Homeಮುಖಪುಟ'ಸರ್ಕಾರ ವಿರೋಧಿ ಕಾವ್ಯಕ್ಕೆ ಅವಕಾಶವಿಲ್ಲ': ರೇಖ್ತಾ ಸಾಂಸ್ಕೃತಿಕ ಉತ್ಸವದಿಂದ ಹಿಂದೆ ಸರಿದ ಕವಿ ವಾಜಪೇಯಿ

‘ಸರ್ಕಾರ ವಿರೋಧಿ ಕಾವ್ಯಕ್ಕೆ ಅವಕಾಶವಿಲ್ಲ’: ರೇಖ್ತಾ ಸಾಂಸ್ಕೃತಿಕ ಉತ್ಸವದಿಂದ ಹಿಂದೆ ಸರಿದ ಕವಿ ವಾಜಪೇಯಿ

- Advertisement -
- Advertisement -

ಸರ್ಕಾರವನ್ನು ಟೀಕಿಸುವ ಕವಿತೆಗಳನ್ನು ಓದಬೇಡಿ ಎಂದು ಸಂಘಟಕರು ಕೇಳಿದ್ದರಿಂದ ರೇಖ್ತಾ ಫೌಂಡೇಶನ್ ಆಯೋಜಿಸಿರುವ ಸಾಂಸ್ಕೃತಿಕ ಉತ್ಸವದಲ್ಲಿ ಭಾಗವಹಿಸುವುದಿಲ್ಲ ಎಂದು ಕವಿ ಅಶೋಕ್ ವಾಜಪೇಯಿ ಶುಕ್ರವಾರ ಹೇಳಿದ್ದಾರೆ.

ಸುಂದರ್ ನರ್ಸರಿಯಲ್ಲಿ ಮೂರು ದಿನಗಳ ಆರ್ತ್ ಕಲ್ಚರ್ ಫೆಸ್ಟ್‌ ನಡೆಯುತ್ತಿದ್ದು, ಶುಕ್ರವಾರ ನಡೆದ ಕವಿಗೋಷ್ಠಿಯಲ್ಲಿ ಅನಾಮಿಕಾ, ಬದ್ರಿ ನಾರಾಯಣ್, ದಿನೇಶ್ ಕುಶ್ವಾಹಾ ಮತ್ತು ಮಾನವ್ ಕೌಲ್ ಸೇರಿದಂತೆ ಇತರ ಕವಿಗಳೊಂದಿಗೆ ವಾಜಪೇಯಿ ಪಾಲ್ಗೊಳ್ಳಬೇಕಿತ್ತು.

”ಸಂಘಟಕರು ನನಗೆ ರಾಜಕೀಯವನ್ನಾಗಲಿ, ಸರಕಾರವನ್ನಾಗಲಿ ನೇರವಾಗಿ ವಿಮರ್ಶಿಸದ ಕವಿತೆಗಳನ್ನು ಓದುವಂತೆ ಕೇಳಲಾಗಿರುವುದರಿಂದ ಅರ್ಥ್ ಮತ್ತು ರೇಖ್ತಾ ಆಯೋಜಿಸಿರುವ ಸಂಸ್ಕೃತಿ ಉತ್ಸವದಲ್ಲಿ ನಾನು ಭಾಗವಹಿಸುವುದಿಲ್ಲ. ಈ ರೀತಿಯ ಸೆನ್ಸಾರ್ಶಿಪ್ ಸ್ವೀಕಾರಾರ್ಹವಲ್ಲ” ಎಂದು ವಾಜಪೇಯಿ ಫೇಸ್‌ಬುಕ್‌ನಲ್ಲಿ ಹಿಂದಿಯಲ್ಲಿ ಬರೆದಿದ್ದಾರೆ.

ಈ ಬಗ್ಗೆ ಪಿಟಿಐ ಜೊತೆ ಮಾತನಾಡಿದ ವಾಜಪೇಯಿ ಅವರು, ”ನಾನು ಏಳು ”ಕೋರಸ್”ಅನ್ನು ಓದಲು ನಿರ್ಧರಿಸಿದ್ದೆ. ಇದು ಮೊದಲು ಗ್ರೀಕ್ ರಂಗಭೂಮಿಗೆ ಸಂಬಂಧಿಸಿದ ಸಾಹಿತ್ಯ ಸಾಧನವಾಗಿದ್ದು, ಇದರಲ್ಲಿ ನಾಟಕ ಆರಂಭವಾಗುವ ಸನ್ನಿವೇಶದ ಬಗ್ಗೆ ಪ್ರದರ್ಶಕರು ಪ್ರತಿಕ್ರಿಯಿಸುತ್ತಾರೆ”  ಎಂದು ಹೇಳಿದರು.

