Homeಮುಖಪುಟನಿಲ್ಲದ ದೆಹಲಿ ಪಾಲಿಕೆ ಗುದ್ದಾಟ; ಕೈ-ಕೈ ಮಿಲಾಯಿಸಿದ ಬಿಜೆಪಿ-ಎಎಪಿ ಕೌನ್ಸಿಲರ್‌ಗಳು

ನಿಲ್ಲದ ದೆಹಲಿ ಪಾಲಿಕೆ ಗುದ್ದಾಟ; ಕೈ-ಕೈ ಮಿಲಾಯಿಸಿದ ಬಿಜೆಪಿ-ಎಎಪಿ ಕೌನ್ಸಿಲರ್‌ಗಳು

- Advertisement -
- Advertisement -

ದೆಹಲಿಯ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಎಎಪಿ ಮತ್ತು ಬಿಜೆಪಿ ಕೌನ್ಸಿಲರ್‌ಗಳ ನಡುವೆ ಮತ್ತೆ ಘರ್ಷಣೆ ನಡೆದಿದ್ದು ಕೈ-ಕೈ ಮಿಲಾಯಿಸಿದ್ದಾರೆ. ಆರು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯ ಮತ ಎಣಿಕೆ ವೇಳೆ ಈ ಘಟನೆ ನಡೆದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಸ್ಥಾಯಿ ಸಮಿತಿಯು ದೆಹಲಿ ಮಹಾನಗರ ಪಾಲಿಕೆಯಲ್ಲಿ ಪ್ರಬಲ ಪಾತ್ರವನ್ನು ವಹಿಸುವುದರಿಂದ ಇಷ್ಟೊಂದು ಪ್ರಾಮುಖ್ಯತೆ ಪಡೆದಿದೆ. ಯೋಜನೆಗಳಿಗೆ ಆರ್ಥಿಕ ಅನುಮೋದನೆ ನೀಡಲು, ಉಪ ಸಮಿತಿಗಳನ್ನು ನೇಮಿಸಲು ಮತ್ತು ಚರ್ಚೆಗಳನ್ನು ನಡೆಸಲು ಮತ್ತು ನೀತಿಗಳನ್ನು ಅಂತಿಮಗೊಳಿಸಲು ಸಮಿತಿಗೆ ಅಧಿಕಾರವಿದೆ ಹಾಗಾಗಿ ಸ್ಥಾಯಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡುವ ಮತದಾನವು ಎರಡೂ ಪಕ್ಷಗಳಿಗೆ ಮುಖ್ಯವಾಗಿದೆ.

ಶುಕ್ರವಾರ ನಡೆದ ಮತದಾನದಲ್ಲಿ 250 ಕೌನ್ಸಿಲರ್‌ಗಳ ಪೈಕಿ 242 ಜನ ಮತ ಚಲಾಯಿಸಿದ್ದಾರೆ. ಎಂಟು ಕೌನ್ಸಿಲರ್‌ಗಳು – ಮನ್‌ದೀಪ್ ಸಿಂಗ್, ಅರಿಬಾ ಖಾನ್, ನಾಜಿಯಾ ಡ್ಯಾನಿಶ್, ಸಮೀರ್ ಅಹ್ಮದ್, ಶಗುಫ್ತಾ ಚೌಧರಿ ಜುಬೇರ್, ಸಬಿಲಾ ಬೇಗಂ, ನಾಜಿಯಾ ಖಾತೂನ್ ಮತ್ತು ಜರೀಫ್ ತಮ್ಮ ಮತ ಚಲಾಯಿಸಲಿಲ್ಲ ಎಂದು ಎಂದು ನೂತನ ಮೇಯರ್ ಶೆಲ್ಲಿ ಒಬೆರಾಯ್ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಮೇಯರ್ ಚುನಾವಣೆ: ಎಎಪಿಗೆ ಗೆಲುವು, ಬಿಜೆಪಿಗೆ ಮುಖಭಂಗ

