Homeಮುಖಪುಟ512ಕೆಜಿ ಈರುಳ್ಳಿಗೆ ಕೇವಲ 2ರೂ. ಲಾಭ ಪಡೆದ ರೈತ!; ಸರ್ಕಾರದ ಅಸಮಂಜಸ ನೀತಿಯೇ ಇದಕ್ಕೆ ಕಾರಣ...

512ಕೆಜಿ ಈರುಳ್ಳಿಗೆ ಕೇವಲ 2ರೂ. ಲಾಭ ಪಡೆದ ರೈತ!; ಸರ್ಕಾರದ ಅಸಮಂಜಸ ನೀತಿಯೇ ಇದಕ್ಕೆ ಕಾರಣ ಎಂದ ರೈತ ಮುಖಂಡ

- Advertisement -
- Advertisement -

ಮಹಾರಾಷ್ಟ್ರ, ಸೊಲ್ಲಾಪುರದ ರೈತರೊಬ್ಬರು ತಾವು ಬೆಳೆದಿದ್ದ 512 ಕೆಜಿ ಈರುಳ್ಳಿಯನ್ನು ಜಿಲ್ಲೆಯ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿದ್ದು, ಅದರಿಂದ ಅವರು ಗಳಿಸಿದ ಹಣ ಕೇವಲ 2.49ರೂ. ಈ ಸುದ್ದಿ ತಿಳಿದಾಕ್ಷಣ ರೈತರು ಆಘಾತಕ್ಕೊಳಗಾದರು.

ಸೊಲ್ಲಾಪುರದ ಬಾರ್ಶಿ ತಹಸಿಲ್‌ನಲ್ಲಿ ವಾಸವಾಗಿರುವ 63 ವರ್ಷದ ರಾಜೇಂದ್ರ ಚವ್ಹಾಣ ಎಂಬ ರೈತ ಸೊಲ್ಲಾಪುರ ಮಾರುಕಟ್ಟೆ ಯಾರ್ಡ್‌ನಲ್ಲಿ ಈರುಳ್ಳಿ ಇಳುವರಿ ಪ್ರತಿ ಕೆಜಿಗೆ 1ರೂ.ನಂತೆ ಬೆಲೆ ಪಡೆದಿದೆ. ಆದರೆ ಎಲ್ಲಾ ಕಡಿತದ ನಂತರ ಅವರು ಈ ಅಲ್ಪ ಮೊತ್ತವನ್ನು ತಮ್ಮ ಒಟ್ಟು ಲಾಭವಾಗಿ ಪಡೆದರು ಎಂದು ಅವರು ಹೇಳಿದರು.

ಈ ಬಗ್ಗೆ ಪಿಟಿಐ ಜೊತೆ ಮಾತನಾಡಿದ ರೈತ ಚವ್ಹಾಣ್, ”ಸೊಲ್ಲಾಪುರದ ಈರುಳ್ಳಿ ವ್ಯಾಪಾರಿಯೊಬ್ಬರಿಗೆ ಐದು ಕ್ವಿಂಟಾಲ್‌ಗಿಂತ ಹೆಚ್ಚು ತೂಕದ 10 ಚೀಲ ಈರುಳ್ಳಿಯನ್ನು ಮಾರಾಟಕ್ಕೆ ಕಳುಹಿಸಿದ್ದೆ, ಆದರೆ ಲೋಡಿಂಗ್, ಸಾರಿಗೆ, ಕೂಲಿ ಮತ್ತು ಇತರ ಶುಲ್ಕಗಳನ್ನು ಕಡಿತಗೊಳಿಸಿದ ನಂತರ ನನಗೆ ಕೇವಲ ಅವರಿಂದ 2.49ರೂ. ನಿವ್ವಳ ಲಾಭ ಬಂದಿದೆ. ಆ ವ್ಯಾಪಾರಿ ನನಗೆ ನೀಡಿದ ದರ ಕ್ವಿಂಟಲ್‌ಗೆ 100 ರೂ. ಆಗಿತ್ತು. ಒಟ್ಟಾರೆ ಬೆಳೆ 512 ಕೆಜಿ ಇದ್ದು, ಉತ್ಪನ್ನಕ್ಕೆ 512ರೂ. ಬೆಲೆ ಬಂದಿದೆ” ಎಂದು ಅವರು ಹೇಳಿದರು..

