Homeಮುಖಪುಟಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ವಿದ್ಯಾರ್ಥಿಗಳ ಆತ್ಮಹತ್ಯೆ; ಸಿಜೆಐ ಕಳವಳ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ವಿದ್ಯಾರ್ಥಿಗಳ ಆತ್ಮಹತ್ಯೆ; ಸಿಜೆಐ ಕಳವಳ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ವಿದ್ಯಾರ್ಥಿಗಳು ಅನುಭವಿಸುತ್ತಿರುವ ತಾರತಮ್ಯ ಹಾಗೂ ಕಿರುಕುಳದ ಬಗ್ಗೆ ಸುಪ್ರೀಂ ಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾನುಭೂತಿ (ಇನ್ನೊಬ್ಬರ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಹಂಚಿಕೊಳ್ಳುವ ಸಾಮರ್ಥ್ಯ) ಅಗತ್ಯವಿದೆ ಎಂದಿರುವ ಅವರು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಐಐಟಿ ಬಾಂಬೆಯಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಒಡಿಶಾದ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದಲ್ಲಿ ಕಳೆದ ವರ್ಷ ಆದಿವಾಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಉಲ್ಲೇಖಿಸಿರುವ ಸಿಜೆಐ, “ಈ ವಿದ್ಯಾರ್ಥಿಗಳ ಸಂತ್ರಸ್ತ ಕುಟುಂಬವನ್ನು ಕಂಡು ನನ್ನ ಹೃದಯವು ದುಃಖಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ. ನಮ್ಮ ಸಂಸ್ಥೆಗಳು ಎಲ್ಲಿ ತಪ್ಪೆಸಗುತ್ತಿವೆ ಎಂದು ಆಶ್ಚರ್ಯವಾಗುತ್ತಿದೆ” ಎಂದಿದ್ದಾರೆ.

ಹೈದರಾಬಾದ್‌ನಲ್ಲಿರುವ ದಿ ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಅಂಡ್ ರಿಸರ್ಚ್ (NALSAR) ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅವರು ಮಾತನಾಡಿದ್ದು, “ಗುಜರಾತ್ ಮೂಲದ ಪ್ರಥಮ ವರ್ಷದ ವಿದ್ಯಾರ್ಥಿ ದರ್ಶನ್ ಸೋಲಂಕಿ ಫೆಬ್ರವರಿ 12 ರಂದು ಐಐಟಿ ಬಾಂಬೆಯಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಅಂಚಿಗೆ ತಳ್ಳಲ್ಪಷ್ಟ ಸಮುದಾಯಗಳ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಸಾಮಾನ್ಯವಾಗುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಸಂಖ್ಯೆಗಳು ಕೇವಲ ಅಂಕಿಅಂಶಗಳಲ್ಲ. ಅವು ಕೆಲವೊಮ್ಮೆ ಶತಮಾನಗಳ ಹೋರಾಟದ ಕಥೆಗಳಾಗಿವೆ. ನಾವು ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ಬಯಸುವುದಾದರೆ, ಮೊದಲು ಸಮಸ್ಯೆಯನ್ನು ಒಪ್ಪಿಕೊಂಡು ಅದನ್ನು ಗುರುತಿಸಬೇಕು ಎಂದು ನಾನು ನಂಬುತ್ತೇನೆ” ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯದ ನಂತರದ 75 ವರ್ಷಗಳ ನಮ್ಮ ಪಯಣದಲ್ಲಿ, ನಾವು ‘ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್’ (ಉನ್ನತ ದರ್ಜೆಯ ಬೋಧನಾ ವ್ಯವಸ್ಥೆ) ಅನ್ನು ರಚಿಸುವತ್ತ ಗಮನಹರಿಸಿದ್ದೇವೆ, ಆದರೆ ಅದಕ್ಕಿಂತ ಹೆಚ್ಚಾಗಿ ನಮಗೆ ‘ಇನ್‌ಸ್ಟಿಟ್ಯೂಷನ್ಸ್‌ ಆಫ್‌ ಎಂಪಥಿ’ (ಸಹಾನುಭೂತಿಯ ಸಂಸ್ಥೆಗಳು) ಅಗತ್ಯವಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯ ನ್ಯಾಯಾಧೀಶರು ಈ ವಿಷಯದ ಬಗ್ಗೆ ಏಕೆ ಮಾತನಾಡುತ್ತಿದ್ದಾರೆ ಎಂದು ನಿಮ್ಮಲ್ಲಿ ಕೆಲವರು ಆಶ್ಚರ್ಯ ಪಡಬಹುದು. ಏಕೆಂದರೆ ತಾರತಮ್ಯದ ವಿಷಯವು ಶಿಕ್ಷಣ ಸಂಸ್ಥೆಗಳಲ್ಲಿನ ಸಹಾನುಭೂತಿಯ ಕೊರತೆಯೊಂದಿಗೆ ನೇರ ಸಂಬಂಧ ಹೊಂದಿವಬೆ ಎಂದು ನಾನು ಭಾವಿಸುತ್ತೇನೆ. ಅಲ್ಲದೆ ನ್ಯಾಯಾಧೀಶರು ಸಾಮಾಜಿಕ ವಾಸ್ತವಗಳಿಂದ ದೂರ ಸರಿಯುವಂತಿಲ್ಲ ಎಂದು ತಿಳಿಸಿದ್ದಾರೆ.

