Homeಮುಖಪುಟಅದಾನಿ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಅದಾನಿ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂ

- Advertisement -
- Advertisement -

ಅದಾನಿ ಗ್ರೂಪ್‌ನ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳ ಬಗ್ಗೆ ವರದಿ ಮಾಡದಂತೆ ಮಾಧ್ಯಮಗಳ ಬಾಯಿ ಮುಚ್ಚಿಸಲು ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ವಕೀಲ ಎಂಎಲ್ ಶರ್ಮಾ ಅವರು ಅರ್ಜಿಯನ್ನು ಪ್ರಸ್ತಾಪಿಸಿದರು. ಶರ್ಮಾ ಅವರು, ಈ ವಿಷಯದ ಕುರಿತು ಮಾಧ್ಯಮ ವರದಿಗಳನ್ನು ನಿಲ್ಲಿಸುವಂತೆ ಮನವಿ ಮಾಡಿದಾಗ, ಸಿಜೆಐ ಡಿವೈ ಚಂದ್ರಚೂಡ್ ಅವರು, ”ನಾವು ಎಂದಿಗೂ ಮಾಧ್ಯಮದ ವಿರುದ್ಧ ಯಾವುದೇ ತಡೆಯಾಜ್ಞೆ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ಹಿಂಡೆನ್‌ಬರ್ಗ್ ರಿಸರ್ಚ್ ವಿರುದ್ಧ ತನಿಖೆ ನಡೆಸುವಂತೆ ಕೋರಿ ಪಿಐಎಲ್ ಸಲ್ಲಿಸಿರುವ ಶರ್ಮಾ, ಮಾಧ್ಯಮವು ಸಮಾಜದಲ್ಲಿ ಅದಾನಿ ವಿರುದ್ಧ ಸಂಚಲನವನ್ನು ಸೃಷ್ಟಿಸುತ್ತಿದೆ. ಹಾಗಾಗಿ ಮಾಧ್ಯಮಗಳು ಆ ಬಗ್ಗೆ ವರದಿ ಮಾಡದಂತೆ ತಮ್ಮ ವಿನಂತಿಯನ್ನು ಪುನರಾವರ್ತಿಸಿದರು. ಆಗ ಸಿಜೆಐ ”ಸಮಂಜಸವಾದ ವಾದವನ್ನು ಮಾಡಿ, ಮಾಧ್ಯಮಕ್ಕೆ ತಡೆಯಾಜ್ಞೆ ನೀಡುವುದಿಲ್ಲ” ಎಂದು ಪುನರುಚ್ಚರಿಸಿದರು.

ಗೌತಮ್ ಅದಾನಿ ನೇತೃತ್ವದ ಪೋರ್ಟ್ಸ್-ಟು-ಎನರ್ಜಿ ಸಮೂಹವು ಜನವರಿ 24 ರಿಂದ ಬಿಕ್ಕಟ್ಟಿನಲ್ಲಿ ಮುಳುಗಿದೆ. ಹಿಂಡೆನ್‌ಬರ್ಗ್ ರಿಸರ್ಚ್ ವರದಿಯಲ್ಲಿ, ಅಧಿಕ ಮೌಲ್ಯದ ಷೇರುಗಳನ್ನು ವಾಗ್ದಾನ ಮಾಡುವ ಮೂಲಕ ಅದಾನಿ ಗ್ರೂಪ್ ಗಣನೀಯ ಸಾಲವನ್ನು ಸಂಗ್ರಹಿಸಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ:ಹಿಂಡೆನ್‌ಬರ್ಗ್ ಎಫೆಕ್ಟ್: ಮೊದಲ ಬಾರಿಗೆ ಅದಾನಿ ಕಂಪನಿಗಳಲ್ಲಿನ ಎಲ್ಐಸಿ ಹೂಡಿಕೆ ನಿವ್ವಳ ನಷ್ಟದಲ್ಲಿ

ಈ ವರದಿ ಬಿಡುಗಡೆಯಾದಾಗಿನಿಂದ, ಅದಾನಿ ಗ್ರೂಪ್ ಮಾರುಕಟ್ಟೆ ಬಂಡವಾಳದಲ್ಲಿ $136 ಶತಕೋಟಿ (ರೂ. 11.26 ಲಕ್ಷ ಕೋಟಿಗೂ ಹೆಚ್ಚು) ಕಳೆದುಕೊಂಡಿದೆ.

