Homeಮುಖಪುಟತಾಜ್ ಮಹಲ್, ಕೆಂಪು ಕೋಟೆ ಕೆಡವಿಬಿಡಿ: ನಟ ನಾಸಿರುದ್ದೀನ್ ಶಾ ಬೇಸರ

ತಾಜ್ ಮಹಲ್, ಕೆಂಪು ಕೋಟೆ ಕೆಡವಿಬಿಡಿ: ನಟ ನಾಸಿರುದ್ದೀನ್ ಶಾ ಬೇಸರ

ತರ್ಕ ಅಥವಾ ಇತಿಹಾಸದ ಬಗ್ಗೆ ತಿಳುವಳಿಕೆ ಇಲ್ಲದಿದ್ದಾಗ ದ್ವೇಷ ಮತ್ತು ತಪ್ಪು ಮಾಹಿತಿಗಳು ಪ್ರವರ್ಧಮಾನಕ್ಕೆ ಬರುತ್ತವೆ. ಹಾಗಾಗಿ ಇಂದಿನ ಸಮಸ್ಯೆಗಳಿಗೆ ಮೊಘಲರನ್ನು ದೂಷಿಸಲಾಗುತ್ತಿದೆ.

- Advertisement -
- Advertisement -

ಭಾರತದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ ಎಂದು ಬಾಲಿವುಡ್‌ನ ಹಿರಿಯ ನಟ ನಾಸಿರುದ್ದೀನ್ ಶಾ ಅಭಿಪ್ರಾಯಪಟ್ಟಿದ್ದಾರೆ.

ಮಾರ್ಚ್ 3 ರಂದು ZEE5 ಓಟಿಟಿಯಲ್ಲಿ ಬಿಡುಗಡೆಯಾಗುತ್ತಿರುವ ‘ತಾಜ್ – ಡಿವೈಡೆಡ್ ಬೈ ಬ್ಲಡ್’ ವೆಬ್ ಸೀರಿಸ್ ನಲ್ಲಿ ಅವರು ರಾಜ ಅಕ್ಬರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ಅವರನ್ನು ಮಾತಿಗೆಳೆದಿದೆ.

ಇಂದು ಏನೇ ತಪ್ಪುಗಳು ನಡೆದರೂ ಆ ಎಲ್ಲಾ ತಪ್ಪುಗಳಿಗೆ ಮೊಘಲರ ಆಡಳಿತವೇ ಕಾರಣ ಎಂದು ನಂಬುವ ಜನರಿರುವ ದೇಶವನ್ನು ನೀವು ಹೇಗೆ ನೋಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಜನರು ಅಕ್ಬರ್ ಮತ್ತು ನಾದರ್ ಶಾ ಅಥವಾ ಬಾಬರ್‌ನ ಮುತ್ತಜ್ಜ ತೈಮೂರ್‌ನಂತಹ ಆಕ್ರಮಣಕಾರರ ನಡುವಿನ ವ್ಯತ್ಯಾಸವನ್ನು ಹೇಳಲು ಸಾಧ್ಯವಿಲ್ಲ. ಇದೆಲ್ಲ ನೋಡಿದರೆ ನಗು ಬರುತ್ತದೆ, ಏಕೆಂದರೆ ಈ ಪ್ರಶ್ನೆಗಳೇ ಹಾಸ್ಯಾಸ್ಪದವಾಗಿವೆ” ಎಂದಿದ್ದಾರೆ.

”ಈ ದೇಶಕ್ಕೆ ಎಲ್ಲರೂ ಲೂಟಿ ಮಾಡಲು ಬಂದರು. ಆದರೆ ಮೊಘಲರು ಲೂಟಿ ಮಾಡಲು ಇಲ್ಲಿಗೆ ಬಂದಿಲ್ಲ. ಅವರು ಇದನ್ನು ತಮ್ಮ ಮನೆಯನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಬಂದರು ಮತ್ತು ಅದನ್ನೇ ಅವರು ಮಾಡಿದರು. ಅವರ ಕೊಡುಗೆಯನ್ನು ಯಾರಾದರೂ ನಿರಾಕರಿಸಬಹುದೆ?” ಎಂದು ಶಾ ಪ್ರಶ್ನಿಸಿದ್ದಾರೆ.

