Homeಮುಖಪುಟ512ಕೆಜಿ ಈರುಳ್ಳಿಗೆ ಕೇವಲ 2ರೂ. ಲಾಭ ಪಡೆದ ರೈತ!; ಸರ್ಕಾರದ ಅಸಮಂಜಸ ನೀತಿಯೇ ಇದಕ್ಕೆ ಕಾರಣ...

512ಕೆಜಿ ಈರುಳ್ಳಿಗೆ ಕೇವಲ 2ರೂ. ಲಾಭ ಪಡೆದ ರೈತ!; ಸರ್ಕಾರದ ಅಸಮಂಜಸ ನೀತಿಯೇ ಇದಕ್ಕೆ ಕಾರಣ ಎಂದ ರೈತ ಮುಖಂಡ

- Advertisement -
- Advertisement -

ಮಹಾರಾಷ್ಟ್ರ, ಸೊಲ್ಲಾಪುರದ ರೈತರೊಬ್ಬರು ತಾವು ಬೆಳೆದಿದ್ದ 512 ಕೆಜಿ ಈರುಳ್ಳಿಯನ್ನು ಜಿಲ್ಲೆಯ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿದ್ದು, ಅದರಿಂದ ಅವರು ಗಳಿಸಿದ ಹಣ ಕೇವಲ 2.49ರೂ. ಈ ಸುದ್ದಿ ತಿಳಿದಾಕ್ಷಣ ರೈತರು ಆಘಾತಕ್ಕೊಳಗಾದರು.

ಸೊಲ್ಲಾಪುರದ ಬಾರ್ಶಿ ತಹಸಿಲ್‌ನಲ್ಲಿ ವಾಸವಾಗಿರುವ 63 ವರ್ಷದ ರಾಜೇಂದ್ರ ಚವ್ಹಾಣ ಎಂಬ ರೈತ ಸೊಲ್ಲಾಪುರ ಮಾರುಕಟ್ಟೆ ಯಾರ್ಡ್‌ನಲ್ಲಿ ಈರುಳ್ಳಿ ಇಳುವರಿ ಪ್ರತಿ ಕೆಜಿಗೆ 1ರೂ.ನಂತೆ ಬೆಲೆ ಪಡೆದಿದೆ. ಆದರೆ ಎಲ್ಲಾ ಕಡಿತದ ನಂತರ ಅವರು ಈ ಅಲ್ಪ ಮೊತ್ತವನ್ನು ತಮ್ಮ ಒಟ್ಟು ಲಾಭವಾಗಿ ಪಡೆದರು ಎಂದು ಅವರು ಹೇಳಿದರು.

ಈ ಬಗ್ಗೆ ಪಿಟಿಐ ಜೊತೆ ಮಾತನಾಡಿದ ರೈತ ಚವ್ಹಾಣ್, ”ಸೊಲ್ಲಾಪುರದ ಈರುಳ್ಳಿ ವ್ಯಾಪಾರಿಯೊಬ್ಬರಿಗೆ ಐದು ಕ್ವಿಂಟಾಲ್‌ಗಿಂತ ಹೆಚ್ಚು ತೂಕದ 10 ಚೀಲ ಈರುಳ್ಳಿಯನ್ನು ಮಾರಾಟಕ್ಕೆ ಕಳುಹಿಸಿದ್ದೆ, ಆದರೆ ಲೋಡಿಂಗ್, ಸಾರಿಗೆ, ಕೂಲಿ ಮತ್ತು ಇತರ ಶುಲ್ಕಗಳನ್ನು ಕಡಿತಗೊಳಿಸಿದ ನಂತರ ನನಗೆ ಕೇವಲ ಅವರಿಂದ 2.49ರೂ. ನಿವ್ವಳ ಲಾಭ ಬಂದಿದೆ. ಆ ವ್ಯಾಪಾರಿ ನನಗೆ ನೀಡಿದ ದರ ಕ್ವಿಂಟಲ್‌ಗೆ 100 ರೂ. ಆಗಿತ್ತು. ಒಟ್ಟಾರೆ ಬೆಳೆ 512 ಕೆಜಿ ಇದ್ದು, ಉತ್ಪನ್ನಕ್ಕೆ 512ರೂ. ಬೆಲೆ ಬಂದಿದೆ” ಎಂದು ಅವರು ಹೇಳಿದರು..

