Homeಮುಖಪುಟಇಂದು ನಾಗಲ್ಯಾಂಡ್, ಮೇಘಾಲಯಗಳಲ್ಲಿ ಚುನಾವಣೆ: ಸದ್ಯದ ಬಲಾಬಲ ಹೀಗಿದೆ

ಇಂದು ನಾಗಲ್ಯಾಂಡ್, ಮೇಘಾಲಯಗಳಲ್ಲಿ ಚುನಾವಣೆ: ಸದ್ಯದ ಬಲಾಬಲ ಹೀಗಿದೆ

- Advertisement -
- Advertisement -

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ನಾಗಲ್ಯಾಂಡ್‌ನಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಅಲ್ಲಿ 59 ಕ್ಷೇತ್ರಗಳು ಪರಿಶಿಷ್ಟ ಪಂಗಡ ಜಾತಿಗೆ ಮೀಸಲಾಗಿರುವುದು ವಿಶೇ‍ಷ. ಇಲ್ಲಿ ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

2021ರಲ್ಲಿ ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆಯು ಗುಂಡಿನ ದಾಳಿ ನಡೆಸಿ 14 ಅಮಾಯಕ ನಾಗರೀಕರನ್ನು ಹತ್ಯೆಗೈದಿತ್ತು. ಘಟನೆಯಲ್ಲಿ ಓರ್ವ ಯೋಧನು ಪ್ರಾಣ ಕಳೆದುಕೊಂಡಿದ್ದನು. ಇದಕ್ಕೆ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಕಾರಣವೆಂದು ನಾಗಾ ಜನರು ಆರೋಪಿಸುತ್ತಾರೆ. ಅದನ್ನು ವಾಪಾಸ್ ಪಡೆಯುವ ಕುರಿತು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಅದು ಈ ಬಾರಿ ಚುನಾವಣಾ ವಿಷಯವಾಗುವ ಸಂಭವವಿದೆ.

ನಾರ್ಥ್ ಈಸ್ಟ್ ಡೆಮಾಕ್ರಟಿಕ್ ಅಲೆಯೆನ್ಸ್

ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೊಗ್ರೆಸ್ಸಿವ್ ಪಾರ್ಟಿಯು 40 ಸ್ಥಾನಗಳಲ್ಲಿ ಮತ್ತು ಮಿತ್ರಪಕ್ಷ ಬಿಜೆಪಿಯು 20 ಸ್ಥಾನಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ. ನೆಫಿಯು ರಿಯೊ ಮತ್ತು ಬಿಜೆಪಿ ತೆಮೆಜಾನ್ ಇಮಾ ಅಲಾಂಗ್ ಮುಖ್ಯಮಂತ್ರಿ ಅಭ್ಯರ್ಥಿಗಳೆನಿಸಿಕೊಂಡಿದ್ದಾರೆ.

ನಾಗ ಪೀಪಲ್ಸ್ ಫ್ರಂಟ್, NPP, ಕಾಂಗ್ರೆಸ್, ಜೆಡಿಯು, ಆರ್‌ಜೆಡಿ, ಎನ್‌ಸಿಪಿ, ಆಪ್ ಇಂದಿನ ಚುನಾವಣೆಯಲ್ಲಿ ಸ್ಪರ್ಧಿಸಿವೆ.

2018ರ ಬಲಾಬಲ

ಬಿಜೆಪಿ 12, ಎನ್‌ಡಿಪಿಪಿ 17, ಎನ್‌ಪಿಎಫ್ 26, ಎನ್‌ಪಿಪಿ 02 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವು.

ಮೇಘಾಲಯ ಚುನಾವಣೆ

60 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡ ಮೇಘಾಲಯದಲ್ಲಿ ಇಂದು ಚುನಾವಣೆ ನಡೆಯುತ್ತಿದೆ. ಬಹುಮತಕ್ಕೆ 31 ಸ್ಥಾನಗಳ ಅಗತ್ಯವಿದೆ.