ತರ್ಕ ಅಥವಾ ಇತಿಹಾಸದ ಬಗ್ಗೆ ತಿಳುವಳಿಕೆ ಇಲ್ಲದಿದ್ದಾಗ ದ್ವೇಷ ಮತ್ತು ತಪ್ಪು ಮಾಹಿತಿಗಳು ಪ್ರವರ್ಧಮಾನಕ್ಕೆ ಬರುತ್ತವೆ. ಹಾಗಾಗಿಯೆ ಬಹುಶಃ ಭಾರತದ ಒಂದಷ್ಟು ಜನರ ಗುಂಪು ಭೂತಕಾಲದ ಮೇಲೆ ಅದರಲ್ಲೂ ಮೊಘಲ್ ಸಾಮ್ರಾಜ್ಯವನ್ನು ದೂಷಿಸುತ್ತಿದೆ. ಇದು ನನಗೆ ಕೋಪಕ್ಕಿಂತ ಹೆಚ್ಚಾಗಿ ನಗು ತರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಮೊಘಲರು ಕೇವಲ ದುಷ್ಕೃತ್ಯಗಳನ್ನೇ ನಡೆಸಿದ್ದಾರೆ ಎಂಬ ಕಲ್ಪನೆಯು ದೇಶದ ಇತಿಹಾಸದ ಬಗ್ಗೆ ತಿಳುವಳಿಕೆಯ ಕೊರತೆಯನ್ನು ತೋರಿಸುತ್ತದೆ. ಇತಿಹಾಸದ ಪುಸ್ತಕಗಳಲ್ಲಿ ಭಾರತದ ಸ್ಥಳೀಯ ಸಂಸ್ಕೃತಿಗಿಂತ ಮೊಘಲರ ವೈಭವೀಕರಣ ಮಾಡಿರುವುದು ನಿಜ. ಆದರೆ ಇತಿಹಾಸದಲ್ಲಿ ಮೊಘಲ್ ಕಾಲವನ್ನು ದುರಂತವೆಂದು ನಾವು ತಿರಸ್ಕರಿಸಬಾರದು ಎಂದು ಅವರು ಹೇಳಿದ್ದಾರೆ.

”ದುರದೃಷ್ಟವಶಾತ್ ಶಾಲೆಯ ಇತಿಹಾಸದ ಪುಸ್ತಕಗಳಲ್ಲಿ ಮುಖ್ಯವಾಗಿ ಮೊಘಲರು ಅಥವಾ ಬ್ರಿಟಿಷರ ಬಗ್ಗೆ ಹೆಚ್ಚು ತಿಳಿಸಿಕೊಡಲಾಗುತ್ತದೆ. ನಮಗೆ ಲಾರ್ಡ್ ಹಾರ್ಡಿ, ಲಾರ್ಡ್ ಕಾರ್ನ್‌ವಾಲಿಸ್ ಮತ್ತು ಮೊಘಲ್ ಚಕ್ರವರ್ತಿಗಳ ಬಗ್ಗೆ ತಿಳಿದಿದೆ. ಆದರೆ ನಮಗೆ ಗುಪ್ತ ರಾಜವಂಶದ ಬಗ್ಗೆ ಅಥವಾ ಮೌರ್ಯ ಸಾಮ್ರಾಜ್ಯದ ಬಗ್ಗೆ ಅಥವಾ ವಿಜಯನಗರ ಸಾಮ್ರಾಜ್ಯದ ಬಗ್ಗೆ, ಅಜಂತಾ ಗುಹೆಗಳ ಇತಿಹಾಸ ಅಥವಾ ಈಶಾನ್ಯದ ಬಗ್ಗೆ ಹೆಚ್ಚು ತಿಳಿದಿಲ್ಲ. ನಾವು ಈ ಯಾವುದೇ ವಿಷಯಗಳನ್ನು ಓದಲಿಲ್ಲ ಏಕೆಂದರೆ ಇತಿಹಾಸವನ್ನು ಇಂಗ್ಲಿಷ್ ಅಥವಾ ಆಂಗ್ಲರು ಬರೆದಿದ್ದಾರೆ ಮತ್ತು ಇದು ನಿಜವಾಗಿಯೂ ಅನ್ಯಾಯವಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

ಆದ್ದರಿಂದ ಜನರು ಹೇಳುತ್ತಿರುವುದು ಸ್ವಲ್ಪ ಮಟ್ಟಿಗೆ ನಿಜ. ಇತಿಹಾಸ ಪಠ್ಯದಲ್ಲಿ ಮೊಘಲರನ್ನು ವೈಭವೀಕರಿಸಲಾಗಿದೆ. ಆದರೆ ಅವರನ್ನು ವಿಲನ್ ಮಾಡುವ ಅಗತ್ಯವಿಲ್ಲ. ಮೊಘಲ್ ಸಾಮ್ರಾಜ್ಯವು ತುಂಬಾ ರಾಕ್ಷಸತನದಿಂದ ಕೂಡಿತ್ತು ಎಂದು ಅದನ್ನು ವಿರೋಧಿಸುವವರು, ಮೊಘಲರು ನಿರ್ಮಿಸಿದ ಸ್ಮಾರಕಗಳನ್ನು ಏಕೆ ಕೆಡವುವುದಿಲ್ಲ? ಅವರು ಮಾಡಿದ್ದೆಲ್ಲವೂ ಭಯಾನಕವಾಗಿದ್ದರೆ, ತಾಜ್ ಮಹಲ್ ಕೆಡವಿ, ಕೆಂಪು ಕೋಟೆಯನ್ನು ಕೆಡವಿ, ಕುತುಬ್ ಮಿನಾರ್‌ನ್ನು ಕೆಡವಿ. ಬದಲಿಗೆ ನಾವು ಕೆಂಪು ಕೋಟೆಯನ್ನು ಏಕೆ ಪವಿತ್ರವೆಂದು ಪರಿಗಣಿಸುತ್ತೇವೆ? ಇದನ್ನು ಮೊಘಲರು ನಿರ್ಮಿಸಿದರು. ನಾವು ಅವರನ್ನು ವೈಭವೀಕರಿಸುವ ಅಗತ್ಯವಿಲ್ಲ, ಆದರೆ ಅವರನ್ನು ನಿಂದಿಸುವ ಅಗತ್ಯವೂ ಇಲ್ಲ ಎಂದು ನಾಸಿರುದ್ದೀನ್ ಶಾ ಹೇಳಿದ್ದಾರೆ.

