Homeಮುಖಪುಟಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ವಿದ್ಯಾರ್ಥಿಗಳ ಆತ್ಮಹತ್ಯೆ; ಸಿಜೆಐ ಕಳವಳ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ವಿದ್ಯಾರ್ಥಿಗಳ ಆತ್ಮಹತ್ಯೆ; ಸಿಜೆಐ ಕಳವಳ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ವಿದ್ಯಾರ್ಥಿಗಳು ಅನುಭವಿಸುತ್ತಿರುವ ತಾರತಮ್ಯ ಹಾಗೂ ಕಿರುಕುಳದ ಬಗ್ಗೆ ಸುಪ್ರೀಂ ಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾನುಭೂತಿ (ಇನ್ನೊಬ್ಬರ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಹಂಚಿಕೊಳ್ಳುವ ಸಾಮರ್ಥ್ಯ) ಅಗತ್ಯವಿದೆ ಎಂದಿರುವ ಅವರು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಐಐಟಿ ಬಾಂಬೆಯಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಒಡಿಶಾದ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದಲ್ಲಿ ಕಳೆದ ವರ್ಷ ಆದಿವಾಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಉಲ್ಲೇಖಿಸಿರುವ ಸಿಜೆಐ, “ಈ ವಿದ್ಯಾರ್ಥಿಗಳ ಸಂತ್ರಸ್ತ ಕುಟುಂಬವನ್ನು ಕಂಡು ನನ್ನ ಹೃದಯವು ದುಃಖಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಅಮೂಲ್ಯವಾದ ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ. ನಮ್ಮ ಸಂಸ್ಥೆಗಳು ಎಲ್ಲಿ ತಪ್ಪೆಸಗುತ್ತಿವೆ ಎಂದು ಆಶ್ಚರ್ಯವಾಗುತ್ತಿದೆ” ಎಂದಿದ್ದಾರೆ.

ಹೈದರಾಬಾದ್‌ನಲ್ಲಿರುವ ದಿ ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಅಂಡ್ ರಿಸರ್ಚ್ (NALSAR) ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಅವರು ಮಾತನಾಡಿದ್ದು, “ಗುಜರಾತ್ ಮೂಲದ ಪ್ರಥಮ ವರ್ಷದ ವಿದ್ಯಾರ್ಥಿ ದರ್ಶನ್ ಸೋಲಂಕಿ ಫೆಬ್ರವರಿ 12 ರಂದು ಐಐಟಿ ಬಾಂಬೆಯಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಅಂಚಿಗೆ ತಳ್ಳಲ್ಪಷ್ಟ ಸಮುದಾಯಗಳ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಸಾಮಾನ್ಯವಾಗುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಸಂಖ್ಯೆಗಳು ಕೇವಲ ಅಂಕಿಅಂಶಗಳಲ್ಲ. ಅವು ಕೆಲವೊಮ್ಮೆ ಶತಮಾನಗಳ ಹೋರಾಟದ ಕಥೆಗಳಾಗಿವೆ. ನಾವು ಈ ಸಮಸ್ಯೆಯನ್ನು ಬಗೆಹರಿಸಬೇಕೆಂದು ಬಯಸುವುದಾದರೆ, ಮೊದಲು ಸಮಸ್ಯೆಯನ್ನು ಒಪ್ಪಿಕೊಂಡು ಅದನ್ನು ಗುರುತಿಸಬೇಕು ಎಂದು ನಾನು ನಂಬುತ್ತೇನೆ” ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯದ ನಂತರದ 75 ವರ್ಷಗಳ ನಮ್ಮ ಪಯಣದಲ್ಲಿ, ನಾವು ‘ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್’ (ಉನ್ನತ ದರ್ಜೆಯ ಬೋಧನಾ ವ್ಯವಸ್ಥೆ) ಅನ್ನು ರಚಿಸುವತ್ತ ಗಮನಹರಿಸಿದ್ದೇವೆ, ಆದರೆ ಅದಕ್ಕಿಂತ ಹೆಚ್ಚಾಗಿ ನಮಗೆ ‘ಇನ್‌ಸ್ಟಿಟ್ಯೂಷನ್ಸ್‌ ಆಫ್‌ ಎಂಪಥಿ’ (ಸಹಾನುಭೂತಿಯ ಸಂಸ್ಥೆಗಳು) ಅಗತ್ಯವಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯ ನ್ಯಾಯಾಧೀಶರು ಈ ವಿಷಯದ ಬಗ್ಗೆ ಏಕೆ ಮಾತನಾಡುತ್ತಿದ್ದಾರೆ ಎಂದು ನಿಮ್ಮಲ್ಲಿ ಕೆಲವರು ಆಶ್ಚರ್ಯ ಪಡಬಹುದು. ಏಕೆಂದರೆ ತಾರತಮ್ಯದ ವಿಷಯವು ಶಿಕ್ಷಣ ಸಂಸ್ಥೆಗಳಲ್ಲಿನ ಸಹಾನುಭೂತಿಯ ಕೊರತೆಯೊಂದಿಗೆ ನೇರ ಸಂಬಂಧ ಹೊಂದಿವಬೆ ಎಂದು ನಾನು ಭಾವಿಸುತ್ತೇನೆ. ಅಲ್ಲದೆ ನ್ಯಾಯಾಧೀಶರು ಸಾಮಾಜಿಕ ವಾಸ್ತವಗಳಿಂದ ದೂರ ಸರಿಯುವಂತಿಲ್ಲ ಎಂದು ತಿಳಿಸಿದ್ದಾರೆ.

