Homeಮುಖಪುಟಇಂದು ನಾಗಲ್ಯಾಂಡ್, ಮೇಘಾಲಯಗಳಲ್ಲಿ ಚುನಾವಣೆ: ಸದ್ಯದ ಬಲಾಬಲ ಹೀಗಿದೆ

ಇಂದು ನಾಗಲ್ಯಾಂಡ್, ಮೇಘಾಲಯಗಳಲ್ಲಿ ಚುನಾವಣೆ: ಸದ್ಯದ ಬಲಾಬಲ ಹೀಗಿದೆ

- Advertisement -
- Advertisement -

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ನಾಗಲ್ಯಾಂಡ್‌ನಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಅಲ್ಲಿ 59 ಕ್ಷೇತ್ರಗಳು ಪರಿಶಿಷ್ಟ ಪಂಗಡ ಜಾತಿಗೆ ಮೀಸಲಾಗಿರುವುದು ವಿಶೇ‍ಷ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

2021ರಲ್ಲಿ ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆಯು ಗುಂಡಿನ ದಾಳಿ ನಡೆಸಿ 14 ಅಮಾಯಕ ನಾಗರೀಕರನ್ನು ಹತ್ಯೆಗೈದಿತ್ತು. ಘಟನೆಯಲ್ಲಿ ಓರ್ವ ಯೋಧನು ಪ್ರಾಣ ಕಳೆದುಕೊಂಡಿದ್ದನು. ಇದಕ್ಕೆ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಕಾರಣವೆಂದು ನಾಗಾ ಜನರು ಆರೋಪಿಸುತ್ತಾರೆ. ಅದನ್ನು ವಾಪಾಸ್ ಪಡೆಯುವ ಕುರಿತು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಅದು ಈ ಬಾರಿ ಚುನಾವಣಾ ವಿಷಯವಾಗುವ ಸಂಭವವಿದೆ.

ನಾರ್ಥ್ ಈಸ್ಟ್ ಡೆಮಾಕ್ರಟಿಕ್ ಅಲೆಯೆನ್ಸ್

ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೊಗ್ರೆಸ್ಸಿವ್ ಪಾರ್ಟಿಯು 40 ಸ್ಥಾನಗಳಲ್ಲಿ ಮತ್ತು ಮಿತ್ರಪಕ್ಷ ಬಿಜೆಪಿಯು 20 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ. ನೆಫಿಯು ರಿಯೊ ಮತ್ತು ಬಿಜೆಪಿ ತೆಮೆಜಾನ್ ಇಮಾ ಅಲಾಂಗ್ ಮುಖ್ಯಮಂತ್ರಿ ಅಭ್ಯರ್ಥಿಗಳೆನಿಸಿಕೊಂಡಿದ್ದಾರೆ.

ನಾಗ ಪೀಪಲ್ಸ್ ಫ್ರಂಟ್, NPP, ಕಾಂಗ್ರೆಸ್, ಜೆಡಿಯು, ಆರ್‌ಜೆಡಿ, ಎನ್‌ಸಿಪಿ, ಆಪ್ ಇಂದಿನ ಚುನಾವಣೆಯಲ್ಲಿ ಸ್ಪರ್ಧಿಸಿವೆ.

2018ರ ಬಲಾಬಲ

ಬಿಜೆಪಿ 12, ಎನ್‌ಡಿಪಿಪಿ 17, ಎನ್‌ಪಿಎಫ್ 26, ಎನ್‌ಪಿಪಿ 02 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.

ಮೇಘಾಲಯ ಚುನಾವಣೆ

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಮೇಘಾಲಯದಲ್ಲಿ ಇಂದು ಚುನಾವಣೆ ನಡೆಯುತ್ತಿದೆ. ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಮೇಘಾಲಯದಲ್ಲಿ ಯಾವುದೇ ಮೈತ್ರಿಕೂಟಗಳ ಬದಲು ಎಲ್ಲಾ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಲು ಮುಂದಾಗಿವೆ. ಕಳೆದ ತಿಂಗಳು ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು ಆಡಳಿತಾರೂಢ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್‌ನಿಂದ ಬೇರ್ಪಟ್ಟು ರಾಜ್ಯ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ.

ಅಸ್ಸಾಂನೊಂದಿಗೆ ಮೇಘಾಲಯ ಗಡಿ ಸಮಸ್ಯೆ ಎದುರಿಸುತ್ತಿದೆ. ಜೊತೆಗೆ ಅಭಿವೃದ್ದಿಯಲ್ಲಿಯೂ ಹಿಂದೆ ಉಳಿದಿದೆ. ಇವುಗಳು ಈ ಭಾರಿಯ ಚುನಾವಣಾ ವಿಷಯಗಳಾಗಿವೆ.

ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು 58 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು ಮುಕುಲ್ ಸಂಗ್ಮಾ ನೇತೃತ್ವದಲ್ಲಿ 55 ಸ್ಥಾನಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ. ಕಾಂಗ್ರೆಸ್ ಎಲ್ಲಾ 60 ಸ್ಥಾನಗಳಲ್ಲಿ ಕಣಕ್ಕಿಳಿಯುತ್ತಿದೆ. ಬಿಜೆಪಿ ಸಹ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದಂತೆ ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 34, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7, ಹಿಲ್‌ಸ್ಟೇಲ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7 ಮತ್ತು ವಾಯ್ಸ್ ಆಫ್ ಪೀಪಲ್ ಪಾರ್ಟಿ 14 ಕಡೆಗಳಲ್ಲಿ ಸ್ಪರ್ಧಿಸುತ್ತಿದೆ.

ಮೇಘಾಲಯದ ದಕ್ಷಿಣ ತುರಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ವಿರುದ್ಧ ಬಿಜೆಪಿಯು ತನ್ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಉಗ್ರಗಾಮಿ ನಾಯಕ ಬರ್ನಾರ್ಡ್ ಎನ್ ಮರಕ್ ಅವರನ್ನು ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

2018ರ ಬಲಾಬಲ

ಕಾಂಗ್ರೆಸ್ – 21, ಎನ್‌ಪಿಪಿ 19, ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 06, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 04 ಮತ್ತು ಬಿಜೆಪಿ 02 ಕಡೆಗಳಲ್ಲಿ ಜಯ ಗಳಿಸಿತ್ತು.

ಈ ಎರಡು ರಾಜ್ಯಗಳೊಂದಿಗೆ ತ್ರಿಪುರ ಸೇರಿ ಮೂರು ರಾಜ್ಯಗಳ ಚುನಾವಣಾ ಫಲಿತಾಂಶವು ಮಾರ್ಚ್ 02 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಜಾತಿ, ಧರ್ಮದ ಕುರಿತ ಸಂಶೋಧನೆ ಸೂಕ್ಷ್ಮವಾದುದು: ಇಂಗ್ಲೆಂಡ್ ಮಾನವಶಾಸ್ತ್ರಜ್ಞರ ಗಡೀಪಾರು ಸಮರ್ಥಿಸಿಕೊಂಡ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...