ಈ ನಡುವೆ ಒಬೆರಾಯ್ ಅವರು ಒಂದು ಮತವನ್ನು ಅಸಿಂಧು ಎಂದು ಘೋಷಿಸಿದ್ದಾರೆ. ಇದೇ ಕಾರಣಕ್ಕೆ ಗದ್ದಲ ಗಲಾಟೆ ಪ್ರಾರಂಭವಾಯಿತು, ಇದರಿಂದಾಗಿ ಬಿಜೆಪಿ ಕೌನ್ಸಿಲರ್‌ಗಳು ಮತ ಎಣಿಕೆ ಪ್ರಕ್ರಿಯೆಗೆ ಅಡ್ಡಿಪಡಿಸಿದರು. ಅಷ್ಟಾದರೂ, ಅಸಿಂಧು ಮತವಿಲ್ಲದೆ ಫಲಿತಾಂಶವನ್ನು ಘೋಷಿಸಲಾಗುವುದು ಎಂದು ಮೇಯರ್ ಹೇಳಿದರು.

ಈ ವೇಳೆ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಸದಸ್ಯರು ಪರಸ್ಪರ ಗುದ್ದುವುದು, ಒದೆಯುವುದು ಮತ್ತು ತಳ್ಳುವುದನ್ನು ವೀಡಿಯೊಗಳಲ್ಲಿ ನೋಡಬಹುದು. ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಒಬ್ಬರು ನೆಲದ ಮೇಲೆ ಬಿದ್ದಿದ್ದಾರೆ. ಬಿಜೆಪಿ ಕೌನ್ಸಿಲರ್ ಮೀನಾಕ್ಷಿ ಶರ್ಮಾ ಅವರು ಆಪ್‌ನ ಯಾರೋ ಹರಿತವಾದ ವಸ್ತುವಿನಿಂದ ಹೊಡೆದಿದ್ದಾರೆ ಎಂದು ಹೇಳಿಕೊಂಡಿದ್ದಾರೆಂದು ಎಎನ್‌ಐ ವರದಿ ಮಾಡಿದೆ.

”ಪುರುಷ ಕೌನ್ಸಿಲರೊಬ್ಬರು ನನ್ನ ಕುತ್ತಿಗೆಯನ್ನು ಮುಟ್ಟಿದರು” ಎಂದು ಶರ್ಮಾ ಹೇಳಿದರು. ಆಕೆ (ಒಬೆರಾಯ್) ದೆಹಲಿಯ ಮೇಯರ್ ಆಗಿದ್ದಾರೋ ಅಥವಾ ಎಎಪಿ ಪಕ್ಷದವಳಾಗಿದ್ದಾಳೋ ಗೊತ್ತಿಲ್ಲ. ಅವಳು ಕೇಜ್ರಿವಾಲ್ ಮತ್ತು ಇತರ ನಾಯಕರ ಆದೇಶದಂತೆ ಕಾರ್ಯನಿರ್ವಹಿಸುತ್ತಾಳೆ ಎಂದು ಶರ್ಮಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಒಂದು ಮತ ಸಿಂಧುವಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. “ಇದು ಅಮಾನ್ಯವಾಗಿದ್ದರೆ, ನಮ್ಮ ಲೆಕ್ಕಾಚಾರದ ಪ್ರಕಾರ, ಎಎಪಿ ಅಭ್ಯರ್ಥಿ ಗೆಲ್ಲುತ್ತಾರೆ” ಎಂದು ಅಸಿಂಧು ಮತ ಎಂದು ಗುರುತಿಸಿಕೊಂಡಿರುವ ಬಿಜೆಪಿ ಕೌನ್ಸಿಲರ್ ಎನ್‌ಡಿಟಿವಿಗೆ ತಿಳಿಸಿದರು.

”ಬಿಜೆಪಿ ತನ್ನ ಸೋಲನ್ನು ಒಪ್ಪಿಕೊಂಡು ತನ್ನ ಗೂಂಡಾಗಿರಿಯನ್ನು ನಿಲ್ಲಿಸುವ ಸಮಯ ಬಂದಿದೆ” ಎಂದು ಎಎಪಿ ಶಾಸಕ ಅತಿಶಿ ಹೇಳಿದ್ದಾರೆ.