ಈ ಕುರಿತು ಬೌದ್ಧಿಕ ಚರ್ಚೆಗೆ ಅವಕಾಶ ಇದೆಯೇ ಎಂಬ ಪ್ರಶ್ನೆಗೆ ನಾಸಿರುದ್ದೀನ್ ಶಾ ಖಂಡಿತ ಅಂತಹ ಪರಿಸ್ಥಿತಿ ಇಲ್ಲ. ಭಾರತದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ ಎಂದಿದ್ದಾರೆ. ಮುಂದುವರಿದು “ಟಿಪ್ಪು ಸುಲ್ತಾನ್‌ ಆಂಗ್ಲರನ್ನು ಭಾರತದಿಂದ ಓಡಿಸಲು ತನ್ನ ಪ್ರಾಣವನ್ನೇ ಕೊಟ್ಟ ವ್ಯಕ್ತಿ. ಆದರೆ ಅಂತಹ ವ್ಯಕ್ತಿಯನ್ನೇ ಇಂದು ತುಚ್ಚೀಕರಿಸಲಾಗುತ್ತಿದೆ. ‘ನಿಮಗೆ ಟಿಪ್ಪು ಸುಲ್ತಾನ್ ಬೇಕಾ ಅಥವಾ ರಾಮ ಮಂದಿರ ಬೇಕೇ?’ ಎಂದು ಪ್ರಶ್ನಿಸುತ್ತಿದ್ದಾರೆ. ಇದು ಯಾವ ರೀತಿಯ ತರ್ಕ? ಈ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ನಾನು ಭಾವಿಸಿದ್ದೇನೆ, ಏಕೆಂದರೆ ಅವರು ಎಂದಿಗೂ ನನ್ನ ದೃಷ್ಟಿಕೋನದಲ್ಲಿ ಯೋಚಿಸಲು ಮತ್ತು ನಾನು ಅವರ ದೃಷ್ಟಿಕೋನದಲ್ಲಿ ಯೋಚಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ, ಆಳುವ ಸರ್ಕಾರದ ಮಂತ್ರಿಗಳು ನಿರಂತರವಾಗಿ ಮೊಘಲ್ ಯುಗವನ್ನು ನಿಂದಿಸುತ್ತಿದ್ದಾರೆ. ಮೊಘಲರ ಕಾಲದ ಹೆಸರುಗಳಿರುವ 40 ಹಳ್ಳಿಗಳ ಹೆಸರು ಬದಲಾಯಿಸಲು ಪ್ರಯತ್ನಿಸುವುದರಿಂದ ಹಿಡಿದು ಇತ್ತಿಚೇಗೆ ರಾಷ್ಟ್ರಪತಿ ಭವನದಲ್ಲಿರುವ ಐತಿಹಾಸಿಕ ಮೊಘಲ್ ಉದ್ಯಾನವನ್ನು ‘ಅಮೃತ್ ಉದ್ಯಾನ್’ ಎಂದು ಮರುನಾಮಕರಣ ಮಾಡುವವರೆಗೆ ಇತಿಹಾಸವನ್ನು ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ. ಕಳೆದ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ “ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ, ಕಾಶಿ, ಕೇದಾರನಾಥ ಮತ್ತು ಬದರಿನಾಥ್ ಅಭಿವೃದ್ಧಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಟಿಪ್ಪು ಸುಲ್ತಾನ್ ಅನ್ನು ವೈಭವೀಕರಿಸುವವರು ಚುನಾವಣೆ ಎದುರಿಸುತ್ತಿದ್ದಾರೆ. ಇಬ್ಬರಲ್ಲಿ ಯಾರನ್ನು ಆರಿಸುತ್ತೀರಿ” ಎಂದು ಪ್ರಶ್ನಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ನಾಸಿರುದ್ದೀನ್ ಶಾರವರ ಮೇಲಿನ ಮಾತುಗಳು ಬಹಳ ಮಹತ್ವ ಪಡೆಯುತ್ತವೆ.

ಕೃಪೆ: ಇಂಡಿಯನ್ ಎಕ್ಸ್‌ಪ್ರೆಸ್‌

ಇದನ್ನೂ ಓದಿ: ಪರೇಶ್‌ ಮೇಸ್ತಾ ಹೆಸರಲ್ಲಿ ಗಲಭೆ; 112 ಜನರ ಮೇಲಿದ್ದ ಪ್ರಕರಣ ವಾಪಸ್‌ ಪಡೆದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...