Homeಮುಖಪುಟಹರಿಯಾಣ ಕೇಸ್: ಎಸ್‌ಯುವಿ ಕಾರ್‌ನಲ್ಲಿ ಸಿಕ್ಕ ಶವಗಳು ಮುಸ್ಲಿಂ ಯುವಕರದ್ದೇ- ಎಫ್‌ಎಸ್‌ಎಲ್ ವರದಿ ದೃಢ

ಹರಿಯಾಣ ಕೇಸ್: ಎಸ್‌ಯುವಿ ಕಾರ್‌ನಲ್ಲಿ ಸಿಕ್ಕ ಶವಗಳು ಮುಸ್ಲಿಂ ಯುವಕರದ್ದೇ- ಎಫ್‌ಎಸ್‌ಎಲ್ ವರದಿ ದೃಢ

- Advertisement -
- Advertisement -

ಹರಿಯಾಣದ ಜಿಂದ್‌ನಲ್ಲಿರುವ ಗೋಶಾಲೆಯಿಂದ ಪತ್ತೆಯಾದ ಸುಟ್ಟ ದೇಹಗಳು ಮತ್ತು ಎಸ್‌ಯುವಿ ಕಾರ್‌ನಲ್ಲಿ ಪತ್ತೆಯಾದ ರಕ್ತದ ಕಲೆಗಳು ಜುನೈದ್ ಮತ್ತು ನಾಸಿರ್‌ ಅವರದ್ದೇ ಎಂದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ದೃಢಪಡಿಸಿದೆ ಎಂದು ರಾಜಸ್ಥಾನ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಹರಣಕ್ಕೊಳಗಾಗಿದ್ದ ರಾಜಸ್ಥಾನದ ಭರತ್‌ಪುರ ಮೂಲದ ವ್ಯಕ್ತಿಗಳ ಶವಗಳು ಫೆಬ್ರವರಿ 16ರಂದು ಹರಿಯಾಣದ ಭಿವಾನಿ ಜಿಲ್ಲೆಯಲ್ಲಿ ವಾಹನದೊಳಗೆ ಪತ್ತೆಯಾಗಿದ್ದವು. ಮೃತರ ಕುಟುಂಬಗಳು ಅವರನ್ನು ಬಜರಂಗದಳದ ಗೂಂಡಾಗಳು ಹೊಡೆದು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

“ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿಯು ಜಿಂದ್‌ನ (ಹರಿಯಾಣ) ಗೋಶಾಲಾದಿಂದ ವಶಪಡಿಸಿಕೊಂಡ ಎಸ್‌ಯುವಿಯಲ್ಲಿನ ಸುಟ್ಟ ದೇಹಗಳು ಮತ್ತು ರಕ್ತದ ಕಲೆಗಳು ನಾಸಿರ್ ಮತ್ತು ಜುನೈದ್ ಅವರದ್ದು ಎಂದು ದೃಢಪಡಿಸುತ್ತದೆ” ಎಂದು ಭರತ್‌ಪುರ ರೇಂಜ್ ಐಜಿ ಗೌರವ್ ಶ್ರೀವಾಸ್ತವ್ ಹೇಳಿದ್ದಾರೆ.

ಸುಟ್ಟ ವಾಹನವು ಚಾಸಿಸ್ ನಂಬರ್‌ಗೆ ಹೊಂದಿಕೆಯಾಗುತ್ತಿದೆ ಎಂದು ಅವರು ಹೇಳಿದರು, ಆದರೆ ಒಳಗಿರುವ ದೇಹಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಸ್ಥಳದಿಂದ ಎಫ್‌ಎಸ್‌ಎಲ್ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಾಸಿರ್ ಮತ್ತು ಜುನೈದ್ ಅವರ ಕುಟುಂಬದ ಸದಸ್ಯರ ರಕ್ತದ ಮಾದರಿಗಳನ್ನು ಸಹ ಸಂಗ್ರಹಿಸಲಾಗಿದ್ದು, ಎಸ್‌ಯುವಿಯಲ್ಲಿ ಕಂಡುಬಂದ ರಕ್ತದ ಕಲೆಗಳು ಮತ್ತು ಸುಟ್ಟ ವಾಹನದಲ್ಲಿ ಪತ್ತೆಯಾದ ಮೂಳೆಗಳು ಹೊಂದಾಣಿಕೆಯಾಗುತ್ತವೆ. ವರದಿಯು ಈಗ ಎರಡೂ ಶವಗಳ ಗುರುತನ್ನು ದೃಢಪಡಿಸಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಇಬ್ಬರು ಮುಸ್ಲಿಮರ ಹತ್ಯೆ ವಿವಾದ; ರಾಜಸ್ಥಾನ ಪೊಲೀಸರ ವಿರುದ್ಧ ಹರಿಯಾಣ ಪೊಲೀಸರಿಂದ ಪ್ರಕರಣ ದಾಖಲು