”ಇಂದು ಬಿಜೆಪಿಯು ಮಹಾನಗರ ಪಾಲಿಕೆಯಲ್ಲಿ ಗೂಂಡಾಗಿರಿ ಪ್ರದರ್ಶಸಿದೆ. ಸ್ಥಾಯಿ ಸಮಿತಿ ಚುನಾವಣೆ ನಡೆಯುತ್ತಿತ್ತು. ಮತ ಎಣಿಕೆ ಆರಂಭವಾದಾಗ ಬಿಜೆಪಿ ಸೋಲುವುದು ಗೊತ್ತಾಗುತ್ತಿದ್ದಂತೆ ಗದ್ದಲ ಸೃಷ್ಟಿಸಿತು. ಮೇಯರ್ ಮೇಲೆ ಬಿಜೆಪಿ ಪುರುಷ ಸದಸ್ಯರು ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ” ಎಂದು ಅತಿಶಿ ಹೇಳಿದರು.

ಗುರುವಾರ ಕೂಡ ಇದೇ ರೀತಿ ಘಟನೆ ನಡೆದಿತ್ತು. ಎರಡು ಪಕ್ಷಗಳ ಕೌನ್ಸಿಲರ್‌ಗಳು ಪರಸ್ಪರ ನೀರಿನ ಬಾಟಲಿಗಳು ಮತ್ತು ಹಣ್ಣುಗಳನ್ನು ಎಸೆದಿದ್ದಾರೆ. ಸ್ಥಾಯಿ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡದೆ ಸದನವನ್ನು ಮುಂದೂಡಲಾಗಿತ್ತು.

ಒಬೆರಾಯ್ ಅವರು ಕೌನ್ಸಿಲ್‌ನ ಮೇಯರ್ ಆಗಿ ಆಯ್ಕೆಯಾದ ನಂತರ ದೆಹಲಿಯ ಮಹಾನಗರ ಪಾಲಿಕೆಯಲ್ಲಿ ಶುಕ್ರವಾರದ ಗೊಂದಲ ಉಂಟಾಗುತ್ತದೆ. ಗಮನಾರ್ಹವೆಂದರೆ, ಎಎಪಿ ಮತ್ತು ಬಿಜೆಪಿ ನಡುವಿನ ಸುದೀರ್ಘ ಜಗಳದಿಂದಾಗಿ ಡಿಸೆಂಬರ್‌ನಲ್ಲಿ ನಡೆದ ಪಾಲಿಕೆ ಚುನಾವಣೆಯ ನಂತರ ಮೇಯರ್ ಚುನಾವಣೆಗಳು ಮೂರು ಬಾರಿ ಮುಂದೂಡಲ್ಪಟ್ಟಿತು. ಎಎಪಿಯ ಕೌನ್ಸಿಲರ್‌ಗಳು ಆಲ್ಡರ್‌ಮನ್‌ಗಳಿಗೆ ಮತ ಚಲಾಯಿಸಲು ಅವಕಾಶ ನೀಡುವ ಬಿಜೆಪಿಯ ವಾದವನ್ನು ವಿರೋಧಿಸಿದ್ದರು.

ಸುಪ್ರೀಂ ಕೋರ್ಟ ಫೆಬ್ರವರಿ 18ರಂದು ಎಎಪಿಗೆ ಪ್ರಮುಖ ಪರಿಹಾರ ನೀಡಿತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ನ ನಾಮನಿರ್ದೇಶಿತ ಸದಸ್ಯರು ಮೇಯರ್ ಹುದ್ದೆಗೆ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತು. ಅದಾದನಂತರ ಮೇಯ೬ರ್ ಚುನಾವಣೆ ನಡೆಯಿತು, ಎಎಪಿ ಅಭ್ಯರ್ಥಿ ಗೆಲವು ಸಾಧಿಸಿದರು. ಇದರಿಂದ ಬಿಜೆಪಿ ಭಾರೀ ಮುಖಭಂಗವಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...