ಇದನ್ನೂ ಓದಿ: ಬಿಬಿಸಿ ಮೇಲೆ ಕೈ ಹಾಕಿದರೆ ಇಂದಿರಾ ಗಾಂಧಿಗೆ ಆದಂತೆ ಮೋದಿಜಿಗೂ ಆಗಲಿದೆ!

”ರೇಖ್ತಾ ಫೌಂಡೇಶನ್‌ನ ವ್ಯಕ್ತಿಯೊಬ್ಬರು ನನ್ನನ್ನು ಸಂಪರ್ಕಿಸಿ, ರಾಜಕೀಯವನ್ನು ಒಳಗೊಳ್ಳದ ಕವಿತೆಗಳನ್ನು ಓದುತ್ತೀರಾ ಎಂದು ಕೇಳಿದರು. ಕವಿತೆ ಹೇಗೆ ಅರಾಜಕೀಯವಾಗಬಹುದು ಎಂದು ನಾನು ಕೇಳಿದೆ, ಆದ್ದರಿಂದ ಅವರು ಅದರಿಂದ ದೂರವಿರಲು ನನ್ನನ್ನು ಕೇಳಿದರು. ಆಗ ನಾನು, ಈ ರೀತಿಯ ಸೆನ್ಸಾರ್‌ಶಿಪ್‌ನ್ನು ನಾನು ಬೆಂಬಲಿಸುವುದಿಲ್ಲ ಮತ್ತು ನಾನು ಇದರಲ್ಲಿ ಸೇರುವುದಿಲ್ಲ” ಎಂದು ಹೇಳಿರುವುದಾಗಿ ವಾಜಪೇಯಿ ತಿಳಿಸಿದರು.

2008-2011ರ ಅವಧಿಯಲ್ಲಿ ಲಲಿತ ಕಲಾ ಅಕಾಡೆಮಿಯ ಅಧ್ಯಕ್ಷರಾಗಿದ್ದ ವಾಜಪೇಯಿ ಅವರು, 2015ರಲ್ಲಿ ”ಜೀವನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿನ ಮೇಲಿನ ಆಕ್ರಮಣ”ವನ್ನು ಪ್ರತಿಭಟಿಸಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸಿದ್ದರು.

ಬರಹಗಾರ ಪುರುಷೋತ್ತಮ್ ಅಗರ್ವಾಲ್ ಅವರು ವಾಜಪೇಯಿ ಅವರನ್ನು ಬೆಂಬಲಿಸಿ ಹೀಗೆ ಬರೆಯುತ್ತಾರೆ, ”ತುರ್ತು ಪರಿಸ್ಥಿತಿಯು ವೈಯಕ್ತಿಕ ಸರ್ವಾಧಿಕಾರವಾಗಿತ್ತು, ಆದರೆ ಈಗ ನಾವು ಸೈದ್ಧಾಂತಿಕ ಸರ್ವಾಧಿಕಾರಕ್ಕೆ ದೂಡಲ್ಪಡುತ್ತಿದ್ದೇವೆ. ಈ ಸರ್ವಾಧಿಕಾರಕ್ಕೆ ಪ್ರತಿರೋಧವೊಡ್ಡುವುದು ಕಡ್ಡಾಯ ಮತ್ತು ಅದು ನಮ್ಮ ಕರ್ತವ್ಯವಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ ಆಯೋಜಕರು, ”ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ. ಈ ಉತ್ಸವವು ಮಾತನಾಡುವವರಿಗೆ ವೇದಿಕೆಯನ್ನು ಒದಗಿಸುತ್ತದೆ ಮತ್ತು ಅವರು ಮಾತನಾಡುವ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಫೆಬ್ರುವರಿ 25 ಮತ್ತು 26ರಂದು ನಡೆಯುತ್ತಿರುವ ಈ ಉತ್ಸವಕ್ಕೆ ಬಲಪಂಥೀಯದಿಂದ ಹಲವಾರು ವಿವಾದಾತ್ಮಕ ವ್ಯಕ್ತಿಗಳನ್ನು ಆಹ್ವಾನಿಸಿದೆ. ಈ ಹಿಂದೆ ದ್ವೇಷಪೂರಿತ ಕಾಮೆಂಟ್‌ಗಳನ್ನು ಮಾಡಿದ್ದ ಚಲನಚಿತ್ರ ನಿರ್ಮಾಪಕ ಅವರನ್ನು ಕರೆಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...