”ಕೂಲಿ, ತೂಕ, ಸಾಗಣೆ ಮತ್ತು ಇತರ ಶುಲ್ಕಗಳ ಮೇಲೆ 509.51ರೂ. ಕಡಿತದ ನಂತರ, ನಾನು ಕೇವಲ 2.49ರೂ. ನಿವ್ವಳ ಲಾಭ ಪಡೆದಿದ್ದೇನೆ. ಇದು ನನಗೆ ಮತ್ತು ರಾಜ್ಯದ ಇತರ ಈರುಳ್ಳಿ ಬೆಳೆಗಾರರಿಗೆ ಮಾಡಿದ ಅವಮಾನವಾಗಿದೆ. ಅಂತಹ ಆದಾಯವನ್ನು ಪಡೆದರೆ ನಾವು ಹೇಗೆ ಬದುಕುವುದು? ಈರುಳ್ಳಿ ರೈತರ ಬೆಳೆಗೆ ಉತ್ತಮ ಬೆಲೆ ಸಿಗಬೇಕು ಮತ್ತು ಹಾನಿಗೊಳಗಾದ ರೈತರಿಗೆ ಪರಿಹಾರ ಸಿಗಬೇಕು” ಎಂದರು.

ಇದನ್ನೂ ಓದಿ: ಮಹಾರಾಷ್ಟ್ರ: ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಮಹಿಳೆ ಕೊಂದು, ಬೆಡ್ ಬಾಕ್ಸ್‌ನಲ್ಲಿ ಶವ ಅಡಗಿಸಿಟ್ಟ ಪ್ರಿಯಕರ

ಉತ್ಪನ್ನವು ಉತ್ತಮ ಗುಣಮಟ್ಟದ್ದಾಗಿದೆ ಎಂದು ಚವಾಣ್ ಹೇಳಿಕೊಂಡರೆ, ಅದು ಕಡಿಮೆ ದರ್ಜೆಯದ್ದಾಗಿದೆ ಎಂದು ವ್ಯಾಪಾರಿ ಹೇಳಿದ್ದಾನೆ.

”ರೈತರು 10 ಚೀಲ ಮಾತ್ರ ತಂದಿದ್ದು, ಉತ್ಪನ್ನವೂ ಕಡಿಮೆ ದರ್ಜೆಯದ್ದಾಗಿದೆ. ಹೀಗಾಗಿ ಕ್ವಿಂಟಲ್ ದರಕ್ಕೆ 100ರೂ. ಸಿಕ್ಕಿದೆ. ಹೀಗಾಗಿ ಎಲ್ಲ ಕಡಿತಗೊಳಿಸಿ 2ರೂ. ನಿವ್ವಳ ಲಾಭ ಬಂದಿದೆ” ಎಂದು ವ್ಯಾಪಾರಿ ತಿಳಿಸಿದ್ದಾನೆ.

”ಇದೇ ರೈತ ಇತ್ತೀಚಿನ ದಿನಗಳಲ್ಲಿ ನನಗೆ 400ಕ್ಕೂ ಹೆಚ್ಚು ಚೀಲಗಳನ್ನು ಮಾರಾಟ ಮಾಡುವ ಮೂಲಕ ಉತ್ತಮ ಲಾಭ ಪಡೆದಿದ್ದಾನೆ. ಈ ಬಾರಿ 10 ಮೂಟೆ ಇಲ್ಲದ ಉಳಿಕೆ ಉತ್ಪನ್ನಗಳನ್ನು ತಂದಿದ್ದು, ಬೆಲೆ ಕುಸಿದಿದ್ದರಿಂದ ಈ ದರ ಸಿಕ್ಕಿದೆ”  ಎಂದು ವ್ಯಾಪಾರಿ ಹೇಳಿದರು.