ಶರ್ಮಾ ಮತ್ತು ಮತ್ತೊಬ್ಬ ವಕೀಲ ವಿಶಾಲ್ ತಿವಾರಿ ಸಲ್ಲಿಸಿರುವ ಎರಡು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ಹಿಂಡೆನ್‌ಬರ್ಗ್ ರಿಸರ್ಚ್ ಸಂಸ್ಥಾಪಕ ನಾಥನ್ ಆಂಡರ್ಸನ್ ಮತ್ತು ಭಾರತದಲ್ಲಿನ ಅವರ ಸಹಚರರ ವಿರುದ್ಧ ತನಿಖೆ ನಡೆಸಲು ಮತ್ತು ಎಫ್‌ಐಆರ್‌ ದಾಖಲಿಸಲು ನ್ಯಾಯಾಲಯವು ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶನಗಳನ್ನು ಕೋರಿ ಶರ್ಮಾ ಅರ್ಜಿ ಸಲ್ಲಿಸಿದ್ದಾರೆ. ತಿವಾರಿ ಅವರು, ವರದಿಯನ್ನು ತನಿಖೆ ಮಾಡಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಅಡಿಯಲ್ಲಿ ಸಮಿತಿಯ ರಚನೆ ಮಾಡಲು ಕೋರಿದ್ದಾರೆ.

ಹಿಂದಿನ ವಿಚಾರಣೆಗಳಲ್ಲಿ, ಹೂಡಿಕೆದಾರರನ್ನು ರಕ್ಷಿಸಲು ಸಮಿತಿಯನ್ನು ರಚಿಸಲು ಯಾವುದೇ ಅಭ್ಯಂತರವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿತ್ತು, ಆದರೆ ಸಮಿತಿಯ ಸದಸ್ಯರನ್ನು ಸರ್ಕಾರವೇ ಸೂಚಿಸುತ್ತದೆ ಎಂದು ಹೇಳಿತ್ತು.

ಫೆಬ್ರವರಿ 17ರಂದು, ಸರ್ಕಾರವು ಮುಚ್ಚಿದ ಲಕೋಟೆಯಲ್ಲಿ ಹೆಸರುಗಳನ್ನು ಸಲ್ಲಿಸಿತ್ತು, ಆದರೆ, ಅದನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಮತ್ತು ಸಮಿತಿಯನ್ನು ನೇಮಿಸುವ ವಿಚಾರದಲ್ಲಿ ನ್ಯಾಯಾಲಯ ತನ್ನ ಆದೇಶವನ್ನು ಸಹ ಕಾಯ್ದಿರಿಸಿತ್ತು.

ಜನವರಿ 24ರಂದು ಹಿಂಡೆನ್‌ಬರ್ಗ್ ರಿಸರ್ಚ್ ವರದಿಯನ್ನು ಪ್ರಕಟಿಸಿತು. ಈ ವರದಿಯಿಂದ ಅದಾನಿ ಗ್ರೂಪ್ ಷೇರುಗಳ ಕುಸಿತಕ್ಕೆ ಕಾರಣವಾಯಿತು. ಗೌತಮ್ ಅದಾನಿ ನೇತೃತ್ವದ ಸಮೂಹದ ಮಾರುಕಟ್ಟೆ ಬಂಡವಾಳೀಕರಣವು ಜನವರಿ 24 ರಂದು ರೂ 7.15 ಲಕ್ಷ ಕೋಟಿಗೆ ಕುಸಿದಿದೆ. ಒಟ್ಟು ರೂ. 12.02 ಲಕ್ಷ ಕೋಟಿ ನಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...