ರೇನ್‌ ಮೇಲೆ ದಾಳಿ ಮಾಡಲು ಶುರುಮಾಡಿದಾಗಿನಿಂದ ಚೀನಾ ಪುಟಿನ್‌ಗೆ ರಾಜತಾಂತ್ರಿಕ ಮತ್ತು ಆರ್ಥಿಕ ಬೆಂಬಲವನ್ನು ನೀಡಿತ್ತು ಆದರೆ ಬಹಿರಂಗವಾಗಿ ಮಿಲಿಟರಿ ಸಹಾಯ ಅಥವಾ ಮಾರಕ ಶಸ್ತ್ರಾಸ್ತ್ರಗಳ ಪೂರೈಕೆ ವಿಚಾರದಿಂದ ದೂರವಿತ್ತು.

ಚೀನಾದ ರಾಜ್ಯ-ನಿಯಂತ್ರಿತ ಸಂಸ್ಥೆಗಳು, ಮಾರಕವಲ್ಲದ ಡ್ರೋನ್‌ಗಳು ಮತ್ತು ಇತರ ಉಪಕರಣಗಳನ್ನು ರಷ್ಯಾ ಮತ್ತು ಉಕ್ರೇನ್‌ಗೆ ಮಾರಾಟ ಮಾಡಿದೆ, ಆದರೆ ಮಾನವರಹಿತ ವೈಮಾನಿಕ ವಾಹನಗಳಂತಹ ಹೆಚ್ಚು-ಅಗತ್ಯವಿರುವ ಸರಬರಾಜುಗಳಿಗಾಗಿ ರಷ್ಯಾ ಇರಾನ್‌ನತ್ತ ಮುಖ ಮಾಡಿತು.

ಉತ್ತರ ಕೊರಿಯಾ, ರಾಕೆಟ್‌ಗಳು ಮತ್ತು ಫಿರಂಗಿ ಶೆಲ್‌ಗಳನ್ನು ಸಹ ಒದಗಿಸಿದೆ ಎಂದು ಅಮೆರಿಕ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...