ಜಾರ್ಜ್ ಫ್ಲಾಯ್ಡ್ ಹತ್ಯೆಯ ನಂತರ ಯುನೈಟೆಡ್ ಸ್ಟೇಟ್ಸ್‌ನಲ್ಲಿ ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಚಳವಳಿ ಹುಟ್ಟಿಕೊಂಡಿತು. ಆಗ ವಾಷಿಂಗ್ಟನ್ ಸುಪ್ರೀಂ ಕೋರ್ಟ್‌ನ ಎಲ್ಲಾ ಒಂಬತ್ತು ನ್ಯಾಯಾಧೀಶರು, “ಕಪ್ಪು ಜೀವಗಳ ಅವನತಿ ಮತ್ತು ಅಪಮೌಲ್ಯೀಕರಣ” ಕುರಿತು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದರು ಎಂದು ಸಿಜೆಐ ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಬಿಬಿಸಿ ಮೇಲೆ ಕೈ ಹಾಕಿದರೆ ಇಂದಿರಾ ಗಾಂಧಿಗೆ ಆದಂತೆ ಮೋದಿಜಿಗೂ ಆಗಲಿದೆ!

ಸಾಮಾಜಿಕ ಬದಲಾವಣೆಗೆ ಒತ್ತಡ ತರಲು ನ್ಯಾಯಾಲಯದ ಒಳಗೆ ಮತ್ತು ಹೊರಗೆ ಸಮಾಜದೊಂದಿಗೆ ಸಂವಾದ ನಡೆಸುವಲ್ಲಿ ಭಾರತದ ನ್ಯಾಯಾಧೀಶರು ನಿರ್ಣಾಯಕ ಪಾತ್ರವನ್ನು ಹೊಂದಿದ್ದಾರೆ ಎಂದು ವಿವರಿಸಿದ್ದಾರೆ.

ಪ್ರಮುಖ ನ್ಯಾಯಾಂಗ ಕೆಲಸ ಮತ್ತು ಆಡಳಿತಾತ್ಮಕ ಕರ್ತವ್ಯಗಳ ಹೊರತಾಗಿ, ನಮ್ಮ ಸಮಾಜ ಎದುರಿಸುತ್ತಿರುವ ರಚನಾತ್ಮಕ ಸಮಸ್ಯೆಗಳ ಮೇಲೆ ಮುಖ್ಯ ನ್ಯಾಯಮೂರ್ತಿಯಾಗಿ ಬೆಳಕು ಚೆಲ್ಲಬೇಕಾಗುತ್ತದೆ ಎಂದು ಆಶಿಸಿದ್ದಾರೆ.

“ಆದ್ದರಿಂದ, ಸಹಾನುಭೂತಿಯನ್ನು ಉತ್ತೇಜಿಸುವುದು ಶಿಕ್ಷಣ ಸಂಸ್ಥೆಗಳು ತೆಗೆದುಕೊಳ್ಳಬೇಕಾದ ಮೊದಲ ಹೆಜ್ಜೆಯಾಗಿರಬೇಕು. ಸಹಾನುಭೂತಿ ಬೆಳೆಸುವುದರಿಂದ ಮೇಲರಿಮೆ ಮತ್ತು ಹೊರಗಿಡುವ ಸಂಸ್ಕೃತಿಯನ್ನು ಕೊನೆಗೊಳಿಸಬಹುದು. ಇದನ್ನು ಸಣ್ಣ ಹೆಜ್ಜೆಗಳಿಂದ ಪ್ರಾರಂಭಿಸುವ ಮೂಲಕ ಮಾಡಬಹುದು” ಎಂದು ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...