Homeಮುಖಪುಟಅದಾನಿ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಅದಾನಿ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

- Advertisement -
- Advertisement -

ಅದಾನಿ ಗ್ರೂಪ್‌ನ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ಬಗ್ಗೆ ವರದಿ ಮಾಡದಂತೆ ಮಾಧ್ಯಮಗಳ ಬಾಯಿ ಮುಚ್ಚಿಸಲು ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ವಕೀಲ ಎಂಎಲ್ ಶರ್ಮಾ ಅವರು ಅರ್ಜಿಯನ್ನು ಪ್ರಸ್ತಾಪಿಸಿದರು. ಶರ್ಮಾ ಅವರು, ಈ ವಿಷಯದ ಕುರಿತು ಮಾಧ್ಯಮ ವರದಿಗಳನ್ನು ನಿಲ್ಲಿಸುವಂತೆ ಮನವಿ ಮಾಡಿದಾಗ, ಸಿಜೆಐ ಡಿವೈ ಚಂದ್ರಚೂಡ್ ಅವರು, ”ನಾವು ಎಂದಿಗೂ ಮಾಧ್ಯಮದ ವಿರುದ್ಧ ಯಾವುದೇ ತಡೆಯಾಜ್ಞೆ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಹಿಂಡೆನ್‌ಬರ್ಗ್ ರಿಸರ್ಚ್ ವಿರುದ್ಧ ತನಿಖೆ ನಡೆಸುವಂತೆ ಕೋರಿ ಪಿಐಎಲ್ ಸಲ್ಲಿಸಿರುವ ಶರ್ಮಾ, ಮಾಧ್ಯಮವು ಸಮಾಜದಲ್ಲಿ ಅದಾನಿ ವಿರುದ್ಧ ಸಂಚಲನವನ್ನು ಸೃಷ್ಟಿಸುತ್ತಿದೆ. ಹಾಗಾಗಿ ಮಾಧ್ಯಮಗಳು ಆ ಬಗ್ಗೆ ವರದಿ ಮಾಡದಂತೆ ತಮ್ಮ ವಿನಂತಿಯನ್ನು ಪುನರಾವರ್ತಿಸಿದರು. ಆಗ ಸಿಜೆಐ ”ಸಮಂಜಸವಾದ ವಾದವನ್ನು ಮಾಡಿ, ಮಾಧ್ಯಮಕ್ಕೆ ತಡೆಯಾಜ್ಞೆ ನೀಡುವುದಿಲ್ಲ” ಎಂದು ಪುನರುಚ್ಚರಿಸಿದರು.

ಗೌತಮ್ ಅದಾನಿ ನೇತೃತ್ವದ ಪೋರ್ಟ್ಸ್-ಟು-ಎನರ್ಜಿ ಸಮೂಹವು ಜನವರಿ 24 ರಿಂದ ಬಿಕ್ಕಟ್ಟಿನಲ್ಲಿ ಮುಳುಗಿದೆ. ಹಿಂಡೆನ್‌ಬರ್ಗ್ ರಿಸರ್ಚ್ ವರದಿಯಲ್ಲಿ, ಅಧಿಕ ಮೌಲ್ಯದ ಷೇರುಗಳನ್ನು ವಾಗ್ದಾನ ಮಾಡುವ ಮೂಲಕ ಅದಾನಿ ಗ್ರೂಪ್ ಗಣನೀಯ ಸಾಲವನ್ನು ಸಂಗ್ರಹಿಸಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ:ಹಿಂಡೆನ್‌ಬರ್ಗ್ ಎಫೆಕ್ಟ್: ಮೊದಲ ಬಾರಿಗೆ ಅದಾನಿ ಕಂಪನಿಗಳಲ್ಲಿನ ಎಲ್ಐಸಿ ಹೂಡಿಕೆ ನಿವ್ವಳ ನಷ್ಟದಲ್ಲಿ

ಈ ವರದಿ ಬಿಡುಗಡೆಯಾದಾಗಿನಿಂದ, ಅದಾನಿ ಗ್ರೂಪ್ ಮಾರುಕಟ್ಟೆ ಬಂಡವಾಳದಲ್ಲಿ $136 ಶತಕೋಟಿ (ರೂ. 11.26 ಲಕ್ಷ ಕೋಟಿಗೂ ಹೆಚ್ಚು) ಕಳೆದುಕೊಂಡಿದೆ.

ಶರ್ಮಾ ಮತ್ತು ಮತ್ತೊಬ್ಬ ವಕೀಲ ವಿಶಾಲ್ ತಿವಾರಿ ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಭಾರತದಲ್ಲಿನ ಅವರ ಸಹಚರರ ವಿರುದ್ಧ ತನಿಖೆ ನಡೆಸಲು ಮತ್ತು ಎಫ್‌ಐಆರ್‌ ದಾಖಲಿಸಲು ನ್ಯಾಯಾಲಯವು ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶನಗಳನ್ನು ಕೋರಿ ಶರ್ಮಾ ಅರ್ಜಿ ಸಲ್ಲಿಸಿದ್ದಾರೆ. ತಿವಾರಿ ಅವರು, ವರದಿಯನ್ನು ತನಿಖೆ ಮಾಡಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಅಡಿಯಲ್ಲಿ ಸಮಿತಿಯ ರಚನೆ ಮಾಡಲು ಕೋರಿದ್ದಾರೆ.

ಹಿಂದಿನ ವಿಚಾರಣೆಗಳಲ್ಲಿ, ಹೂಡಿಕೆದಾರರನ್ನು ರಕ್ಷಿಸಲು ಸಮಿತಿಯನ್ನು ರಚಿಸಲು ಯಾವುದೇ ಅಭ್ಯಂತರವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿತ್ತು, ಆದರೆ ಸಮಿತಿಯ ಸದಸ್ಯರನ್ನು ಸರ್ಕಾರವೇ ಸೂಚಿಸುತ್ತದೆ ಎಂದು ಹೇಳಿತ್ತು.

ಫೆಬ್ರವರಿ 17ರಂದು, ಸರ್ಕಾರವು ಮುಚ್ಚಿದ ಲಕೋಟೆಯಲ್ಲಿ ಹೆಸರುಗಳನ್ನು ಸಲ್ಲಿಸಿತ್ತು, ಆದರೆ, ಅದನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಮತ್ತು ಸಮಿತಿಯನ್ನು ನೇಮಿಸುವ ವಿಚಾರದಲ್ಲಿ ನ್ಯಾಯಾಲಯ ತನ್ನ ಆದೇಶವನ್ನು ಸಹ ಕಾಯ್ದಿರಿಸಿತ್ತು.

ಜನವರಿ 24ರಂದು ಹಿಂಡೆನ್‌ಬರ್ಗ್ ರಿಸರ್ಚ್ ವರದಿಯನ್ನು ಪ್ರಕಟಿಸಿತು. ಈ ವರದಿಯಿಂದ ಅದಾನಿ ಗ್ರೂಪ್ ಷೇರುಗಳ ಕುಸಿತಕ್ಕೆ ಕಾರಣವಾಯಿತು. ಗೌತಮ್ ಅದಾನಿ ನೇತೃತ್ವದ ಸಮೂಹದ ಮಾರುಕಟ್ಟೆ ಬಂಡವಾಳೀಕರಣವು ಜನವರಿ 24 ರಂದು ರೂ 7.15 ಲಕ್ಷ ಕೋಟಿಗೆ ಕುಸಿದಿದೆ. ಒಟ್ಟು ರೂ. 12.02 ಲಕ್ಷ ಕೋಟಿ ನಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...