ಜಾರ್ಜ್ ಫ್ಲಾಯ್ಡ್ ಹತ್ಯೆಯ ನಂತರ ಯುನೈಟೆಡ್ ಸ್ಟೇಟ್ಸ್‌ನಲ್ಲಿ ‘ಬ್ಲ್ಯಾಕ್ ಲೈವ್ಸ್ ಮ್ಯಾಟರ್’ ಚಳವಳಿ ಹುಟ್ಟಿಕೊಂಡಿತು. ಆಗ ವಾಷಿಂಗ್ಟನ್ ಸುಪ್ರೀಂ ಕೋರ್ಟ್‌ನ ಎಲ್ಲಾ ಒಂಬತ್ತು ನ್ಯಾಯಾಧೀಶರು, “ಕಪ್ಪು ಜೀವಗಳ ಅವನತಿ ಮತ್ತು ಅಪಮೌಲ್ಯೀಕರಣ” ಕುರಿತು ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಿದ್ದರು ಎಂದು ಸಿಜೆಐ ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಬಿಬಿಸಿ ಮೇಲೆ ಕೈ ಹಾಕಿದರೆ ಇಂದಿರಾ ಗಾಂಧಿಗೆ ಆದಂತೆ ಮೋದಿಜಿಗೂ ಆಗಲಿದೆ!

ಸಾಮಾಜಿಕ ಬದಲಾವಣೆಗೆ ಒತ್ತಡ ತರಲು ನ್ಯಾಯಾಲಯದ ಒಳಗೆ ಮತ್ತು ಹೊರಗೆ ಸಮಾಜದೊಂದಿಗೆ ಸಂವಾದ ನಡೆಸುವಲ್ಲಿ ಭಾರತದ ನ್ಯಾಯಾಧೀಶರು ನಿರ್ಣಾಯಕ ಪಾತ್ರವನ್ನು ಹೊಂದಿದ್ದಾರೆ ಎಂದು ವಿವರಿಸಿದ್ದಾರೆ.

ಪ್ರಮುಖ ನ್ಯಾಯಾಂಗ ಕೆಲಸ ಮತ್ತು ಆಡಳಿತಾತ್ಮಕ ಕರ್ತವ್ಯಗಳ ಹೊರತಾಗಿ, ನಮ್ಮ ಸಮಾಜ ಎದುರಿಸುತ್ತಿರುವ ರಚನಾತ್ಮಕ ಸಮಸ್ಯೆಗಳ ಮೇಲೆ ಮುಖ್ಯ ನ್ಯಾಯಮೂರ್ತಿಯಾಗಿ ಬೆಳಕು ಚೆಲ್ಲಬೇಕಾಗುತ್ತದೆ ಎಂದು ಆಶಿಸಿದ್ದಾರೆ.

“ಆದ್ದರಿಂದ, ಸಹಾನುಭೂತಿಯನ್ನು ಉತ್ತೇಜಿಸುವುದು ಶಿಕ್ಷಣ ಸಂಸ್ಥೆಗಳು ತೆಗೆದುಕೊಳ್ಳಬೇಕಾದ ಮೊದಲ ಹೆಜ್ಜೆಯಾಗಿರಬೇಕು. ಸಹಾನುಭೂತಿ ಬೆಳೆಸುವುದರಿಂದ ಮೇಲರಿಮೆ ಮತ್ತು ಹೊರಗಿಡುವ ಸಂಸ್ಕೃತಿಯನ್ನು ಕೊನೆಗೊಳಿಸಬಹುದು. ಇದನ್ನು ಸಣ್ಣ ಹೆಜ್ಜೆಗಳಿಂದ ಪ್ರಾರಂಭಿಸುವ ಮೂಲಕ ಮಾಡಬಹುದು” ಎಂದು ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...