Homeಎಕಾನಮಿಹಿಂಡೆನ್‌ಬರ್ಗ್ ಎಫೆಕ್ಟ್: ಮೊದಲ ಬಾರಿಗೆ ಅದಾನಿ ಕಂಪನಿಗಳಲ್ಲಿನ ಎಲ್ಐಸಿ ಹೂಡಿಕೆ ನಿವ್ವಳ ನಷ್ಟದಲ್ಲಿ

ಹಿಂಡೆನ್‌ಬರ್ಗ್ ಎಫೆಕ್ಟ್: ಮೊದಲ ಬಾರಿಗೆ ಅದಾನಿ ಕಂಪನಿಗಳಲ್ಲಿನ ಎಲ್ಐಸಿ ಹೂಡಿಕೆ ನಿವ್ವಳ ನಷ್ಟದಲ್ಲಿ

ಹಿಂಡೆನ್‌ಬರ್ಗ್ ವರದಿಯ ನಂತರ LIC ಯ ನಮ್ಮ ಹಣ 72,000 ಕೋಟಿ ರೂಗಳಿಂದ 26,000 ಕೋಟಿ ರೂಗಳಿಗೆ ಕುಸಿದಿದೆ. - ಪ್ರಶಾಂತ್ ಭೂಷಣ್

- Advertisement -
- Advertisement -

ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮ (ಎಲ್‌ಐಸಿ)ವು ಅದಾನಿ ಸಮೂಹದ ಐದು ದೊಡ್ಡ ಕಂಪನಿಗಳಲ್ಲಿ  ಹೂಡಿದ್ದ ಷೇರುಗಳ ಮಾರುಕಟ್ಟೆ ಮೌಲ್ಯವು ಮೊದಲ ಬಾರಿಗೆ ಅದರ ಖರೀದಿ ಮೌಲ್ಯಕ್ಕಿಂತ ಕಡಿಮೆಯಾಗಿದ್ದು ನಿವ್ವಳ ನಷ್ಟಕ್ಕೆ ಸಿಲುಕಿದೆ.

ಗುರುವಾರದ ಅಂತ್ಯದ ವೇಳೆಗೆ ಅದಾನಿ ಗ್ರೂಪ್ ಕಂಪನಿಗಳಲ್ಲಿ (ಅಂಬುಜಾ ಸಿಮೆಂಟ್ಸ್ ಮತ್ತು ಎಸಿಸಿ ಹೊರತುಪಡಿಸಿ) ಎಲ್‌ಐಸಿ ಹೊಂದಿರುವ ಮಾರುಕಟ್ಟೆ ಮೌಲ್ಯವು ರೂ 26,861 ಕೋಟಿಗಳಿಗೆ ಕುಸಿದೆ. ಅದರ ಖರೀದಿ ಮೌಲ್ಯ ರೂ 30,127 ಕೋಟಿಗಿಂತ ಶೇಕಡ 11ರಷ್ಟು ಕಡಿಮೆಯಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

LIC ಅದಾನಿ ಗ್ರೂಪ್ ಕಂಪನಿಗಳಲ್ಲಿ ಅತಿದೊಡ್ಡ ದೇಶೀಯ ಸಾಂಸ್ಥಿಕ ಷೇರುದಾರರಾಗಿದೆ. ಅದು 2022 ರ ಡಿಸೆಂಬರ್ ಅಂತ್ಯದ ತ್ರೈಮಾಸಿಕದಲ್ಲಿ ಅದಾನಿ ಪೋರ್ಟ್ಸ್‌ನಲ್ಲಿ 9.14%, ಅದಾನಿ ಟೋಟಲ್ ಗ್ಯಾಸ್‌ನಲ್ಲಿ 5.96%, ಅದಾನಿ ಎಂಟರ್‌ಪ್ರೈಸಸ್‌ನಲ್ಲಿ 4.23%, ಅದಾನಿ ಟ್ರಾನ್ಸ್‌ಮಿಷನ್‌ನಲ್ಲಿ3.65% ಮತ್ತು ಅದಾನಿ ಗ್ರೀನ್ ಎನರ್ಜಿಯಲ್ಲಿ 1.28% ರಷ್ಟು ಪಾಲು ಹೊಂದಿದೆ.

ಡಿಸೆಂಬರ್ ಅಂತ್ಯದ ವೇಳೆದ ಅದಾನಿ ಗ್ರೂಪ್‌ನಲ್ಲಿನ ಎಲ್‌ಐಸಿ ಹೂಡಿಕೆಯ ಮಾರುಕಟ್ಟೆ ಮೌಲ್ಯ 72,193 ಕೋಟಿ ರೂಗಳಾಗಿತ್ತು. ಆದರೆ ಅದಾನಿ ಸಮೂಹ ವಂಚನೆ ಮತ್ತು ಅಕ್ರಮದಲ್ಲಿ ಭಾಗಿಯಾಗಿದೆ ಎಂದು ಹಿಂಡೆನ್‌ಬರ್ಗ್ ವರದಿ ಪ್ರಕಟವಾದ ನಂತರ ಜನವರಿ 27ರ ಹೊತ್ತಿಗೆ 56,142 ಕೋಟಿ ರೂಗಳಿಗೆ ಕುಸಿದಿತ್ತು. ಆಗಲೂ ಎಲ್‌ಐಸಿ ನಷ್ಟದಲ್ಲಿಲ್ಲ ಎಂದೇ ಹೇಳಲಾಗಿತ್ತು. ಆದರೆ ಈಗ ಎಲ್‌ಐಸಿಯ ಮಾರುಕಟ್ಟೆ ಮೌಲ್ಯ 26,861 ಕೋಟಿ ರೂಗಳಿಗೆ ಕುಸಿದು ನಷ್ಟಕ್ಕೆ ಒಳಗಾಗಿದೆ. ಒಟ್ಟಾರೆಯಾಗಿ ಐದು ದೊಡ್ಡ ಅದಾನಿ ಗ್ರೂಪ್ ಕಂಪನಿಗಳಲ್ಲಿ ಎಲ್‌ಐಸಿ ಹೊಂದಿರುವ ಮಾರುಕಟ್ಟೆ ಮೌಲ್ಯದಲ್ಲಿ 62.8 ಪ್ರತಿಶತದಷ್ಟು ಕುಸಿತ ಕಂಡಿದೆ.