”ಕೂಲಿ, ತೂಕ, ಸಾಗಣೆ ಮತ್ತು ಇತರ ಶುಲ್ಕಗಳ ಮೇಲೆ 509.51ರೂ. ಕಡಿತದ ನಂತರ, ನಾನು ಕೇವಲ 2.49ರೂ. ನಿವ್ವಳ ಲಾಭ ಪಡೆದಿದ್ದೇನೆ. ಇದು ನನಗೆ ಮತ್ತು ರಾಜ್ಯದ ಇತರ ಈರುಳ್ಳಿ ಬೆಳೆಗಾರರಿಗೆ ಮಾಡಿದ ಅವಮಾನವಾಗಿದೆ. ಅಂತಹ ಆದಾಯವನ್ನು ಪಡೆದರೆ ನಾವು ಹೇಗೆ ಬದುಕುವುದು? ಈರುಳ್ಳಿ ರೈತರ ಬೆಳೆಗೆ ಉತ್ತಮ ಬೆಲೆ ಸಿಗಬೇಕು ಮತ್ತು ಹಾನಿಗೊಳಗಾದ ರೈತರಿಗೆ ಪರಿಹಾರ ಸಿಗಬೇಕು” ಎಂದರು.

ಇದನ್ನೂ ಓದಿ: ಮಹಾರಾಷ್ಟ್ರ: ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಮಹಿಳೆ ಕೊಂದು, ಬೆಡ್ ಬಾಕ್ಸ್‌ನಲ್ಲಿ ಶವ ಅಡಗಿಸಿಟ್ಟ ಪ್ರಿಯಕರ

ಉತ್ಪನ್ನವು ಉತ್ತಮ ಗುಣಮಟ್ಟದ್ದಾಗಿದೆ ಎಂದು ಚವಾಣ್ ಹೇಳಿಕೊಂಡರೆ, ಅದು ಕಡಿಮೆ ದರ್ಜೆಯದ್ದಾಗಿದೆ ಎಂದು ವ್ಯಾಪಾರಿ ಹೇಳಿದ್ದಾನೆ.

”ರೈತರು 10 ಚೀಲ ಮಾತ್ರ ತಂದಿದ್ದು, ಉತ್ಪನ್ನವೂ ಕಡಿಮೆ ದರ್ಜೆಯದ್ದಾಗಿದೆ. ಹೀಗಾಗಿ ಕ್ವಿಂಟಲ್ ದರಕ್ಕೆ 100ರೂ. ಸಿಕ್ಕಿದೆ. ಹೀಗಾಗಿ ಎಲ್ಲ ಕಡಿತಗೊಳಿಸಿ 2ರೂ. ನಿವ್ವಳ ಲಾಭ ಬಂದಿದೆ” ಎಂದು ವ್ಯಾಪಾರಿ ತಿಳಿಸಿದ್ದಾನೆ.

”ಇದೇ ರೈತ ಇತ್ತೀಚಿನ ದಿನಗಳಲ್ಲಿ ನನಗೆ 400ಕ್ಕೂ ಹೆಚ್ಚು ಚೀಲಗಳನ್ನು ಮಾರಾಟ ಮಾಡುವ ಮೂಲಕ ಉತ್ತಮ ಲಾಭ ಪಡೆದಿದ್ದಾನೆ. ಈ ಬಾರಿ 10 ಮೂಟೆ ಇಲ್ಲದ ಉಳಿಕೆ ಉತ್ಪನ್ನಗಳನ್ನು ತಂದಿದ್ದು, ಬೆಲೆ ಕುಸಿದಿದ್ದರಿಂದ ಈ ದರ ಸಿಕ್ಕಿದೆ”  ಎಂದು ವ್ಯಾಪಾರಿ ಹೇಳಿದರು.

