Homeದಲಿತ್ ಫೈಲ್ಸ್ಉನ್ನಾವೋ: ಮುಖ ಗುರುತು ಸಿಗದ ಸ್ಥಿತಿಯಲ್ಲಿ ದಲಿತ ಯವತಿಯ ಶವ ಪತ್ತೆ; ಅತ್ಯಾಚಾರ, ಕೊಲೆ ಆರೋಪ

ಉನ್ನಾವೋ: ಮುಖ ಗುರುತು ಸಿಗದ ಸ್ಥಿತಿಯಲ್ಲಿ ದಲಿತ ಯವತಿಯ ಶವ ಪತ್ತೆ; ಅತ್ಯಾಚಾರ, ಕೊಲೆ ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಉನ್ನಾವೋದಲ್ಲಿ ಮುಖ ಗುರುತು ಸಿಗದಂತಹ ಸ್ಥಿತಿಯಲ್ಲಿ ದಲಿತ ಯವತಿಯ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಯುವತಿಯ ಪೋಷಕರು, ”ತಮ್ಮ ಮಗಳನ್ನು ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

ಮೃತ ಯುವತಿಯು ಬುಧವಾರ ಉನ್ನಾವೋದಲ್ಲಿನ ತನ್ನ ಮನೆಯಿಂದ ಕಾಣೆಯಾಗಿದ್ದರು. ಕುಟುಂಬಸ್ಥರು ಆಕೆಯ ಹುಡುಕಾಟ ನಡೆಸಿದ್ದರು. ಆ ದಿನ ತಡರಾತ್ರಿ ಯುವತಿ ಊರಾಚೆಗಿನ ಸಾರಾಯಿ ಅಂಗಡಿಯ ಬಳಿ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು, ರಸ್ತೆ ಅಪಘಾತದಲ್ಲಿ ಯುವತಿ ಮೃತ ಪಟ್ಟಿರಬಹುದು ಎಂದು ಊಹಿಸಿದ್ದಾರೆ.

”ಉನ್ನಾವೋ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಯುವತಿಯ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಘಟನೆ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಅದರಲ್ಲಿ ”ಭಾರೀ ವಾಹನದ ಅಡಿಗೆ‌ ಸಿಲುಕಿ ಆಕೆ ಮೃತ ಪಟ್ಟಿರುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

ಆದರೆ ಯುವತಿ ಪೋಷಕರು, ”ಪೊಲೀಸರು ಪ್ರಕರಣವನ್ನು ತಿರುಚಲು ಯತ್ನಿಸುತ್ತಿದ್ದಾರೆ” ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಅತ್ಯಾಚಾರಕ್ಕೆ ಯತ್ನ ಪ್ರಕರಣ; ಒಂದೇ ವಾರದಲ್ಲಿ ತೀರ್ಪು ನೀಡಿದ ಕೋರ್ಟ್

”ಮನೆಯ ಕೋಣೆಯಲ್ಲಿ ಮಲಗಿದ್ದ ಮಗಳನ್ನು ಯಾರೋ ಅಪಹರಿಸಿ, ಸಾಮೂಹಿಕವಾಗಿ ಅತ್ಯಚಾರ ಎಸಗಿ, ಭೀಕರವಾಗಿ ಹತ್ಯೆಗೈದಿದ್ದಾರೆ. ಮಗಳ ಮುಖ ಗುರುತು ಹಿಡಿಯುವ ಸ್ಥಿತಿಯಲ್ಲಿ ಇರಲಿಲ್ಲ. ಕಿವಿಯಲ್ಲಿದ್ದ ಓಲೆ ಮತ್ತು‌ ಧರಿಸಿದ್ದ ಬಟ್ಟೆಯ ಆಧಾರದ ಮೇಲೆ ಆಕೆ ನಮ್ಮ ಮಗಳೆಂದು ಗುರುತಿಸಿದೆವು” ಎಂದು ಯುವತಿಯ ಪೋಷಕರು ಹೇಳಿದ್ದಾರೆ.

ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ರಸ್ತೆ ಅಪಘಾತ ಎಂದು ಪೊಲೀಸರು ಹೇಳುತ್ತಿರುವುದನ್ನು ವಿರೋಧಿಸಿ ಯುವತಿಯ ಕುಟುಂಬಸ್ಥರು ಶವ ಪತ್ತೆಯಾದ ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದಾರೆ. ಅಪರಿಚಿತರ ವಿರುದ್ಧ ಕೊಲೆ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ. ಇದೀಗ ಪ್ರತಿಭಟನೆಗೆ ಮಣಿದ ಪೊಲೀಸರು, ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪದಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

”ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ಬಳಿಕ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಯುವತಿಯ ತಂದೆ ವಿದೇಶದಲ್ಲಿರುವ ಕಾರಣ ಅವರ ಬರುವಿಕೆಗಾಗಿ ಕುಟುಂಬಸ್ಥರು ಕಾಯುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ವರದಿಯಲ್ಲೂ ಯುವತಿ ಅಪಘಾತದಿಂದಲೇ ಮೃತ ಪಟ್ಟಿರುವುದಾಗಿ ವೈದ್ಯರು ಸ್ಪಷ್ಟ ಪಡಿಸಿದ್ದಾರೆ. ಸದ್ಯ ಪ್ರಕರಣದ ವಿಚಾರಣೆ ನಡೆಸುತ್ತಿದ್ದೇವೆ. ಈವರೆಗೆ ಯಾವುದೇ ಆರೋಪಿಗಳನ್ನು ಬಂಧಿಸಿಲ್ಲ” ಎಂದು ಉನ್ನಾವೋ ಎಸ್‌ಪಿ ಸಿದ್ಧಾರ್ಥ್‌ ಶಂಕರ್‌ ಮೀನಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...