ಅದಾನಿ ಹಗರಣ ಹೊರಬರುತ್ತಿದ್ದಂತೆ ಎಲ್‌ಐಸಿ ಮತ್ತು ಎಸ್‌ಬಿಐ ರೀತಿಯ ಸರ್ಕಾರಿ ವಲಯದ ಸಂಸ್ಥೆಗಳು ಅದಾನಿ ಕಂಪನಿಯಲ್ಲಿ ಹೂಡಿಕೆ ಮಾಡಿರುವ ಹಣ ನಷ್ಟಕ್ಕೆ ಸಿಲುಕುತ್ತದೆ ಎಂಬ ಆತಂಕಗಳು ವ್ಯಕ್ತವಾಗಿದ್ದವು. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್, “ಹಾಗೇನೂ ಆಗುವುದಿಲ್ಲ, ಇದು ಟೀ ಲೋಟದೊಳಗಿನ ಗಾಳಿಯಷ್ಟೆ, ಇದರಿಂದ ದೇಶದ ಆರ್ಥಿಕ ಬುನಾದಿಗೆ ಹೊಡೆತವಾಗುವುದಿಲ್ಲ” ಎಂದಿದ್ದರು. ಆದರೆ ಈಗ ಎಲ್‌ಐಸಿ ಹೂಡಿಕೆ ಹಣದಲ್ಲಿ ನಷ್ಟಕ್ಕೆ ಒಳಗಾಗಿದೆ. ಅದು ಮತ್ತಷ್ಟು ನಷ್ಟಕ್ಕೆ ಸಿಲುಕುವ ಅಪಾಯವಿದೆ ಎಂದು ಹಲವರು ಸರ್ಕಾರದ ನೀತಿಗಳ ವಿರುದ್ಧ ಕಿಡಿಕಾರಿದ್ದಾರೆ.

ಟಿಎಂಸಿ ಸಂಸದೆ ಮೊಹುವ ಮೊಹಿತ್ರ ಟ್ವೀಟ್ ಮಾಡಿ, “ಅದಾನಿ ಕಂಪನಿಗಳಲ್ಲಿ ಎಲ್‌ಐಸಿ ಹೂಡಿದ್ದ ಹಣದಲ್ಲಿ 3200 ಕೋಟಿ ರೂ ನಷ್ಟವಾಗಿದೆ. ದೇಶದ ಜನರ ಹಿತಾಸಕ್ತಿ ಬಲಿ ಕೊಟ್ಟು ಅದಾನಿ ಕಂಪನಿಗಳಲ್ಲಿ ಹೂಡಿಕೆ ಮಾಡಲು ಒತ್ತಾಯಿಸಿದವರು ಯಾರು ಎಂಬುದನ್ನು ನಿರ್ಮಲಾ ಸೀತಾರಾಮನ್ ಉತ್ತರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಹಿಂಡೆನ್‌ಬರ್ಗ್ ವರದಿಯ ನಂತರ LIC ಯ ನಮ್ಮ ಹಣ 72,000 ಕೋಟಿ ರೂಗಳಿಂದ 26,000 ಕೋಟಿ ರೂಗಳಿಗೆ ಕುಸಿದಿದೆ. ಆದರೂ LIC ಅಧ್ಯಕ್ಷರು ಅದಾನಿ ಕಂಪನಿಗಳಿನ ಹೂಡಿಕೆ ವಿಸ್ತರಣೆ ಮಾಡಿದ್ದಾರೆ. ಸಾರ್ವಜನಿಕ ಹಣವನ್ನು ಹೀಗೆ ಅದಾನಿ ಮೇಲೆ ಹಾಕುವುದು ಏಕೆ ಎಂದು ಸುಪ್ರೀಂ ಕೋರ್ಟ್‌ ವಕೀಲ ಪ್ರಶಾಂತ್ ಭೂಷಣ್ ಪ್ರಶ್ನಿಸಿದ್ದಾರೆ.

ಇನ್ನು ಹಿಂಡೆನ್‌ಬರ್ಗ್‌ ವರದಿಯ ನಂತರ ಅದಾನಿ ಸಂಪತ್ತಿನಲ್ಲಿ ಗಣನೀಯ ಕುಸಿತ ಉಂಟಾಗಿದೆ. ತಿಂಗಳ ಹಿಂದಷ್ಟೆ ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಶ್ರೀಮಂತರಾಗಿದ್ದ ಅವರು ಈಗ $42.2 ಶತಕೋಟಿ ನಿವ್ವಳ ಮೌಲ್ಯದೊಂದಿಗೆ 26 ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಆರೋಗ್ಯಕರ ಚರ್ಚೆಗೆ ಅವಕಾಶವಿಲ್ಲ: ನಟ ನಾಸಿರುದ್ದೀನ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...