ಈ ಬಗ್ಗೆ ರೈತ ಮುಖಂಡ ಹಾಗೂ ಮಾಜಿ ಸಂಸದ ರಾಜು ಶೆಟ್ಟಿ ಮಾತನಾಡಿ, ”ಈಗ ಮಾರುಕಟ್ಟೆಗೆ ಬರುತ್ತಿರುವ ಈರುಳ್ಳಿ ‘ಖಾರಿಫ್’ ಉತ್ಪನ್ನವಾಗಿದ್ದು, ಇದನ್ನು ದೀರ್ಘಕಾಲ ಶೇಖರಿಸಿಡಲು ಸಾಧ್ಯವಿಲ್ಲ, ಹೀಗಾಗಿ ಉತ್ಪನ್ನದ ಶೆಲ್ಫ್ ಲೈಫ್ ಕಡಿಮೆಯಾಗಿದೆ. ಈ ಈರುಳ್ಳಿಯನ್ನು ತಕ್ಷಣ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಹೊರಕ್ಕೆ ರಫ್ತು ಮಾಡಬೇಕಾಗಿದೆ. ಆದರೆ ದಲ್ಲಾಳಿಗಳ ದುರಾಸೆಯಿಂದಾಗಿ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದೆ.

ಈ ಈರುಳ್ಳಿಯನ್ನು ಭಾರತೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ(NAFED)ದಿಂದ ಖರೀದಿಸಲಾಗುತ್ತಿಲ್ಲ, ಆದ್ದರಿಂದ ಈ ‘ಖಾರಿಫ್’ ಈರುಳ್ಳಿಗೆ ಬೆಲೆ ಸಿಗುವಂತೆ ಮಾಡುವುದೇ ಸರ್ಕಾರಕ್ಕೆ ಇರುವ ಏಕೈಕ ಆಯ್ಕೆಯಾಗಿದೆ ಎಂದು ರಾಜು ಶೆಟ್ಟಿ ಹೇಳಿದರು.

”ಈರುಳ್ಳಿಗೆ ಸಂಬಂಧಿಸಿದಂತೆ ಸರ್ಕಾರದ ರಫ್ತು ಮತ್ತು ಆಮದು ನೀತಿಯು ಸ್ಥಿರವಾಗಿಲ್ಲ. ನಾವು ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ ಎರಡು ಶಾಶ್ವತ ಮಾರುಕಟ್ಟೆಗಳನ್ನು ಹೊಂದಿದ್ದೇವೆ. ಆದರೆ ನಮ್ಮ ಸರ್ಕಾರದ ಅಸಮಂಜಸ ನೀತಿಯಿಂದಾಗಿ ಅವರು ನಮ್ಮ ಬದಲಿಗೆ ಇರಾನ್‌ನಿಂದ ಈರುಳ್ಳಿ ಖರೀದಿಸಲು ಆದ್ಯತೆ ನೀಡಿದರು. ಮೂರನೇ ಮಾರುಕಟ್ಟೆ ಶ್ರೀಲಂಕಾ, ಆದರೆ ಪ್ರತಿಯೊಬ್ಬರಿಗೂ ಅವರ ಪರಿಸ್ಥಿತಿ ತಿಳಿದಿದೆ ಮತ್ತು ಯಾರೂ ತಮ್ಮ ಉತ್ಪನ್ನಗಳನ್ನು ಕಳುಹಿಸಲು ಬಯಸುವುದಿಲ್ಲ” ಎಂದು ಅವರು ಹೇಳಿದರು.

ಸರ್ಕಾರ ಈ ಈರುಳ್ಳಿ ಖರೀದಿಸಬೇಕು ಅಥವಾ ರೈತರಿಗೆ ಸಬ್ಸಿಡಿ ನೀಡಬೇಕು ಎಂದು ರೈತ ಮುಖಂಡರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The farmers agitation…remember…that’s when farmers shot themselves in the foot….they became political pawns and protested good reforms…if any one expects govt to buy everything that they produce that’s not right. Markets will find their levels and reforms would have helped you avoid pitfalls. By the way I am also a farmer happily living with organic and multi crop farming.

LEAVE A REPLY

Please enter your comment!
Please enter your name here

- Advertisment -

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...