ಈ ಬಗ್ಗೆ ರೈತ ಮುಖಂಡ ಹಾಗೂ ಮಾಜಿ ಸಂಸದ ರಾಜು ಶೆಟ್ಟಿ ಮಾತನಾಡಿ, ”ಈಗ ಮಾರುಕಟ್ಟೆಗೆ ಬರುತ್ತಿರುವ ಈರುಳ್ಳಿ ‘ಖಾರಿಫ್’ ಉತ್ಪನ್ನವಾಗಿದ್ದು, ಇದನ್ನು ದೀರ್ಘಕಾಲ ಶೇಖರಿಸಿಡಲು ಸಾಧ್ಯವಿಲ್ಲ, ಹೀಗಾಗಿ ಉತ್ಪನ್ನದ ಶೆಲ್ಫ್ ಲೈಫ್ ಕಡಿಮೆಯಾಗಿದೆ. ಈ ಈರುಳ್ಳಿಯನ್ನು ತಕ್ಷಣ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಹೊರಕ್ಕೆ ರಫ್ತು ಮಾಡಬೇಕಾಗಿದೆ. ಆದರೆ ದಲ್ಲಾಳಿಗಳ ದುರಾಸೆಯಿಂದಾಗಿ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದೆ.

ಈ ಈರುಳ್ಳಿಯನ್ನು ಭಾರತೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ(NAFED)ದಿಂದ ಖರೀದಿಸಲಾಗುತ್ತಿಲ್ಲ, ಆದ್ದರಿಂದ ಈ ‘ಖಾರಿಫ್’ ಈರುಳ್ಳಿಗೆ ಬೆಲೆ ಸಿಗುವಂತೆ ಮಾಡುವುದೇ ಸರ್ಕಾರಕ್ಕೆ ಇರುವ ಏಕೈಕ ಆಯ್ಕೆಯಾಗಿದೆ ಎಂದು ರಾಜು ಶೆಟ್ಟಿ ಹೇಳಿದರು.

”ಈರುಳ್ಳಿಗೆ ಸಂಬಂಧಿಸಿದಂತೆ ಸರ್ಕಾರದ ರಫ್ತು ಮತ್ತು ಆಮದು ನೀತಿಯು ಸ್ಥಿರವಾಗಿಲ್ಲ. ನಾವು ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ ಎರಡು ಶಾಶ್ವತ ಮಾರುಕಟ್ಟೆಗಳನ್ನು ಹೊಂದಿದ್ದೇವೆ. ಆದರೆ ನಮ್ಮ ಸರ್ಕಾರದ ಅಸಮಂಜಸ ನೀತಿಯಿಂದಾಗಿ ಅವರು ನಮ್ಮ ಬದಲಿಗೆ ಇರಾನ್‌ನಿಂದ ಈರುಳ್ಳಿ ಖರೀದಿಸಲು ಆದ್ಯತೆ ನೀಡಿದರು. ಮೂರನೇ ಮಾರುಕಟ್ಟೆ ಶ್ರೀಲಂಕಾ, ಆದರೆ ಪ್ರತಿಯೊಬ್ಬರಿಗೂ ಅವರ ಪರಿಸ್ಥಿತಿ ತಿಳಿದಿದೆ ಮತ್ತು ಯಾರೂ ತಮ್ಮ ಉತ್ಪನ್ನಗಳನ್ನು ಕಳುಹಿಸಲು ಬಯಸುವುದಿಲ್ಲ” ಎಂದು ಅವರು ಹೇಳಿದರು.

ಸರ್ಕಾರ ಈ ಈರುಳ್ಳಿ ಖರೀದಿಸಬೇಕು ಅಥವಾ ರೈತರಿಗೆ ಸಬ್ಸಿಡಿ ನೀಡಬೇಕು ಎಂದು ರೈತ ಮುಖಂಡರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The farmers agitation…remember…that’s when farmers shot themselves in the foot….they became political pawns and protested good reforms…if any one expects govt to buy everything that they produce that’s not right. Markets will find their levels and reforms would have helped you avoid pitfalls. By the way I am also a farmer happily living with organic and multi crop farming.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...