Homeಕರ್ನಾಟಕಕಾಂಗ್ರೆಸ್ ಮೂರನೇ ಗ್ಯಾರಂಟಿ: ಬಡ ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ 10 ಕೆಜಿ ಉಚಿತ ಅಕ್ಕಿ

ಕಾಂಗ್ರೆಸ್ ಮೂರನೇ ಗ್ಯಾರಂಟಿ: ಬಡ ಕುಟುಂಬಗಳ ಪ್ರತಿ ಸದಸ್ಯರಿಗೆ ತಿಂಗಳಿಗೆ 10 ಕೆಜಿ ಉಚಿತ ಅಕ್ಕಿ

- Advertisement -
- Advertisement -

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ನೆರವಾಗುವ ಉದ್ದೇಶದಿಂದ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯನಿಗೆ 10.ಕೆ.ಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದೆ.

ನಮ್ಮ ಸರಕಾರ ನೀಡುತಿದ್ದ 7 ಕೆ.ಜಿ ಅಕ್ಕಿಯನ್ನು ಬಿಜೆಪಿ ಸರ್ಕಾರ 5 ಕೆ.ಜಿಗೆ ಇಳಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯವನ್ನು ಹಸಿವು ಮುಕ್ತವನ್ನಾಗಿ ಮಾಡಬೇಕು ಎಂದು ನಮ್ಮ ಮೂರನೇ ಗ್ಯಾರಂಟಿ ಯೋಜನೆಯಾಗಿ 10 ಕೆ.ಜಿ ಅಕ್ಕಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರು ಜಂಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಎಲ್ಲಿಂದ ದುಡ್ಡು ಎಂಬ ಪ್ರಶ್ನೆಗೆ ಉತ್ತಿರಿಸಿದ ಡಿ.ಕೆ ಶಿವಕುಮಾರ್, “ರಾಜ್ಯಪಾಲರ ಭಾಷಣದಲ್ಲಿ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಹೆಚ್ಚುವರಿ ವಿದ್ಯುತ್ ಅನ್ನು ಬೇರೆ ರಾಜ್ಯಕ್ಕೆ ಮಾರಿ 4 ಸಾವಿರ ಕೋಟಿ ಲಾಭ ಮಾಡಿದ್ದೇವೆ ಎಂದು ಹೇಳಿದ್ದಾರೆ. ದೇಶದ ಇಂಧನ ಉತ್ಪಾದನೆ ಇತಿಹಾಸದಲ್ಲೇ ರಾಜ್ಯವೊಂದು ಹೆಚ್ಚುವರಿ ವಿದ್ಯುತ್ ಮಾರಾಟ ಮಾಡುತ್ತಿರುವುದು ಇದೇ ಮೊದಲು. ನಾವು ಸಾಧಿಸಿದ್ದನ್ನು ಅವರು ರೈತರಿಗೆ ನೀಡಲು ಆಗುತ್ತಿಲ್ಲ. ನಾವು ಇಂಧನ ಸರಬರಾಜಿನಲ್ಲಿ ಆಗುವ ನಷ್ಟ ತಡೆಯಲು ಪ್ರತಿ ತಾಲೂಕಿನಲ್ಲಿ 20-40 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡಲು ವ್ಯವಸ್ಥೆ ಕಲ್ಪಿಸಿದ್ದೇವೆ” ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನಡುವೆ ಜಗಳವಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಾನು ಸಿದ್ದರಾಮಯ್ಯ ಕೈಕೈ ಮಿಲಾಯಿಸಿ ಜಗಳವಾಡಲು ಕುಸ್ತಿ ಅಖಾಡದಲ್ಲಿ ಇದ್ದೇವಾ? ಜಗಳ, ಕುಸ್ತಿಗಳು ಏನಿದ್ದರೂ ಬಿಜೆಪಿಯಲ್ಲಿದೆ. ಯುದ್ಧ, ಹೇಳಿಕೆ ಸಮರ ನಡೆಯುತ್ತಿರುವುದು ಬಿಜೆಪಿ ಪಕ್ಷದಲ್ಲಿ. ಅವರು ಯಡಿಯೂರಪ್ಪನವರ ಕಣ್ಣಲ್ಲಿ ನೀರು ಹಾಕಿಸಿದ್ದು ಯಾಕೆ? ನಿರಾಣಿ ವಿಚಾರವಾಗಿ ಯತ್ನಾಳ್ ಏನು ಹೇಳಿದರು? ಸರ್ಕಾರದ ಬಗ್ಗೆ ವಿಶ್ವನಾಥ್, ಗೂಳಿಹಟ್ಟಿ ಶೇಖರ್ ಏನು ಹೇಳಿದ್ದಾರೆ? ವಿಧಾನಸೌಧ ಕಾರಿಡಾರ್ ನಲ್ಲಿ ಬಿಜೆಪಿ ಶಾಸಕರು ಏನು ಮಾತನಾಡುತ್ತಿದ್ದಾರೆ? ಯೋಗೇಶ್ವರ್ ಏನು ಹೇಳಿದ್ದಾರೆ? ಮಂಚದ ಮೇಲಿದ್ದ ಮಂತ್ರಿ ಯಾರು ಭ್ರಷ್ಟ ಎಂದು ಹೇಳಿದ? ಎಂಟಿಬಿ ನಾಗರಾಜ್ ಅವರು ಏನು ಹೇಳಿದರು? ಬಿಜೆಪಿಯವರಿಗೆ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡುವ ಆಸಕ್ತಿ ಇದ್ದರೆ ಅಧಿವೇಶನ ವಿಸ್ತರಣೆ ಮಾಡಿ, ಚರ್ಚೆಗೆ ಅವಕಾಶ ನೀಡಲಿ” ಎಂದರು.

ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನೆರವು ನೀಡುವ ಉದ್ದೇಶದಿಂದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆ ಮೊದಲ ಗ್ಯಾರಂಟಿಯಾಗಿ ಘೋಷಣೆ ಮಾಡಿದ್ದೇವೆ. ಆ ಮೂಲಕ ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳು 1500 ರೂ ಉಳಿತಾಯ ಮಾಡಲು ಸಹಕಾರಿಯಾಗುತ್ತಿದ್ದೇವೆ. ಇನ್ನು ಪ್ರತಿ ಮನೆಯ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನವನ್ನು ನೀಡಲು ಗೃಹಲಕ್ಷ್ಮಿ ಎಂಬ ಎರಡನೇ ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ; ಬಿಬಿಸಿ ಮೇಲೆ ಕೈ ಹಾಕಿದರೆ ಇಂದಿರಾ ಗಾಂಧಿಗೆ ಆದಂತೆ ಮೋದಿಜಿಗೂ ಆಗಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...