”ನಮ್ಮ ತಂಡಗಳು ಹರಿಯಾಣದಲ್ಲಿ ಕ್ಯಾಂಪ್ ಮಾಡುತ್ತಿವೆ ಮತ್ತು ಆರೋಪಿಗಳನ್ನು ಹಿಡಿಯಲು ಹರಿಯಾಣ ಪೊಲೀಸರೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿವೆ” ಎಂದು ಭರತ್‌ಪುರ ರೇಂಜ್ ಐಜಿ ಗೌರವ್ ಶ್ರೀವಾಸ್ತವ್ ಹೇಳಿದರು.

ಘಟನೆ ಬಗ್ಗೆ ಮಾಹಿತಿ: 

ಹರಿಯಾಣದ ಗಡಿಯಲ್ಲಿರುವ ರಾಜಸ್ಥಾನದ ಘಟ್ಮೀಕಾ ಗ್ರಾಮದಲ್ಲಿ ಫೆ.16ರ ರಾತ್ರಿ ಭಾರೀ ಪೊಲೀಸರು ಜಮಾಯಿಸಿದ್ದರು. ಆದರೆ ರಾತ್ರಿಯ ವಿಲಕ್ಷಣ ಮೌನವು ಬೆಳಿಗ್ಗೆ ಇಲ್ಲವಾಗಿತ್ತು. ಘಟಮೀಕಾದ ಇಬ್ಬರು ಮುಸ್ಲಿಮರನ್ನು ಹತ್ಯೆಗೈದವರ ವಿರುದ್ಧ ಪ್ರತಿಭಟಿಸಲು ಸಮೀಪದ ಹಳ್ಳಿಗಳಿಂದ ಸುಮಾರು 2,000ಕ್ಕೂ ಜನರು ಧಾವಿಸಿದ್ದರು.

ರಾಜಸ್ಥಾನ-ಹರಿಯಾಣ ಗಡಿಗೆ ಸಮೀಪವಿರುವ ಹರಿಯಾಣದಲ್ಲಿ ನಾಸಿರ್ ಮತ್ತು ಜುನೈದ್ ಅವರನ್ನು ಹತ್ಯೆ ಮಾಡಿರುವ ಕುರಿತು ‘ದಿ ವೈರ್‌’ ವರದಿ ಮಾಡಿತ್ತು. ಈ ಅಪರಾಧಕ್ಕೆ ಸಂಬಂಧಿಸಿದ ಕಾರಣಗಳು ಮತ್ತು ಸ್ವಯಂಘೋಷಿತ ‘ಗೋ ರಕ್ಷಕರು’ ಎಂದು ಕರೆದುಕೊಂಡಿರುವ ಆರೋಪಿಗಳಿಂದಾಗಿ ಭೀತಿ ಉಂಟಾಗಿದೆ.

(ರಾಷ್ಟ್ರ ರಾಜಧಾನಿಯಿಂದ ಕೇವಲ 100 ಕಿಲೋಮೀಟರ್‌ಗಳಷ್ಟು ದೂರದಲ್ಲಿ ಘಟನೆ ಈ ನಡೆದಿದ್ದು, ಗೋರಕ್ಷಣೆ ಹೆಸರಲ್ಲಿ ದುಷ್ಕೃತ್ಯ ಜರುಗಿದೆ. ರಾಜಸ್ಥಾನ-ಹರಿಯಾಣ ಗಡಿಯಲ್ಲಿದ್ದ ಇಬ್ಬರು ಮುಸ್ಲಿಮರನ್ನು ದುಷ್ಕರ್ಮಿಗಳ ಗುಂಪು ಅಪಹರಿಸಿ, ಕಾರಿನೊಳಗೆ ಕೂಡಿಹಾಕಿ ಜೀವಂತವಾಗಿ ಕೊಂದಿರುವ ಆರೋಪ ಕೇಳಿಬಂದಿತ್ತು.)

ಘಟಮೀಕದಲ್ಲಿ ಸಣ್ಣ ರೈತರು ಮತ್ತು ಲಾರಿ ಚಾಲಕರು ಹೆಚ್ಚಾಗಿ ವಾಸಿಸುತ್ತಿದ್ದು, 2017ರಲ್ಲಿ ಉಮರ್ ಖಾನ್ ಹತ್ಯೆಯಾಗಿತ್ತು. ಆ ನಂತರದಲ್ಲಿ ಈ ಗ್ರಾಮದಲ್ಲಿ ಅಂತಹ ಉದ್ವಿಗ್ನ ವಾತಾವರಣ ಕಂಡುಬಂದಿರಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...