Homeಕರ್ನಾಟಕ7ನೇ ವೇತನ ಆಯೋಗ ಜಾರಿ ಸಂಬಂಧ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರ ಮುಷ್ಕರ ವಾಪಸ್:...

7ನೇ ವೇತನ ಆಯೋಗ ಜಾರಿ ಸಂಬಂಧ ಆದೇಶ ಹೊರಡಿಸಿದರೆ ಮಾತ್ರ ಮಾರ್ಚ್ 1ರ ಮುಷ್ಕರ ವಾಪಸ್: ಷಡಾಕ್ಷರಿ

- Advertisement -
- Advertisement -

7ನೇ ವೇತನ ಆಯೋಗದ ವರದಿ ಅನುಷ್ಠಾನ ಮಾಡದೆ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿರುವುದರ ವಿರುದ್ಧ ಸರ್ಕಾರ ನೌಕರರಿಂದ ಆಕ್ರೋಶ ವ್ಯಕ್ತವಾಗುತ್ತಿದ್ದು, ಮಾರ್ಚ್ 1ರಿಂದ ಹೋರಾಟವನ್ನೂ ಕೈಗೊಳ್ಳಲಾಗುತ್ತಿದೆ.

ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಪ್ರತಿಕ್ರಿಯೆ ನೀಡಿದ್ದು, “7ನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನದ ಬಗ್ಗೆ ಸರ್ಕಾರ ಆದೇಶ ಹೊರಡಿಸಿದರೆ ಮಾತ್ರ ಈಗ ಕರೆ ನೀಡಿರುವ ಮಾರ್ಚ್ 1ರಂದು ನಡೆಯುವ ಮುಷ್ಕರ ವಾಪಸ್ ಪಡೆಯಲಾಗುವುದು” ಎಂದಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿ ನಡೆಸಿರುವ ಅವರು “7ನೇ ವೇತನ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ಜಾರಿ ಮಾಡುವಂತೆ ಈ ಹಿಂದಿನಿಂದಲೂ ಒತ್ತಾಯಿಸುತ್ತಲೇ ಬಂದಿದ್ದೇವೆ. ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡುವ ನಿರೀಕ್ಷೆ ಇತ್ತಾದರೂ ಅದು ಹುಸಿಯಾಗಿದೆ. ಅನಿವಾರ್ಯವಾಗಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದೇವೆ” ಎಂದು ತಿಳಿಸಿದ್ದಾರೆ.

“ಸರ್ಕಾರಿ ನೌಕರರ ಸಂಘಟನೆಗಳ 5,000ಕ್ಕೂ ಹೆಚ್ಚು ಪ್ರತಿನಿಧಿಗಳು ಬೆಂಗಳೂರಿನಲ್ಲಿ ಫೆಬ್ರುವರಿ 21ರಂದು ಸಭೆ ಸೇರಿ ಚರ್ಚಿಸಿದ್ದೇವೆ. ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಂಡಿದ್ದೇವೆ. ಗ್ರಾಮ ಪಂಚಾಯಿತಿಯಿಂದ ವಿಧಾನಸೌಧದ ವರೆಗೆ ಎಲ್ಲ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಲಿದ್ದಾರೆ. ಶಿಕ್ಷಣ ಕ್ಷೇತ್ರದ ಸೇವೆಗಳೂ ಲಭ್ಯ ಇರುವುದಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

“ಜುಲೈ 1, 2022ರಿಂದ ಜಾರಿಗೆ ಬರುವಂತೆ ಶೇ 40ರಷ್ಟು ವೇತನ ಹೆಚ್ಚಳ ಸೌಲಭ್ಯ ಒದಗಿಸಬೇಕು. ಎನ್‌ಪಿಎಸ್ ರದ್ದು ಮಾಡಿ, ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು ಎಂಬ ಎರಡು ಪ್ರಮುಖ ಬೇಡಿಕೆಗಳನ್ನು ಈಗಾಗಲೇ ಸರ್ಕಾರದ ಮುಂದೆ ಇಡಲಾಗಿದೆ” ಎಂದು ಹೇಳಿದ್ದಾರೆ.

ಇತ್ತೀಚೆಗೆ ಸರ್ಕಾರಿ ನೌಕರರ ಸಂಘ ಮತ್ತು ಎನ್‌ಪಿಎಸ್ ನೌಕರರ ಸಂಘದ ನಡುವೆ ತಿಕ್ಕಾಟ ನಡೆದ ಬಳಿಕ ವೇತನ ಆಯೋಗ ಜಾರಿ ಸಂಬಂಧ ಸರ್ಕಾರಿ ನೌಕರರ ಸಂಘ ಒತ್ತಡ ಹಾಕುತ್ತಿದೆ.

ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಸಂಬಂಧ ಹಾಗೂ ವೇತನ ಪರಿಷ್ಕರಣೆ ವಿಚಾರವಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಕರೆದಿದ್ದ ತುರ್ತು ಸಭೆಯಲ್ಲಿ ಯಾವುದೇ ಚರ್ಚೆಗಳನ್ನು ನಡೆಸದೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿಯವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿದ ಎನ್‌ಪಿಎಸ್‌ ನೌಕರರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿತ್ತು.

ಸಿ.ಎಸ್.ಷಡಕ್ಷರಿಯವರು ಕೈಗೊಂಡ ಏಕಪಕ್ಷೀಯ ನಿರ್ಣಯವನ್ನು ವಿರೋಧಿಸಿದ ‘ಎನ್.ಪಿ.ಎಸ್. (ನೂತನ ಪಿಂಚಣಿ ಯೋಜನೆ) ನೌಕರರ ಸಂಘ’ದ ಸದಸ್ಯರ ಮೇಲೆ ಸರ್ಕಾರಿ ನೌಕರರ ಸಂಘದ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಎನ್‌ಪಿಎಸ್ ಟಿ-ಶರ್ಟ್ ಧರಿಸಿದ್ದವರನ್ನು ಗುರಿಯಾಗಿಸಿಕೊಂಡು ಹೊಡೆಯಲಾಗಿದೆ, ಮಹಿಳಾ ನೌಕರರನ್ನೂ ನಿಂದಿಸಲಾಗಿದೆ ಎಂಬ ಗುರುತರ ಆರೋಪಿಸಲಾಗಿತ್ತು.

ಇದನ್ನೂ ಓದಿರಿ: ಏನಿದು ಎನ್‌ಪಿಎಸ್‌, ಒಪಿಎಸ್? ಲಕ್ಷಾಂತರ ನೌಕರರ ಆತಂಕವೇನು?

ಎನ್‌ಪಿಎಸ್‌ ನೌಕರರ ಸಂಘದ ಅಧ್ಯಕ್ಷರಾದ ಶಾಂತರಾಮ್‌ ಪ್ರತಿಕ್ರಿಯಿಸಿ, “ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿಯವರು ಮಾರ್ಚ್ 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿದ್ದರು. ಅದಾದ ನಂತರ ಎನ್‌ಪಿಎಸ್ ಹೋರಾಟವನ್ನು ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಿದ್ದರು. 2022ಕ್ಕೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಹೇಳಿ ಪತ್ರಿಕೆಗಳಲ್ಲಿ ಜಾಹೀರಾತುಗಳನ್ನೂ ನೀಡಿದ್ದರು. ಆನಂತರ ಕೇಂದ್ರ ಮಾದರಿ ಕಾಣೆಯಾಗಿ ರಾಜ್ಯ ಮಾದರಿಯಾಯಿತು. ಯೂಟರ್ನ್ ತೆಗೆದುಕೊಂಡರು. ನವೆಂಬರ್‌ನಲ್ಲಿ ಹೇಗೋ ವೇತನ ಆಯೋಗ ರಚನೆಯಾಯಿತು. ಏಳನೇ ವೇತನ ಆಯೋಗವನ್ನು ಈ ಬಜೆಟ್‌ನಲ್ಲಿಯೇ ಜಾರಿ ಮಾಡುವುದಾಗಿ ಭರವಸೆಯನ್ನು ಷಡಕ್ಷರಿ ನೀಡಿದ್ದರು. ಒಂದು ರೂಪಾಯಿಯನ್ನೂ ಸರ್ಕಾರ ಈ ಬಜೆಟ್‌ನಲ್ಲಿ ಮೀಸಲಿಟ್ಟಿಲ್ಲ. ವೇತನ ಆಯೋಗ ಆದಮೇಲೆ ಬಜೆಟ್‌ನಲ್ಲಿ ಹಣ ಎತ್ತಿಡಬೇಕಿತ್ತಲ್ಲವೇ? ಅದಾಗಲಿಲ್ಲ. ಕೊಟ್ಟ ಮಾತಿಗೆ ತಪ್ಪಿದ್ದರಿಂದ ಅದನ್ನು ಮುಚ್ಚಿಕೊಳ್ಳುವುದಕ್ಕಾಗಿ, ಹೋರಾಟಕ್ಕೆ ಕರೆ ನೀಡುವುದಾಗಿ ನಮ್ಮೆನ್ನೆಲ್ಲ ಷಡಾಕ್ಷರಿಯವರು ಸಭೆಗೆ ಕರೆದಿದ್ದರು. ಈ ವೇಳೆ ಹಲ್ಲೆ ನಡೆಸಲಾಗಿದೆ” ಎಂದು ತಿಳಿಸಿದ್ದರು.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ನೌಕರರ ಆಗ್ರಹಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಡ ಹಾಕಲಾರಂಭಿಸಿದ್ದಾರೆ. ಸರ್ಕಾರ ಆದೇಶ ಹೊರಡಿಸುತ್ತದೆಯೋ ಎಂಬುದು ಸದ್ಯದ ಕುತೂಹಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...