ಮೇಘಾಲಯದಲ್ಲಿ ಯಾವುದೇ ಮೈತ್ರಿಕೂಟಗಳ ಬದಲು ಎಲ್ಲಾ ಪಕ್ಷಗಳು ಏಕಾಂಗಿಯಾಗಿ ಸ್ಪರ್ಧಿಸಲು ಮುಂದಾಗಿವೆ. ಕಳೆದ ತಿಂಗಳು ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು ಆಡಳಿತಾರೂಢ ಮೇಘಾಲಯ ಡೆಮಾಕ್ರಟಿಕ್ ಅಲಯನ್ಸ್‌ನಿಂದ ಬೇರ್ಪಟ್ಟು ರಾಜ್ಯ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ.

ಅಸ್ಸಾಂನೊಂದಿಗೆ ಮೇಘಾಲಯ ಗಡಿ ಸಮಸ್ಯೆ ಎದುರಿಸುತ್ತಿದೆ. ಜೊತೆಗೆ ಅಭಿವೃದ್ದಿಯಲ್ಲಿಯೂ ಹಿಂದೆ ಉಳಿದಿದೆ. ಇವುಗಳು ಈ ಭಾರಿಯ ಚುನಾವಣಾ ವಿಷಯಗಳಾಗಿವೆ.

ಸಿಎಂ ಕಾನ್ರಾಡ್ ಸಂಗ್ಮಾ ನೇತೃತ್ವದ ನ್ಯಾಷನಲ್ ಪೀಪಲ್ಸ್ ಪಕ್ಷವು 58 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಟಿಎಂಸಿ ಪಕ್ಷವು ಮುಕುಲ್ ಸಂಗ್ಮಾ ನೇತೃತ್ವದಲ್ಲಿ 55 ಸ್ಥಾನಗಳಲ್ಲಿ ಸ್ಪರ್ಧಿಸಲು ಮುಂದಾಗಿದೆ. ಕಾಂಗ್ರೆಸ್ ಎಲ್ಲಾ 60 ಸ್ಥಾನಗಳಲ್ಲಿ ಕಣಕ್ಕಿಳಿಯುತ್ತಿದೆ. ಬಿಜೆಪಿ ಸಹ 60 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉಳಿದಂತೆ ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 34, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7, ಹಿಲ್‌ಸ್ಟೇಲ್ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 7 ಮತ್ತು ವಾಯ್ಸ್ ಆಫ್ ಪೀಪಲ್ ಪಾರ್ಟಿ 14 ಕಡೆಗಳಲ್ಲಿ ಸ್ಪರ್ಧಿಸುತ್ತಿದೆ.

ಮೇಘಾಲಯದ ದಕ್ಷಿಣ ತುರಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ವಿರುದ್ಧ ಬಿಜೆಪಿಯು ತನ್ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಉಗ್ರಗಾಮಿ ನಾಯಕ ಬರ್ನಾರ್ಡ್ ಎನ್ ಮರಕ್ ಅವರನ್ನು ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

2018ರ ಬಲಾಬಲ

ಕಾಂಗ್ರೆಸ್ – 21, ಎನ್‌ಪಿಪಿ 19, ಯುನೈಟೈಡ್ ಡೆಮಾಕ್ರಟಿಕ್ ಪಾರ್ಟಿ 06, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ 04 ಮತ್ತು ಬಿಜೆಪಿ 02 ಕಡೆಗಳಲ್ಲಿ ಜಯ ಗಳಿಸಿತ್ತು.

ಈ ಎರಡು ರಾಜ್ಯಗಳೊಂದಿಗೆ ತ್ರಿಪುರ ಸೇರಿ ಮೂರು ರಾಜ್ಯಗಳ ಚುನಾವಣಾ ಫಲಿತಾಂಶವು ಮಾರ್ಚ್ 02 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಜಾತಿ, ಧರ್ಮದ ಕುರಿತ ಸಂಶೋಧನೆ ಸೂಕ್ಷ್ಮವಾದುದು: ಇಂಗ್ಲೆಂಡ್ ಮಾನವಶಾಸ್ತ್ರಜ್ಞರ ಗಡೀಪಾರು ಸಮರ್ಥಿಸಿಕೊಂಡ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...